Homeಮುಖಪುಟಸರ್ಕಾರಿ ಸ್ವಾಮ್ಯದ ಉದ್ಯಮಗಳನ್ನು ಹಾಗೇ ಮುಂದುವರೆಸಬೇಕು ಎಂದೇನಿಲ್ಲ: ಪ್ರಧಾನಿ ಮೋದಿ

ಸರ್ಕಾರಿ ಸ್ವಾಮ್ಯದ ಉದ್ಯಮಗಳನ್ನು ಹಾಗೇ ಮುಂದುವರೆಸಬೇಕು ಎಂದೇನಿಲ್ಲ: ಪ್ರಧಾನಿ ಮೋದಿ

- Advertisement -
- Advertisement -

“ಸರ್ಕಾರಿ ಸ್ವಾಮ್ಯದ ಉದ್ಯಮಗಳನ್ನು ಹಾಗೇ ಮುಂದುವರೆಸಬೇಕು ಎಂದೇನಿಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆ ಖಾಸಗೀಕರಣ ಕುರಿತಾದ ವೆಬಿನಾರ್‌ನಲ್ಲಿ ಹೇಳಿದ್ದಾರೆ.

2021ನೇ ಸಾಲಿನ ಬಜೆಟ್‌ನಲ್ಲಿ ಪ್ರಸ್ತಾಪಿಸಿರುವ ಹಲವು ಸುಧಾರಣಾ ಕ್ರಮಗಳ ಕುರಿತು ಮಾತನಾಡಿದ ಪ್ರಧಾನಿ, “ವ್ಯಾಪಾರ ವ್ಯವಹಾರಕ್ಕೆ ಬೆಂಬಲ ನೀಡುವುದು ಕೇಂದ್ರ ಸರ್ಕಾರದ ಕರ್ತವ್ಯ. ಆದರೆ ಕೇಂದ್ರ ಸರ್ಕಾರವೇ ನೇರವಾಗಿ ವ್ಯಾಪಾರ ವಹಿವಾಟು ನಡೆಸಬೇಕು, ಕಂಪನಿ ನಡೆಸಬೇಕು ಎನ್ನುವ ಅವಶ್ಯಕತೆ ಇಲ್ಲ. ಈ ಹಿಂದೆ ಕಾಲದ ಅಗತ್ಯಕ್ಕೆ ತಕ್ಕಂತೆ ಸರ್ಕಾರಿ ಸ್ವಾಮ್ಯದ ಕಂಪನಿಗಳನ್ನು ಸ್ಥಾಪಿಸಲಾಗಿತ್ತು, ಜೊತೆಗೆ ಅವುಗಳನ್ನು ಸ್ಥಾಪಿಸಿದ ಉದ್ದೇಶವೂ ವಿಭಿನ್ನವಾಗಿತ್ತು. 50-60 ವರ್ಷಗಳಷ್ಟು ಹಳೆಯ ಕಾಯ್ದೆಗಳನ್ನು ಈಗ ಸುಧಾರಣೆ ಮಾಡಲು ಸಾಧ್ಯವಿದೆ. ನಾವು ಈಗ ಸುಧಾರಣೆಯನ್ನು ತರುತ್ತಿದ್ದೇವೆ. ಹಾಗಾಗಿ ಸಾರ್ವಜನಿಕರ ಹಣವನ್ನು ಎಚ್ಚರಿಕೆಯಿಂದ ಖರ್ಚು ಮಾಡಲು ನಾವು ಆದ್ಯತೆ ನೀಡಿದ್ದೇವೆ” ಎಂದು ಹೇಳಿದ್ದಾರೆ.

“ಕೇಂದ್ರ ಸರ್ಕಾರಿ ಸ್ವಾಮ್ಯದ 4 ಪ್ರಮುಖ ಕ್ಷೇತ್ರಗಳ ಕಂಪನಿಗಳನ್ನು ಹೊರತುಪಡಿಸಿ ಉಳಿದ ಕ್ಷೇತ್ರಗಳಲ್ಲಿರುವ ಸುಮಾರು 100 ಕಂಪನಿಗಳನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದೆ” ಎಂದು ಮಾಹಿತಿ ನೀಡಿದ್ದಾರೆ ಎಂಬುದಾಗಿ ಲೈವ್ ಮಿಂಟ್ ವರದಿ ಮಾಡಿದೆ.

“ಹಲವು ವರ್ಷಗಳಿಂದ ಸರ್ಕಾರಿ ಸ್ವಾಮ್ಯದ ಕಂಪನಿಗಳನ್ನು ಕೇಂದ್ರ ಸರ್ಕಾರ ನಡೆಸಿಕೊಂಡು ಬಂದಿದೆ ಎಂಬ ಮಾತ್ರಕ್ಕೆ ನಾವು ಅದನ್ನು ಮುಂದುವರೆಸಬೇಕು ಎಂದೇನಿಲ್ಲ. ಸಮಾಜದ ಕಲ್ಯಾಣ ಮತ್ತು ದೇಶದ ಜನತೆಗೆ ಸಂಬಂಧಿಸಿದ ನೀತಿ ನಿಯಮಗಳ ಮೇಲೆ ಮಾತ್ರ ಸರ್ಕಾರದ ಗಮನ ಇರಬೇಕು. ಪ್ರಸ್ತುತ ಇರುವ ವ್ಯವಸ್ಥೆಯಲ್ಲಿ ಅಧಿಕಾರಿಗಳು ತಮ್ಮ ಸಾಮರ್ಥ್ಯವನ್ನು ಸರ್ಕಾರಿ ಸ್ವಾಮ್ಯದ ಕಂಪನಿಗಳಲ್ಲಿ ವ್ಯವಹಾರ ಮಾಡಲು ವಿನಿಯೋಗಿಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ವಿಜ್ಞಾನಿಗಳು, ಶಿಕ್ಷಣತಜ್ಞರ ಆಕ್ಷೇಪ: ವೆಬಿನಾರ್ ನಿರ್ಬಂಧ ಹಿಂಪಡೆದ ಕೇಂದ್ರ ಸರ್ಕಾರ

“ಹಲವು ಸರ್ಕಾರಿ ಸ್ವಾಮ್ಯದ ಕಂಪನಿಗಳು ನಷ್ಟದಲ್ಲಿವೆ. ಹಲವು ಕಂಪನಿಗಳಿಗೆ ಜನರ ಹಣದಿಂದ ಬೆಂಬಲ ನೀಡಬೇಕಾದ ಸ್ಥಿತಿ ಇದೆ. ಹಲವು ವರ್ಷಗಳ ಹಿಂದೆ ಯಾರದೋ ಪ್ರಿಯ ಯೋಜನೆಯಾದ ಈ ಕಂಪನಿಗಳನ್ನು ಜನರ ಹಣದಿಂದ ನಡೆಸಬೇಕಾದ ಅವಶ್ಯಕತೆ ಇಲ್ಲ. ಕೇಂದ್ರ ಸರ್ಕಾರ ವ್ಯವಹಾರ ನಡೆಸಲು ಬಯಸುವುದಿಲ್ಲ. ಸರ್ಕಾರ ಖಾಸಗೀಕರಣ ಮಾಡಿದಾಗ ಖಾಸಗಿ ಕಂಪನಿಗಳು ಸರ್ಕಾರಿ ಸ್ವಾಮ್ಯದ ಕಂಪನಿಗಳಲ್ಲಿ ಹೂಡಿಕೆ ಮಾಡುತ್ತವೆ. ಖಾಸಗಿ ಕಂಪನಿಗಳು ಬಂಡವಾಳವನ್ನು ತರುತ್ತವೆ ಮತ್ತು ವಿಶ್ವದರ್ಜೆಯ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುತ್ತವೆ ಮತ್ತು ಹೆಚ್ಚು ಹೆಚ್ಚು ಉದ್ಯೋಗವನ್ನು ಒದಗಿಸುತ್ತವೆ” ಎಂದು ಸ್ಪಷ್ಟನೆ ನೀಡಿದರು.

ಕೇಂದ್ರ ಸರ್ಕಾರವು ಸರ್ಕಾರಿ ಸ್ವಾಮ್ಯದ 100 ಉದ್ಯಮಗಳನ್ನು ಖಾಸಗೀಕರಣಗೊಳಿಸುವ ಮೂಲಕ 2.5 ಲಕ್ಷ ಕೋಟಿ ರೂ.ಗಳನ್ನು ಸಂಗ್ರಹಿಸುವ ಗುರಿ ಹೊಂದಿದೆ. ಖಾಸಗೀಕರಣ ಪ್ರಕ್ರಿಯೆಯಿಂದ ಸಂಗ್ರಹವಾಗುವ ಹಣವನ್ನು ಗ್ರಾಮೀಣ ಭಾಗದಲ್ಲಿ ರಸ್ತೆ ಅಭಿವೃದ್ಧಿಗೆ, ಸ್ವಚ್ಛ ಕುಡಿಯುವ ನೀರು ಪೂರೈಕೆಗೆ ಮತ್ತು ಎಲ್ಲರಿಗೂ ಸೂರು ಕಲ್ಪಿಸಿಕೊಡುವ ಯೋಜನೆಗಳಲ್ಲಿ ವಿನಿಯೋಗಿಸುತ್ತೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ನರೇಂದ್ರ ಮೋದಿ ಸರ್ಕಾರದ ಈ ನಿರ್ಧಾರಗಳ ವಿರುದ್ಧ ಮೊದಲಿನಿಂದಲೂ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಸರ್ಕಾರಿ ಸ್ವಾಮ್ಯದಲ್ಲಿರುವ ಮತ್ತು ಹೆಚ್ಚು ಲಾಭ ಗಳಿಸುತ್ತಿರುವ ಬಹುತೇಕ ಉದ್ಯಮಗಳನ್ನು ಖಾಸಗಿಯವರಿಗೆ ಮಾರಲಾಗಿದೆ ಎಂದು ಆರೋಪಿಸುತ್ತಿದ್ದಾರೆ. ಅಂದರೆ ಕೇವಲ ಅಂಬಾನಿ-ಅದಾನಿಗಾಗಿ ಸರ್ಕಾರ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇತ್ತೀಚೆಗೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದು “ನಾವಿಬ್ಬರು-ನಮಗಿಬ್ಬರು” ಎನ್ನುವ ಸರ್ಕಾರ ಎಂದು ಛೇಡಿಸಿದ್ದರು.

ಇತ್ತೀಚೆಗೆ ವಿಮಾನ ನಿಲ್ದಾಣ ಮತ್ತು ರೈಲುಗಳನ್ನು ಖಾಸಗೀಕರಣಗೊಳಿಸಲಾಗಿತ್ತು. ಇದೀಗ ಕೇಂದ್ರ ಸರ್ಕಾರದಿಂದ ಮತ್ತೊಂದು ಅಚ್ಚರಿಯ ಸುದ್ದಿ ಹೊರಬಿದ್ದಿದೆ.


ಇದನ್ನೂ ಓದಿ: ‘ಮೋದಿ ಉದ್ಯೋಗ ಕೊಡಿ, ಇಲ್ಲ ಕುರ್ಚಿ ಬಿಡಿ’ ವಿಶ್ವದಾದ್ಯಂತ ಟ್ವಿಟರ್ ಟ್ರೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...