Homeಮುಖಪುಟ'ಭಾರತೀಯ ವಿಜ್ಞಾನ ಕಾಂಗ್ರೆಸ್‌'ಗೆ ನೆರವು ಸ್ಥಗಿತಗೊಳಿಸಿದ ಕೇಂದ್ರ ಸರಕಾರ!

‘ಭಾರತೀಯ ವಿಜ್ಞಾನ ಕಾಂಗ್ರೆಸ್‌’ಗೆ ನೆರವು ಸ್ಥಗಿತಗೊಳಿಸಿದ ಕೇಂದ್ರ ಸರಕಾರ!

- Advertisement -
- Advertisement -

ಇಂಡಿಯನ್ ಸೈನ್ಸ್ ಕಾಂಗ್ರೆಸ್ ಅಸೋಸಿಯೇಷನ್(ISCA) ಪ್ರತಿವರ್ಷ ಆಯೋಜನೆ ಮಾಡುತ್ತಿದ್ದ ವಾರ್ಷಿಕ ಕಾರ್ಯಕ್ರಮ ‘ಭಾರತೀಯ ವಿಜ್ಞಾನ ಕಾಂಗ್ರೆಸ್‌’ ರದ್ದುಗೊಳಿಸಲಾಗಿದ್ದು, ಸರ್ಕಾರವು ಈ ಬಾರಿ ಹಣಕಾಸಿನ ನೆರವು ನೀಡದ ಕಾರಣಕ್ಕೆ ಈ ನಿರ್ಧಾರಕ್ಕೆ ಬರಲಾಗಿದೆ.

ಈ ಕಾರ್ಯಕ್ರಮ ಆಯೋಜನೆಗೆ ಸಂಬಂಧಿಸಿ ಸರ್ಕಾರ ಮತ್ತು ಐಎಸ್‌ಸಿಎ ನಡುವೆ ಕಳೆದ ಕೆಲ ವರ್ಷಗಳಿಂದ ಭಿನ್ನಾಭಿಪ್ರಾಯ ಇದೆ. ವಿಜ್ಞಾನ ಕಾಂಗ್ರೆಸ್‌ಗೆ ಬದಲಾಗಿ ಸರ್ಕಾರವು,  ವಿಜ್ಞಾನ ಭಾರತಿಯ ‘ಭಾರತೀಯ ಅಂತರಾಷ್ಟ್ರೀಯ ವಿಜ್ಞಾನ ಮೇಳ’ವನ್ನು (ಐಐಎಸ್‌ಎಫ್‌) 2015ರಿಂದ ಆಯೋಜಿಸುತ್ತಿದೆ.

‘ವಿಜ್ಞಾನ ಭಾರತಿ’ಯು ಸಂಘ ಪರಿವಾರದ ಜೊತೆ ನಂಟು ಇರುವ ಸಂಸ್ಥೆಯಾಗಿದೆ. ಇದರ ವಾರ್ಷಿಕ ಸಭೆಯು ಹರಿಯಾಣದ ಫರೀದಾಬಾದ್‌ನಲ್ಲಿ ಈ ತಿಂಗಳು ನಡೆಯಲಿದೆ. ಈ ಸಂಸ್ಥೆಯು ನಡೆಸುವ ಕಾರ್ಯಕ್ರಮವನ್ನು ವಿಜ್ಞಾನ ಕಾಂಗ್ರೆಸ್‌ಗೆ ಪರ್ಯಾಯ ಎಂದು ಬಿಂಬಿಸಲು ಸರ್ಕಾರ ಯತ್ನಿಸುತ್ತಿದೆ.

1914ರಿಂದ ಭಾರತೀಯ ವಿಜ್ಞಾನ ಕಾಂಗ್ರೆಸ್‌ನ್ನು ಆಯೋಜಿಸಲಾಗುತ್ತಿತ್ತು. ಸ್ವಾತಂತ್ರ್ಯದ ನಂತರ ಭಾರತದ ಪ್ರಧಾನ ಮಂತ್ರಿಗಳು ವಿಜ್ಞಾನಿಗಳ ವಾರ್ಷಿಕ ಕೂಟವನ್ನು ಉದ್ಘಾಟಿಸುತ್ತಿದ್ದರು. ಈ ಸಭೆಯು ಪ್ರಧಾನಿಯವರ ವರ್ಷದ ಮೊದಲ ಸಾರ್ವಜನಿಕ ಕಾರ್ಯಕ್ರಮವಾಗಿರುತ್ತಿತ್ತು. ಆದರೆ ಈ ಬಾರಿ ಕಾರ್ಯಕ್ರಮ ನಡೆಯುತ್ತಿಲ್ಲ.

ಕೋವಿಡ್‌ ಸಾಂಕ್ರಾಮಿಕದ ಕಾರಣದಿಂದ 2021 ಮತ್ತು 2022ರಲ್ಲಿ ಭಾರತೀಯ ವಿಜ್ಞಾನ ಕಾಂಗ್ರೆಸ್‌ ಅನ್ನು ಆಯೋಜಿಸಲು ಸಾಧ್ಯವಾಗಿರಲಿಲ್ಲ. 108ನೇ ವಿಜ್ಞಾನ ಕಾಂಗ್ರೆಸ್‌ ಅನ್ನು ಕಳೆದ ವರ್ಷ ನಾಗ್ಪುರದಲ್ಲಿ ಆಯೋಜಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೊ ಕಾನ್ಫರೆನ್ಸ್‌ ಮೂಲಕ ಇದನ್ನು ಉದ್ಘಾಟಿಸಿದ್ದರು.

ಈ ಬಾರಿ ಜನವರಿ 3 ರಿಂದ 5ರವರೆಗೆ ಜಲಂಧರ್‌ನ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯಲ್ಲಿ (LPU) 109ನೇ ಭಾರತೀಯ ವಿಜ್ಞಾನ ಕಾಂಗ್ರೆಸ್‌ನ್ನು (ISC) ಆಯೋಜಿಸಲು ಇಂಡಿಯನ್ ಸೈನ್ಸ್ ಕಾಂಗ್ರೆಸ್ ಅಸೋಸಿಯೇಷನ್ (ISCA) ತೀರ್ಮಾನಿಸಿತ್ತು. ಆದರೆ ಸೆಪ್ಟೆಂಬರ್ 2023ರಲ್ಲಿ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ISC ಮತ್ತು ಈವೆಂಟ್‌ಗೆ ಯಾವುದೇ ಸರ್ಕಾರಿ ಧನಸಹಾಯ ನೀಡಲು ನಿರಾಕರಿಸುವುದರಿಂದ ಸಮ್ಮೇಳನವನ್ನು ಮುಂದುವರಿಸಲು ಸಾಧ್ಯವಾಗಲಿಲ್ಲ ಎಂದು ಸಂಘಟಕರು ಹೇಳಿದ್ದಾರೆ.

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು, ಸರ್ಕಾರದ ಅನುಮೋದನೆಯಿಲ್ಲದೆ ‘ಇಂಡಿಯನ್ ಸೈನ್ಸ್ ಕಾಂಗ್ರೆಸ್ ಅಸೋಸಿಯೇಷನ್’ ಏಕಪಕ್ಷೀಯವಾಗಿ ಲಕ್ನೋದಿಂದ ಜಲಂಧರ್‌ಗೆ ಕಾರ್ಯಕ್ರಮ ಸ್ಥಳಾಂತರಿಸಿದೆ ಎಂದು ಆರೋಪಿಸಿದೆ. ಸ್ಥಳವನ್ನು ಆಯ್ಕೆ ಮಾಡಲು ತನ್ನ ಕಾರ್ಯಕಾರಿ ಸಮಿತಿಗೆ DST ಯಿಂದ ಅನುಮತಿ ಅಗತ್ಯವಿಲ್ಲ ಎಂದು ISCA ಪ್ರತಿವಾದಿಸಿದೆ. ಆದರೆ ಸ್ಥಳವನ್ನು ಆಯ್ಕೆ ಮಾಡುವ ಸಮಯದಲ್ಲಿ ಡಿಎಸ್‌ಟಿ ಪ್ರತಿನಿಧಿಯೊಬ್ಬರು ಹಾಜರಿದ್ದರು ಎಂದು ಕೂಡ ಹೇಳಿದೆ.

ISCA ಆಯೋಜಿಸುವ ವಾರ್ಷಿಕ ಕಾರ್ಯಕ್ರಮವು ಈಗಾಗಲೇ ವೈಜ್ಞಾನಿಕತೆಯನ್ನು ಕಳೆದುಕೊಂಡಿದೆ ಮತ್ತು ಕಾರ್ಯಕ್ರಮದ ಆಯೋಜನೆಯಲ್ಲಿ ವೃತ್ತಿಪರ ವಿಧಾನವನ್ನು ಹೊಂದಿಲ್ಲ ಎಂದು ಆರೋಪಿಸಲಾಗಿದೆ. ಆದರೆ ವಿಜ್ಞಾನ ಕಾಂಗ್ರೆಸ್‌ನ ಕಾರ್ಯಚಟುವಟಿಕೆ ಕುರಿತು ಸರ್ಕಾರಕ್ಕೆ ಅಸಮಾಧಾನ ಇದ್ದಿದ್ದರೆ ಅದನ್ನು ಸರಿಪಡಿಸುವ ಕೆಲಸವನ್ನು ಮಾಡಬಹುದಿತ್ತು. ಅದರ ಕಾರ್ಯಕ್ರಮ ನಡೆಸಲು ನಿರಾಕರಿಸಿರುವುದು ಪ್ರಶ್ನೆಗೆ ಕಾರಣವಾಗಿದೆ.

ಸಾವಿರಾರು ವಿಜ್ಞಾನಿಗಳು, ಸಂಶೋಧನಾ ವಿದ್ಯಾರ್ಥಿಗಳು ಮತ್ತು ವೈಜ್ಞಾನಿಕ ಸಂಸ್ಥೆಗಳಿಂದ ಅಧ್ಯಾಪಕರು ಮತ್ತು ಶಾಲಾ ಮಕ್ಕಳು ಸಾಮಾನ್ಯವಾಗಿ ISCಯ ವಾರ್ಷಿಕ ಕಾರ್ಯಕ್ರಮಕ್ಕೆ ಹಾಜರಾಗುತ್ತಾರೆ. ISC ಯೊಂದಿಗೆ ನಿಕಟವಾಗಿರುವ ಅಧಿಕಾರಿಗಳು ಮತ್ತು ವಿಜ್ಞಾನಿಗಳು ಅದರ ವಾರ್ಷಿಕ ಅಧಿವೇಶನಗಳ ವಿಷಯವನ್ನು ಸುಧಾರಿಸಬೇಕೆನ್ನುವುದನ್ನು ಒಪ್ಪಿಕೊಳ್ಳುತ್ತಾರೆ. ಆದರೆ ಕಾರ್ಯಕ್ರವನ್ನೇ ನಡೆಯದಂತೆ ಹುನ್ನಾರ ನಡೆಸಿರುವುದರ ಹಿಂದೆ ಸರಕಾರವನ್ನು ಟೀಕಿಸಿದ್ದಾರೆ. ISC ಗೆ ಸರ್ಕಾರದ ಹಣವನ್ನು ನಿರಾಕರಿಸುವ DST ನಿರ್ಧಾರವನ್ನು ISC ಯ ಸಮ್ಮೇಳನವನ್ನು ದುರ್ಬಲಗೊಳಿಸಲು ಸರ್ಕಾರವು ನಡೆಸಿದ ಪ್ರಯತ್ನಗಳ ಫಲಿತಾಂಶವೆಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಸ್ವದೇಶಿ ಮನೋಭಾವದೊಂದಿಗೆ ವಿಜ್ಞಾನ ಆಂದೋಲನದ ಕಾರಣ ಮುಂದಿಟ್ಟು ‘ಇಂಡಿಯಾ–ಇಂಟರ್‌ನ್ಯಾಷನಲ್‌ ಸೈನ್ಸ್‌ ಫೆಸ್ಟಿವಲ್‌’ ಆಯೋಜಿಸಲಾಗುತ್ತಿದೆ. IISF ಗಾಗಿ ಸರ್ಕಾರ 20 ರಿಂದ 25 ಕೋಟಿ ರೂಪಾಯಿಗಳು ಬಜೆಟ್‌ನಲ್ಲಿ ನೀಡುತ್ತಿದೆ.  ISC ಯ ಭಾರತೀಯ ವಿಜ್ಞಾನ ಕಾಂಗ್ರೆಸ್‌ ಸಮ್ಮೇಳನಕ್ಕೆ 5 ಕೋಟಿ ರೂಪಾಯಿಗಳಿಗೆ ಮಾತ್ರ ನೀಡಲಾಗುತ್ತಿತ್ತು ಎಂದು DST ಅಧಿಕಾರಿಯೋರ್ವರು ಹೇಳಿದ್ದಾರೆ.

ಮುಂಬೈನ ಹೋಮಿ ಭಾಭಾ ವಿಜ್ಞಾನ ಶಿಕ್ಷಣ ಕೇಂದ್ರದ ಖಗೋಳಶಾಸ್ತ್ರಜ್ಞ ಅನಿಕೇತ್ ಸುಲೆ ಈ ಬಗ್ಗೆ ಮಾತನಾಡಿದ್ದು, ವಿಜ್ಞಾನ ಕಾಂಗ್ರೆಸ್ ಕಾರ್ಯಕ್ರಮ ರದ್ದತಿ ಬಗ್ಗೆ ನಾನು ಚಿಂತಿಸುವುದಿಲ್ಲ. ವಿಜ್ಞಾನ ಕಾಂಗ್ರೆಸ್ ತನ್ನ ಅರ್ಥವನ್ನು ಕಳೆದುಕೊಂಡಿದೆ ಎಂದು ನಾನು ಒಪ್ಪುತ್ತೇನೆ. ಆದರೆ ಅದರ ಕಾರ್ಯಕ್ರಮ ನಡೆಯದಿರುವ ಕಾರಣದ ಬಗ್ಗೆ ನಾನು ಚಿಂತಿತನಾಗಿದ್ದೇನೆ ಎಂದು ಹೇಳಿದ್ದಾರೆ. ವಿಜ್ಞಾನ ಮತ್ತು ರಾಜಕೀಯ ಸಿದ್ಧಾಂತದ ನಡುವೆ ಯಾವುದೇ ಸಂಬಂಧ ಇಲ್ಲ. ಆದರೆ ಸರಕಾರ ರಾಜಕೀಯ ಕಾರಣಕ್ಕೆ ವೈಜ್ಞಾನಿಕ ಕಾರ್ಯಕ್ರಮಕ್ಕೆ ಅನುದಾನ ನೀಡದಿರುವುದು ಟೀಕೆಗೆ ಕಾರಣವಾಗಿದೆ.

ಇದನ್ನು ಓದಿ: ಬುಡಕಟ್ಟು ಮಕ್ಕಳ ಜೀವನದಲ್ಲಿ ಶಿಕ್ಷಣದ ಬೆಳಕು ಚೆಲ್ಲಿದ ಶಿಕ್ಷಕಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...