Homeಮುಖಪುಟ'ಭಾರತೀಯ ವಿಜ್ಞಾನ ಕಾಂಗ್ರೆಸ್‌'ಗೆ ನೆರವು ಸ್ಥಗಿತಗೊಳಿಸಿದ ಕೇಂದ್ರ ಸರಕಾರ!

‘ಭಾರತೀಯ ವಿಜ್ಞಾನ ಕಾಂಗ್ರೆಸ್‌’ಗೆ ನೆರವು ಸ್ಥಗಿತಗೊಳಿಸಿದ ಕೇಂದ್ರ ಸರಕಾರ!

- Advertisement -
- Advertisement -

ಇಂಡಿಯನ್ ಸೈನ್ಸ್ ಕಾಂಗ್ರೆಸ್ ಅಸೋಸಿಯೇಷನ್(ISCA) ಪ್ರತಿವರ್ಷ ಆಯೋಜನೆ ಮಾಡುತ್ತಿದ್ದ ವಾರ್ಷಿಕ ಕಾರ್ಯಕ್ರಮ ‘ಭಾರತೀಯ ವಿಜ್ಞಾನ ಕಾಂಗ್ರೆಸ್‌’ ರದ್ದುಗೊಳಿಸಲಾಗಿದ್ದು, ಸರ್ಕಾರವು ಈ ಬಾರಿ ಹಣಕಾಸಿನ ನೆರವು ನೀಡದ ಕಾರಣಕ್ಕೆ ಈ ನಿರ್ಧಾರಕ್ಕೆ ಬರಲಾಗಿದೆ.

ಈ ಕಾರ್ಯಕ್ರಮ ಆಯೋಜನೆಗೆ ಸಂಬಂಧಿಸಿ ಸರ್ಕಾರ ಮತ್ತು ಐಎಸ್‌ಸಿಎ ನಡುವೆ ಕಳೆದ ಕೆಲ ವರ್ಷಗಳಿಂದ ಭಿನ್ನಾಭಿಪ್ರಾಯ ಇದೆ. ವಿಜ್ಞಾನ ಕಾಂಗ್ರೆಸ್‌ಗೆ ಬದಲಾಗಿ ಸರ್ಕಾರವು,  ವಿಜ್ಞಾನ ಭಾರತಿಯ ‘ಭಾರತೀಯ ಅಂತರಾಷ್ಟ್ರೀಯ ವಿಜ್ಞಾನ ಮೇಳ’ವನ್ನು (ಐಐಎಸ್‌ಎಫ್‌) 2015ರಿಂದ ಆಯೋಜಿಸುತ್ತಿದೆ.

‘ವಿಜ್ಞಾನ ಭಾರತಿ’ಯು ಸಂಘ ಪರಿವಾರದ ಜೊತೆ ನಂಟು ಇರುವ ಸಂಸ್ಥೆಯಾಗಿದೆ. ಇದರ ವಾರ್ಷಿಕ ಸಭೆಯು ಹರಿಯಾಣದ ಫರೀದಾಬಾದ್‌ನಲ್ಲಿ ಈ ತಿಂಗಳು ನಡೆಯಲಿದೆ. ಈ ಸಂಸ್ಥೆಯು ನಡೆಸುವ ಕಾರ್ಯಕ್ರಮವನ್ನು ವಿಜ್ಞಾನ ಕಾಂಗ್ರೆಸ್‌ಗೆ ಪರ್ಯಾಯ ಎಂದು ಬಿಂಬಿಸಲು ಸರ್ಕಾರ ಯತ್ನಿಸುತ್ತಿದೆ.

1914ರಿಂದ ಭಾರತೀಯ ವಿಜ್ಞಾನ ಕಾಂಗ್ರೆಸ್‌ನ್ನು ಆಯೋಜಿಸಲಾಗುತ್ತಿತ್ತು. ಸ್ವಾತಂತ್ರ್ಯದ ನಂತರ ಭಾರತದ ಪ್ರಧಾನ ಮಂತ್ರಿಗಳು ವಿಜ್ಞಾನಿಗಳ ವಾರ್ಷಿಕ ಕೂಟವನ್ನು ಉದ್ಘಾಟಿಸುತ್ತಿದ್ದರು. ಈ ಸಭೆಯು ಪ್ರಧಾನಿಯವರ ವರ್ಷದ ಮೊದಲ ಸಾರ್ವಜನಿಕ ಕಾರ್ಯಕ್ರಮವಾಗಿರುತ್ತಿತ್ತು. ಆದರೆ ಈ ಬಾರಿ ಕಾರ್ಯಕ್ರಮ ನಡೆಯುತ್ತಿಲ್ಲ.

ಕೋವಿಡ್‌ ಸಾಂಕ್ರಾಮಿಕದ ಕಾರಣದಿಂದ 2021 ಮತ್ತು 2022ರಲ್ಲಿ ಭಾರತೀಯ ವಿಜ್ಞಾನ ಕಾಂಗ್ರೆಸ್‌ ಅನ್ನು ಆಯೋಜಿಸಲು ಸಾಧ್ಯವಾಗಿರಲಿಲ್ಲ. 108ನೇ ವಿಜ್ಞಾನ ಕಾಂಗ್ರೆಸ್‌ ಅನ್ನು ಕಳೆದ ವರ್ಷ ನಾಗ್ಪುರದಲ್ಲಿ ಆಯೋಜಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೊ ಕಾನ್ಫರೆನ್ಸ್‌ ಮೂಲಕ ಇದನ್ನು ಉದ್ಘಾಟಿಸಿದ್ದರು.

ಈ ಬಾರಿ ಜನವರಿ 3 ರಿಂದ 5ರವರೆಗೆ ಜಲಂಧರ್‌ನ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯಲ್ಲಿ (LPU) 109ನೇ ಭಾರತೀಯ ವಿಜ್ಞಾನ ಕಾಂಗ್ರೆಸ್‌ನ್ನು (ISC) ಆಯೋಜಿಸಲು ಇಂಡಿಯನ್ ಸೈನ್ಸ್ ಕಾಂಗ್ರೆಸ್ ಅಸೋಸಿಯೇಷನ್ (ISCA) ತೀರ್ಮಾನಿಸಿತ್ತು. ಆದರೆ ಸೆಪ್ಟೆಂಬರ್ 2023ರಲ್ಲಿ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ISC ಮತ್ತು ಈವೆಂಟ್‌ಗೆ ಯಾವುದೇ ಸರ್ಕಾರಿ ಧನಸಹಾಯ ನೀಡಲು ನಿರಾಕರಿಸುವುದರಿಂದ ಸಮ್ಮೇಳನವನ್ನು ಮುಂದುವರಿಸಲು ಸಾಧ್ಯವಾಗಲಿಲ್ಲ ಎಂದು ಸಂಘಟಕರು ಹೇಳಿದ್ದಾರೆ.

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು, ಸರ್ಕಾರದ ಅನುಮೋದನೆಯಿಲ್ಲದೆ ‘ಇಂಡಿಯನ್ ಸೈನ್ಸ್ ಕಾಂಗ್ರೆಸ್ ಅಸೋಸಿಯೇಷನ್’ ಏಕಪಕ್ಷೀಯವಾಗಿ ಲಕ್ನೋದಿಂದ ಜಲಂಧರ್‌ಗೆ ಕಾರ್ಯಕ್ರಮ ಸ್ಥಳಾಂತರಿಸಿದೆ ಎಂದು ಆರೋಪಿಸಿದೆ. ಸ್ಥಳವನ್ನು ಆಯ್ಕೆ ಮಾಡಲು ತನ್ನ ಕಾರ್ಯಕಾರಿ ಸಮಿತಿಗೆ DST ಯಿಂದ ಅನುಮತಿ ಅಗತ್ಯವಿಲ್ಲ ಎಂದು ISCA ಪ್ರತಿವಾದಿಸಿದೆ. ಆದರೆ ಸ್ಥಳವನ್ನು ಆಯ್ಕೆ ಮಾಡುವ ಸಮಯದಲ್ಲಿ ಡಿಎಸ್‌ಟಿ ಪ್ರತಿನಿಧಿಯೊಬ್ಬರು ಹಾಜರಿದ್ದರು ಎಂದು ಕೂಡ ಹೇಳಿದೆ.

ISCA ಆಯೋಜಿಸುವ ವಾರ್ಷಿಕ ಕಾರ್ಯಕ್ರಮವು ಈಗಾಗಲೇ ವೈಜ್ಞಾನಿಕತೆಯನ್ನು ಕಳೆದುಕೊಂಡಿದೆ ಮತ್ತು ಕಾರ್ಯಕ್ರಮದ ಆಯೋಜನೆಯಲ್ಲಿ ವೃತ್ತಿಪರ ವಿಧಾನವನ್ನು ಹೊಂದಿಲ್ಲ ಎಂದು ಆರೋಪಿಸಲಾಗಿದೆ. ಆದರೆ ವಿಜ್ಞಾನ ಕಾಂಗ್ರೆಸ್‌ನ ಕಾರ್ಯಚಟುವಟಿಕೆ ಕುರಿತು ಸರ್ಕಾರಕ್ಕೆ ಅಸಮಾಧಾನ ಇದ್ದಿದ್ದರೆ ಅದನ್ನು ಸರಿಪಡಿಸುವ ಕೆಲಸವನ್ನು ಮಾಡಬಹುದಿತ್ತು. ಅದರ ಕಾರ್ಯಕ್ರಮ ನಡೆಸಲು ನಿರಾಕರಿಸಿರುವುದು ಪ್ರಶ್ನೆಗೆ ಕಾರಣವಾಗಿದೆ.

ಸಾವಿರಾರು ವಿಜ್ಞಾನಿಗಳು, ಸಂಶೋಧನಾ ವಿದ್ಯಾರ್ಥಿಗಳು ಮತ್ತು ವೈಜ್ಞಾನಿಕ ಸಂಸ್ಥೆಗಳಿಂದ ಅಧ್ಯಾಪಕರು ಮತ್ತು ಶಾಲಾ ಮಕ್ಕಳು ಸಾಮಾನ್ಯವಾಗಿ ISCಯ ವಾರ್ಷಿಕ ಕಾರ್ಯಕ್ರಮಕ್ಕೆ ಹಾಜರಾಗುತ್ತಾರೆ. ISC ಯೊಂದಿಗೆ ನಿಕಟವಾಗಿರುವ ಅಧಿಕಾರಿಗಳು ಮತ್ತು ವಿಜ್ಞಾನಿಗಳು ಅದರ ವಾರ್ಷಿಕ ಅಧಿವೇಶನಗಳ ವಿಷಯವನ್ನು ಸುಧಾರಿಸಬೇಕೆನ್ನುವುದನ್ನು ಒಪ್ಪಿಕೊಳ್ಳುತ್ತಾರೆ. ಆದರೆ ಕಾರ್ಯಕ್ರವನ್ನೇ ನಡೆಯದಂತೆ ಹುನ್ನಾರ ನಡೆಸಿರುವುದರ ಹಿಂದೆ ಸರಕಾರವನ್ನು ಟೀಕಿಸಿದ್ದಾರೆ. ISC ಗೆ ಸರ್ಕಾರದ ಹಣವನ್ನು ನಿರಾಕರಿಸುವ DST ನಿರ್ಧಾರವನ್ನು ISC ಯ ಸಮ್ಮೇಳನವನ್ನು ದುರ್ಬಲಗೊಳಿಸಲು ಸರ್ಕಾರವು ನಡೆಸಿದ ಪ್ರಯತ್ನಗಳ ಫಲಿತಾಂಶವೆಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಸ್ವದೇಶಿ ಮನೋಭಾವದೊಂದಿಗೆ ವಿಜ್ಞಾನ ಆಂದೋಲನದ ಕಾರಣ ಮುಂದಿಟ್ಟು ‘ಇಂಡಿಯಾ–ಇಂಟರ್‌ನ್ಯಾಷನಲ್‌ ಸೈನ್ಸ್‌ ಫೆಸ್ಟಿವಲ್‌’ ಆಯೋಜಿಸಲಾಗುತ್ತಿದೆ. IISF ಗಾಗಿ ಸರ್ಕಾರ 20 ರಿಂದ 25 ಕೋಟಿ ರೂಪಾಯಿಗಳು ಬಜೆಟ್‌ನಲ್ಲಿ ನೀಡುತ್ತಿದೆ.  ISC ಯ ಭಾರತೀಯ ವಿಜ್ಞಾನ ಕಾಂಗ್ರೆಸ್‌ ಸಮ್ಮೇಳನಕ್ಕೆ 5 ಕೋಟಿ ರೂಪಾಯಿಗಳಿಗೆ ಮಾತ್ರ ನೀಡಲಾಗುತ್ತಿತ್ತು ಎಂದು DST ಅಧಿಕಾರಿಯೋರ್ವರು ಹೇಳಿದ್ದಾರೆ.

ಮುಂಬೈನ ಹೋಮಿ ಭಾಭಾ ವಿಜ್ಞಾನ ಶಿಕ್ಷಣ ಕೇಂದ್ರದ ಖಗೋಳಶಾಸ್ತ್ರಜ್ಞ ಅನಿಕೇತ್ ಸುಲೆ ಈ ಬಗ್ಗೆ ಮಾತನಾಡಿದ್ದು, ವಿಜ್ಞಾನ ಕಾಂಗ್ರೆಸ್ ಕಾರ್ಯಕ್ರಮ ರದ್ದತಿ ಬಗ್ಗೆ ನಾನು ಚಿಂತಿಸುವುದಿಲ್ಲ. ವಿಜ್ಞಾನ ಕಾಂಗ್ರೆಸ್ ತನ್ನ ಅರ್ಥವನ್ನು ಕಳೆದುಕೊಂಡಿದೆ ಎಂದು ನಾನು ಒಪ್ಪುತ್ತೇನೆ. ಆದರೆ ಅದರ ಕಾರ್ಯಕ್ರಮ ನಡೆಯದಿರುವ ಕಾರಣದ ಬಗ್ಗೆ ನಾನು ಚಿಂತಿತನಾಗಿದ್ದೇನೆ ಎಂದು ಹೇಳಿದ್ದಾರೆ. ವಿಜ್ಞಾನ ಮತ್ತು ರಾಜಕೀಯ ಸಿದ್ಧಾಂತದ ನಡುವೆ ಯಾವುದೇ ಸಂಬಂಧ ಇಲ್ಲ. ಆದರೆ ಸರಕಾರ ರಾಜಕೀಯ ಕಾರಣಕ್ಕೆ ವೈಜ್ಞಾನಿಕ ಕಾರ್ಯಕ್ರಮಕ್ಕೆ ಅನುದಾನ ನೀಡದಿರುವುದು ಟೀಕೆಗೆ ಕಾರಣವಾಗಿದೆ.

ಇದನ್ನು ಓದಿ: ಬುಡಕಟ್ಟು ಮಕ್ಕಳ ಜೀವನದಲ್ಲಿ ಶಿಕ್ಷಣದ ಬೆಳಕು ಚೆಲ್ಲಿದ ಶಿಕ್ಷಕಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...