Homeಮುಖಪುಟ'ಭಾರತೀಯ ವಿಜ್ಞಾನ ಕಾಂಗ್ರೆಸ್‌'ಗೆ ನೆರವು ಸ್ಥಗಿತಗೊಳಿಸಿದ ಕೇಂದ್ರ ಸರಕಾರ!

‘ಭಾರತೀಯ ವಿಜ್ಞಾನ ಕಾಂಗ್ರೆಸ್‌’ಗೆ ನೆರವು ಸ್ಥಗಿತಗೊಳಿಸಿದ ಕೇಂದ್ರ ಸರಕಾರ!

- Advertisement -
- Advertisement -

ಇಂಡಿಯನ್ ಸೈನ್ಸ್ ಕಾಂಗ್ರೆಸ್ ಅಸೋಸಿಯೇಷನ್(ISCA) ಪ್ರತಿವರ್ಷ ಆಯೋಜನೆ ಮಾಡುತ್ತಿದ್ದ ವಾರ್ಷಿಕ ಕಾರ್ಯಕ್ರಮ ‘ಭಾರತೀಯ ವಿಜ್ಞಾನ ಕಾಂಗ್ರೆಸ್‌’ ರದ್ದುಗೊಳಿಸಲಾಗಿದ್ದು, ಸರ್ಕಾರವು ಈ ಬಾರಿ ಹಣಕಾಸಿನ ನೆರವು ನೀಡದ ಕಾರಣಕ್ಕೆ ಈ ನಿರ್ಧಾರಕ್ಕೆ ಬರಲಾಗಿದೆ.

ಈ ಕಾರ್ಯಕ್ರಮ ಆಯೋಜನೆಗೆ ಸಂಬಂಧಿಸಿ ಸರ್ಕಾರ ಮತ್ತು ಐಎಸ್‌ಸಿಎ ನಡುವೆ ಕಳೆದ ಕೆಲ ವರ್ಷಗಳಿಂದ ಭಿನ್ನಾಭಿಪ್ರಾಯ ಇದೆ. ವಿಜ್ಞಾನ ಕಾಂಗ್ರೆಸ್‌ಗೆ ಬದಲಾಗಿ ಸರ್ಕಾರವು,  ವಿಜ್ಞಾನ ಭಾರತಿಯ ‘ಭಾರತೀಯ ಅಂತರಾಷ್ಟ್ರೀಯ ವಿಜ್ಞಾನ ಮೇಳ’ವನ್ನು (ಐಐಎಸ್‌ಎಫ್‌) 2015ರಿಂದ ಆಯೋಜಿಸುತ್ತಿದೆ.

‘ವಿಜ್ಞಾನ ಭಾರತಿ’ಯು ಸಂಘ ಪರಿವಾರದ ಜೊತೆ ನಂಟು ಇರುವ ಸಂಸ್ಥೆಯಾಗಿದೆ. ಇದರ ವಾರ್ಷಿಕ ಸಭೆಯು ಹರಿಯಾಣದ ಫರೀದಾಬಾದ್‌ನಲ್ಲಿ ಈ ತಿಂಗಳು ನಡೆಯಲಿದೆ. ಈ ಸಂಸ್ಥೆಯು ನಡೆಸುವ ಕಾರ್ಯಕ್ರಮವನ್ನು ವಿಜ್ಞಾನ ಕಾಂಗ್ರೆಸ್‌ಗೆ ಪರ್ಯಾಯ ಎಂದು ಬಿಂಬಿಸಲು ಸರ್ಕಾರ ಯತ್ನಿಸುತ್ತಿದೆ.

1914ರಿಂದ ಭಾರತೀಯ ವಿಜ್ಞಾನ ಕಾಂಗ್ರೆಸ್‌ನ್ನು ಆಯೋಜಿಸಲಾಗುತ್ತಿತ್ತು. ಸ್ವಾತಂತ್ರ್ಯದ ನಂತರ ಭಾರತದ ಪ್ರಧಾನ ಮಂತ್ರಿಗಳು ವಿಜ್ಞಾನಿಗಳ ವಾರ್ಷಿಕ ಕೂಟವನ್ನು ಉದ್ಘಾಟಿಸುತ್ತಿದ್ದರು. ಈ ಸಭೆಯು ಪ್ರಧಾನಿಯವರ ವರ್ಷದ ಮೊದಲ ಸಾರ್ವಜನಿಕ ಕಾರ್ಯಕ್ರಮವಾಗಿರುತ್ತಿತ್ತು. ಆದರೆ ಈ ಬಾರಿ ಕಾರ್ಯಕ್ರಮ ನಡೆಯುತ್ತಿಲ್ಲ.

ಕೋವಿಡ್‌ ಸಾಂಕ್ರಾಮಿಕದ ಕಾರಣದಿಂದ 2021 ಮತ್ತು 2022ರಲ್ಲಿ ಭಾರತೀಯ ವಿಜ್ಞಾನ ಕಾಂಗ್ರೆಸ್‌ ಅನ್ನು ಆಯೋಜಿಸಲು ಸಾಧ್ಯವಾಗಿರಲಿಲ್ಲ. 108ನೇ ವಿಜ್ಞಾನ ಕಾಂಗ್ರೆಸ್‌ ಅನ್ನು ಕಳೆದ ವರ್ಷ ನಾಗ್ಪುರದಲ್ಲಿ ಆಯೋಜಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೊ ಕಾನ್ಫರೆನ್ಸ್‌ ಮೂಲಕ ಇದನ್ನು ಉದ್ಘಾಟಿಸಿದ್ದರು.

ಈ ಬಾರಿ ಜನವರಿ 3 ರಿಂದ 5ರವರೆಗೆ ಜಲಂಧರ್‌ನ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯಲ್ಲಿ (LPU) 109ನೇ ಭಾರತೀಯ ವಿಜ್ಞಾನ ಕಾಂಗ್ರೆಸ್‌ನ್ನು (ISC) ಆಯೋಜಿಸಲು ಇಂಡಿಯನ್ ಸೈನ್ಸ್ ಕಾಂಗ್ರೆಸ್ ಅಸೋಸಿಯೇಷನ್ (ISCA) ತೀರ್ಮಾನಿಸಿತ್ತು. ಆದರೆ ಸೆಪ್ಟೆಂಬರ್ 2023ರಲ್ಲಿ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ISC ಮತ್ತು ಈವೆಂಟ್‌ಗೆ ಯಾವುದೇ ಸರ್ಕಾರಿ ಧನಸಹಾಯ ನೀಡಲು ನಿರಾಕರಿಸುವುದರಿಂದ ಸಮ್ಮೇಳನವನ್ನು ಮುಂದುವರಿಸಲು ಸಾಧ್ಯವಾಗಲಿಲ್ಲ ಎಂದು ಸಂಘಟಕರು ಹೇಳಿದ್ದಾರೆ.

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು, ಸರ್ಕಾರದ ಅನುಮೋದನೆಯಿಲ್ಲದೆ ‘ಇಂಡಿಯನ್ ಸೈನ್ಸ್ ಕಾಂಗ್ರೆಸ್ ಅಸೋಸಿಯೇಷನ್’ ಏಕಪಕ್ಷೀಯವಾಗಿ ಲಕ್ನೋದಿಂದ ಜಲಂಧರ್‌ಗೆ ಕಾರ್ಯಕ್ರಮ ಸ್ಥಳಾಂತರಿಸಿದೆ ಎಂದು ಆರೋಪಿಸಿದೆ. ಸ್ಥಳವನ್ನು ಆಯ್ಕೆ ಮಾಡಲು ತನ್ನ ಕಾರ್ಯಕಾರಿ ಸಮಿತಿಗೆ DST ಯಿಂದ ಅನುಮತಿ ಅಗತ್ಯವಿಲ್ಲ ಎಂದು ISCA ಪ್ರತಿವಾದಿಸಿದೆ. ಆದರೆ ಸ್ಥಳವನ್ನು ಆಯ್ಕೆ ಮಾಡುವ ಸಮಯದಲ್ಲಿ ಡಿಎಸ್‌ಟಿ ಪ್ರತಿನಿಧಿಯೊಬ್ಬರು ಹಾಜರಿದ್ದರು ಎಂದು ಕೂಡ ಹೇಳಿದೆ.

ISCA ಆಯೋಜಿಸುವ ವಾರ್ಷಿಕ ಕಾರ್ಯಕ್ರಮವು ಈಗಾಗಲೇ ವೈಜ್ಞಾನಿಕತೆಯನ್ನು ಕಳೆದುಕೊಂಡಿದೆ ಮತ್ತು ಕಾರ್ಯಕ್ರಮದ ಆಯೋಜನೆಯಲ್ಲಿ ವೃತ್ತಿಪರ ವಿಧಾನವನ್ನು ಹೊಂದಿಲ್ಲ ಎಂದು ಆರೋಪಿಸಲಾಗಿದೆ. ಆದರೆ ವಿಜ್ಞಾನ ಕಾಂಗ್ರೆಸ್‌ನ ಕಾರ್ಯಚಟುವಟಿಕೆ ಕುರಿತು ಸರ್ಕಾರಕ್ಕೆ ಅಸಮಾಧಾನ ಇದ್ದಿದ್ದರೆ ಅದನ್ನು ಸರಿಪಡಿಸುವ ಕೆಲಸವನ್ನು ಮಾಡಬಹುದಿತ್ತು. ಅದರ ಕಾರ್ಯಕ್ರಮ ನಡೆಸಲು ನಿರಾಕರಿಸಿರುವುದು ಪ್ರಶ್ನೆಗೆ ಕಾರಣವಾಗಿದೆ.

ಸಾವಿರಾರು ವಿಜ್ಞಾನಿಗಳು, ಸಂಶೋಧನಾ ವಿದ್ಯಾರ್ಥಿಗಳು ಮತ್ತು ವೈಜ್ಞಾನಿಕ ಸಂಸ್ಥೆಗಳಿಂದ ಅಧ್ಯಾಪಕರು ಮತ್ತು ಶಾಲಾ ಮಕ್ಕಳು ಸಾಮಾನ್ಯವಾಗಿ ISCಯ ವಾರ್ಷಿಕ ಕಾರ್ಯಕ್ರಮಕ್ಕೆ ಹಾಜರಾಗುತ್ತಾರೆ. ISC ಯೊಂದಿಗೆ ನಿಕಟವಾಗಿರುವ ಅಧಿಕಾರಿಗಳು ಮತ್ತು ವಿಜ್ಞಾನಿಗಳು ಅದರ ವಾರ್ಷಿಕ ಅಧಿವೇಶನಗಳ ವಿಷಯವನ್ನು ಸುಧಾರಿಸಬೇಕೆನ್ನುವುದನ್ನು ಒಪ್ಪಿಕೊಳ್ಳುತ್ತಾರೆ. ಆದರೆ ಕಾರ್ಯಕ್ರವನ್ನೇ ನಡೆಯದಂತೆ ಹುನ್ನಾರ ನಡೆಸಿರುವುದರ ಹಿಂದೆ ಸರಕಾರವನ್ನು ಟೀಕಿಸಿದ್ದಾರೆ. ISC ಗೆ ಸರ್ಕಾರದ ಹಣವನ್ನು ನಿರಾಕರಿಸುವ DST ನಿರ್ಧಾರವನ್ನು ISC ಯ ಸಮ್ಮೇಳನವನ್ನು ದುರ್ಬಲಗೊಳಿಸಲು ಸರ್ಕಾರವು ನಡೆಸಿದ ಪ್ರಯತ್ನಗಳ ಫಲಿತಾಂಶವೆಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಸ್ವದೇಶಿ ಮನೋಭಾವದೊಂದಿಗೆ ವಿಜ್ಞಾನ ಆಂದೋಲನದ ಕಾರಣ ಮುಂದಿಟ್ಟು ‘ಇಂಡಿಯಾ–ಇಂಟರ್‌ನ್ಯಾಷನಲ್‌ ಸೈನ್ಸ್‌ ಫೆಸ್ಟಿವಲ್‌’ ಆಯೋಜಿಸಲಾಗುತ್ತಿದೆ. IISF ಗಾಗಿ ಸರ್ಕಾರ 20 ರಿಂದ 25 ಕೋಟಿ ರೂಪಾಯಿಗಳು ಬಜೆಟ್‌ನಲ್ಲಿ ನೀಡುತ್ತಿದೆ.  ISC ಯ ಭಾರತೀಯ ವಿಜ್ಞಾನ ಕಾಂಗ್ರೆಸ್‌ ಸಮ್ಮೇಳನಕ್ಕೆ 5 ಕೋಟಿ ರೂಪಾಯಿಗಳಿಗೆ ಮಾತ್ರ ನೀಡಲಾಗುತ್ತಿತ್ತು ಎಂದು DST ಅಧಿಕಾರಿಯೋರ್ವರು ಹೇಳಿದ್ದಾರೆ.

ಮುಂಬೈನ ಹೋಮಿ ಭಾಭಾ ವಿಜ್ಞಾನ ಶಿಕ್ಷಣ ಕೇಂದ್ರದ ಖಗೋಳಶಾಸ್ತ್ರಜ್ಞ ಅನಿಕೇತ್ ಸುಲೆ ಈ ಬಗ್ಗೆ ಮಾತನಾಡಿದ್ದು, ವಿಜ್ಞಾನ ಕಾಂಗ್ರೆಸ್ ಕಾರ್ಯಕ್ರಮ ರದ್ದತಿ ಬಗ್ಗೆ ನಾನು ಚಿಂತಿಸುವುದಿಲ್ಲ. ವಿಜ್ಞಾನ ಕಾಂಗ್ರೆಸ್ ತನ್ನ ಅರ್ಥವನ್ನು ಕಳೆದುಕೊಂಡಿದೆ ಎಂದು ನಾನು ಒಪ್ಪುತ್ತೇನೆ. ಆದರೆ ಅದರ ಕಾರ್ಯಕ್ರಮ ನಡೆಯದಿರುವ ಕಾರಣದ ಬಗ್ಗೆ ನಾನು ಚಿಂತಿತನಾಗಿದ್ದೇನೆ ಎಂದು ಹೇಳಿದ್ದಾರೆ. ವಿಜ್ಞಾನ ಮತ್ತು ರಾಜಕೀಯ ಸಿದ್ಧಾಂತದ ನಡುವೆ ಯಾವುದೇ ಸಂಬಂಧ ಇಲ್ಲ. ಆದರೆ ಸರಕಾರ ರಾಜಕೀಯ ಕಾರಣಕ್ಕೆ ವೈಜ್ಞಾನಿಕ ಕಾರ್ಯಕ್ರಮಕ್ಕೆ ಅನುದಾನ ನೀಡದಿರುವುದು ಟೀಕೆಗೆ ಕಾರಣವಾಗಿದೆ.

ಇದನ್ನು ಓದಿ: ಬುಡಕಟ್ಟು ಮಕ್ಕಳ ಜೀವನದಲ್ಲಿ ಶಿಕ್ಷಣದ ಬೆಳಕು ಚೆಲ್ಲಿದ ಶಿಕ್ಷಕಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...