Homeಮುಖಪುಟ'ಭಾರತೀಯ ವಿಜ್ಞಾನ ಕಾಂಗ್ರೆಸ್‌'ಗೆ ನೆರವು ಸ್ಥಗಿತಗೊಳಿಸಿದ ಕೇಂದ್ರ ಸರಕಾರ!

‘ಭಾರತೀಯ ವಿಜ್ಞಾನ ಕಾಂಗ್ರೆಸ್‌’ಗೆ ನೆರವು ಸ್ಥಗಿತಗೊಳಿಸಿದ ಕೇಂದ್ರ ಸರಕಾರ!

- Advertisement -
- Advertisement -

ಇಂಡಿಯನ್ ಸೈನ್ಸ್ ಕಾಂಗ್ರೆಸ್ ಅಸೋಸಿಯೇಷನ್(ISCA) ಪ್ರತಿವರ್ಷ ಆಯೋಜನೆ ಮಾಡುತ್ತಿದ್ದ ವಾರ್ಷಿಕ ಕಾರ್ಯಕ್ರಮ ‘ಭಾರತೀಯ ವಿಜ್ಞಾನ ಕಾಂಗ್ರೆಸ್‌’ ರದ್ದುಗೊಳಿಸಲಾಗಿದ್ದು, ಸರ್ಕಾರವು ಈ ಬಾರಿ ಹಣಕಾಸಿನ ನೆರವು ನೀಡದ ಕಾರಣಕ್ಕೆ ಈ ನಿರ್ಧಾರಕ್ಕೆ ಬರಲಾಗಿದೆ.

ಈ ಕಾರ್ಯಕ್ರಮ ಆಯೋಜನೆಗೆ ಸಂಬಂಧಿಸಿ ಸರ್ಕಾರ ಮತ್ತು ಐಎಸ್‌ಸಿಎ ನಡುವೆ ಕಳೆದ ಕೆಲ ವರ್ಷಗಳಿಂದ ಭಿನ್ನಾಭಿಪ್ರಾಯ ಇದೆ. ವಿಜ್ಞಾನ ಕಾಂಗ್ರೆಸ್‌ಗೆ ಬದಲಾಗಿ ಸರ್ಕಾರವು,  ವಿಜ್ಞಾನ ಭಾರತಿಯ ‘ಭಾರತೀಯ ಅಂತರಾಷ್ಟ್ರೀಯ ವಿಜ್ಞಾನ ಮೇಳ’ವನ್ನು (ಐಐಎಸ್‌ಎಫ್‌) 2015ರಿಂದ ಆಯೋಜಿಸುತ್ತಿದೆ.

‘ವಿಜ್ಞಾನ ಭಾರತಿ’ಯು ಸಂಘ ಪರಿವಾರದ ಜೊತೆ ನಂಟು ಇರುವ ಸಂಸ್ಥೆಯಾಗಿದೆ. ಇದರ ವಾರ್ಷಿಕ ಸಭೆಯು ಹರಿಯಾಣದ ಫರೀದಾಬಾದ್‌ನಲ್ಲಿ ಈ ತಿಂಗಳು ನಡೆಯಲಿದೆ. ಈ ಸಂಸ್ಥೆಯು ನಡೆಸುವ ಕಾರ್ಯಕ್ರಮವನ್ನು ವಿಜ್ಞಾನ ಕಾಂಗ್ರೆಸ್‌ಗೆ ಪರ್ಯಾಯ ಎಂದು ಬಿಂಬಿಸಲು ಸರ್ಕಾರ ಯತ್ನಿಸುತ್ತಿದೆ.

1914ರಿಂದ ಭಾರತೀಯ ವಿಜ್ಞಾನ ಕಾಂಗ್ರೆಸ್‌ನ್ನು ಆಯೋಜಿಸಲಾಗುತ್ತಿತ್ತು. ಸ್ವಾತಂತ್ರ್ಯದ ನಂತರ ಭಾರತದ ಪ್ರಧಾನ ಮಂತ್ರಿಗಳು ವಿಜ್ಞಾನಿಗಳ ವಾರ್ಷಿಕ ಕೂಟವನ್ನು ಉದ್ಘಾಟಿಸುತ್ತಿದ್ದರು. ಈ ಸಭೆಯು ಪ್ರಧಾನಿಯವರ ವರ್ಷದ ಮೊದಲ ಸಾರ್ವಜನಿಕ ಕಾರ್ಯಕ್ರಮವಾಗಿರುತ್ತಿತ್ತು. ಆದರೆ ಈ ಬಾರಿ ಕಾರ್ಯಕ್ರಮ ನಡೆಯುತ್ತಿಲ್ಲ.

ಕೋವಿಡ್‌ ಸಾಂಕ್ರಾಮಿಕದ ಕಾರಣದಿಂದ 2021 ಮತ್ತು 2022ರಲ್ಲಿ ಭಾರತೀಯ ವಿಜ್ಞಾನ ಕಾಂಗ್ರೆಸ್‌ ಅನ್ನು ಆಯೋಜಿಸಲು ಸಾಧ್ಯವಾಗಿರಲಿಲ್ಲ. 108ನೇ ವಿಜ್ಞಾನ ಕಾಂಗ್ರೆಸ್‌ ಅನ್ನು ಕಳೆದ ವರ್ಷ ನಾಗ್ಪುರದಲ್ಲಿ ಆಯೋಜಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೊ ಕಾನ್ಫರೆನ್ಸ್‌ ಮೂಲಕ ಇದನ್ನು ಉದ್ಘಾಟಿಸಿದ್ದರು.

ಈ ಬಾರಿ ಜನವರಿ 3 ರಿಂದ 5ರವರೆಗೆ ಜಲಂಧರ್‌ನ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯಲ್ಲಿ (LPU) 109ನೇ ಭಾರತೀಯ ವಿಜ್ಞಾನ ಕಾಂಗ್ರೆಸ್‌ನ್ನು (ISC) ಆಯೋಜಿಸಲು ಇಂಡಿಯನ್ ಸೈನ್ಸ್ ಕಾಂಗ್ರೆಸ್ ಅಸೋಸಿಯೇಷನ್ (ISCA) ತೀರ್ಮಾನಿಸಿತ್ತು. ಆದರೆ ಸೆಪ್ಟೆಂಬರ್ 2023ರಲ್ಲಿ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ISC ಮತ್ತು ಈವೆಂಟ್‌ಗೆ ಯಾವುದೇ ಸರ್ಕಾರಿ ಧನಸಹಾಯ ನೀಡಲು ನಿರಾಕರಿಸುವುದರಿಂದ ಸಮ್ಮೇಳನವನ್ನು ಮುಂದುವರಿಸಲು ಸಾಧ್ಯವಾಗಲಿಲ್ಲ ಎಂದು ಸಂಘಟಕರು ಹೇಳಿದ್ದಾರೆ.

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು, ಸರ್ಕಾರದ ಅನುಮೋದನೆಯಿಲ್ಲದೆ ‘ಇಂಡಿಯನ್ ಸೈನ್ಸ್ ಕಾಂಗ್ರೆಸ್ ಅಸೋಸಿಯೇಷನ್’ ಏಕಪಕ್ಷೀಯವಾಗಿ ಲಕ್ನೋದಿಂದ ಜಲಂಧರ್‌ಗೆ ಕಾರ್ಯಕ್ರಮ ಸ್ಥಳಾಂತರಿಸಿದೆ ಎಂದು ಆರೋಪಿಸಿದೆ. ಸ್ಥಳವನ್ನು ಆಯ್ಕೆ ಮಾಡಲು ತನ್ನ ಕಾರ್ಯಕಾರಿ ಸಮಿತಿಗೆ DST ಯಿಂದ ಅನುಮತಿ ಅಗತ್ಯವಿಲ್ಲ ಎಂದು ISCA ಪ್ರತಿವಾದಿಸಿದೆ. ಆದರೆ ಸ್ಥಳವನ್ನು ಆಯ್ಕೆ ಮಾಡುವ ಸಮಯದಲ್ಲಿ ಡಿಎಸ್‌ಟಿ ಪ್ರತಿನಿಧಿಯೊಬ್ಬರು ಹಾಜರಿದ್ದರು ಎಂದು ಕೂಡ ಹೇಳಿದೆ.

ISCA ಆಯೋಜಿಸುವ ವಾರ್ಷಿಕ ಕಾರ್ಯಕ್ರಮವು ಈಗಾಗಲೇ ವೈಜ್ಞಾನಿಕತೆಯನ್ನು ಕಳೆದುಕೊಂಡಿದೆ ಮತ್ತು ಕಾರ್ಯಕ್ರಮದ ಆಯೋಜನೆಯಲ್ಲಿ ವೃತ್ತಿಪರ ವಿಧಾನವನ್ನು ಹೊಂದಿಲ್ಲ ಎಂದು ಆರೋಪಿಸಲಾಗಿದೆ. ಆದರೆ ವಿಜ್ಞಾನ ಕಾಂಗ್ರೆಸ್‌ನ ಕಾರ್ಯಚಟುವಟಿಕೆ ಕುರಿತು ಸರ್ಕಾರಕ್ಕೆ ಅಸಮಾಧಾನ ಇದ್ದಿದ್ದರೆ ಅದನ್ನು ಸರಿಪಡಿಸುವ ಕೆಲಸವನ್ನು ಮಾಡಬಹುದಿತ್ತು. ಅದರ ಕಾರ್ಯಕ್ರಮ ನಡೆಸಲು ನಿರಾಕರಿಸಿರುವುದು ಪ್ರಶ್ನೆಗೆ ಕಾರಣವಾಗಿದೆ.

ಸಾವಿರಾರು ವಿಜ್ಞಾನಿಗಳು, ಸಂಶೋಧನಾ ವಿದ್ಯಾರ್ಥಿಗಳು ಮತ್ತು ವೈಜ್ಞಾನಿಕ ಸಂಸ್ಥೆಗಳಿಂದ ಅಧ್ಯಾಪಕರು ಮತ್ತು ಶಾಲಾ ಮಕ್ಕಳು ಸಾಮಾನ್ಯವಾಗಿ ISCಯ ವಾರ್ಷಿಕ ಕಾರ್ಯಕ್ರಮಕ್ಕೆ ಹಾಜರಾಗುತ್ತಾರೆ. ISC ಯೊಂದಿಗೆ ನಿಕಟವಾಗಿರುವ ಅಧಿಕಾರಿಗಳು ಮತ್ತು ವಿಜ್ಞಾನಿಗಳು ಅದರ ವಾರ್ಷಿಕ ಅಧಿವೇಶನಗಳ ವಿಷಯವನ್ನು ಸುಧಾರಿಸಬೇಕೆನ್ನುವುದನ್ನು ಒಪ್ಪಿಕೊಳ್ಳುತ್ತಾರೆ. ಆದರೆ ಕಾರ್ಯಕ್ರವನ್ನೇ ನಡೆಯದಂತೆ ಹುನ್ನಾರ ನಡೆಸಿರುವುದರ ಹಿಂದೆ ಸರಕಾರವನ್ನು ಟೀಕಿಸಿದ್ದಾರೆ. ISC ಗೆ ಸರ್ಕಾರದ ಹಣವನ್ನು ನಿರಾಕರಿಸುವ DST ನಿರ್ಧಾರವನ್ನು ISC ಯ ಸಮ್ಮೇಳನವನ್ನು ದುರ್ಬಲಗೊಳಿಸಲು ಸರ್ಕಾರವು ನಡೆಸಿದ ಪ್ರಯತ್ನಗಳ ಫಲಿತಾಂಶವೆಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಸ್ವದೇಶಿ ಮನೋಭಾವದೊಂದಿಗೆ ವಿಜ್ಞಾನ ಆಂದೋಲನದ ಕಾರಣ ಮುಂದಿಟ್ಟು ‘ಇಂಡಿಯಾ–ಇಂಟರ್‌ನ್ಯಾಷನಲ್‌ ಸೈನ್ಸ್‌ ಫೆಸ್ಟಿವಲ್‌’ ಆಯೋಜಿಸಲಾಗುತ್ತಿದೆ. IISF ಗಾಗಿ ಸರ್ಕಾರ 20 ರಿಂದ 25 ಕೋಟಿ ರೂಪಾಯಿಗಳು ಬಜೆಟ್‌ನಲ್ಲಿ ನೀಡುತ್ತಿದೆ.  ISC ಯ ಭಾರತೀಯ ವಿಜ್ಞಾನ ಕಾಂಗ್ರೆಸ್‌ ಸಮ್ಮೇಳನಕ್ಕೆ 5 ಕೋಟಿ ರೂಪಾಯಿಗಳಿಗೆ ಮಾತ್ರ ನೀಡಲಾಗುತ್ತಿತ್ತು ಎಂದು DST ಅಧಿಕಾರಿಯೋರ್ವರು ಹೇಳಿದ್ದಾರೆ.

ಮುಂಬೈನ ಹೋಮಿ ಭಾಭಾ ವಿಜ್ಞಾನ ಶಿಕ್ಷಣ ಕೇಂದ್ರದ ಖಗೋಳಶಾಸ್ತ್ರಜ್ಞ ಅನಿಕೇತ್ ಸುಲೆ ಈ ಬಗ್ಗೆ ಮಾತನಾಡಿದ್ದು, ವಿಜ್ಞಾನ ಕಾಂಗ್ರೆಸ್ ಕಾರ್ಯಕ್ರಮ ರದ್ದತಿ ಬಗ್ಗೆ ನಾನು ಚಿಂತಿಸುವುದಿಲ್ಲ. ವಿಜ್ಞಾನ ಕಾಂಗ್ರೆಸ್ ತನ್ನ ಅರ್ಥವನ್ನು ಕಳೆದುಕೊಂಡಿದೆ ಎಂದು ನಾನು ಒಪ್ಪುತ್ತೇನೆ. ಆದರೆ ಅದರ ಕಾರ್ಯಕ್ರಮ ನಡೆಯದಿರುವ ಕಾರಣದ ಬಗ್ಗೆ ನಾನು ಚಿಂತಿತನಾಗಿದ್ದೇನೆ ಎಂದು ಹೇಳಿದ್ದಾರೆ. ವಿಜ್ಞಾನ ಮತ್ತು ರಾಜಕೀಯ ಸಿದ್ಧಾಂತದ ನಡುವೆ ಯಾವುದೇ ಸಂಬಂಧ ಇಲ್ಲ. ಆದರೆ ಸರಕಾರ ರಾಜಕೀಯ ಕಾರಣಕ್ಕೆ ವೈಜ್ಞಾನಿಕ ಕಾರ್ಯಕ್ರಮಕ್ಕೆ ಅನುದಾನ ನೀಡದಿರುವುದು ಟೀಕೆಗೆ ಕಾರಣವಾಗಿದೆ.

ಇದನ್ನು ಓದಿ: ಬುಡಕಟ್ಟು ಮಕ್ಕಳ ಜೀವನದಲ್ಲಿ ಶಿಕ್ಷಣದ ಬೆಳಕು ಚೆಲ್ಲಿದ ಶಿಕ್ಷಕಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...