Homeಮುಖಪುಟ'ಭಾರತೀಯ ವಿಜ್ಞಾನ ಕಾಂಗ್ರೆಸ್‌'ಗೆ ನೆರವು ಸ್ಥಗಿತಗೊಳಿಸಿದ ಕೇಂದ್ರ ಸರಕಾರ!

‘ಭಾರತೀಯ ವಿಜ್ಞಾನ ಕಾಂಗ್ರೆಸ್‌’ಗೆ ನೆರವು ಸ್ಥಗಿತಗೊಳಿಸಿದ ಕೇಂದ್ರ ಸರಕಾರ!

- Advertisement -
- Advertisement -

ಇಂಡಿಯನ್ ಸೈನ್ಸ್ ಕಾಂಗ್ರೆಸ್ ಅಸೋಸಿಯೇಷನ್(ISCA) ಪ್ರತಿವರ್ಷ ಆಯೋಜನೆ ಮಾಡುತ್ತಿದ್ದ ವಾರ್ಷಿಕ ಕಾರ್ಯಕ್ರಮ ‘ಭಾರತೀಯ ವಿಜ್ಞಾನ ಕಾಂಗ್ರೆಸ್‌’ ರದ್ದುಗೊಳಿಸಲಾಗಿದ್ದು, ಸರ್ಕಾರವು ಈ ಬಾರಿ ಹಣಕಾಸಿನ ನೆರವು ನೀಡದ ಕಾರಣಕ್ಕೆ ಈ ನಿರ್ಧಾರಕ್ಕೆ ಬರಲಾಗಿದೆ.

ಈ ಕಾರ್ಯಕ್ರಮ ಆಯೋಜನೆಗೆ ಸಂಬಂಧಿಸಿ ಸರ್ಕಾರ ಮತ್ತು ಐಎಸ್‌ಸಿಎ ನಡುವೆ ಕಳೆದ ಕೆಲ ವರ್ಷಗಳಿಂದ ಭಿನ್ನಾಭಿಪ್ರಾಯ ಇದೆ. ವಿಜ್ಞಾನ ಕಾಂಗ್ರೆಸ್‌ಗೆ ಬದಲಾಗಿ ಸರ್ಕಾರವು,  ವಿಜ್ಞಾನ ಭಾರತಿಯ ‘ಭಾರತೀಯ ಅಂತರಾಷ್ಟ್ರೀಯ ವಿಜ್ಞಾನ ಮೇಳ’ವನ್ನು (ಐಐಎಸ್‌ಎಫ್‌) 2015ರಿಂದ ಆಯೋಜಿಸುತ್ತಿದೆ.

‘ವಿಜ್ಞಾನ ಭಾರತಿ’ಯು ಸಂಘ ಪರಿವಾರದ ಜೊತೆ ನಂಟು ಇರುವ ಸಂಸ್ಥೆಯಾಗಿದೆ. ಇದರ ವಾರ್ಷಿಕ ಸಭೆಯು ಹರಿಯಾಣದ ಫರೀದಾಬಾದ್‌ನಲ್ಲಿ ಈ ತಿಂಗಳು ನಡೆಯಲಿದೆ. ಈ ಸಂಸ್ಥೆಯು ನಡೆಸುವ ಕಾರ್ಯಕ್ರಮವನ್ನು ವಿಜ್ಞಾನ ಕಾಂಗ್ರೆಸ್‌ಗೆ ಪರ್ಯಾಯ ಎಂದು ಬಿಂಬಿಸಲು ಸರ್ಕಾರ ಯತ್ನಿಸುತ್ತಿದೆ.

1914ರಿಂದ ಭಾರತೀಯ ವಿಜ್ಞಾನ ಕಾಂಗ್ರೆಸ್‌ನ್ನು ಆಯೋಜಿಸಲಾಗುತ್ತಿತ್ತು. ಸ್ವಾತಂತ್ರ್ಯದ ನಂತರ ಭಾರತದ ಪ್ರಧಾನ ಮಂತ್ರಿಗಳು ವಿಜ್ಞಾನಿಗಳ ವಾರ್ಷಿಕ ಕೂಟವನ್ನು ಉದ್ಘಾಟಿಸುತ್ತಿದ್ದರು. ಈ ಸಭೆಯು ಪ್ರಧಾನಿಯವರ ವರ್ಷದ ಮೊದಲ ಸಾರ್ವಜನಿಕ ಕಾರ್ಯಕ್ರಮವಾಗಿರುತ್ತಿತ್ತು. ಆದರೆ ಈ ಬಾರಿ ಕಾರ್ಯಕ್ರಮ ನಡೆಯುತ್ತಿಲ್ಲ.

ಕೋವಿಡ್‌ ಸಾಂಕ್ರಾಮಿಕದ ಕಾರಣದಿಂದ 2021 ಮತ್ತು 2022ರಲ್ಲಿ ಭಾರತೀಯ ವಿಜ್ಞಾನ ಕಾಂಗ್ರೆಸ್‌ ಅನ್ನು ಆಯೋಜಿಸಲು ಸಾಧ್ಯವಾಗಿರಲಿಲ್ಲ. 108ನೇ ವಿಜ್ಞಾನ ಕಾಂಗ್ರೆಸ್‌ ಅನ್ನು ಕಳೆದ ವರ್ಷ ನಾಗ್ಪುರದಲ್ಲಿ ಆಯೋಜಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೊ ಕಾನ್ಫರೆನ್ಸ್‌ ಮೂಲಕ ಇದನ್ನು ಉದ್ಘಾಟಿಸಿದ್ದರು.

ಈ ಬಾರಿ ಜನವರಿ 3 ರಿಂದ 5ರವರೆಗೆ ಜಲಂಧರ್‌ನ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯಲ್ಲಿ (LPU) 109ನೇ ಭಾರತೀಯ ವಿಜ್ಞಾನ ಕಾಂಗ್ರೆಸ್‌ನ್ನು (ISC) ಆಯೋಜಿಸಲು ಇಂಡಿಯನ್ ಸೈನ್ಸ್ ಕಾಂಗ್ರೆಸ್ ಅಸೋಸಿಯೇಷನ್ (ISCA) ತೀರ್ಮಾನಿಸಿತ್ತು. ಆದರೆ ಸೆಪ್ಟೆಂಬರ್ 2023ರಲ್ಲಿ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ISC ಮತ್ತು ಈವೆಂಟ್‌ಗೆ ಯಾವುದೇ ಸರ್ಕಾರಿ ಧನಸಹಾಯ ನೀಡಲು ನಿರಾಕರಿಸುವುದರಿಂದ ಸಮ್ಮೇಳನವನ್ನು ಮುಂದುವರಿಸಲು ಸಾಧ್ಯವಾಗಲಿಲ್ಲ ಎಂದು ಸಂಘಟಕರು ಹೇಳಿದ್ದಾರೆ.

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು, ಸರ್ಕಾರದ ಅನುಮೋದನೆಯಿಲ್ಲದೆ ‘ಇಂಡಿಯನ್ ಸೈನ್ಸ್ ಕಾಂಗ್ರೆಸ್ ಅಸೋಸಿಯೇಷನ್’ ಏಕಪಕ್ಷೀಯವಾಗಿ ಲಕ್ನೋದಿಂದ ಜಲಂಧರ್‌ಗೆ ಕಾರ್ಯಕ್ರಮ ಸ್ಥಳಾಂತರಿಸಿದೆ ಎಂದು ಆರೋಪಿಸಿದೆ. ಸ್ಥಳವನ್ನು ಆಯ್ಕೆ ಮಾಡಲು ತನ್ನ ಕಾರ್ಯಕಾರಿ ಸಮಿತಿಗೆ DST ಯಿಂದ ಅನುಮತಿ ಅಗತ್ಯವಿಲ್ಲ ಎಂದು ISCA ಪ್ರತಿವಾದಿಸಿದೆ. ಆದರೆ ಸ್ಥಳವನ್ನು ಆಯ್ಕೆ ಮಾಡುವ ಸಮಯದಲ್ಲಿ ಡಿಎಸ್‌ಟಿ ಪ್ರತಿನಿಧಿಯೊಬ್ಬರು ಹಾಜರಿದ್ದರು ಎಂದು ಕೂಡ ಹೇಳಿದೆ.

ISCA ಆಯೋಜಿಸುವ ವಾರ್ಷಿಕ ಕಾರ್ಯಕ್ರಮವು ಈಗಾಗಲೇ ವೈಜ್ಞಾನಿಕತೆಯನ್ನು ಕಳೆದುಕೊಂಡಿದೆ ಮತ್ತು ಕಾರ್ಯಕ್ರಮದ ಆಯೋಜನೆಯಲ್ಲಿ ವೃತ್ತಿಪರ ವಿಧಾನವನ್ನು ಹೊಂದಿಲ್ಲ ಎಂದು ಆರೋಪಿಸಲಾಗಿದೆ. ಆದರೆ ವಿಜ್ಞಾನ ಕಾಂಗ್ರೆಸ್‌ನ ಕಾರ್ಯಚಟುವಟಿಕೆ ಕುರಿತು ಸರ್ಕಾರಕ್ಕೆ ಅಸಮಾಧಾನ ಇದ್ದಿದ್ದರೆ ಅದನ್ನು ಸರಿಪಡಿಸುವ ಕೆಲಸವನ್ನು ಮಾಡಬಹುದಿತ್ತು. ಅದರ ಕಾರ್ಯಕ್ರಮ ನಡೆಸಲು ನಿರಾಕರಿಸಿರುವುದು ಪ್ರಶ್ನೆಗೆ ಕಾರಣವಾಗಿದೆ.

ಸಾವಿರಾರು ವಿಜ್ಞಾನಿಗಳು, ಸಂಶೋಧನಾ ವಿದ್ಯಾರ್ಥಿಗಳು ಮತ್ತು ವೈಜ್ಞಾನಿಕ ಸಂಸ್ಥೆಗಳಿಂದ ಅಧ್ಯಾಪಕರು ಮತ್ತು ಶಾಲಾ ಮಕ್ಕಳು ಸಾಮಾನ್ಯವಾಗಿ ISCಯ ವಾರ್ಷಿಕ ಕಾರ್ಯಕ್ರಮಕ್ಕೆ ಹಾಜರಾಗುತ್ತಾರೆ. ISC ಯೊಂದಿಗೆ ನಿಕಟವಾಗಿರುವ ಅಧಿಕಾರಿಗಳು ಮತ್ತು ವಿಜ್ಞಾನಿಗಳು ಅದರ ವಾರ್ಷಿಕ ಅಧಿವೇಶನಗಳ ವಿಷಯವನ್ನು ಸುಧಾರಿಸಬೇಕೆನ್ನುವುದನ್ನು ಒಪ್ಪಿಕೊಳ್ಳುತ್ತಾರೆ. ಆದರೆ ಕಾರ್ಯಕ್ರವನ್ನೇ ನಡೆಯದಂತೆ ಹುನ್ನಾರ ನಡೆಸಿರುವುದರ ಹಿಂದೆ ಸರಕಾರವನ್ನು ಟೀಕಿಸಿದ್ದಾರೆ. ISC ಗೆ ಸರ್ಕಾರದ ಹಣವನ್ನು ನಿರಾಕರಿಸುವ DST ನಿರ್ಧಾರವನ್ನು ISC ಯ ಸಮ್ಮೇಳನವನ್ನು ದುರ್ಬಲಗೊಳಿಸಲು ಸರ್ಕಾರವು ನಡೆಸಿದ ಪ್ರಯತ್ನಗಳ ಫಲಿತಾಂಶವೆಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಸ್ವದೇಶಿ ಮನೋಭಾವದೊಂದಿಗೆ ವಿಜ್ಞಾನ ಆಂದೋಲನದ ಕಾರಣ ಮುಂದಿಟ್ಟು ‘ಇಂಡಿಯಾ–ಇಂಟರ್‌ನ್ಯಾಷನಲ್‌ ಸೈನ್ಸ್‌ ಫೆಸ್ಟಿವಲ್‌’ ಆಯೋಜಿಸಲಾಗುತ್ತಿದೆ. IISF ಗಾಗಿ ಸರ್ಕಾರ 20 ರಿಂದ 25 ಕೋಟಿ ರೂಪಾಯಿಗಳು ಬಜೆಟ್‌ನಲ್ಲಿ ನೀಡುತ್ತಿದೆ.  ISC ಯ ಭಾರತೀಯ ವಿಜ್ಞಾನ ಕಾಂಗ್ರೆಸ್‌ ಸಮ್ಮೇಳನಕ್ಕೆ 5 ಕೋಟಿ ರೂಪಾಯಿಗಳಿಗೆ ಮಾತ್ರ ನೀಡಲಾಗುತ್ತಿತ್ತು ಎಂದು DST ಅಧಿಕಾರಿಯೋರ್ವರು ಹೇಳಿದ್ದಾರೆ.

ಮುಂಬೈನ ಹೋಮಿ ಭಾಭಾ ವಿಜ್ಞಾನ ಶಿಕ್ಷಣ ಕೇಂದ್ರದ ಖಗೋಳಶಾಸ್ತ್ರಜ್ಞ ಅನಿಕೇತ್ ಸುಲೆ ಈ ಬಗ್ಗೆ ಮಾತನಾಡಿದ್ದು, ವಿಜ್ಞಾನ ಕಾಂಗ್ರೆಸ್ ಕಾರ್ಯಕ್ರಮ ರದ್ದತಿ ಬಗ್ಗೆ ನಾನು ಚಿಂತಿಸುವುದಿಲ್ಲ. ವಿಜ್ಞಾನ ಕಾಂಗ್ರೆಸ್ ತನ್ನ ಅರ್ಥವನ್ನು ಕಳೆದುಕೊಂಡಿದೆ ಎಂದು ನಾನು ಒಪ್ಪುತ್ತೇನೆ. ಆದರೆ ಅದರ ಕಾರ್ಯಕ್ರಮ ನಡೆಯದಿರುವ ಕಾರಣದ ಬಗ್ಗೆ ನಾನು ಚಿಂತಿತನಾಗಿದ್ದೇನೆ ಎಂದು ಹೇಳಿದ್ದಾರೆ. ವಿಜ್ಞಾನ ಮತ್ತು ರಾಜಕೀಯ ಸಿದ್ಧಾಂತದ ನಡುವೆ ಯಾವುದೇ ಸಂಬಂಧ ಇಲ್ಲ. ಆದರೆ ಸರಕಾರ ರಾಜಕೀಯ ಕಾರಣಕ್ಕೆ ವೈಜ್ಞಾನಿಕ ಕಾರ್ಯಕ್ರಮಕ್ಕೆ ಅನುದಾನ ನೀಡದಿರುವುದು ಟೀಕೆಗೆ ಕಾರಣವಾಗಿದೆ.

ಇದನ್ನು ಓದಿ: ಬುಡಕಟ್ಟು ಮಕ್ಕಳ ಜೀವನದಲ್ಲಿ ಶಿಕ್ಷಣದ ಬೆಳಕು ಚೆಲ್ಲಿದ ಶಿಕ್ಷಕಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...