Homeಮುಖಪುಟ'ಭಾರತೀಯ ವಿಜ್ಞಾನ ಕಾಂಗ್ರೆಸ್‌'ಗೆ ನೆರವು ಸ್ಥಗಿತಗೊಳಿಸಿದ ಕೇಂದ್ರ ಸರಕಾರ!

‘ಭಾರತೀಯ ವಿಜ್ಞಾನ ಕಾಂಗ್ರೆಸ್‌’ಗೆ ನೆರವು ಸ್ಥಗಿತಗೊಳಿಸಿದ ಕೇಂದ್ರ ಸರಕಾರ!

- Advertisement -
- Advertisement -

ಇಂಡಿಯನ್ ಸೈನ್ಸ್ ಕಾಂಗ್ರೆಸ್ ಅಸೋಸಿಯೇಷನ್(ISCA) ಪ್ರತಿವರ್ಷ ಆಯೋಜನೆ ಮಾಡುತ್ತಿದ್ದ ವಾರ್ಷಿಕ ಕಾರ್ಯಕ್ರಮ ‘ಭಾರತೀಯ ವಿಜ್ಞಾನ ಕಾಂಗ್ರೆಸ್‌’ ರದ್ದುಗೊಳಿಸಲಾಗಿದ್ದು, ಸರ್ಕಾರವು ಈ ಬಾರಿ ಹಣಕಾಸಿನ ನೆರವು ನೀಡದ ಕಾರಣಕ್ಕೆ ಈ ನಿರ್ಧಾರಕ್ಕೆ ಬರಲಾಗಿದೆ.

ಈ ಕಾರ್ಯಕ್ರಮ ಆಯೋಜನೆಗೆ ಸಂಬಂಧಿಸಿ ಸರ್ಕಾರ ಮತ್ತು ಐಎಸ್‌ಸಿಎ ನಡುವೆ ಕಳೆದ ಕೆಲ ವರ್ಷಗಳಿಂದ ಭಿನ್ನಾಭಿಪ್ರಾಯ ಇದೆ. ವಿಜ್ಞಾನ ಕಾಂಗ್ರೆಸ್‌ಗೆ ಬದಲಾಗಿ ಸರ್ಕಾರವು,  ವಿಜ್ಞಾನ ಭಾರತಿಯ ‘ಭಾರತೀಯ ಅಂತರಾಷ್ಟ್ರೀಯ ವಿಜ್ಞಾನ ಮೇಳ’ವನ್ನು (ಐಐಎಸ್‌ಎಫ್‌) 2015ರಿಂದ ಆಯೋಜಿಸುತ್ತಿದೆ.

‘ವಿಜ್ಞಾನ ಭಾರತಿ’ಯು ಸಂಘ ಪರಿವಾರದ ಜೊತೆ ನಂಟು ಇರುವ ಸಂಸ್ಥೆಯಾಗಿದೆ. ಇದರ ವಾರ್ಷಿಕ ಸಭೆಯು ಹರಿಯಾಣದ ಫರೀದಾಬಾದ್‌ನಲ್ಲಿ ಈ ತಿಂಗಳು ನಡೆಯಲಿದೆ. ಈ ಸಂಸ್ಥೆಯು ನಡೆಸುವ ಕಾರ್ಯಕ್ರಮವನ್ನು ವಿಜ್ಞಾನ ಕಾಂಗ್ರೆಸ್‌ಗೆ ಪರ್ಯಾಯ ಎಂದು ಬಿಂಬಿಸಲು ಸರ್ಕಾರ ಯತ್ನಿಸುತ್ತಿದೆ.

1914ರಿಂದ ಭಾರತೀಯ ವಿಜ್ಞಾನ ಕಾಂಗ್ರೆಸ್‌ನ್ನು ಆಯೋಜಿಸಲಾಗುತ್ತಿತ್ತು. ಸ್ವಾತಂತ್ರ್ಯದ ನಂತರ ಭಾರತದ ಪ್ರಧಾನ ಮಂತ್ರಿಗಳು ವಿಜ್ಞಾನಿಗಳ ವಾರ್ಷಿಕ ಕೂಟವನ್ನು ಉದ್ಘಾಟಿಸುತ್ತಿದ್ದರು. ಈ ಸಭೆಯು ಪ್ರಧಾನಿಯವರ ವರ್ಷದ ಮೊದಲ ಸಾರ್ವಜನಿಕ ಕಾರ್ಯಕ್ರಮವಾಗಿರುತ್ತಿತ್ತು. ಆದರೆ ಈ ಬಾರಿ ಕಾರ್ಯಕ್ರಮ ನಡೆಯುತ್ತಿಲ್ಲ.

ಕೋವಿಡ್‌ ಸಾಂಕ್ರಾಮಿಕದ ಕಾರಣದಿಂದ 2021 ಮತ್ತು 2022ರಲ್ಲಿ ಭಾರತೀಯ ವಿಜ್ಞಾನ ಕಾಂಗ್ರೆಸ್‌ ಅನ್ನು ಆಯೋಜಿಸಲು ಸಾಧ್ಯವಾಗಿರಲಿಲ್ಲ. 108ನೇ ವಿಜ್ಞಾನ ಕಾಂಗ್ರೆಸ್‌ ಅನ್ನು ಕಳೆದ ವರ್ಷ ನಾಗ್ಪುರದಲ್ಲಿ ಆಯೋಜಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೊ ಕಾನ್ಫರೆನ್ಸ್‌ ಮೂಲಕ ಇದನ್ನು ಉದ್ಘಾಟಿಸಿದ್ದರು.

ಈ ಬಾರಿ ಜನವರಿ 3 ರಿಂದ 5ರವರೆಗೆ ಜಲಂಧರ್‌ನ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯಲ್ಲಿ (LPU) 109ನೇ ಭಾರತೀಯ ವಿಜ್ಞಾನ ಕಾಂಗ್ರೆಸ್‌ನ್ನು (ISC) ಆಯೋಜಿಸಲು ಇಂಡಿಯನ್ ಸೈನ್ಸ್ ಕಾಂಗ್ರೆಸ್ ಅಸೋಸಿಯೇಷನ್ (ISCA) ತೀರ್ಮಾನಿಸಿತ್ತು. ಆದರೆ ಸೆಪ್ಟೆಂಬರ್ 2023ರಲ್ಲಿ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ISC ಮತ್ತು ಈವೆಂಟ್‌ಗೆ ಯಾವುದೇ ಸರ್ಕಾರಿ ಧನಸಹಾಯ ನೀಡಲು ನಿರಾಕರಿಸುವುದರಿಂದ ಸಮ್ಮೇಳನವನ್ನು ಮುಂದುವರಿಸಲು ಸಾಧ್ಯವಾಗಲಿಲ್ಲ ಎಂದು ಸಂಘಟಕರು ಹೇಳಿದ್ದಾರೆ.

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು, ಸರ್ಕಾರದ ಅನುಮೋದನೆಯಿಲ್ಲದೆ ‘ಇಂಡಿಯನ್ ಸೈನ್ಸ್ ಕಾಂಗ್ರೆಸ್ ಅಸೋಸಿಯೇಷನ್’ ಏಕಪಕ್ಷೀಯವಾಗಿ ಲಕ್ನೋದಿಂದ ಜಲಂಧರ್‌ಗೆ ಕಾರ್ಯಕ್ರಮ ಸ್ಥಳಾಂತರಿಸಿದೆ ಎಂದು ಆರೋಪಿಸಿದೆ. ಸ್ಥಳವನ್ನು ಆಯ್ಕೆ ಮಾಡಲು ತನ್ನ ಕಾರ್ಯಕಾರಿ ಸಮಿತಿಗೆ DST ಯಿಂದ ಅನುಮತಿ ಅಗತ್ಯವಿಲ್ಲ ಎಂದು ISCA ಪ್ರತಿವಾದಿಸಿದೆ. ಆದರೆ ಸ್ಥಳವನ್ನು ಆಯ್ಕೆ ಮಾಡುವ ಸಮಯದಲ್ಲಿ ಡಿಎಸ್‌ಟಿ ಪ್ರತಿನಿಧಿಯೊಬ್ಬರು ಹಾಜರಿದ್ದರು ಎಂದು ಕೂಡ ಹೇಳಿದೆ.

ISCA ಆಯೋಜಿಸುವ ವಾರ್ಷಿಕ ಕಾರ್ಯಕ್ರಮವು ಈಗಾಗಲೇ ವೈಜ್ಞಾನಿಕತೆಯನ್ನು ಕಳೆದುಕೊಂಡಿದೆ ಮತ್ತು ಕಾರ್ಯಕ್ರಮದ ಆಯೋಜನೆಯಲ್ಲಿ ವೃತ್ತಿಪರ ವಿಧಾನವನ್ನು ಹೊಂದಿಲ್ಲ ಎಂದು ಆರೋಪಿಸಲಾಗಿದೆ. ಆದರೆ ವಿಜ್ಞಾನ ಕಾಂಗ್ರೆಸ್‌ನ ಕಾರ್ಯಚಟುವಟಿಕೆ ಕುರಿತು ಸರ್ಕಾರಕ್ಕೆ ಅಸಮಾಧಾನ ಇದ್ದಿದ್ದರೆ ಅದನ್ನು ಸರಿಪಡಿಸುವ ಕೆಲಸವನ್ನು ಮಾಡಬಹುದಿತ್ತು. ಅದರ ಕಾರ್ಯಕ್ರಮ ನಡೆಸಲು ನಿರಾಕರಿಸಿರುವುದು ಪ್ರಶ್ನೆಗೆ ಕಾರಣವಾಗಿದೆ.

ಸಾವಿರಾರು ವಿಜ್ಞಾನಿಗಳು, ಸಂಶೋಧನಾ ವಿದ್ಯಾರ್ಥಿಗಳು ಮತ್ತು ವೈಜ್ಞಾನಿಕ ಸಂಸ್ಥೆಗಳಿಂದ ಅಧ್ಯಾಪಕರು ಮತ್ತು ಶಾಲಾ ಮಕ್ಕಳು ಸಾಮಾನ್ಯವಾಗಿ ISCಯ ವಾರ್ಷಿಕ ಕಾರ್ಯಕ್ರಮಕ್ಕೆ ಹಾಜರಾಗುತ್ತಾರೆ. ISC ಯೊಂದಿಗೆ ನಿಕಟವಾಗಿರುವ ಅಧಿಕಾರಿಗಳು ಮತ್ತು ವಿಜ್ಞಾನಿಗಳು ಅದರ ವಾರ್ಷಿಕ ಅಧಿವೇಶನಗಳ ವಿಷಯವನ್ನು ಸುಧಾರಿಸಬೇಕೆನ್ನುವುದನ್ನು ಒಪ್ಪಿಕೊಳ್ಳುತ್ತಾರೆ. ಆದರೆ ಕಾರ್ಯಕ್ರವನ್ನೇ ನಡೆಯದಂತೆ ಹುನ್ನಾರ ನಡೆಸಿರುವುದರ ಹಿಂದೆ ಸರಕಾರವನ್ನು ಟೀಕಿಸಿದ್ದಾರೆ. ISC ಗೆ ಸರ್ಕಾರದ ಹಣವನ್ನು ನಿರಾಕರಿಸುವ DST ನಿರ್ಧಾರವನ್ನು ISC ಯ ಸಮ್ಮೇಳನವನ್ನು ದುರ್ಬಲಗೊಳಿಸಲು ಸರ್ಕಾರವು ನಡೆಸಿದ ಪ್ರಯತ್ನಗಳ ಫಲಿತಾಂಶವೆಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಸ್ವದೇಶಿ ಮನೋಭಾವದೊಂದಿಗೆ ವಿಜ್ಞಾನ ಆಂದೋಲನದ ಕಾರಣ ಮುಂದಿಟ್ಟು ‘ಇಂಡಿಯಾ–ಇಂಟರ್‌ನ್ಯಾಷನಲ್‌ ಸೈನ್ಸ್‌ ಫೆಸ್ಟಿವಲ್‌’ ಆಯೋಜಿಸಲಾಗುತ್ತಿದೆ. IISF ಗಾಗಿ ಸರ್ಕಾರ 20 ರಿಂದ 25 ಕೋಟಿ ರೂಪಾಯಿಗಳು ಬಜೆಟ್‌ನಲ್ಲಿ ನೀಡುತ್ತಿದೆ.  ISC ಯ ಭಾರತೀಯ ವಿಜ್ಞಾನ ಕಾಂಗ್ರೆಸ್‌ ಸಮ್ಮೇಳನಕ್ಕೆ 5 ಕೋಟಿ ರೂಪಾಯಿಗಳಿಗೆ ಮಾತ್ರ ನೀಡಲಾಗುತ್ತಿತ್ತು ಎಂದು DST ಅಧಿಕಾರಿಯೋರ್ವರು ಹೇಳಿದ್ದಾರೆ.

ಮುಂಬೈನ ಹೋಮಿ ಭಾಭಾ ವಿಜ್ಞಾನ ಶಿಕ್ಷಣ ಕೇಂದ್ರದ ಖಗೋಳಶಾಸ್ತ್ರಜ್ಞ ಅನಿಕೇತ್ ಸುಲೆ ಈ ಬಗ್ಗೆ ಮಾತನಾಡಿದ್ದು, ವಿಜ್ಞಾನ ಕಾಂಗ್ರೆಸ್ ಕಾರ್ಯಕ್ರಮ ರದ್ದತಿ ಬಗ್ಗೆ ನಾನು ಚಿಂತಿಸುವುದಿಲ್ಲ. ವಿಜ್ಞಾನ ಕಾಂಗ್ರೆಸ್ ತನ್ನ ಅರ್ಥವನ್ನು ಕಳೆದುಕೊಂಡಿದೆ ಎಂದು ನಾನು ಒಪ್ಪುತ್ತೇನೆ. ಆದರೆ ಅದರ ಕಾರ್ಯಕ್ರಮ ನಡೆಯದಿರುವ ಕಾರಣದ ಬಗ್ಗೆ ನಾನು ಚಿಂತಿತನಾಗಿದ್ದೇನೆ ಎಂದು ಹೇಳಿದ್ದಾರೆ. ವಿಜ್ಞಾನ ಮತ್ತು ರಾಜಕೀಯ ಸಿದ್ಧಾಂತದ ನಡುವೆ ಯಾವುದೇ ಸಂಬಂಧ ಇಲ್ಲ. ಆದರೆ ಸರಕಾರ ರಾಜಕೀಯ ಕಾರಣಕ್ಕೆ ವೈಜ್ಞಾನಿಕ ಕಾರ್ಯಕ್ರಮಕ್ಕೆ ಅನುದಾನ ನೀಡದಿರುವುದು ಟೀಕೆಗೆ ಕಾರಣವಾಗಿದೆ.

ಇದನ್ನು ಓದಿ: ಬುಡಕಟ್ಟು ಮಕ್ಕಳ ಜೀವನದಲ್ಲಿ ಶಿಕ್ಷಣದ ಬೆಳಕು ಚೆಲ್ಲಿದ ಶಿಕ್ಷಕಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...