Homeಮುಖಪುಟ'ಭಾರತೀಯ ವಿಜ್ಞಾನ ಕಾಂಗ್ರೆಸ್‌'ಗೆ ನೆರವು ಸ್ಥಗಿತಗೊಳಿಸಿದ ಕೇಂದ್ರ ಸರಕಾರ!

‘ಭಾರತೀಯ ವಿಜ್ಞಾನ ಕಾಂಗ್ರೆಸ್‌’ಗೆ ನೆರವು ಸ್ಥಗಿತಗೊಳಿಸಿದ ಕೇಂದ್ರ ಸರಕಾರ!

- Advertisement -
- Advertisement -

ಇಂಡಿಯನ್ ಸೈನ್ಸ್ ಕಾಂಗ್ರೆಸ್ ಅಸೋಸಿಯೇಷನ್(ISCA) ಪ್ರತಿವರ್ಷ ಆಯೋಜನೆ ಮಾಡುತ್ತಿದ್ದ ವಾರ್ಷಿಕ ಕಾರ್ಯಕ್ರಮ ‘ಭಾರತೀಯ ವಿಜ್ಞಾನ ಕಾಂಗ್ರೆಸ್‌’ ರದ್ದುಗೊಳಿಸಲಾಗಿದ್ದು, ಸರ್ಕಾರವು ಈ ಬಾರಿ ಹಣಕಾಸಿನ ನೆರವು ನೀಡದ ಕಾರಣಕ್ಕೆ ಈ ನಿರ್ಧಾರಕ್ಕೆ ಬರಲಾಗಿದೆ.

ಈ ಕಾರ್ಯಕ್ರಮ ಆಯೋಜನೆಗೆ ಸಂಬಂಧಿಸಿ ಸರ್ಕಾರ ಮತ್ತು ಐಎಸ್‌ಸಿಎ ನಡುವೆ ಕಳೆದ ಕೆಲ ವರ್ಷಗಳಿಂದ ಭಿನ್ನಾಭಿಪ್ರಾಯ ಇದೆ. ವಿಜ್ಞಾನ ಕಾಂಗ್ರೆಸ್‌ಗೆ ಬದಲಾಗಿ ಸರ್ಕಾರವು,  ವಿಜ್ಞಾನ ಭಾರತಿಯ ‘ಭಾರತೀಯ ಅಂತರಾಷ್ಟ್ರೀಯ ವಿಜ್ಞಾನ ಮೇಳ’ವನ್ನು (ಐಐಎಸ್‌ಎಫ್‌) 2015ರಿಂದ ಆಯೋಜಿಸುತ್ತಿದೆ.

‘ವಿಜ್ಞಾನ ಭಾರತಿ’ಯು ಸಂಘ ಪರಿವಾರದ ಜೊತೆ ನಂಟು ಇರುವ ಸಂಸ್ಥೆಯಾಗಿದೆ. ಇದರ ವಾರ್ಷಿಕ ಸಭೆಯು ಹರಿಯಾಣದ ಫರೀದಾಬಾದ್‌ನಲ್ಲಿ ಈ ತಿಂಗಳು ನಡೆಯಲಿದೆ. ಈ ಸಂಸ್ಥೆಯು ನಡೆಸುವ ಕಾರ್ಯಕ್ರಮವನ್ನು ವಿಜ್ಞಾನ ಕಾಂಗ್ರೆಸ್‌ಗೆ ಪರ್ಯಾಯ ಎಂದು ಬಿಂಬಿಸಲು ಸರ್ಕಾರ ಯತ್ನಿಸುತ್ತಿದೆ.

1914ರಿಂದ ಭಾರತೀಯ ವಿಜ್ಞಾನ ಕಾಂಗ್ರೆಸ್‌ನ್ನು ಆಯೋಜಿಸಲಾಗುತ್ತಿತ್ತು. ಸ್ವಾತಂತ್ರ್ಯದ ನಂತರ ಭಾರತದ ಪ್ರಧಾನ ಮಂತ್ರಿಗಳು ವಿಜ್ಞಾನಿಗಳ ವಾರ್ಷಿಕ ಕೂಟವನ್ನು ಉದ್ಘಾಟಿಸುತ್ತಿದ್ದರು. ಈ ಸಭೆಯು ಪ್ರಧಾನಿಯವರ ವರ್ಷದ ಮೊದಲ ಸಾರ್ವಜನಿಕ ಕಾರ್ಯಕ್ರಮವಾಗಿರುತ್ತಿತ್ತು. ಆದರೆ ಈ ಬಾರಿ ಕಾರ್ಯಕ್ರಮ ನಡೆಯುತ್ತಿಲ್ಲ.

ಕೋವಿಡ್‌ ಸಾಂಕ್ರಾಮಿಕದ ಕಾರಣದಿಂದ 2021 ಮತ್ತು 2022ರಲ್ಲಿ ಭಾರತೀಯ ವಿಜ್ಞಾನ ಕಾಂಗ್ರೆಸ್‌ ಅನ್ನು ಆಯೋಜಿಸಲು ಸಾಧ್ಯವಾಗಿರಲಿಲ್ಲ. 108ನೇ ವಿಜ್ಞಾನ ಕಾಂಗ್ರೆಸ್‌ ಅನ್ನು ಕಳೆದ ವರ್ಷ ನಾಗ್ಪುರದಲ್ಲಿ ಆಯೋಜಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೊ ಕಾನ್ಫರೆನ್ಸ್‌ ಮೂಲಕ ಇದನ್ನು ಉದ್ಘಾಟಿಸಿದ್ದರು.

ಈ ಬಾರಿ ಜನವರಿ 3 ರಿಂದ 5ರವರೆಗೆ ಜಲಂಧರ್‌ನ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯಲ್ಲಿ (LPU) 109ನೇ ಭಾರತೀಯ ವಿಜ್ಞಾನ ಕಾಂಗ್ರೆಸ್‌ನ್ನು (ISC) ಆಯೋಜಿಸಲು ಇಂಡಿಯನ್ ಸೈನ್ಸ್ ಕಾಂಗ್ರೆಸ್ ಅಸೋಸಿಯೇಷನ್ (ISCA) ತೀರ್ಮಾನಿಸಿತ್ತು. ಆದರೆ ಸೆಪ್ಟೆಂಬರ್ 2023ರಲ್ಲಿ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ISC ಮತ್ತು ಈವೆಂಟ್‌ಗೆ ಯಾವುದೇ ಸರ್ಕಾರಿ ಧನಸಹಾಯ ನೀಡಲು ನಿರಾಕರಿಸುವುದರಿಂದ ಸಮ್ಮೇಳನವನ್ನು ಮುಂದುವರಿಸಲು ಸಾಧ್ಯವಾಗಲಿಲ್ಲ ಎಂದು ಸಂಘಟಕರು ಹೇಳಿದ್ದಾರೆ.

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು, ಸರ್ಕಾರದ ಅನುಮೋದನೆಯಿಲ್ಲದೆ ‘ಇಂಡಿಯನ್ ಸೈನ್ಸ್ ಕಾಂಗ್ರೆಸ್ ಅಸೋಸಿಯೇಷನ್’ ಏಕಪಕ್ಷೀಯವಾಗಿ ಲಕ್ನೋದಿಂದ ಜಲಂಧರ್‌ಗೆ ಕಾರ್ಯಕ್ರಮ ಸ್ಥಳಾಂತರಿಸಿದೆ ಎಂದು ಆರೋಪಿಸಿದೆ. ಸ್ಥಳವನ್ನು ಆಯ್ಕೆ ಮಾಡಲು ತನ್ನ ಕಾರ್ಯಕಾರಿ ಸಮಿತಿಗೆ DST ಯಿಂದ ಅನುಮತಿ ಅಗತ್ಯವಿಲ್ಲ ಎಂದು ISCA ಪ್ರತಿವಾದಿಸಿದೆ. ಆದರೆ ಸ್ಥಳವನ್ನು ಆಯ್ಕೆ ಮಾಡುವ ಸಮಯದಲ್ಲಿ ಡಿಎಸ್‌ಟಿ ಪ್ರತಿನಿಧಿಯೊಬ್ಬರು ಹಾಜರಿದ್ದರು ಎಂದು ಕೂಡ ಹೇಳಿದೆ.

ISCA ಆಯೋಜಿಸುವ ವಾರ್ಷಿಕ ಕಾರ್ಯಕ್ರಮವು ಈಗಾಗಲೇ ವೈಜ್ಞಾನಿಕತೆಯನ್ನು ಕಳೆದುಕೊಂಡಿದೆ ಮತ್ತು ಕಾರ್ಯಕ್ರಮದ ಆಯೋಜನೆಯಲ್ಲಿ ವೃತ್ತಿಪರ ವಿಧಾನವನ್ನು ಹೊಂದಿಲ್ಲ ಎಂದು ಆರೋಪಿಸಲಾಗಿದೆ. ಆದರೆ ವಿಜ್ಞಾನ ಕಾಂಗ್ರೆಸ್‌ನ ಕಾರ್ಯಚಟುವಟಿಕೆ ಕುರಿತು ಸರ್ಕಾರಕ್ಕೆ ಅಸಮಾಧಾನ ಇದ್ದಿದ್ದರೆ ಅದನ್ನು ಸರಿಪಡಿಸುವ ಕೆಲಸವನ್ನು ಮಾಡಬಹುದಿತ್ತು. ಅದರ ಕಾರ್ಯಕ್ರಮ ನಡೆಸಲು ನಿರಾಕರಿಸಿರುವುದು ಪ್ರಶ್ನೆಗೆ ಕಾರಣವಾಗಿದೆ.

ಸಾವಿರಾರು ವಿಜ್ಞಾನಿಗಳು, ಸಂಶೋಧನಾ ವಿದ್ಯಾರ್ಥಿಗಳು ಮತ್ತು ವೈಜ್ಞಾನಿಕ ಸಂಸ್ಥೆಗಳಿಂದ ಅಧ್ಯಾಪಕರು ಮತ್ತು ಶಾಲಾ ಮಕ್ಕಳು ಸಾಮಾನ್ಯವಾಗಿ ISCಯ ವಾರ್ಷಿಕ ಕಾರ್ಯಕ್ರಮಕ್ಕೆ ಹಾಜರಾಗುತ್ತಾರೆ. ISC ಯೊಂದಿಗೆ ನಿಕಟವಾಗಿರುವ ಅಧಿಕಾರಿಗಳು ಮತ್ತು ವಿಜ್ಞಾನಿಗಳು ಅದರ ವಾರ್ಷಿಕ ಅಧಿವೇಶನಗಳ ವಿಷಯವನ್ನು ಸುಧಾರಿಸಬೇಕೆನ್ನುವುದನ್ನು ಒಪ್ಪಿಕೊಳ್ಳುತ್ತಾರೆ. ಆದರೆ ಕಾರ್ಯಕ್ರವನ್ನೇ ನಡೆಯದಂತೆ ಹುನ್ನಾರ ನಡೆಸಿರುವುದರ ಹಿಂದೆ ಸರಕಾರವನ್ನು ಟೀಕಿಸಿದ್ದಾರೆ. ISC ಗೆ ಸರ್ಕಾರದ ಹಣವನ್ನು ನಿರಾಕರಿಸುವ DST ನಿರ್ಧಾರವನ್ನು ISC ಯ ಸಮ್ಮೇಳನವನ್ನು ದುರ್ಬಲಗೊಳಿಸಲು ಸರ್ಕಾರವು ನಡೆಸಿದ ಪ್ರಯತ್ನಗಳ ಫಲಿತಾಂಶವೆಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಸ್ವದೇಶಿ ಮನೋಭಾವದೊಂದಿಗೆ ವಿಜ್ಞಾನ ಆಂದೋಲನದ ಕಾರಣ ಮುಂದಿಟ್ಟು ‘ಇಂಡಿಯಾ–ಇಂಟರ್‌ನ್ಯಾಷನಲ್‌ ಸೈನ್ಸ್‌ ಫೆಸ್ಟಿವಲ್‌’ ಆಯೋಜಿಸಲಾಗುತ್ತಿದೆ. IISF ಗಾಗಿ ಸರ್ಕಾರ 20 ರಿಂದ 25 ಕೋಟಿ ರೂಪಾಯಿಗಳು ಬಜೆಟ್‌ನಲ್ಲಿ ನೀಡುತ್ತಿದೆ.  ISC ಯ ಭಾರತೀಯ ವಿಜ್ಞಾನ ಕಾಂಗ್ರೆಸ್‌ ಸಮ್ಮೇಳನಕ್ಕೆ 5 ಕೋಟಿ ರೂಪಾಯಿಗಳಿಗೆ ಮಾತ್ರ ನೀಡಲಾಗುತ್ತಿತ್ತು ಎಂದು DST ಅಧಿಕಾರಿಯೋರ್ವರು ಹೇಳಿದ್ದಾರೆ.

ಮುಂಬೈನ ಹೋಮಿ ಭಾಭಾ ವಿಜ್ಞಾನ ಶಿಕ್ಷಣ ಕೇಂದ್ರದ ಖಗೋಳಶಾಸ್ತ್ರಜ್ಞ ಅನಿಕೇತ್ ಸುಲೆ ಈ ಬಗ್ಗೆ ಮಾತನಾಡಿದ್ದು, ವಿಜ್ಞಾನ ಕಾಂಗ್ರೆಸ್ ಕಾರ್ಯಕ್ರಮ ರದ್ದತಿ ಬಗ್ಗೆ ನಾನು ಚಿಂತಿಸುವುದಿಲ್ಲ. ವಿಜ್ಞಾನ ಕಾಂಗ್ರೆಸ್ ತನ್ನ ಅರ್ಥವನ್ನು ಕಳೆದುಕೊಂಡಿದೆ ಎಂದು ನಾನು ಒಪ್ಪುತ್ತೇನೆ. ಆದರೆ ಅದರ ಕಾರ್ಯಕ್ರಮ ನಡೆಯದಿರುವ ಕಾರಣದ ಬಗ್ಗೆ ನಾನು ಚಿಂತಿತನಾಗಿದ್ದೇನೆ ಎಂದು ಹೇಳಿದ್ದಾರೆ. ವಿಜ್ಞಾನ ಮತ್ತು ರಾಜಕೀಯ ಸಿದ್ಧಾಂತದ ನಡುವೆ ಯಾವುದೇ ಸಂಬಂಧ ಇಲ್ಲ. ಆದರೆ ಸರಕಾರ ರಾಜಕೀಯ ಕಾರಣಕ್ಕೆ ವೈಜ್ಞಾನಿಕ ಕಾರ್ಯಕ್ರಮಕ್ಕೆ ಅನುದಾನ ನೀಡದಿರುವುದು ಟೀಕೆಗೆ ಕಾರಣವಾಗಿದೆ.

ಇದನ್ನು ಓದಿ: ಬುಡಕಟ್ಟು ಮಕ್ಕಳ ಜೀವನದಲ್ಲಿ ಶಿಕ್ಷಣದ ಬೆಳಕು ಚೆಲ್ಲಿದ ಶಿಕ್ಷಕಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...