Homeಕರ್ನಾಟಕಅಹಿಂದ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಸರ್ಕಾರ ಕೈಬಿಟ್ಟಿದೆ: ಡಿ.ಕೆ.ಶಿವಕುಮಾರ್‌

ಅಹಿಂದ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಸರ್ಕಾರ ಕೈಬಿಟ್ಟಿದೆ: ಡಿ.ಕೆ.ಶಿವಕುಮಾರ್‌

- Advertisement -
- Advertisement -

ಬಿಜೆಪಿ ವಿರುದ್ಧ ಮತ ಚಲಾಯಿಸುವ ಅಲ್ಪಸಂಖ್ಯಾತ, ದಲಿತ ಮತ್ತು ಹಿಂದುಳಿದ ಸಮುದಾಯಗಳ ಹೆಚ್ಚಿನ ಸಂಖ್ಯೆಯ ಜನರ ಹೆಸರನ್ನು ಮತದಾರರ ಪಟ್ಟಿಯಿಂದ ಬಿಜೆಪಿ ಸರ್ಕಾರ ಕೈಬಿಟ್ಟಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ಚುನಾವಣೆಯಲ್ಲಿ ಮೇಲುಗೈ ಸಾಧಿಸಲು ಈ ರೀತಿ ಮಾಡಲಾಗಿದೆ. ಹೀಗೆ ಡಿಲೀಟ್ ಮಾಡಲಾದ ಮತದಾರರ ಸಂಖ್ಯೆ ಲಕ್ಷದಷ್ಟಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

“ನಾವು ಮುಂದಿನ ದಿನಗಳಲ್ಲಿ (ಡಿಲೀಟ್ ಮಾಡಲಾದ ಮತದಾರರ) ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ. ನಮ್ಮ ಬಳಿ ಅಧಿಕೃತ ಪಟ್ಟಿ ಇದೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅನೇಕ ಅಹಿಂದ (ಅಲ್ಪಸಂಖ್ಯಾತ, ಹಿಂದುಳಿದ, ದಲಿತ) ಜನರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಬೂತ್ ಮಟ್ಟದಲ್ಲಿ ಮತದಾರರನ್ನು ಮೌಲ್ಯಮಾಪನ ಮಾಡಲು ಮತ್ತು ತೆಗೆದುಹಾಕಲಾದ ಹೆಸರುಗಳನ್ನು ಗುರುತಿಸಲು ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ನಿರ್ದೇಶನಗಳನ್ನು ನೀಡಲಾಗಿದೆ ಎಂದಿದ್ದಾರೆ.

ರಾಜ್ಯಾದ್ಯಂತ ಮತ್ತು ಬಿಬಿಎಂಪಿಯ 243 ವಾರ್ಡ್‌ಗಳಲ್ಲಿ ವಿಶೇಷವಾಗಿ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿಗಳು ಮತ್ತು ಸಮುದಾಯಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಪ್ರದೇಶಗಳಲ್ಲಿ ಅನೇಕ ಹೆಸರುಗಳನ್ನು ಕೈಬಿಡಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಿಬಿಎಂಪಿ ವಾರ್ಡ್‌ಗಳ ಮೀಸಲಾತಿ ಪಟ್ಟಿಯನ್ನು ಕಾಂಗ್ರೆಸ್‌ಗೆ ಹಿನ್ನಡೆಯಾಗುವಂತೆ ಸಿದ್ಧಪಡಿಸಲಾಗಿದೆ. ಕರಡು ಮೀಸಲಾತಿ ಪಟ್ಟಿಯ ವಿರುದ್ಧ ಸಲ್ಲಿಸಲಾದ 3,000 ಆಕ್ಷೇಪಣೆಗಳಲ್ಲಿ ಯಾವುದನ್ನೂ ಪರಿಗಣಿಸಲಾಗಿಲ್ಲ ಎಂದು ದೂರಿದ್ದಾರೆ.

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 14 ವಾರ್ಡ್‌ಗಳಲ್ಲಿ 9, ಜಯನಗರದ ಒಂಬತ್ತರಲ್ಲಿ 8, ಬಿಟಿಎಂ ಲೇಔಟ್‌ನ ಎಲ್ಲಾ 8 ಮತ್ತು ಗಾಂಧಿನಗರದ 7 ವಾರ್ಡ್‌ಗಳು ಮಹಿಳೆಯರಿಗೆ ಮೀಸಲಿಡಲಾಗಿದೆ. ಕಾಂಗ್ರೆಸ್ ಪ್ರತಿನಿಧಿಸುವ ಕ್ಷೇತ್ರಗಳ 93 ವಾರ್ಡ್‌ಗಳಲ್ಲಿ 76 ಮಹಿಳೆಯರಿಗೆ ಮೀಸಲಿಡಲಾಗಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಮಿತ್ರಪಕ್ಷ ಬಿಜೆಪಿ ಜೊತೆ ನಿತೀಶ್‌ ಮುನಿಸು: ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು

“ಮಹಿಳೆಯರಿಗೆ ನೀಡುವ ಮೀಸಲಾತಿಯನ್ನು ನಾವು ವಿರೋಧಿಸುವುದಿಲ್ಲ. ಅವರನ್ನು ರಾಜಕೀಯವಾಗಿ ಸಬಲೀಕರಣಗೊಳಿಸಲು ಬದ್ಧರಾಗಿದ್ದೇವೆ. ಆದರೆ ಮಹಿಳೆಯರಿಗೆ ನೀಡುವ ಅವಕಾಶಗಳು ಸಮಾನವಾಗಿ ಹಂಚಿಕೆಯಾಗಬೇಕು. ನಿರ್ದಿಷ್ಟ ಕ್ಷೇತ್ರಗಳಲ್ಲಿ ಮಾತ್ರ ಕೇಂದ್ರೀಕರಿಸುವುದು ಅನ್ಯಾಯ” ಎಂದು ಸ್ಪಷ್ಟಪಡಿಸಿದ್ದಾರೆ.

75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ರಾಜ್ಯ ಕಾಂಗ್ರೆಸ್ ಯೋಜಿಸಿರುವ ‘ಸ್ವಾತಂತ್ರ್ಯ ಮೆರವಣಿಗೆ’ಯಲ್ಲಿ ಭಾಗವಹಿಸಲು 29,000 ಜನರು ನೋಂದಾಯಿಸಿಕೊಂಡಿದ್ದಾರೆ ಎಂದಿರುವ ಅವರು, ಭಾಗವಹಿಸುವವರು ಸಾರ್ವಜನಿಕ ಸಾರಿಗೆಯಲ್ಲಿ ಬರಬೇಕೆಂದು ಕೋರಿದ್ದಾರೆ

ಆಗಸ್ಟ್ 15 ರಂದು ಬೆಂಗಳೂರಿನಲ್ಲಿ ಮೆಟ್ರೋ ರೈಲು ಬಳಕೆದಾರರಿಗೆ 50% ರಿಯಾಯತಿ ನೀಡಲು ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...