Homeಕರ್ನಾಟಕಅಹಿಂದ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಸರ್ಕಾರ ಕೈಬಿಟ್ಟಿದೆ: ಡಿ.ಕೆ.ಶಿವಕುಮಾರ್‌

ಅಹಿಂದ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಸರ್ಕಾರ ಕೈಬಿಟ್ಟಿದೆ: ಡಿ.ಕೆ.ಶಿವಕುಮಾರ್‌

- Advertisement -
- Advertisement -

ಬಿಜೆಪಿ ವಿರುದ್ಧ ಮತ ಚಲಾಯಿಸುವ ಅಲ್ಪಸಂಖ್ಯಾತ, ದಲಿತ ಮತ್ತು ಹಿಂದುಳಿದ ಸಮುದಾಯಗಳ ಹೆಚ್ಚಿನ ಸಂಖ್ಯೆಯ ಜನರ ಹೆಸರನ್ನು ಮತದಾರರ ಪಟ್ಟಿಯಿಂದ ಬಿಜೆಪಿ ಸರ್ಕಾರ ಕೈಬಿಟ್ಟಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ಚುನಾವಣೆಯಲ್ಲಿ ಮೇಲುಗೈ ಸಾಧಿಸಲು ಈ ರೀತಿ ಮಾಡಲಾಗಿದೆ. ಹೀಗೆ ಡಿಲೀಟ್ ಮಾಡಲಾದ ಮತದಾರರ ಸಂಖ್ಯೆ ಲಕ್ಷದಷ್ಟಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

“ನಾವು ಮುಂದಿನ ದಿನಗಳಲ್ಲಿ (ಡಿಲೀಟ್ ಮಾಡಲಾದ ಮತದಾರರ) ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ. ನಮ್ಮ ಬಳಿ ಅಧಿಕೃತ ಪಟ್ಟಿ ಇದೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅನೇಕ ಅಹಿಂದ (ಅಲ್ಪಸಂಖ್ಯಾತ, ಹಿಂದುಳಿದ, ದಲಿತ) ಜನರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಬೂತ್ ಮಟ್ಟದಲ್ಲಿ ಮತದಾರರನ್ನು ಮೌಲ್ಯಮಾಪನ ಮಾಡಲು ಮತ್ತು ತೆಗೆದುಹಾಕಲಾದ ಹೆಸರುಗಳನ್ನು ಗುರುತಿಸಲು ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ನಿರ್ದೇಶನಗಳನ್ನು ನೀಡಲಾಗಿದೆ ಎಂದಿದ್ದಾರೆ.

ರಾಜ್ಯಾದ್ಯಂತ ಮತ್ತು ಬಿಬಿಎಂಪಿಯ 243 ವಾರ್ಡ್‌ಗಳಲ್ಲಿ ವಿಶೇಷವಾಗಿ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿಗಳು ಮತ್ತು ಸಮುದಾಯಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಪ್ರದೇಶಗಳಲ್ಲಿ ಅನೇಕ ಹೆಸರುಗಳನ್ನು ಕೈಬಿಡಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಿಬಿಎಂಪಿ ವಾರ್ಡ್‌ಗಳ ಮೀಸಲಾತಿ ಪಟ್ಟಿಯನ್ನು ಕಾಂಗ್ರೆಸ್‌ಗೆ ಹಿನ್ನಡೆಯಾಗುವಂತೆ ಸಿದ್ಧಪಡಿಸಲಾಗಿದೆ. ಕರಡು ಮೀಸಲಾತಿ ಪಟ್ಟಿಯ ವಿರುದ್ಧ ಸಲ್ಲಿಸಲಾದ 3,000 ಆಕ್ಷೇಪಣೆಗಳಲ್ಲಿ ಯಾವುದನ್ನೂ ಪರಿಗಣಿಸಲಾಗಿಲ್ಲ ಎಂದು ದೂರಿದ್ದಾರೆ.

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 14 ವಾರ್ಡ್‌ಗಳಲ್ಲಿ 9, ಜಯನಗರದ ಒಂಬತ್ತರಲ್ಲಿ 8, ಬಿಟಿಎಂ ಲೇಔಟ್‌ನ ಎಲ್ಲಾ 8 ಮತ್ತು ಗಾಂಧಿನಗರದ 7 ವಾರ್ಡ್‌ಗಳು ಮಹಿಳೆಯರಿಗೆ ಮೀಸಲಿಡಲಾಗಿದೆ. ಕಾಂಗ್ರೆಸ್ ಪ್ರತಿನಿಧಿಸುವ ಕ್ಷೇತ್ರಗಳ 93 ವಾರ್ಡ್‌ಗಳಲ್ಲಿ 76 ಮಹಿಳೆಯರಿಗೆ ಮೀಸಲಿಡಲಾಗಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಮಿತ್ರಪಕ್ಷ ಬಿಜೆಪಿ ಜೊತೆ ನಿತೀಶ್‌ ಮುನಿಸು: ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು

“ಮಹಿಳೆಯರಿಗೆ ನೀಡುವ ಮೀಸಲಾತಿಯನ್ನು ನಾವು ವಿರೋಧಿಸುವುದಿಲ್ಲ. ಅವರನ್ನು ರಾಜಕೀಯವಾಗಿ ಸಬಲೀಕರಣಗೊಳಿಸಲು ಬದ್ಧರಾಗಿದ್ದೇವೆ. ಆದರೆ ಮಹಿಳೆಯರಿಗೆ ನೀಡುವ ಅವಕಾಶಗಳು ಸಮಾನವಾಗಿ ಹಂಚಿಕೆಯಾಗಬೇಕು. ನಿರ್ದಿಷ್ಟ ಕ್ಷೇತ್ರಗಳಲ್ಲಿ ಮಾತ್ರ ಕೇಂದ್ರೀಕರಿಸುವುದು ಅನ್ಯಾಯ” ಎಂದು ಸ್ಪಷ್ಟಪಡಿಸಿದ್ದಾರೆ.

75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ರಾಜ್ಯ ಕಾಂಗ್ರೆಸ್ ಯೋಜಿಸಿರುವ ‘ಸ್ವಾತಂತ್ರ್ಯ ಮೆರವಣಿಗೆ’ಯಲ್ಲಿ ಭಾಗವಹಿಸಲು 29,000 ಜನರು ನೋಂದಾಯಿಸಿಕೊಂಡಿದ್ದಾರೆ ಎಂದಿರುವ ಅವರು, ಭಾಗವಹಿಸುವವರು ಸಾರ್ವಜನಿಕ ಸಾರಿಗೆಯಲ್ಲಿ ಬರಬೇಕೆಂದು ಕೋರಿದ್ದಾರೆ

ಆಗಸ್ಟ್ 15 ರಂದು ಬೆಂಗಳೂರಿನಲ್ಲಿ ಮೆಟ್ರೋ ರೈಲು ಬಳಕೆದಾರರಿಗೆ 50% ರಿಯಾಯತಿ ನೀಡಲು ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...