Homeಕರ್ನಾಟಕಕೆಪಿಎಸ್‌ಸಿ ನೇಮಕಾತಿ ಜಟಾಪಟಿ: ಕಾರ್ಯದರ್ಶಿ ಲತಾ ಕುಮಾರಿಗೆ 10 ದಿನ ರಜೆ ನೀಡಿದ ಸರ್ಕಾರ

ಕೆಪಿಎಸ್‌ಸಿ ನೇಮಕಾತಿ ಜಟಾಪಟಿ: ಕಾರ್ಯದರ್ಶಿ ಲತಾ ಕುಮಾರಿಗೆ 10 ದಿನ ರಜೆ ನೀಡಿದ ಸರ್ಕಾರ

- Advertisement -
- Advertisement -

ಕೆಪಿಎಸ್‌ಸಿ ಅಧ್ಯಕ್ಷ, ಕೆಲ ಸದಸ್ಯರು ಹಾಗೂ ಕಾರ್ಯದರ್ಶಿ ಕೆ.ಎಸ್‌ ಲತಾ ಕುಮಾರಿ ನಡುವೆ ಜಟಾಪಟಿಯ ಮಧ್ಯೆ, ಲತಾ ಕುಮಾರಿ ಅವರಿಗೆ ಸರ್ಕಾರ 10 ದಿನಗಳ ರಜೆ ನೀಡಿದೆ.

ಕೆ.ಎಸ್.ಲತಾ ಕುಮಾರಿ ಅವರಿಗೆ ಫೆಬ್ರವರಿ 7ರಿಂದ 17ರವರೆಗೆ ಗಳಿಕೆ ರಜೆ ನೀಡಲಾಗಿದೆ. ಈ ಅವಧಿಗೆ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ರಾಕೇಶ್ ಕುಮಾರ್ ಕೆ ಅವರನ್ನು ಕೆಪಿಎಸ್‌ಸಿ ಪ್ರಭಾರಿ ಕಾರ್ಯದರ್ಶಿಯನ್ನಾಗಿ ನಿಯುಕ್ತಿಗೊಳಿಸಿ ಡಿಪಿಎಆರ್ ಇಲಾಖೆ ಬುಧವಾರ ಆದೇಶ ಹೊರಡಿಸಿದೆ.

“ಕೆಪಿಎಸ್‌ಸಿ ಮತ್ತು ಸರ್ಕಾರಕ್ಕೆ ಮುಜುಗರ ಉಂಟಾಗದ ರೀತಿಯಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯಿಂದ ಕಾರ್ಯನಿರ್ವಹಿಸುವಂತೆ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರಿಗೆ ಅರಿವು ಮೂಡಿಸಬೇಕು. ವಿವಿಧ ಹುದ್ದೆಗಳಿಗೆ ನಿಯಮಾನುಸಾರ ಆಯ್ಕೆ ಪೂರ್ಣಗೊಳಿಸಲು ಸೂಚನೆ ನೀಡಬೇಕು” ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಮೂಲಕ ರಾಜ್ಯಪಾಲರಿಗೆ ಲತಾ ಕುಮಾರಿ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು.

ಕೆಪಿಎಸ್‌ಸಿಯ ನೇಮಕಾತಿ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್‌. ಸಾಹುಕಾರ್‌, ಕೆಲ ಸದಸ್ಯರು ಮತ್ತು ಲತಾಕುಮಾರಿ ಅವರ ನಡುವೆ ಜಟಾಪಟಿ ನಡೆಯುತ್ತಿರುವ ಮಧ್ಯೆಯೇ ಲತಾ ಕುಮಾರಿ ಅವರಿಗೆ ಸರ್ಕಾರ ರಜೆ ನೀಡಿ ಕಳುಹಿಸಿದೆ.

ಏನಿದು ಕೆಪಿಎಸ್‌ಸಿ ಆಂತರಿಕ ಕಲಹ?

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರು ಆಯೋಗದ ಕಾರ್ಯದರ್ಶಿ ಲತಾ ಕುಮಾರಿ ಸರ್ಕಾರದ ನಿಯಮ ಮತ್ತು ಆಯೋಗದ ನಿರ್ಣಯಗಳನ್ನು ಉಲ್ಲಂಘಿಸಿ ಕರ್ತವ್ಯ ಲೋಪ ಎಸಗುತ್ತಿದ್ದಾರೆ. ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಮತ್ತೊಂದೆಡೆ ಕಾರ್ಯದರ್ಶಿ ಲತಾ ಕುಮಾರಿ ಅವರು, ಅಧ್ಯಕ್ಷರು ಮತ್ತು ಹಾಗೂ ಕೆಲ ಸದಸ್ಯರ ವಿರುದ್ದ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಅಧಿಕಾರ ದುರುಪಯೋಗಪಡಿಸಿಕೊಂಡಿರುವ ಅಧ್ಯಕ್ಷರು ಮತ್ತು ಸದಸ್ಯರ ವಿರುದ್ದ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಅಧ್ಯಕ್ಷ ಶಿವಶಂಕರಪ್ಪ ಅವರು ತನ್ನ ವೈಯುಕ್ತಿಕ ಕಾರಣಕ್ಕೆ ಆಯೋಗದ ಹಣ ಬಳಸಿಕೊಳ್ಳಲು ಯತ್ನಿಸಿದ್ದಾರೆ. ಇದಕ್ಕೆ ತಡೆಯಾಗಿದ್ದ ಆಯೋಗದ ಕಾನೂನು ಕೋಶದ ಮುಖ್ಯಸ್ಥರಾಗಿದ್ದ ಎಸ್‌.ಹೆಚ್‌ ಹೊಸಗೌಡರ್ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆಯಲಾಗಿದೆ ಎಂದು ಆರೋಪಿಸಿದ್ದಾರೆ.

ಕೋರಂ ಇಲ್ಲದೆ ನೇಮಕಾತಿಗೆ ಅನುಮೋದನೆ?

ಕಳೆದ ವಾರ ಕೆ.ಎಸ್‌ ಲತಾ ಕುಮಾರಿ ಅವರು ಆಯೋಗದ ಸಭೆ ನಡೆಸಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದ ವಿವಿಧ ಇಲಾಖೆಗಳ ಒಟ್ಟು 666 ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಗೆ ಅನುಮೋದನೆ ಪಡೆದುಕೊಂಡಿದ್ದಾರೆ. ಆಯೋಗದ ಹಿರಿಯ ಸದಸ್ಯ ರೊನಾಲ್ಡ್ ಅನಿಲ್ ಫೆರ್ನಾಂಡಿಸ್ ನೇತೃತ್ವದಲ್ಲಿ 4 ಸದಸ್ಯರ ಗುಂಪು ಸಭೆ ನಡೆಸಿತ್ತು. ಇದು ಅಧ್ಯಕ್ಷರ ಅಸಮಾಧಾನಕ್ಕೆ ಕಾರಣವಾಗಿದೆ.

ಈ ಬೆಳವಣಿಗೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರು, ನಾಲ್ವರು ಸದಸ್ಯರ ಗುಂಪು ಸಭೆ ನಡೆಸಿರುವುದು ಮತ್ತು ನೇಮಕಾತಿ ಪಟ್ಟಿಗೆ ಅನುಮೋದನೆ ನೀಡಿರುವುದು ಕಾನೂನು ಬಾಹಿರ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : ಕೇಂದ್ರದ ವಿರುದ್ದ ‘ದೆಹಲಿ ಚಲೋ’ : ರಾಜ್ಯ ಸರ್ಕಾರದಿಂದ ‘ನನ್ನ ತೆರಿಗೆ ನನ್ನ ಹಕ್ಕು’ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...