Homeಮುಖಪುಟಕನ್ನಡದಲ್ಲಿ ಕಲಿಸಿದ ಶಿಕ್ಷಕ ರಂಜಿತ್‌ಸಿಂಹ ದಿಸಾಳೆಗೆ 'ಗ್ಲೋಬಲ್‌ ಟೀಚರ್‌ ಪ್ರೈಜ್‌- 2020'

ಕನ್ನಡದಲ್ಲಿ ಕಲಿಸಿದ ಶಿಕ್ಷಕ ರಂಜಿತ್‌ಸಿಂಹ ದಿಸಾಳೆಗೆ ‘ಗ್ಲೋಬಲ್‌ ಟೀಚರ್‌ ಪ್ರೈಜ್‌- 2020’

ಮಕ್ಕಳಿಗೆ ಶಿಕ್ಷಣ ನೀಡುವ ಉದ್ದೇಶದಿಂದ ತಾವೇ ಕನ್ನಡ ಭಾಷೆಯನ್ನು ಕಲಿತು ಪಠ್ಯ ಪುಸ್ತಕಗಳನ್ನು ಮರುವಿನ್ಯಾಸ ಮಾಡಿದ್ದರು

- Advertisement -
- Advertisement -

ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಪರಿತೇವಾಡಿಯ ಸರ್ಕಾರಿ ಶಾಲಾ ಶಿಕ್ಷಕ ರಂಜಿತ್‌ಸಿಂಹ ದಿಸಾಳೆ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಪ್ರತಿಷ್ಠಿತ ‘ಗ್ಲೋಬಲ್‌ ಟೀಚರ್‌ ಪ್ರೈಜ್‌- 2020’ಕ್ಕೆ ಪಾತ್ರರಾಗಿದ್ದಾರೆ. ವಿಶೇಷವೆಂದರೇ 32 ವರ್ಷದ ಶಿಕ್ಷಕ ದಿಸಾಳೆ ಅವರು ಅಲ್ಲಿನ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗಾಗಿ ಪಠ್ಯ ಪುಸ್ತಕವನ್ನು ಮರುವಿನ್ಯಾಸ ಮಾಡಿದ ಖ್ಯಾತಿ ಹೊಂದಿದ್ದಾರೆ.

‘ಗ್ಲೋಬಲ್‌ ಟೀಚರ್‌ ಪ್ರೈಜ್‌- 2020’ನ ಬರೋಬ್ಬರಿ 7.4 ಕೋಟಿ ರೂಪಾಯಿಗಳ (10 ಮಿಲಿಯನ್ ಡಾಲರ್) ಪ್ರಶಸ್ತಿ ಹಣವನ್ನು ಗೆದ್ದುಕೊಂಡಿದ್ದಾರೆ.

ಪ್ರಶಸ್ತಿ ಒಲಿದಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಶಿಕ್ಷಕ ರಂಜಿತ್‌ಸಿಂಹ ದಿಸಾಳೆ, ’ಕೊರೊನಾ ಸಾಂಕ್ರಾಮಿಕದಂತಹ ಈ ಕಠಿಣ ಸಮಯದಲ್ಲಿ, ಪ್ರತಿ ವಿದ್ಯಾರ್ಥಿಯು ತಮ್ಮ ಜನ್ಮಸಿದ್ಧ ಹಕ್ಕಾದ ಉತ್ತಮ ಶಿಕ್ಷಣವನ್ನು ಪಡೆಯುತ್ತಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರಿ ಶಾಲಾ ಶಿಕ್ಷಕರು ಅತ್ಯುತ್ತಮ ಪ್ರಯತ್ನವನ್ನು ಮಾಡುತ್ತಿದ್ದಾರೆ’ ಎಂದು ದಿಸಾಲೆ ಹೇಳಿದ್ದಾರೆ.

PC: YouTube@GlobalTeacherPrize

‘ಈ ಪ್ರಶಸ್ತಿಯಿಂದಾಗಿ ಸರ್ಕಾರಿ ಶಾಲಾ ವ್ಯವಸ್ಥೆ ಬಗ್ಗೆ ನಮ್ಮ ವಿಶ್ವಾಸ ಹೆಚ್ಚಾಗುತ್ತದೆ. ಸವಾಲುಗಳ ನಡುವೆಯೂ ತಮ್ಮ ವಿದ್ಯಾರ್ಥಿಗಳ ಜೀವನವನ್ನು ಬದಲಾಯಿಸುತ್ತಿರುವ ಶಿಕ್ಷಕರು ಎಂದರೆ ಬದಲಾವಣೆಯ ಹರಿಕಾರರು.  ಶಿಕ್ಷಕರು ಯಾವಾಗಲೂ ವಿಷಯಗಳನ್ನು ಹಂಚಿಕೊಳ್ಳುವುದರಲ್ಲಿ ವಿಶ್ವಾಸವಿಟ್ಟಿರುತ್ತಾರೆ’ ಎಂದು ದಿಸಾಳೆ ಹೇಳಿದ್ದಾರೆ.

ಇದನ್ನೂ ಓದಿ: ಎಂಎಲ್‌ಸಿ ಚುನಾವಣೆ: 4 ಸ್ಥಾನದಲ್ಲಿ ಮಹಾವಿಕಾಸ್ ಅಘಾಡಿ ಜಯ- ಬಿಜೆಪಿಗೆ ಮುಖಭಂಗ

ಪ್ರಶಸ್ತಿಗಾಗಿ 140 ದೇಶಗಳ 12 ಸಾವಿರ ಶಿಕ್ಷಕರು ಅರ್ಜಿ ಸಲ್ಲಿಸಿದ್ದರು. ದಿಸಾಳೆ ಪ್ರಶಸ್ತಿ ಮೊತ್ತದ ಅರ್ಧ ಭಾಗವನ್ನು ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದ ಉಳಿದ 9 ಮಂದಿಗೆ ಅಭ್ಯರ್ಥಿಗಳಿಗೆ ಹಂಚುವುದಾಗಿ ಆನ್​ಲೈನ್ ವೇದಿಕೆಯಲ್ಲೇ ಹೇಳಿದ್ದಾರೆ.  ಗ್ಲೋಬಲ್‌ ಟೀಚರ್‌ ಪ್ರೈಜ್‌ನ ಇತಿಹಾಸದಲ್ಲಿ ಹೀಗೆ ಪ್ರಶಸ್ತಿ ಮೊತ್ತವನ್ನು ಹಂಚಿಕೊಂಡದ್ದು ದಿಸಾಳೆಯೇ ಮೊದಲು.

ಶಿಕ್ಷಕ ರಂಜಿತ್‌ಸಿಂಹ ದಿಸಾಳೆ ಮೊದಲು ಪಾಠ ಮಾಡಲು ಪ್ರಾರಂಭಿಸಿದ್ದು, ದನಗಳ ಹಟ್ಟಿಯ ಸಮೀಪ ಇದ್ದ ಶಿಥಿಲಾವಸ್ಥೆಗೆ ತೆರಳಿದ್ದ ಶಾಲೆಯೊಂದರಲ್ಲಿ. ಶಾಲೆಗೆ ಬರುತ್ತಿದ್ದವರೆಲ್ಲಾ ಕರ್ನಾಟಕದ ಗಡಿ ಭಾಗದ ಬುಡಕಟ್ಟು ಸಮುದಾಯಗಳಿಗೆ ಸೇರಿದ ಮಕ್ಕಳು. ಅವರಿಗೆ ಕನ್ನಡ ಬಿಟ್ಟು ಮರಾಠಿ ಬರುತ್ತಿರಲಿಲ್ಲ. ಆದರೆ, ಪಠ್ಯಕ್ರಮವು ಮರಾಠಿಯಲ್ಲಿಯೇ ಇತ್ತು.ಇದರಿಂದ ಬುಡಕಟ್ಟು ಸಮುದಾಯದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದರು.

ಇದನ್ನೂ ಓದಿ: ಡಿಸೆಂಬರ್ 8 ರ ಮಂಗಳವಾರ ಭಾರತ್‌ ಬಂದ್‌ಗೆ ಕರೆ ನೀಡಿದ ಹೋರಾಟನಿರತ ರೈತರು

ಹೀಗಾಗಿ, ಮಕ್ಕಳಿಗೆ ಶಿಕ್ಷಣ ನೀಡುವ ಉದ್ದೇಶದಿಂದ ತಾವೇ ಕನ್ನಡ ಭಾಷೆಯನ್ನು ಕಲಿತು ಪಠ್ಯ ಪುಸ್ತಕಗಳನ್ನು ಮರುವಿನ್ಯಾಸ ಮಾಡಿದ್ದರು. ಪಠ್ಯ ಪುಸ್ತಕಗಳನ್ನು QR ಕೋಡ್​ಗೆ ಪರಿವರ್ತಿಸಿದರು. ಹಾಡುಗಳು, ವಿಡಿಯೋಗಳನ್ನು QR ಕೋಡ್​ಗೆ ಪರಿವರ್ತಿಸಿ ಮಕ್ಕಳಿಗೆ ಶಿಕ್ಷಣ ನೀಡಿದ್ದರು.

ದಿಸಾಳೆ ಅವರ ಕಾರ್ಯ ಫಲ ನೀಡಿದ್ದು ಶಿಕ್ಷಣದಲ್ಲಿ ಮಾತ್ರವಲ್ಲ, ಗ್ರಾಮದಲ್ಲಿದ್ದ ಬಾಲಕಿಯರ ಬಾಲ್ಯ ವಿವಾಹ ಮತ್ತು ಬಾಲಕಾರ್ಮಿಕ ಪದ್ಧತಿಗಳು  ಕಡಿಮೆಯಾಗಿವೆ. ಹೆಣ್ಣು ಮಕ್ಕಳ ಹಾಜರಾತಿ ಹೆಚ್ಚಾಗಿದೆ. ಈ ಶಾಲೆಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಾಲೆ ಎಂಬ ಪ್ರಶಸ್ತಿಯೂ ದಕ್ಕಿದೆ. ಹಳ್ಳಿಯ ಒಬ್ಬ ಯುವತಿ ಪದವೀಧರೆಯಾಗಿದ್ದು,  ರಂಜಿತ್‌ಸಿಂಹ ಇಲ್ಲಿಗೆ ಬರುವ ಮುಂಚೆ ಇದು ಊಹಿಸಲೂ ಸಹ ಆಗದ ವಿಷಯವಾಗಿತ್ತು’ ಎಂದು ಗ್ಲೋಬಲ್‌ ಟೀಚರ್‌ ಪ್ರೈಜ್‌ನ ವೆಬ್‌ಸೈಟ್‌ ಮಾಹಿತಿ ನೀಡಿದೆ.


ಇದನ್ನೂ ಓದಿ: ರೈತರ ಬೇಡಿಕೆ ಈಡೇರದಿದ್ದರೆ ದೇಶಾದ್ಯಂತ ಅಗತ್ಯ ಸರಕುಗಳ ಸಾಗಾಣಿಕೆ ನಿಲ್ಲಿಸುತ್ತೇವೆ: ಸಾಗಾಣಿಕೆದಾರ ಒಕ್ಕೂಟದ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...