Homeಮುಖಪುಟಕನ್ನಡದಲ್ಲಿ ಕಲಿಸಿದ ಶಿಕ್ಷಕ ರಂಜಿತ್‌ಸಿಂಹ ದಿಸಾಳೆಗೆ 'ಗ್ಲೋಬಲ್‌ ಟೀಚರ್‌ ಪ್ರೈಜ್‌- 2020'

ಕನ್ನಡದಲ್ಲಿ ಕಲಿಸಿದ ಶಿಕ್ಷಕ ರಂಜಿತ್‌ಸಿಂಹ ದಿಸಾಳೆಗೆ ‘ಗ್ಲೋಬಲ್‌ ಟೀಚರ್‌ ಪ್ರೈಜ್‌- 2020’

ಮಕ್ಕಳಿಗೆ ಶಿಕ್ಷಣ ನೀಡುವ ಉದ್ದೇಶದಿಂದ ತಾವೇ ಕನ್ನಡ ಭಾಷೆಯನ್ನು ಕಲಿತು ಪಠ್ಯ ಪುಸ್ತಕಗಳನ್ನು ಮರುವಿನ್ಯಾಸ ಮಾಡಿದ್ದರು

- Advertisement -
- Advertisement -

ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಪರಿತೇವಾಡಿಯ ಸರ್ಕಾರಿ ಶಾಲಾ ಶಿಕ್ಷಕ ರಂಜಿತ್‌ಸಿಂಹ ದಿಸಾಳೆ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಪ್ರತಿಷ್ಠಿತ ‘ಗ್ಲೋಬಲ್‌ ಟೀಚರ್‌ ಪ್ರೈಜ್‌- 2020’ಕ್ಕೆ ಪಾತ್ರರಾಗಿದ್ದಾರೆ. ವಿಶೇಷವೆಂದರೇ 32 ವರ್ಷದ ಶಿಕ್ಷಕ ದಿಸಾಳೆ ಅವರು ಅಲ್ಲಿನ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗಾಗಿ ಪಠ್ಯ ಪುಸ್ತಕವನ್ನು ಮರುವಿನ್ಯಾಸ ಮಾಡಿದ ಖ್ಯಾತಿ ಹೊಂದಿದ್ದಾರೆ.

‘ಗ್ಲೋಬಲ್‌ ಟೀಚರ್‌ ಪ್ರೈಜ್‌- 2020’ನ ಬರೋಬ್ಬರಿ 7.4 ಕೋಟಿ ರೂಪಾಯಿಗಳ (10 ಮಿಲಿಯನ್ ಡಾಲರ್) ಪ್ರಶಸ್ತಿ ಹಣವನ್ನು ಗೆದ್ದುಕೊಂಡಿದ್ದಾರೆ.

ಪ್ರಶಸ್ತಿ ಒಲಿದಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಶಿಕ್ಷಕ ರಂಜಿತ್‌ಸಿಂಹ ದಿಸಾಳೆ, ’ಕೊರೊನಾ ಸಾಂಕ್ರಾಮಿಕದಂತಹ ಈ ಕಠಿಣ ಸಮಯದಲ್ಲಿ, ಪ್ರತಿ ವಿದ್ಯಾರ್ಥಿಯು ತಮ್ಮ ಜನ್ಮಸಿದ್ಧ ಹಕ್ಕಾದ ಉತ್ತಮ ಶಿಕ್ಷಣವನ್ನು ಪಡೆಯುತ್ತಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರಿ ಶಾಲಾ ಶಿಕ್ಷಕರು ಅತ್ಯುತ್ತಮ ಪ್ರಯತ್ನವನ್ನು ಮಾಡುತ್ತಿದ್ದಾರೆ’ ಎಂದು ದಿಸಾಲೆ ಹೇಳಿದ್ದಾರೆ.

PC: YouTube@GlobalTeacherPrize

‘ಈ ಪ್ರಶಸ್ತಿಯಿಂದಾಗಿ ಸರ್ಕಾರಿ ಶಾಲಾ ವ್ಯವಸ್ಥೆ ಬಗ್ಗೆ ನಮ್ಮ ವಿಶ್ವಾಸ ಹೆಚ್ಚಾಗುತ್ತದೆ. ಸವಾಲುಗಳ ನಡುವೆಯೂ ತಮ್ಮ ವಿದ್ಯಾರ್ಥಿಗಳ ಜೀವನವನ್ನು ಬದಲಾಯಿಸುತ್ತಿರುವ ಶಿಕ್ಷಕರು ಎಂದರೆ ಬದಲಾವಣೆಯ ಹರಿಕಾರರು.  ಶಿಕ್ಷಕರು ಯಾವಾಗಲೂ ವಿಷಯಗಳನ್ನು ಹಂಚಿಕೊಳ್ಳುವುದರಲ್ಲಿ ವಿಶ್ವಾಸವಿಟ್ಟಿರುತ್ತಾರೆ’ ಎಂದು ದಿಸಾಳೆ ಹೇಳಿದ್ದಾರೆ.

ಇದನ್ನೂ ಓದಿ: ಎಂಎಲ್‌ಸಿ ಚುನಾವಣೆ: 4 ಸ್ಥಾನದಲ್ಲಿ ಮಹಾವಿಕಾಸ್ ಅಘಾಡಿ ಜಯ- ಬಿಜೆಪಿಗೆ ಮುಖಭಂಗ

ಪ್ರಶಸ್ತಿಗಾಗಿ 140 ದೇಶಗಳ 12 ಸಾವಿರ ಶಿಕ್ಷಕರು ಅರ್ಜಿ ಸಲ್ಲಿಸಿದ್ದರು. ದಿಸಾಳೆ ಪ್ರಶಸ್ತಿ ಮೊತ್ತದ ಅರ್ಧ ಭಾಗವನ್ನು ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದ ಉಳಿದ 9 ಮಂದಿಗೆ ಅಭ್ಯರ್ಥಿಗಳಿಗೆ ಹಂಚುವುದಾಗಿ ಆನ್​ಲೈನ್ ವೇದಿಕೆಯಲ್ಲೇ ಹೇಳಿದ್ದಾರೆ.  ಗ್ಲೋಬಲ್‌ ಟೀಚರ್‌ ಪ್ರೈಜ್‌ನ ಇತಿಹಾಸದಲ್ಲಿ ಹೀಗೆ ಪ್ರಶಸ್ತಿ ಮೊತ್ತವನ್ನು ಹಂಚಿಕೊಂಡದ್ದು ದಿಸಾಳೆಯೇ ಮೊದಲು.

ಶಿಕ್ಷಕ ರಂಜಿತ್‌ಸಿಂಹ ದಿಸಾಳೆ ಮೊದಲು ಪಾಠ ಮಾಡಲು ಪ್ರಾರಂಭಿಸಿದ್ದು, ದನಗಳ ಹಟ್ಟಿಯ ಸಮೀಪ ಇದ್ದ ಶಿಥಿಲಾವಸ್ಥೆಗೆ ತೆರಳಿದ್ದ ಶಾಲೆಯೊಂದರಲ್ಲಿ. ಶಾಲೆಗೆ ಬರುತ್ತಿದ್ದವರೆಲ್ಲಾ ಕರ್ನಾಟಕದ ಗಡಿ ಭಾಗದ ಬುಡಕಟ್ಟು ಸಮುದಾಯಗಳಿಗೆ ಸೇರಿದ ಮಕ್ಕಳು. ಅವರಿಗೆ ಕನ್ನಡ ಬಿಟ್ಟು ಮರಾಠಿ ಬರುತ್ತಿರಲಿಲ್ಲ. ಆದರೆ, ಪಠ್ಯಕ್ರಮವು ಮರಾಠಿಯಲ್ಲಿಯೇ ಇತ್ತು.ಇದರಿಂದ ಬುಡಕಟ್ಟು ಸಮುದಾಯದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದರು.

ಇದನ್ನೂ ಓದಿ: ಡಿಸೆಂಬರ್ 8 ರ ಮಂಗಳವಾರ ಭಾರತ್‌ ಬಂದ್‌ಗೆ ಕರೆ ನೀಡಿದ ಹೋರಾಟನಿರತ ರೈತರು

ಹೀಗಾಗಿ, ಮಕ್ಕಳಿಗೆ ಶಿಕ್ಷಣ ನೀಡುವ ಉದ್ದೇಶದಿಂದ ತಾವೇ ಕನ್ನಡ ಭಾಷೆಯನ್ನು ಕಲಿತು ಪಠ್ಯ ಪುಸ್ತಕಗಳನ್ನು ಮರುವಿನ್ಯಾಸ ಮಾಡಿದ್ದರು. ಪಠ್ಯ ಪುಸ್ತಕಗಳನ್ನು QR ಕೋಡ್​ಗೆ ಪರಿವರ್ತಿಸಿದರು. ಹಾಡುಗಳು, ವಿಡಿಯೋಗಳನ್ನು QR ಕೋಡ್​ಗೆ ಪರಿವರ್ತಿಸಿ ಮಕ್ಕಳಿಗೆ ಶಿಕ್ಷಣ ನೀಡಿದ್ದರು.

ದಿಸಾಳೆ ಅವರ ಕಾರ್ಯ ಫಲ ನೀಡಿದ್ದು ಶಿಕ್ಷಣದಲ್ಲಿ ಮಾತ್ರವಲ್ಲ, ಗ್ರಾಮದಲ್ಲಿದ್ದ ಬಾಲಕಿಯರ ಬಾಲ್ಯ ವಿವಾಹ ಮತ್ತು ಬಾಲಕಾರ್ಮಿಕ ಪದ್ಧತಿಗಳು  ಕಡಿಮೆಯಾಗಿವೆ. ಹೆಣ್ಣು ಮಕ್ಕಳ ಹಾಜರಾತಿ ಹೆಚ್ಚಾಗಿದೆ. ಈ ಶಾಲೆಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಾಲೆ ಎಂಬ ಪ್ರಶಸ್ತಿಯೂ ದಕ್ಕಿದೆ. ಹಳ್ಳಿಯ ಒಬ್ಬ ಯುವತಿ ಪದವೀಧರೆಯಾಗಿದ್ದು,  ರಂಜಿತ್‌ಸಿಂಹ ಇಲ್ಲಿಗೆ ಬರುವ ಮುಂಚೆ ಇದು ಊಹಿಸಲೂ ಸಹ ಆಗದ ವಿಷಯವಾಗಿತ್ತು’ ಎಂದು ಗ್ಲೋಬಲ್‌ ಟೀಚರ್‌ ಪ್ರೈಜ್‌ನ ವೆಬ್‌ಸೈಟ್‌ ಮಾಹಿತಿ ನೀಡಿದೆ.


ಇದನ್ನೂ ಓದಿ: ರೈತರ ಬೇಡಿಕೆ ಈಡೇರದಿದ್ದರೆ ದೇಶಾದ್ಯಂತ ಅಗತ್ಯ ಸರಕುಗಳ ಸಾಗಾಣಿಕೆ ನಿಲ್ಲಿಸುತ್ತೇವೆ: ಸಾಗಾಣಿಕೆದಾರ ಒಕ್ಕೂಟದ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...