Homeಮುಖಪುಟಕನ್ನಡದಲ್ಲಿ ಕಲಿಸಿದ ಶಿಕ್ಷಕ ರಂಜಿತ್‌ಸಿಂಹ ದಿಸಾಳೆಗೆ 'ಗ್ಲೋಬಲ್‌ ಟೀಚರ್‌ ಪ್ರೈಜ್‌- 2020'

ಕನ್ನಡದಲ್ಲಿ ಕಲಿಸಿದ ಶಿಕ್ಷಕ ರಂಜಿತ್‌ಸಿಂಹ ದಿಸಾಳೆಗೆ ‘ಗ್ಲೋಬಲ್‌ ಟೀಚರ್‌ ಪ್ರೈಜ್‌- 2020’

ಮಕ್ಕಳಿಗೆ ಶಿಕ್ಷಣ ನೀಡುವ ಉದ್ದೇಶದಿಂದ ತಾವೇ ಕನ್ನಡ ಭಾಷೆಯನ್ನು ಕಲಿತು ಪಠ್ಯ ಪುಸ್ತಕಗಳನ್ನು ಮರುವಿನ್ಯಾಸ ಮಾಡಿದ್ದರು

- Advertisement -
- Advertisement -

ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಪರಿತೇವಾಡಿಯ ಸರ್ಕಾರಿ ಶಾಲಾ ಶಿಕ್ಷಕ ರಂಜಿತ್‌ಸಿಂಹ ದಿಸಾಳೆ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಪ್ರತಿಷ್ಠಿತ ‘ಗ್ಲೋಬಲ್‌ ಟೀಚರ್‌ ಪ್ರೈಜ್‌- 2020’ಕ್ಕೆ ಪಾತ್ರರಾಗಿದ್ದಾರೆ. ವಿಶೇಷವೆಂದರೇ 32 ವರ್ಷದ ಶಿಕ್ಷಕ ದಿಸಾಳೆ ಅವರು ಅಲ್ಲಿನ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗಾಗಿ ಪಠ್ಯ ಪುಸ್ತಕವನ್ನು ಮರುವಿನ್ಯಾಸ ಮಾಡಿದ ಖ್ಯಾತಿ ಹೊಂದಿದ್ದಾರೆ.

‘ಗ್ಲೋಬಲ್‌ ಟೀಚರ್‌ ಪ್ರೈಜ್‌- 2020’ನ ಬರೋಬ್ಬರಿ 7.4 ಕೋಟಿ ರೂಪಾಯಿಗಳ (10 ಮಿಲಿಯನ್ ಡಾಲರ್) ಪ್ರಶಸ್ತಿ ಹಣವನ್ನು ಗೆದ್ದುಕೊಂಡಿದ್ದಾರೆ.

ಪ್ರಶಸ್ತಿ ಒಲಿದಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಶಿಕ್ಷಕ ರಂಜಿತ್‌ಸಿಂಹ ದಿಸಾಳೆ, ’ಕೊರೊನಾ ಸಾಂಕ್ರಾಮಿಕದಂತಹ ಈ ಕಠಿಣ ಸಮಯದಲ್ಲಿ, ಪ್ರತಿ ವಿದ್ಯಾರ್ಥಿಯು ತಮ್ಮ ಜನ್ಮಸಿದ್ಧ ಹಕ್ಕಾದ ಉತ್ತಮ ಶಿಕ್ಷಣವನ್ನು ಪಡೆಯುತ್ತಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರಿ ಶಾಲಾ ಶಿಕ್ಷಕರು ಅತ್ಯುತ್ತಮ ಪ್ರಯತ್ನವನ್ನು ಮಾಡುತ್ತಿದ್ದಾರೆ’ ಎಂದು ದಿಸಾಲೆ ಹೇಳಿದ್ದಾರೆ.

PC: YouTube@GlobalTeacherPrize

‘ಈ ಪ್ರಶಸ್ತಿಯಿಂದಾಗಿ ಸರ್ಕಾರಿ ಶಾಲಾ ವ್ಯವಸ್ಥೆ ಬಗ್ಗೆ ನಮ್ಮ ವಿಶ್ವಾಸ ಹೆಚ್ಚಾಗುತ್ತದೆ. ಸವಾಲುಗಳ ನಡುವೆಯೂ ತಮ್ಮ ವಿದ್ಯಾರ್ಥಿಗಳ ಜೀವನವನ್ನು ಬದಲಾಯಿಸುತ್ತಿರುವ ಶಿಕ್ಷಕರು ಎಂದರೆ ಬದಲಾವಣೆಯ ಹರಿಕಾರರು.  ಶಿಕ್ಷಕರು ಯಾವಾಗಲೂ ವಿಷಯಗಳನ್ನು ಹಂಚಿಕೊಳ್ಳುವುದರಲ್ಲಿ ವಿಶ್ವಾಸವಿಟ್ಟಿರುತ್ತಾರೆ’ ಎಂದು ದಿಸಾಳೆ ಹೇಳಿದ್ದಾರೆ.

ಇದನ್ನೂ ಓದಿ: ಎಂಎಲ್‌ಸಿ ಚುನಾವಣೆ: 4 ಸ್ಥಾನದಲ್ಲಿ ಮಹಾವಿಕಾಸ್ ಅಘಾಡಿ ಜಯ- ಬಿಜೆಪಿಗೆ ಮುಖಭಂಗ

ಪ್ರಶಸ್ತಿಗಾಗಿ 140 ದೇಶಗಳ 12 ಸಾವಿರ ಶಿಕ್ಷಕರು ಅರ್ಜಿ ಸಲ್ಲಿಸಿದ್ದರು. ದಿಸಾಳೆ ಪ್ರಶಸ್ತಿ ಮೊತ್ತದ ಅರ್ಧ ಭಾಗವನ್ನು ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದ ಉಳಿದ 9 ಮಂದಿಗೆ ಅಭ್ಯರ್ಥಿಗಳಿಗೆ ಹಂಚುವುದಾಗಿ ಆನ್​ಲೈನ್ ವೇದಿಕೆಯಲ್ಲೇ ಹೇಳಿದ್ದಾರೆ.  ಗ್ಲೋಬಲ್‌ ಟೀಚರ್‌ ಪ್ರೈಜ್‌ನ ಇತಿಹಾಸದಲ್ಲಿ ಹೀಗೆ ಪ್ರಶಸ್ತಿ ಮೊತ್ತವನ್ನು ಹಂಚಿಕೊಂಡದ್ದು ದಿಸಾಳೆಯೇ ಮೊದಲು.

ಶಿಕ್ಷಕ ರಂಜಿತ್‌ಸಿಂಹ ದಿಸಾಳೆ ಮೊದಲು ಪಾಠ ಮಾಡಲು ಪ್ರಾರಂಭಿಸಿದ್ದು, ದನಗಳ ಹಟ್ಟಿಯ ಸಮೀಪ ಇದ್ದ ಶಿಥಿಲಾವಸ್ಥೆಗೆ ತೆರಳಿದ್ದ ಶಾಲೆಯೊಂದರಲ್ಲಿ. ಶಾಲೆಗೆ ಬರುತ್ತಿದ್ದವರೆಲ್ಲಾ ಕರ್ನಾಟಕದ ಗಡಿ ಭಾಗದ ಬುಡಕಟ್ಟು ಸಮುದಾಯಗಳಿಗೆ ಸೇರಿದ ಮಕ್ಕಳು. ಅವರಿಗೆ ಕನ್ನಡ ಬಿಟ್ಟು ಮರಾಠಿ ಬರುತ್ತಿರಲಿಲ್ಲ. ಆದರೆ, ಪಠ್ಯಕ್ರಮವು ಮರಾಠಿಯಲ್ಲಿಯೇ ಇತ್ತು.ಇದರಿಂದ ಬುಡಕಟ್ಟು ಸಮುದಾಯದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದರು.

ಇದನ್ನೂ ಓದಿ: ಡಿಸೆಂಬರ್ 8 ರ ಮಂಗಳವಾರ ಭಾರತ್‌ ಬಂದ್‌ಗೆ ಕರೆ ನೀಡಿದ ಹೋರಾಟನಿರತ ರೈತರು

ಹೀಗಾಗಿ, ಮಕ್ಕಳಿಗೆ ಶಿಕ್ಷಣ ನೀಡುವ ಉದ್ದೇಶದಿಂದ ತಾವೇ ಕನ್ನಡ ಭಾಷೆಯನ್ನು ಕಲಿತು ಪಠ್ಯ ಪುಸ್ತಕಗಳನ್ನು ಮರುವಿನ್ಯಾಸ ಮಾಡಿದ್ದರು. ಪಠ್ಯ ಪುಸ್ತಕಗಳನ್ನು QR ಕೋಡ್​ಗೆ ಪರಿವರ್ತಿಸಿದರು. ಹಾಡುಗಳು, ವಿಡಿಯೋಗಳನ್ನು QR ಕೋಡ್​ಗೆ ಪರಿವರ್ತಿಸಿ ಮಕ್ಕಳಿಗೆ ಶಿಕ್ಷಣ ನೀಡಿದ್ದರು.

ದಿಸಾಳೆ ಅವರ ಕಾರ್ಯ ಫಲ ನೀಡಿದ್ದು ಶಿಕ್ಷಣದಲ್ಲಿ ಮಾತ್ರವಲ್ಲ, ಗ್ರಾಮದಲ್ಲಿದ್ದ ಬಾಲಕಿಯರ ಬಾಲ್ಯ ವಿವಾಹ ಮತ್ತು ಬಾಲಕಾರ್ಮಿಕ ಪದ್ಧತಿಗಳು  ಕಡಿಮೆಯಾಗಿವೆ. ಹೆಣ್ಣು ಮಕ್ಕಳ ಹಾಜರಾತಿ ಹೆಚ್ಚಾಗಿದೆ. ಈ ಶಾಲೆಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಾಲೆ ಎಂಬ ಪ್ರಶಸ್ತಿಯೂ ದಕ್ಕಿದೆ. ಹಳ್ಳಿಯ ಒಬ್ಬ ಯುವತಿ ಪದವೀಧರೆಯಾಗಿದ್ದು,  ರಂಜಿತ್‌ಸಿಂಹ ಇಲ್ಲಿಗೆ ಬರುವ ಮುಂಚೆ ಇದು ಊಹಿಸಲೂ ಸಹ ಆಗದ ವಿಷಯವಾಗಿತ್ತು’ ಎಂದು ಗ್ಲೋಬಲ್‌ ಟೀಚರ್‌ ಪ್ರೈಜ್‌ನ ವೆಬ್‌ಸೈಟ್‌ ಮಾಹಿತಿ ನೀಡಿದೆ.


ಇದನ್ನೂ ಓದಿ: ರೈತರ ಬೇಡಿಕೆ ಈಡೇರದಿದ್ದರೆ ದೇಶಾದ್ಯಂತ ಅಗತ್ಯ ಸರಕುಗಳ ಸಾಗಾಣಿಕೆ ನಿಲ್ಲಿಸುತ್ತೇವೆ: ಸಾಗಾಣಿಕೆದಾರ ಒಕ್ಕೂಟದ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...