Homeಮುಖಪುಟಮಾಧ್ಯಮ ಸಂಸ್ಥೆಗಳ ಮಾಲೀಕತ್ವ ನಿಯಂತ್ರಣ ಕಾನೂನು ಜಾರಿಗೆ ತರಬೇಕು: ಶಶಿ ತರೂರ್

ಮಾಧ್ಯಮ ಸಂಸ್ಥೆಗಳ ಮಾಲೀಕತ್ವ ನಿಯಂತ್ರಣ ಕಾನೂನು ಜಾರಿಗೆ ತರಬೇಕು: ಶಶಿ ತರೂರ್

- Advertisement -
- Advertisement -

ರಾಜಕೀಯ ವ್ಯಕ್ತಿಗಳು ಮತ್ತು ವ್ಯಾಪಾರ ಕಂಪನಿಗಳ ಮಾಧ್ಯಮ ಸಂಸ್ಥೆಗಳ ಮಾಲೀಕತ್ವವನ್ನು ಮೇಲ್ವಿಚಾರಣೆ ಮಾಡಲು ಕೇಂದ್ರ ಸರ್ಕಾರ ಕಾನೂನನ್ನು ಜಾರಿಗೊಳಿಸಬೇಕು ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಎನ್. ರಾಮಚಂದ್ರನ್ ಫೌಂಡೇಶನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿ, ಭಾರತದಲ್ಲಿ ಜವಾಬ್ದಾರಿಯುತ ಪತ್ರಿಕೋದ್ಯಮದ ಅಗತ್ಯವನ್ನು ಒತ್ತಿ ಹೇಳಿದರು. ದೇಶದ ಖಾಸಗಿ ವ್ಯಕ್ತಿಗಳ ಮಾಧ್ಯಮ ಮಾಲೀಕತ್ವದ ಬಗ್ಗೆ ನಿಯಮಾವಳಿಗಳು ಇಲ್ಲದಿರುವುದನ್ನು ಎತ್ತಿ ತೋರಿಸಿ, ಮುಂದುವರಿದ ರಾಷ್ಟ್ರಗಳಲ್ಲಿರುವ ನಿಯಮಗಳು ಭಾರತಕ್ಕಿಂತ ಹೇಗೆ ಭಿನ್ನವಾಗಿವೆ ಎಂದು ವಿವರಿಸಿದರು.

‘ದೇಶದಲ್ಲಿ ದೃಢ, ಸ್ವತಂತ್ರ ಮಾಧ್ಯಮವನ್ನು ಪ್ರೋತ್ಸಾಹಿಸುವ ಮೂಲಕ, ಒಂದೇ ಕಂಪನಿ ಅಥವಾ ರಾಜಕೀಯ ವ್ಯಕ್ತಿಗಳಿಂದ ಬಹು ಸುದ್ದಿ ಸಂಸ್ಥೆಗಳ ನಿಯಂತ್ರಣವನ್ನು ಮಿತಿಗೊಳಿಸುವ ಕಾನೂನುಗಳು ಮತ್ತು ನಿಬಂಧನೆಗಳನ್ನು ಸರ್ಕಾರವು ಪರಿಚಯಿಸಬೇಕು’ ಎಂದು ಅವರು ಹೇಳಿದರು.

ಭಾರತದ ಬಹುತೇಕ ಮಾಧ್ಯಮಗಳು “ಸತ್ಯಗಳ ಕಡೆಗೆ ನಿಷ್ಠುರ ಮನೋಭಾವವನ್ನು ಹೊಂದಿದ್ದು, ಸುದ್ದಿಗೆ ತಿದ್ದುಪಡಿಗಳನ್ನು ನೀಡಲು ಹಿಂಜರಿಯುತ್ತವೆ” ಎಂದು ಹೇಳಿದರು.

ಮಾಧ್ಯಮಗಳೊಂದಿಗಿನ ಅವರ ಸ್ವಂತ ಅನುಭವಗಳು ಮತ್ತು ಅವರ ವಿರುದ್ಧದ ಪತ್ರಿಕಾ ಆರೋಪಗಳ ಕುರಿತು ಕಾನೂನು ಆಶ್ರಯವನ್ನು ಆಯ್ಕೆ ಮಾಡುವ ನಿರ್ಧಾರವನ್ನು ಉಲ್ಲೇಖಿಸಿದ ತರೂರ್, ‘ನ್ಯಾಯಾಧೀಶರು ಒಬ್ಬ ವ್ಯಕ್ತಿಯ ಹತ್ಯೆಯನ್ನು ತಡೆಯುವ ಅರ್ಜಿಯ ವಿಚಾರಣೆಯನ್ನು ನಿಗದಿಪಡಿಸುವ ಮೊದಲೇ ಒಬ್ಬರನ್ನು ಹತ್ಯೆ ಮಾಡಬಹುದು’ ಎಂದರು.

ರಾಷ್ಟ್ರದ ಪ್ರಜಾಪ್ರಭುತ್ವದಲ್ಲಿ ಮುಕ್ತ ಮಾಧ್ಯಮದ ನಿರ್ಣಾಯಕ ಪಾತ್ರ ಹಾಗೂ ಪತ್ರಿಕಾ ಸುಧಾರಣೆಯ ಅಗತ್ಯವನ್ನು ಒತ್ತಿ ಹೇಳಿ, ‘ಸತ್ಯ, ಅಭಿಪ್ರಾಯಗಳು ಮತ್ತು ಊಹಾಪೋಹಗಳ ನಡುವಿನ ವ್ಯತ್ಯಾಸವು ಅಪ್ರಸ್ತುತವಾಗಲು ಬಿಡಬಾರದು’ ಎಂದರು.

ಭಾರತದ ಜಾಗತಿಕ ಚಿತ್ರಣವನ್ನು ಕೇಂದ್ರೀಕರಿಸಿ ಮಾತನಾಡಿದ ತರೂರ್, ‘ಜಾಗತಿಕವಾಗಿ ಜವಾಬ್ದಾರಿಯುತ ದೇಶವಾಗಿ ಮತ್ತು 21ನೇ ಶತಮಾನದ ಪ್ರಜಾಪ್ರಭುತ್ವ ರಾಷ್ಟ್ರವಾಗಿ, ನಾವು ನಮ್ಮನ್ನು ಗಂಭೀರವಾಗಿ ಪರಿಗಣಿಸಬೇಕು. ಜವಾಬ್ದಾರಿಯುತವಾಗಿ ವರ್ತಿಸಬೇಕು’ ಎಂದರು.

‘ಸತ್ಯ, ಅಭಿಪ್ರಾಯಗಳು ಮತ್ತು ಊಹಾಪೋಹಗಳು, ವರದಿಗಳು ಮತ್ತು ವದಂತಿಗಳು, ಮೂಲ ಮಾಹಿತಿ ಮತ್ತು ಆಧಾರರಹಿತ ಆರೋಪಗಳ ನಡುವಿನ ವ್ಯತ್ಯಾಸವು ಭಾರತೀಯ ಮಾಧ್ಯಮಗಳಲ್ಲಿ ಅಪ್ರಸ್ತುತವಾಗಿದೆ. ಮುಕ್ತ ಮಾಧ್ಯಮವು ದೇಶದ ಪ್ರಜಾಪ್ರಭುತ್ವದ ಜೀವಾಳವಾಗಿದೆ ಮತ್ತು ಆದ್ದರಿಂದ ಪತ್ರಿಕಾ ಮಾಧ್ಯಮವೂ ತನ್ನನ್ನು ತಾನು ಸುಧಾರಿಸಿಕೊಳ್ಳಬೇಕು’ ಎಂದು ತರೂರ್ ಹೇಳಿದರು.

ಇದನ್ನೂ ಓದಿ; ಉದ್ಯೋಗಕ್ಕಾಗಿ ಭೂಮಿ ಹಗರಣ: ಇಡಿ ಚಾರ್ಜ್ ಶೀಟ್‌ನಲ್ಲಿ ಲಾಲೂ ಪತ್ನಿ, ಪುತ್ರಿ ಹೆಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...