Homeಕರ್ನಾಟಕಪಂಚಮಸಾಲಿ ಸಮಾಜದ ಬಂಡಾಯಕ್ಕೆ ಸರ್ಕಾರ ಆಸ್ಪದ ನೀಡದಿರಲಿ: ಮೃತ್ಯುಂಜಯ ಸ್ವಾಮೀಜಿ

ಪಂಚಮಸಾಲಿ ಸಮಾಜದ ಬಂಡಾಯಕ್ಕೆ ಸರ್ಕಾರ ಆಸ್ಪದ ನೀಡದಿರಲಿ: ಮೃತ್ಯುಂಜಯ ಸ್ವಾಮೀಜಿ

- Advertisement -
- Advertisement -

ಲಿಂಗಾಯತ ಪಂಚಮಸಾಲಿ ಸಮಾಜದ ಬಂಡಾಯಕ್ಕೆ ಸರ್ಕಾರ ಆಸ್ಪದ ನೀಡದಿರಲಿ ಎಂದು ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಸಿದ್ದಾರೆ.

ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಡಿ.22ರಂದು ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜ ಹೋರಾಟ ಹಮ್ಮಿಕೊಂಡಿದೆ. ಇದರ ಹಿನ್ನೆಲೆಯಲ್ಲಿ ಸ್ವಾಮೀಜಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

“ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಡಿ.22ರಂದು ವಿಜಯೋತ್ಸವದ ದಿನ ಆಗಬೇಕೆ ಹೊರತು ಬಂಡಾಯದ ದಿನ ಆಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ. 2ಎ ಮೀಸಲಾತಿ ನೀಡಿ ನ್ಯಾಯ ದೊರಕಿಸಬೇಕು” ಎಂದಿದ್ದಾರೆ.

ಬೆಳಗಾವಿ ಪಟ್ಟಣದ ವೀರರಾಣಿ ಕಿತ್ತೂರು ಚನ್ನಮ್ಮನ ಸಮಾಧಿಗೆ ಬುಧವಾರ ಪುಷ್ಪ ನಮನ ಸಲ್ಲಿಸಿ ಬೆಳಗಾವಿ ಕಡೆಗೆ ಪಾದಯಾತ್ರೆ ಆರಂಭಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.

“ಕೂಡಲ ಸಂಗಮದಿಂದ ಆರಂಭವಾದ ಪಂಚಮಸಾಲಿ ಹೋರಾಟಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಹಳ ದೊಡ್ಡ ಬೆಂಬಲ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಟ್ಟೇ ಕೊಡುತ್ತಾರೆಂಬ ವಿಶ್ವಾಸ ಇದೆ. ಆದರೆ ಮಾತು ಕೊಟ್ಟು ಎಲ್ಲೋ ಒಂದು ಕಡೆ ಪಂಚಮಸಾಲಿ ಸಮಾಜ ಬಾಂಧವರ ಭಾವನೆಗಳೊಂದಿಗೆ ಚೆಲ್ಲಾಟ ಆಡುತ್ತಿದ್ದಾರೆ. ಸಮಾಜ ಬಾಂಧವರು ಸಹನೆ ಕಳೆದುಕೊಳ್ಳುವುದಕ್ಕಿಂತ ಮುಂಚ್ಚೆ ‘2ಎ’ಮೀಸಲಾತಿ ಘೋಷಿಸಿ ಅಭಿನಂದನೆಗೆ ಪಾತ್ರರಾಗಬೇಕು” ಎಂದು ಆಗ್ರಹಿಸಿದ್ದಾರೆ.

“ಲಿಂಗಾಯತ ಪಂಚಮಸಾಲಿ ಸಮಾಜ ಬಾಂಧವರ ಕುಲದೇವತೆ ಆಗಿರುವ ವೀರರಾಣಿ ಕಿತ್ತೂರು ಚನ್ನಮ್ಮನ ಐಕ್ಯಸ್ಥಳದಿಂದ ಸಂಪಗಾಂವ, ಚಿಕ್ಕಬಾಗೇವಾಡಿ, ಹಿರೇಬಾಗೇವಾಡಿ ಮಾರ್ಗವಾಗಿ ಬೆಳಗಾವಿ ಸುವರ್ಣ ಸೌಧಕ್ಕೆ ತೆರಳಿ ಪಂಚಶಕ್ತಿ ವಿರಾಟ ಸಮಾವೇಶ ನಡೆಸಲಾಗುತ್ತಿದೆ. ಈ ಭಾಗದ ಸಮಸ್ತ ಪಂಚಮಸಾಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಕ್ತಿ ಪ್ರದರ್ಶನ ಮಾಡಬೇಕು” ಎಂದು ಕೋರಿದ್ದಾರೆ.

ಮುಖಂಡ ವಿಜಯಾನಂದ ಕಾಶಪ್ಪನವರ ಮಾತನಾಡಿ, “ಸಮಾವೇಶಕ್ಕೆ ಲಕ್ಷಾಂತರ ಜನ ಸೇರುವ ನಿರೀಕ್ಷೆ ಇದೆ. ಸರ್ಕಾರ ಅಂತಿಮ ನಿರ್ಣಯ ಕೈಕೊಂಡರೆ ಗೌರವ ಸಲ್ಲಿಸುತ್ತೇವೆ. ಇಲ್ಲವಾದರೆ ಮಾಡುವ ಅವಮಾನ ಎದುರಿಸಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

ಕಾಡಾ ಅಧ್ಯಕ್ಷ ಡಾ.ವಿಶ್ವನಾಥ ಪಾಟೀಲ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲಗಿ, ಪಂಚಮಸಾಲಿ ಸಮಾಜದ ತಾಲ್ಲೂಕು ಘಟಕ ಅಧ್ಯಕ್ಷ ಶ್ರೀಶೈಲ ಬೋಳಣ್ಣವರ, ಪುರಸಭೆ ಅಧ್ಯಕ್ಷ ಬಸವರಾಜ ಜನ್ಮಟ್ಟಿ, ಪ್ರಧಾನ ಕಾರ್ಯದರ್ಶಿ ಮಹೇಶ ಹರಕುಣಿ, ರಾಜಶೇಖರ ಮೂಗಿ, ಎಫ್.ಎಸ್.ಸಿದ್ದನಗೌಡರ, ಎಸ್.ಬಿ.ಸಂಗನಗೌಡರ, ಬಸವರಾಜ ತಟವಟಿ, ಉಮೇಶ ಬೋಳೆತ್ತಿನ, ಶಿವಾನಂದ ಬೆಳಗಾವಿ, ರಾಜು ಸೊಗಲ, ಸುನೀಲ ಮರಕುಂಬಿ, ರಾಜು ನರಸಣ್ಣವರ, ನಿಂಗಪ್ಪ ಚೌಡನ್ನವರ ಮೊದಲಾದವರು ಹಾಜರಿದ್ದರು.

“ಪಂಚಮಸಾಲಿ ಹೋರಾಟಕ್ಕೆ ಪರಿಹಾರವನ್ನು ಸರ್ಕಾರ ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳುವ ಸಾಧ್ಯತೆ ಇದೆ. ನಾಳೆ ಸರ್ಕಾರ ಈ ಬಗ್ಗೆ ತೀರ್ಮಾನ ಪ್ರಕಟ ಮಾಡುವ ಸಾಧ್ಯತೆ ಇದೆ” ಎಂದು ವರದಿಯಾಗಿದೆ. ಮುಂದಿನ ಚುನಾವಣೆಯಲ್ಲಿ ಕಿತ್ತೂರು ಕರ್ನಾಟಕ ಭಾಗದಲ್ಲಿ ಅಧಿಕ ಸಂಖ್ಯೆಯಲ್ಲಿ ಇರುವ ಪಂಚಮಸಾಲಿ ಸಮುದಾಯದ ಮತ ಸೆಳೆಯಲು ಬಿಜೆಪಿ ಯತ್ನಿಸುವ ಸಾಧ್ಯತೆ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...