Homeಕರ್ನಾಟಕಪಂಚಮಸಾಲಿ ಸಮಾಜದ ಬಂಡಾಯಕ್ಕೆ ಸರ್ಕಾರ ಆಸ್ಪದ ನೀಡದಿರಲಿ: ಮೃತ್ಯುಂಜಯ ಸ್ವಾಮೀಜಿ

ಪಂಚಮಸಾಲಿ ಸಮಾಜದ ಬಂಡಾಯಕ್ಕೆ ಸರ್ಕಾರ ಆಸ್ಪದ ನೀಡದಿರಲಿ: ಮೃತ್ಯುಂಜಯ ಸ್ವಾಮೀಜಿ

- Advertisement -
- Advertisement -

ಲಿಂಗಾಯತ ಪಂಚಮಸಾಲಿ ಸಮಾಜದ ಬಂಡಾಯಕ್ಕೆ ಸರ್ಕಾರ ಆಸ್ಪದ ನೀಡದಿರಲಿ ಎಂದು ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಸಿದ್ದಾರೆ.

ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಡಿ.22ರಂದು ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜ ಹೋರಾಟ ಹಮ್ಮಿಕೊಂಡಿದೆ. ಇದರ ಹಿನ್ನೆಲೆಯಲ್ಲಿ ಸ್ವಾಮೀಜಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

“ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಡಿ.22ರಂದು ವಿಜಯೋತ್ಸವದ ದಿನ ಆಗಬೇಕೆ ಹೊರತು ಬಂಡಾಯದ ದಿನ ಆಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ. 2ಎ ಮೀಸಲಾತಿ ನೀಡಿ ನ್ಯಾಯ ದೊರಕಿಸಬೇಕು” ಎಂದಿದ್ದಾರೆ.

ಬೆಳಗಾವಿ ಪಟ್ಟಣದ ವೀರರಾಣಿ ಕಿತ್ತೂರು ಚನ್ನಮ್ಮನ ಸಮಾಧಿಗೆ ಬುಧವಾರ ಪುಷ್ಪ ನಮನ ಸಲ್ಲಿಸಿ ಬೆಳಗಾವಿ ಕಡೆಗೆ ಪಾದಯಾತ್ರೆ ಆರಂಭಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.

“ಕೂಡಲ ಸಂಗಮದಿಂದ ಆರಂಭವಾದ ಪಂಚಮಸಾಲಿ ಹೋರಾಟಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಹಳ ದೊಡ್ಡ ಬೆಂಬಲ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಟ್ಟೇ ಕೊಡುತ್ತಾರೆಂಬ ವಿಶ್ವಾಸ ಇದೆ. ಆದರೆ ಮಾತು ಕೊಟ್ಟು ಎಲ್ಲೋ ಒಂದು ಕಡೆ ಪಂಚಮಸಾಲಿ ಸಮಾಜ ಬಾಂಧವರ ಭಾವನೆಗಳೊಂದಿಗೆ ಚೆಲ್ಲಾಟ ಆಡುತ್ತಿದ್ದಾರೆ. ಸಮಾಜ ಬಾಂಧವರು ಸಹನೆ ಕಳೆದುಕೊಳ್ಳುವುದಕ್ಕಿಂತ ಮುಂಚ್ಚೆ ‘2ಎ’ಮೀಸಲಾತಿ ಘೋಷಿಸಿ ಅಭಿನಂದನೆಗೆ ಪಾತ್ರರಾಗಬೇಕು” ಎಂದು ಆಗ್ರಹಿಸಿದ್ದಾರೆ.

“ಲಿಂಗಾಯತ ಪಂಚಮಸಾಲಿ ಸಮಾಜ ಬಾಂಧವರ ಕುಲದೇವತೆ ಆಗಿರುವ ವೀರರಾಣಿ ಕಿತ್ತೂರು ಚನ್ನಮ್ಮನ ಐಕ್ಯಸ್ಥಳದಿಂದ ಸಂಪಗಾಂವ, ಚಿಕ್ಕಬಾಗೇವಾಡಿ, ಹಿರೇಬಾಗೇವಾಡಿ ಮಾರ್ಗವಾಗಿ ಬೆಳಗಾವಿ ಸುವರ್ಣ ಸೌಧಕ್ಕೆ ತೆರಳಿ ಪಂಚಶಕ್ತಿ ವಿರಾಟ ಸಮಾವೇಶ ನಡೆಸಲಾಗುತ್ತಿದೆ. ಈ ಭಾಗದ ಸಮಸ್ತ ಪಂಚಮಸಾಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಕ್ತಿ ಪ್ರದರ್ಶನ ಮಾಡಬೇಕು” ಎಂದು ಕೋರಿದ್ದಾರೆ.

ಮುಖಂಡ ವಿಜಯಾನಂದ ಕಾಶಪ್ಪನವರ ಮಾತನಾಡಿ, “ಸಮಾವೇಶಕ್ಕೆ ಲಕ್ಷಾಂತರ ಜನ ಸೇರುವ ನಿರೀಕ್ಷೆ ಇದೆ. ಸರ್ಕಾರ ಅಂತಿಮ ನಿರ್ಣಯ ಕೈಕೊಂಡರೆ ಗೌರವ ಸಲ್ಲಿಸುತ್ತೇವೆ. ಇಲ್ಲವಾದರೆ ಮಾಡುವ ಅವಮಾನ ಎದುರಿಸಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

ಕಾಡಾ ಅಧ್ಯಕ್ಷ ಡಾ.ವಿಶ್ವನಾಥ ಪಾಟೀಲ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲಗಿ, ಪಂಚಮಸಾಲಿ ಸಮಾಜದ ತಾಲ್ಲೂಕು ಘಟಕ ಅಧ್ಯಕ್ಷ ಶ್ರೀಶೈಲ ಬೋಳಣ್ಣವರ, ಪುರಸಭೆ ಅಧ್ಯಕ್ಷ ಬಸವರಾಜ ಜನ್ಮಟ್ಟಿ, ಪ್ರಧಾನ ಕಾರ್ಯದರ್ಶಿ ಮಹೇಶ ಹರಕುಣಿ, ರಾಜಶೇಖರ ಮೂಗಿ, ಎಫ್.ಎಸ್.ಸಿದ್ದನಗೌಡರ, ಎಸ್.ಬಿ.ಸಂಗನಗೌಡರ, ಬಸವರಾಜ ತಟವಟಿ, ಉಮೇಶ ಬೋಳೆತ್ತಿನ, ಶಿವಾನಂದ ಬೆಳಗಾವಿ, ರಾಜು ಸೊಗಲ, ಸುನೀಲ ಮರಕುಂಬಿ, ರಾಜು ನರಸಣ್ಣವರ, ನಿಂಗಪ್ಪ ಚೌಡನ್ನವರ ಮೊದಲಾದವರು ಹಾಜರಿದ್ದರು.

“ಪಂಚಮಸಾಲಿ ಹೋರಾಟಕ್ಕೆ ಪರಿಹಾರವನ್ನು ಸರ್ಕಾರ ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳುವ ಸಾಧ್ಯತೆ ಇದೆ. ನಾಳೆ ಸರ್ಕಾರ ಈ ಬಗ್ಗೆ ತೀರ್ಮಾನ ಪ್ರಕಟ ಮಾಡುವ ಸಾಧ್ಯತೆ ಇದೆ” ಎಂದು ವರದಿಯಾಗಿದೆ. ಮುಂದಿನ ಚುನಾವಣೆಯಲ್ಲಿ ಕಿತ್ತೂರು ಕರ್ನಾಟಕ ಭಾಗದಲ್ಲಿ ಅಧಿಕ ಸಂಖ್ಯೆಯಲ್ಲಿ ಇರುವ ಪಂಚಮಸಾಲಿ ಸಮುದಾಯದ ಮತ ಸೆಳೆಯಲು ಬಿಜೆಪಿ ಯತ್ನಿಸುವ ಸಾಧ್ಯತೆ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...