Homeಕರ್ನಾಟಕ'ಓನ್ಲೀ ಜೈಲ್, ನೋ ಬೇಲ್’ ಎಂದು ಪ್ರಜ್ವಲ್ ರೇವಣ್ಣನಿಗೆ ಸರ್ಕಾರ ಹೇಳಬೇಕು: ಸುಭಾಷಿಣಿ ಅಲಿ

‘ಓನ್ಲೀ ಜೈಲ್, ನೋ ಬೇಲ್’ ಎಂದು ಪ್ರಜ್ವಲ್ ರೇವಣ್ಣನಿಗೆ ಸರ್ಕಾರ ಹೇಳಬೇಕು: ಸುಭಾಷಿಣಿ ಅಲಿ

ಕೇಂದ್ರದ ಬಿಜೆಪಿ ಸರ್ಕಾರ 'ಬಲತ್ಕಾರಿಗಳ ಬಚಾವು' ಮಾಡುವ ಸರ್ಕಾರವಾಗಿದೆ

- Advertisement -
- Advertisement -

“ಹಾಸನ ಸಂಸದ ಪ್ರಜ್ವಲ್ ರೇವಣ್ಣ ನಡೆಸಿರುವ ಲೈಂಗಿಕ ದಬ್ಬಾಳಿಕೆಯನ್ನು ಖಂಡಿಸಿ, ಸಂತ್ರಸ್ತೆಯರಿಗೆ ಧೈರ್ಯ ತುಂಬಲು ನಾವಿಲ್ಲಿದ್ದೇವೆ. ರೇವಣ್ಣ ಕುಟುಂಬವು ರಾಜಕೀಯ, ಹಣ ಬಲದಿಂದ ನಡೆಸುವ ಅವ್ಯವಹಾರಗಳಿಗೆ, ದರ್ಪಕ್ಕೆ ಇನ್ನು ಉಳಿಗಾಲವಿಲ್ಲ. ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ‘ಬಲತ್ಕಾರಿಗಳ ಬಚಾವು’ ಮಾಡುವ ಸರ್ಕಾರವಾಗಿದೆ. ಆ ಸರ್ಕಾರವನ್ನು ಜೂನ್ 4ರ ನಂತರ ಕೆಳಗಿಸಬೇಕು” ಎಂದು ಮಹಿಳಾ ಹೋರಾಟಗಾರ್ತಿ ಸುಭಾಷಿಣಿ ಅಲಿ ಹೇಳಿದ್ದಾರೆ.

ಹಾಸನದಲ್ಲಿ ಪ್ರಜ್ವಲ್ ರೇವಣ್ಣನ ಬಂಧನಕ್ಕೆ ಆಗ್ರಹಿಸಿ ನಡೆಯುತ್ತಿರುವ ‘ಹೋರಾಟದ ನಡಿಗೆ, ಹಾಸನದ ಕಡೆಗೆ..’ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, “ಶತಮಾನಗಳಿಂದಲೂ ಮಹಿಳಾ ಸಂಘಟನೆ ಸಂಘರ್ಷ ಮಾಡುತ್ತಿದೆ. ಸಂವಿಧಾನ ಜಾರಿಯಾದ ನಂತರವೂ ದೇಶದ ನಾನಾ ಭಾಗಗಳಲ್ಲಿ ಮಹಿಳೆಯರ ಮೇಲೆ ದಬ್ಬಾಳಿಕೆ ನಡೆಯುತ್ತಲೇ ಇದೆ. ಭಾರತದಲ್ಲಿ ಸಾವಂತವಾದ, ಪುರಷವಾದ ಬೇರೂರಿದೆ. ಜೊತೆಗೆ, ಬಂಡವಾಳ ಮತ್ತು ಮತೀಯವಾದವೂ ಸೇರಿಕೊಂಡಿದೆ. ಇವುಗಳನ್ನು ಒಡೆಯದಿದ್ದರೆ, ನಮಗಾರಿಗೂ ಉಳಿವಿಲ್ಲ” ಎಂದರು.

“ಪ್ರಜ್ವಲ್ ರೇವಣ್ಣ ಮತ್ತು ಆತನ ತಂದೆ ರೇವಣ್ಣನನ್ನು ಬಂಧಿಸಿ, ಜೈಲಿಗಟ್ಟಬೇಕು. ಅವರಿಗೆ ಓನ್ಲೀ ಜೈಲ್, ನೋ ಬೇಲ್’ (ಜೈಲು ಮಾತ್ರ, ಜಾಮೀನು ಇಲ್ಲ) ಆಗಬೇಕು. ಇದೇ ನಮ್ಮ ಪ್ರಮುಖ ಒತ್ತಾಯ. ರೇವಣ್ಣ ಕುಟುಂಬ ತನಿಖೆಯಲ್ಲಿ ತಮ್ಮ ಪ್ರಭಾವವನ್ನು ಬಳಸಬಹುದು. ಕರ್ನಾಟಕ ಸರ್ಕಾರಕ್ಕೆ ನಾವು ಎಚ್ಚರಿಕೆ ನೀಡುತ್ತಿದ್ದೇವೆ. ಆರೋಪಿಗಳಿಗೆ ತಪ್ಪಿಸಿಕೊಳ್ಳಲು ಅವಕಾಶ ನೀಡಬಾರದು. ಅವರನ್ನು ಜೈಲಿಗಟ್ಟಬೇಕು” ಎಂದು ಒತ್ತಾಯಿಸಿದರು.

“ಸಂತ್ರಸ್ತ ಮಹಿಳೆಯರೊಂದಿಗೆ ನಾವಿದ್ದೇವೆ. ಅವರೊಂದಿಗೆ ಕೊನೆವರೆಗೂ ಹೋರಾಡುತ್ತೇವೆ. ಅವರಿಗೆ ನ್ಯಾಯ ಸಿಗುವವರೆಗೂ ಹೋರಾಟ ನಡೆಯುತ್ತದೆ. ಸಂತ್ರಸ್ತೆಯರು ಎದೆಗುಂದಬೇಕಿಲ್ಲ” ಎಂದು ಬಲಿಪಶುಗಳಿಗೆ ಧೈರ್ಯ ತುಂಬುವ ಮಾತನಾಡಿದರು.

“ಸರ್ಕಾರಿ ಅಧಿಕಾರಿಗಳು, ಕಾರ್ಯಕರ್ತರು ಅಸಹಾಯಕ ಹೆಣ್ನುಮಕ್ಕಳು ಸಣ್ಣ ಪುಟ್ಟ ಸಹಾಯ ಕೇಳಲು ಬಂದಾಗ ಅವರ ಮೇಲೆ ರೇವಣ್ಣ ಮತ್ತು ಆತನ ಪುತ್ರ ದೌರ್ಜನ್ಯ ಎಸಗಿದ್ದಾರೆ. ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಒದಗಿಸಬೇಕು. ಪರಿಹಾರ ನೀಡಬೇಕು. ಆಪ್ತ ಸಮಾಲೋಚನೆ ಒದಗಿಸಬೇಕು” ಎಂದು ಆಗ್ರಹಿಸಿದರು.

ಪಾಳೆಗಾರಿಕೆ ನಡೆಸುತ್ತಿರುವ ರೇವಣ್ಣ ಕುಟುಂಬದ ಅವನತಿಯಾಗಬೇಕು:

ದೇಶದಲ್ಲಿ ಮೂರು ಉತ್ಕೃಷ್ಟ ಸತ್ಯಾಗ್ರಹಗಳು ನಡೆದಿವೆ. ಒಂದು, ಅಂಬೇಡ್ಕರ್ ನೇತೃತ್ವದ ಮಹಾರ್ ಸತ್ಯಾಗ್ರಹ. ಎರಡು, ದಂಡಿ ಉಪ್ಪಿನ ಸತ್ಯಾಗ್ರಹ. ಎರಡನೆಯದು, 2020-21ರ ರೈತ ಹೋರಾಟ. ಇವು ದೇಶ ಕಂಡ ಐತಿಹಾಸಿಕ ಹೋರಾಟಗಳು. ರೈತರು ಒಂದು ವರ್ಷಗಳ ನಿರಂತರ ಹೋರಾಟ ಮಾಡಿ, ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಮಾಡಿದರು. ಇವತ್ತು, ಹಾಸನದಲ್ಲಿ ನಡೆದಿರುವ ಈ ಲೈಂಗಿಕ ಹಗರಣದ ವಿರುದ್ಧದ ಹೋರಾಟವು ಅಂತಹ ಐತಿಹಾಸಿಕವಾಗಿ ಮುನ್ನಡೆಯಬೇಕು ಎಂದು ಹಿರಿಯ ಹೋರಾಟಗಾರ ಎಸ್.ಆರ್ ಹಿರೇಮಠ್ ಹೇಳಿದರು.

ಹಾಸನದಲ್ಲಿ ನಡೆದ ‘ಹೋರಾಟದ ನಡಿಗೆ, ಹಾಸನ ಕಡೆಗೆ’ ಬೃಹತ್ ಹೋರಾಟದಲ್ಲಿ ಅವರು ಮಾತನಾಡಿದರು. “ಹಾಸನವನ್ನು ತಮ್ಮ ‘ತಮ್ಮ ರಿಪಬ್ಲಿಕ್’ ಮಾಡಿಕೊಂಡು, ಪಾಳೆಗಾರಿಕೆ ನಡೆಸುತ್ತಿರುವ ರೇವಣ್ಣ ಕುಟುಂಬದ ಅವನತಿಯಾಗಬೇಕು. ಪಾಳೆಗಾರಿಕೆಯನ್ನು ಕೊನೆಗಾಣಿಸಲು ವ್ಯವಸ್ಥಿತ ಹೋರಾಟ ನಡೆಬೇಕು. ಬಳ್ಳಾರಿಯ ಪಾಳೆಗಾರಿಕೆಯನ್ನು ಮುರಿದಂತೆ, ಹಾಸನದಲ್ಲಿರುವ ಪಾಳೆಗಾರಿಕೆಯನ್ನು ಮುಗಿಸಬೇಕು” ಎಂದರು.

“ಅತ್ಯಾಚಾರ, ಅನ್ಯಾಯ ಮಾಡಿದವರ ವಿರುದ್ಧ ಸಂತ್ರಸ್ತ ಮಹಿಳೆಯರು ಮುಂದೆ ಬಂದು ಹೋರಾಟ ನಡೆಸಬೇಕು. ತಮ್ಮ ಮೇಲಾದ ದೌರ್ಜನ್ಯಗಳ ವಿರುದ್ಧ ಗಟ್ಟಿಯಾಗಿ ಮಾತನಾಡಬೇಕು. ಸರ್ಕಾರ ನಡೆಸುತ್ತಿರುವವರು ಹಾಸನಕ್ಕೆ ಬರಬೇಕು. ಸಂತ್ರಸ್ತೆಯರಿಗೆ ಧೈರ್ಯ ತುಂಬಬೇಕು. ನ್ಯಾಯ ಕೊಡಿಸುವ ಭರವಸೆ ನೀಡಬೇಕು. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಪ್ರಜ್ವಲ್ ವಿರುದ್ಧ 400 ಎಫ್ಐಆರ್‌ ದಾಖಲಿಸಬೇಕು: 

ಪ್ರಜ್ವಲ್ ರೇವಣ್ಣ ಅವರನ್ನು ಭಯೋತ್ಪಾದಕನಾಗಿ ಹೆಸರಿಸಬೇಕು. 400 ಮಂದಿ ಸಂತ್ರಸ್ತೆಯರಿದ್ದಾರೆ ಎಂದು ಹೇಳಲಾಗಿದೆ. ಪ್ರಜ್ವಲ್ ವಿರುದ್ಧ 400 ಎಫ್ಐಆರ್‌ಗಳನ್ನು ದಾಖಲಿಸಬೇಕು. ಕಾನೂನು ಕ್ರಮ ಕೈಗೊಳ್ಳಬೇಕು. ಸಪ್ರತಿ ಸಂತ್ರಸ್ತೆಯರಿಗೆ ₹1 ಕೋಟಿ ಪರಿಹಾರ ನೀಡಬೇಕು. ರೇವಣ್ಣನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಆದರೆ, ರಾಜ್ಯ ಸರ್ಕಾರ ಹೈಕೋರ್ಟಿನಲ್ಲಿ ಜಾಮೀನನ್ನು ಪ್ರಶ್ನಿಸಿಲ್ಲ. ಪ್ರಜ್ವಲ್‌ನನ್ನೂ ಇದೇ ರೀತಿ ಜಾಮೀನಿನ ಮೇಲೆ ಬಿಟ್ಟುಬಿಡುವ ಸಾಧ್ಯತೆ ಇದೆ. ಹೀಗಾಗಿ, ನಾವು ಬೃಹತ್ ಹೋರಾಟ ನಡೆಸಬೇಕು ಎಂದು ಹಿರಿಯ ವಕೀಲ ಎಸ್ ಬಾಲನ್ ಹೇಳಿದ್ದಾರೆ.

ಸರ್ಕಾರಗಳು ರೇವಣ್ಣ ಮತ್ತು ಆತನ ಪುತ್ರ ಪ್ರಜ್ವಲ್ ರೇವಣ್ಣನನ್ನು ರಕ್ಷಿಸುತ್ತಿರುವ ಸಾಧ್ಯತೆಗಳಿವೆ. ಪ್ರಜ್ವಲ್ ಸೈಕೋ ಪಾತ್ ಇದ್ದಂತಿದ್ದಾನೆ. ಆತನನ್ನು ಬಂಧಿಸಿ, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ; ‘ಹೋರಾಟದ ನಡಿಗೆ, ಹಾಸನದ ಕಡೆಗೆ..’; ಪ್ರಜ್ವಲ್ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....