Homeಕರ್ನಾಟಕ'ಓನ್ಲೀ ಜೈಲ್, ನೋ ಬೇಲ್’ ಎಂದು ಪ್ರಜ್ವಲ್ ರೇವಣ್ಣನಿಗೆ ಸರ್ಕಾರ ಹೇಳಬೇಕು: ಸುಭಾಷಿಣಿ ಅಲಿ

‘ಓನ್ಲೀ ಜೈಲ್, ನೋ ಬೇಲ್’ ಎಂದು ಪ್ರಜ್ವಲ್ ರೇವಣ್ಣನಿಗೆ ಸರ್ಕಾರ ಹೇಳಬೇಕು: ಸುಭಾಷಿಣಿ ಅಲಿ

ಕೇಂದ್ರದ ಬಿಜೆಪಿ ಸರ್ಕಾರ 'ಬಲತ್ಕಾರಿಗಳ ಬಚಾವು' ಮಾಡುವ ಸರ್ಕಾರವಾಗಿದೆ

- Advertisement -
- Advertisement -

“ಹಾಸನ ಸಂಸದ ಪ್ರಜ್ವಲ್ ರೇವಣ್ಣ ನಡೆಸಿರುವ ಲೈಂಗಿಕ ದಬ್ಬಾಳಿಕೆಯನ್ನು ಖಂಡಿಸಿ, ಸಂತ್ರಸ್ತೆಯರಿಗೆ ಧೈರ್ಯ ತುಂಬಲು ನಾವಿಲ್ಲಿದ್ದೇವೆ. ರೇವಣ್ಣ ಕುಟುಂಬವು ರಾಜಕೀಯ, ಹಣ ಬಲದಿಂದ ನಡೆಸುವ ಅವ್ಯವಹಾರಗಳಿಗೆ, ದರ್ಪಕ್ಕೆ ಇನ್ನು ಉಳಿಗಾಲವಿಲ್ಲ. ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ‘ಬಲತ್ಕಾರಿಗಳ ಬಚಾವು’ ಮಾಡುವ ಸರ್ಕಾರವಾಗಿದೆ. ಆ ಸರ್ಕಾರವನ್ನು ಜೂನ್ 4ರ ನಂತರ ಕೆಳಗಿಸಬೇಕು” ಎಂದು ಮಹಿಳಾ ಹೋರಾಟಗಾರ್ತಿ ಸುಭಾಷಿಣಿ ಅಲಿ ಹೇಳಿದ್ದಾರೆ.

ಹಾಸನದಲ್ಲಿ ಪ್ರಜ್ವಲ್ ರೇವಣ್ಣನ ಬಂಧನಕ್ಕೆ ಆಗ್ರಹಿಸಿ ನಡೆಯುತ್ತಿರುವ ‘ಹೋರಾಟದ ನಡಿಗೆ, ಹಾಸನದ ಕಡೆಗೆ..’ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, “ಶತಮಾನಗಳಿಂದಲೂ ಮಹಿಳಾ ಸಂಘಟನೆ ಸಂಘರ್ಷ ಮಾಡುತ್ತಿದೆ. ಸಂವಿಧಾನ ಜಾರಿಯಾದ ನಂತರವೂ ದೇಶದ ನಾನಾ ಭಾಗಗಳಲ್ಲಿ ಮಹಿಳೆಯರ ಮೇಲೆ ದಬ್ಬಾಳಿಕೆ ನಡೆಯುತ್ತಲೇ ಇದೆ. ಭಾರತದಲ್ಲಿ ಸಾವಂತವಾದ, ಪುರಷವಾದ ಬೇರೂರಿದೆ. ಜೊತೆಗೆ, ಬಂಡವಾಳ ಮತ್ತು ಮತೀಯವಾದವೂ ಸೇರಿಕೊಂಡಿದೆ. ಇವುಗಳನ್ನು ಒಡೆಯದಿದ್ದರೆ, ನಮಗಾರಿಗೂ ಉಳಿವಿಲ್ಲ” ಎಂದರು.

“ಪ್ರಜ್ವಲ್ ರೇವಣ್ಣ ಮತ್ತು ಆತನ ತಂದೆ ರೇವಣ್ಣನನ್ನು ಬಂಧಿಸಿ, ಜೈಲಿಗಟ್ಟಬೇಕು. ಅವರಿಗೆ ಓನ್ಲೀ ಜೈಲ್, ನೋ ಬೇಲ್’ (ಜೈಲು ಮಾತ್ರ, ಜಾಮೀನು ಇಲ್ಲ) ಆಗಬೇಕು. ಇದೇ ನಮ್ಮ ಪ್ರಮುಖ ಒತ್ತಾಯ. ರೇವಣ್ಣ ಕುಟುಂಬ ತನಿಖೆಯಲ್ಲಿ ತಮ್ಮ ಪ್ರಭಾವವನ್ನು ಬಳಸಬಹುದು. ಕರ್ನಾಟಕ ಸರ್ಕಾರಕ್ಕೆ ನಾವು ಎಚ್ಚರಿಕೆ ನೀಡುತ್ತಿದ್ದೇವೆ. ಆರೋಪಿಗಳಿಗೆ ತಪ್ಪಿಸಿಕೊಳ್ಳಲು ಅವಕಾಶ ನೀಡಬಾರದು. ಅವರನ್ನು ಜೈಲಿಗಟ್ಟಬೇಕು” ಎಂದು ಒತ್ತಾಯಿಸಿದರು.

“ಸಂತ್ರಸ್ತ ಮಹಿಳೆಯರೊಂದಿಗೆ ನಾವಿದ್ದೇವೆ. ಅವರೊಂದಿಗೆ ಕೊನೆವರೆಗೂ ಹೋರಾಡುತ್ತೇವೆ. ಅವರಿಗೆ ನ್ಯಾಯ ಸಿಗುವವರೆಗೂ ಹೋರಾಟ ನಡೆಯುತ್ತದೆ. ಸಂತ್ರಸ್ತೆಯರು ಎದೆಗುಂದಬೇಕಿಲ್ಲ” ಎಂದು ಬಲಿಪಶುಗಳಿಗೆ ಧೈರ್ಯ ತುಂಬುವ ಮಾತನಾಡಿದರು.

“ಸರ್ಕಾರಿ ಅಧಿಕಾರಿಗಳು, ಕಾರ್ಯಕರ್ತರು ಅಸಹಾಯಕ ಹೆಣ್ನುಮಕ್ಕಳು ಸಣ್ಣ ಪುಟ್ಟ ಸಹಾಯ ಕೇಳಲು ಬಂದಾಗ ಅವರ ಮೇಲೆ ರೇವಣ್ಣ ಮತ್ತು ಆತನ ಪುತ್ರ ದೌರ್ಜನ್ಯ ಎಸಗಿದ್ದಾರೆ. ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಒದಗಿಸಬೇಕು. ಪರಿಹಾರ ನೀಡಬೇಕು. ಆಪ್ತ ಸಮಾಲೋಚನೆ ಒದಗಿಸಬೇಕು” ಎಂದು ಆಗ್ರಹಿಸಿದರು.

ಪಾಳೆಗಾರಿಕೆ ನಡೆಸುತ್ತಿರುವ ರೇವಣ್ಣ ಕುಟುಂಬದ ಅವನತಿಯಾಗಬೇಕು:

ದೇಶದಲ್ಲಿ ಮೂರು ಉತ್ಕೃಷ್ಟ ಸತ್ಯಾಗ್ರಹಗಳು ನಡೆದಿವೆ. ಒಂದು, ಅಂಬೇಡ್ಕರ್ ನೇತೃತ್ವದ ಮಹಾರ್ ಸತ್ಯಾಗ್ರಹ. ಎರಡು, ದಂಡಿ ಉಪ್ಪಿನ ಸತ್ಯಾಗ್ರಹ. ಎರಡನೆಯದು, 2020-21ರ ರೈತ ಹೋರಾಟ. ಇವು ದೇಶ ಕಂಡ ಐತಿಹಾಸಿಕ ಹೋರಾಟಗಳು. ರೈತರು ಒಂದು ವರ್ಷಗಳ ನಿರಂತರ ಹೋರಾಟ ಮಾಡಿ, ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಮಾಡಿದರು. ಇವತ್ತು, ಹಾಸನದಲ್ಲಿ ನಡೆದಿರುವ ಈ ಲೈಂಗಿಕ ಹಗರಣದ ವಿರುದ್ಧದ ಹೋರಾಟವು ಅಂತಹ ಐತಿಹಾಸಿಕವಾಗಿ ಮುನ್ನಡೆಯಬೇಕು ಎಂದು ಹಿರಿಯ ಹೋರಾಟಗಾರ ಎಸ್.ಆರ್ ಹಿರೇಮಠ್ ಹೇಳಿದರು.

ಹಾಸನದಲ್ಲಿ ನಡೆದ ‘ಹೋರಾಟದ ನಡಿಗೆ, ಹಾಸನ ಕಡೆಗೆ’ ಬೃಹತ್ ಹೋರಾಟದಲ್ಲಿ ಅವರು ಮಾತನಾಡಿದರು. “ಹಾಸನವನ್ನು ತಮ್ಮ ‘ತಮ್ಮ ರಿಪಬ್ಲಿಕ್’ ಮಾಡಿಕೊಂಡು, ಪಾಳೆಗಾರಿಕೆ ನಡೆಸುತ್ತಿರುವ ರೇವಣ್ಣ ಕುಟುಂಬದ ಅವನತಿಯಾಗಬೇಕು. ಪಾಳೆಗಾರಿಕೆಯನ್ನು ಕೊನೆಗಾಣಿಸಲು ವ್ಯವಸ್ಥಿತ ಹೋರಾಟ ನಡೆಬೇಕು. ಬಳ್ಳಾರಿಯ ಪಾಳೆಗಾರಿಕೆಯನ್ನು ಮುರಿದಂತೆ, ಹಾಸನದಲ್ಲಿರುವ ಪಾಳೆಗಾರಿಕೆಯನ್ನು ಮುಗಿಸಬೇಕು” ಎಂದರು.

“ಅತ್ಯಾಚಾರ, ಅನ್ಯಾಯ ಮಾಡಿದವರ ವಿರುದ್ಧ ಸಂತ್ರಸ್ತ ಮಹಿಳೆಯರು ಮುಂದೆ ಬಂದು ಹೋರಾಟ ನಡೆಸಬೇಕು. ತಮ್ಮ ಮೇಲಾದ ದೌರ್ಜನ್ಯಗಳ ವಿರುದ್ಧ ಗಟ್ಟಿಯಾಗಿ ಮಾತನಾಡಬೇಕು. ಸರ್ಕಾರ ನಡೆಸುತ್ತಿರುವವರು ಹಾಸನಕ್ಕೆ ಬರಬೇಕು. ಸಂತ್ರಸ್ತೆಯರಿಗೆ ಧೈರ್ಯ ತುಂಬಬೇಕು. ನ್ಯಾಯ ಕೊಡಿಸುವ ಭರವಸೆ ನೀಡಬೇಕು. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಪ್ರಜ್ವಲ್ ವಿರುದ್ಧ 400 ಎಫ್ಐಆರ್‌ ದಾಖಲಿಸಬೇಕು: 

ಪ್ರಜ್ವಲ್ ರೇವಣ್ಣ ಅವರನ್ನು ಭಯೋತ್ಪಾದಕನಾಗಿ ಹೆಸರಿಸಬೇಕು. 400 ಮಂದಿ ಸಂತ್ರಸ್ತೆಯರಿದ್ದಾರೆ ಎಂದು ಹೇಳಲಾಗಿದೆ. ಪ್ರಜ್ವಲ್ ವಿರುದ್ಧ 400 ಎಫ್ಐಆರ್‌ಗಳನ್ನು ದಾಖಲಿಸಬೇಕು. ಕಾನೂನು ಕ್ರಮ ಕೈಗೊಳ್ಳಬೇಕು. ಸಪ್ರತಿ ಸಂತ್ರಸ್ತೆಯರಿಗೆ ₹1 ಕೋಟಿ ಪರಿಹಾರ ನೀಡಬೇಕು. ರೇವಣ್ಣನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಆದರೆ, ರಾಜ್ಯ ಸರ್ಕಾರ ಹೈಕೋರ್ಟಿನಲ್ಲಿ ಜಾಮೀನನ್ನು ಪ್ರಶ್ನಿಸಿಲ್ಲ. ಪ್ರಜ್ವಲ್‌ನನ್ನೂ ಇದೇ ರೀತಿ ಜಾಮೀನಿನ ಮೇಲೆ ಬಿಟ್ಟುಬಿಡುವ ಸಾಧ್ಯತೆ ಇದೆ. ಹೀಗಾಗಿ, ನಾವು ಬೃಹತ್ ಹೋರಾಟ ನಡೆಸಬೇಕು ಎಂದು ಹಿರಿಯ ವಕೀಲ ಎಸ್ ಬಾಲನ್ ಹೇಳಿದ್ದಾರೆ.

ಸರ್ಕಾರಗಳು ರೇವಣ್ಣ ಮತ್ತು ಆತನ ಪುತ್ರ ಪ್ರಜ್ವಲ್ ರೇವಣ್ಣನನ್ನು ರಕ್ಷಿಸುತ್ತಿರುವ ಸಾಧ್ಯತೆಗಳಿವೆ. ಪ್ರಜ್ವಲ್ ಸೈಕೋ ಪಾತ್ ಇದ್ದಂತಿದ್ದಾನೆ. ಆತನನ್ನು ಬಂಧಿಸಿ, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ; ‘ಹೋರಾಟದ ನಡಿಗೆ, ಹಾಸನದ ಕಡೆಗೆ..’; ಪ್ರಜ್ವಲ್ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...