Homeಕರ್ನಾಟಕ'ಓನ್ಲೀ ಜೈಲ್, ನೋ ಬೇಲ್’ ಎಂದು ಪ್ರಜ್ವಲ್ ರೇವಣ್ಣನಿಗೆ ಸರ್ಕಾರ ಹೇಳಬೇಕು: ಸುಭಾಷಿಣಿ ಅಲಿ

‘ಓನ್ಲೀ ಜೈಲ್, ನೋ ಬೇಲ್’ ಎಂದು ಪ್ರಜ್ವಲ್ ರೇವಣ್ಣನಿಗೆ ಸರ್ಕಾರ ಹೇಳಬೇಕು: ಸುಭಾಷಿಣಿ ಅಲಿ

ಕೇಂದ್ರದ ಬಿಜೆಪಿ ಸರ್ಕಾರ 'ಬಲತ್ಕಾರಿಗಳ ಬಚಾವು' ಮಾಡುವ ಸರ್ಕಾರವಾಗಿದೆ

- Advertisement -
- Advertisement -

“ಹಾಸನ ಸಂಸದ ಪ್ರಜ್ವಲ್ ರೇವಣ್ಣ ನಡೆಸಿರುವ ಲೈಂಗಿಕ ದಬ್ಬಾಳಿಕೆಯನ್ನು ಖಂಡಿಸಿ, ಸಂತ್ರಸ್ತೆಯರಿಗೆ ಧೈರ್ಯ ತುಂಬಲು ನಾವಿಲ್ಲಿದ್ದೇವೆ. ರೇವಣ್ಣ ಕುಟುಂಬವು ರಾಜಕೀಯ, ಹಣ ಬಲದಿಂದ ನಡೆಸುವ ಅವ್ಯವಹಾರಗಳಿಗೆ, ದರ್ಪಕ್ಕೆ ಇನ್ನು ಉಳಿಗಾಲವಿಲ್ಲ. ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ‘ಬಲತ್ಕಾರಿಗಳ ಬಚಾವು’ ಮಾಡುವ ಸರ್ಕಾರವಾಗಿದೆ. ಆ ಸರ್ಕಾರವನ್ನು ಜೂನ್ 4ರ ನಂತರ ಕೆಳಗಿಸಬೇಕು” ಎಂದು ಮಹಿಳಾ ಹೋರಾಟಗಾರ್ತಿ ಸುಭಾಷಿಣಿ ಅಲಿ ಹೇಳಿದ್ದಾರೆ.

ಹಾಸನದಲ್ಲಿ ಪ್ರಜ್ವಲ್ ರೇವಣ್ಣನ ಬಂಧನಕ್ಕೆ ಆಗ್ರಹಿಸಿ ನಡೆಯುತ್ತಿರುವ ‘ಹೋರಾಟದ ನಡಿಗೆ, ಹಾಸನದ ಕಡೆಗೆ..’ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, “ಶತಮಾನಗಳಿಂದಲೂ ಮಹಿಳಾ ಸಂಘಟನೆ ಸಂಘರ್ಷ ಮಾಡುತ್ತಿದೆ. ಸಂವಿಧಾನ ಜಾರಿಯಾದ ನಂತರವೂ ದೇಶದ ನಾನಾ ಭಾಗಗಳಲ್ಲಿ ಮಹಿಳೆಯರ ಮೇಲೆ ದಬ್ಬಾಳಿಕೆ ನಡೆಯುತ್ತಲೇ ಇದೆ. ಭಾರತದಲ್ಲಿ ಸಾವಂತವಾದ, ಪುರಷವಾದ ಬೇರೂರಿದೆ. ಜೊತೆಗೆ, ಬಂಡವಾಳ ಮತ್ತು ಮತೀಯವಾದವೂ ಸೇರಿಕೊಂಡಿದೆ. ಇವುಗಳನ್ನು ಒಡೆಯದಿದ್ದರೆ, ನಮಗಾರಿಗೂ ಉಳಿವಿಲ್ಲ” ಎಂದರು.

“ಪ್ರಜ್ವಲ್ ರೇವಣ್ಣ ಮತ್ತು ಆತನ ತಂದೆ ರೇವಣ್ಣನನ್ನು ಬಂಧಿಸಿ, ಜೈಲಿಗಟ್ಟಬೇಕು. ಅವರಿಗೆ ಓನ್ಲೀ ಜೈಲ್, ನೋ ಬೇಲ್’ (ಜೈಲು ಮಾತ್ರ, ಜಾಮೀನು ಇಲ್ಲ) ಆಗಬೇಕು. ಇದೇ ನಮ್ಮ ಪ್ರಮುಖ ಒತ್ತಾಯ. ರೇವಣ್ಣ ಕುಟುಂಬ ತನಿಖೆಯಲ್ಲಿ ತಮ್ಮ ಪ್ರಭಾವವನ್ನು ಬಳಸಬಹುದು. ಕರ್ನಾಟಕ ಸರ್ಕಾರಕ್ಕೆ ನಾವು ಎಚ್ಚರಿಕೆ ನೀಡುತ್ತಿದ್ದೇವೆ. ಆರೋಪಿಗಳಿಗೆ ತಪ್ಪಿಸಿಕೊಳ್ಳಲು ಅವಕಾಶ ನೀಡಬಾರದು. ಅವರನ್ನು ಜೈಲಿಗಟ್ಟಬೇಕು” ಎಂದು ಒತ್ತಾಯಿಸಿದರು.

“ಸಂತ್ರಸ್ತ ಮಹಿಳೆಯರೊಂದಿಗೆ ನಾವಿದ್ದೇವೆ. ಅವರೊಂದಿಗೆ ಕೊನೆವರೆಗೂ ಹೋರಾಡುತ್ತೇವೆ. ಅವರಿಗೆ ನ್ಯಾಯ ಸಿಗುವವರೆಗೂ ಹೋರಾಟ ನಡೆಯುತ್ತದೆ. ಸಂತ್ರಸ್ತೆಯರು ಎದೆಗುಂದಬೇಕಿಲ್ಲ” ಎಂದು ಬಲಿಪಶುಗಳಿಗೆ ಧೈರ್ಯ ತುಂಬುವ ಮಾತನಾಡಿದರು.

“ಸರ್ಕಾರಿ ಅಧಿಕಾರಿಗಳು, ಕಾರ್ಯಕರ್ತರು ಅಸಹಾಯಕ ಹೆಣ್ನುಮಕ್ಕಳು ಸಣ್ಣ ಪುಟ್ಟ ಸಹಾಯ ಕೇಳಲು ಬಂದಾಗ ಅವರ ಮೇಲೆ ರೇವಣ್ಣ ಮತ್ತು ಆತನ ಪುತ್ರ ದೌರ್ಜನ್ಯ ಎಸಗಿದ್ದಾರೆ. ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಒದಗಿಸಬೇಕು. ಪರಿಹಾರ ನೀಡಬೇಕು. ಆಪ್ತ ಸಮಾಲೋಚನೆ ಒದಗಿಸಬೇಕು” ಎಂದು ಆಗ್ರಹಿಸಿದರು.

ಪಾಳೆಗಾರಿಕೆ ನಡೆಸುತ್ತಿರುವ ರೇವಣ್ಣ ಕುಟುಂಬದ ಅವನತಿಯಾಗಬೇಕು:

ದೇಶದಲ್ಲಿ ಮೂರು ಉತ್ಕೃಷ್ಟ ಸತ್ಯಾಗ್ರಹಗಳು ನಡೆದಿವೆ. ಒಂದು, ಅಂಬೇಡ್ಕರ್ ನೇತೃತ್ವದ ಮಹಾರ್ ಸತ್ಯಾಗ್ರಹ. ಎರಡು, ದಂಡಿ ಉಪ್ಪಿನ ಸತ್ಯಾಗ್ರಹ. ಎರಡನೆಯದು, 2020-21ರ ರೈತ ಹೋರಾಟ. ಇವು ದೇಶ ಕಂಡ ಐತಿಹಾಸಿಕ ಹೋರಾಟಗಳು. ರೈತರು ಒಂದು ವರ್ಷಗಳ ನಿರಂತರ ಹೋರಾಟ ಮಾಡಿ, ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಮಾಡಿದರು. ಇವತ್ತು, ಹಾಸನದಲ್ಲಿ ನಡೆದಿರುವ ಈ ಲೈಂಗಿಕ ಹಗರಣದ ವಿರುದ್ಧದ ಹೋರಾಟವು ಅಂತಹ ಐತಿಹಾಸಿಕವಾಗಿ ಮುನ್ನಡೆಯಬೇಕು ಎಂದು ಹಿರಿಯ ಹೋರಾಟಗಾರ ಎಸ್.ಆರ್ ಹಿರೇಮಠ್ ಹೇಳಿದರು.

ಹಾಸನದಲ್ಲಿ ನಡೆದ ‘ಹೋರಾಟದ ನಡಿಗೆ, ಹಾಸನ ಕಡೆಗೆ’ ಬೃಹತ್ ಹೋರಾಟದಲ್ಲಿ ಅವರು ಮಾತನಾಡಿದರು. “ಹಾಸನವನ್ನು ತಮ್ಮ ‘ತಮ್ಮ ರಿಪಬ್ಲಿಕ್’ ಮಾಡಿಕೊಂಡು, ಪಾಳೆಗಾರಿಕೆ ನಡೆಸುತ್ತಿರುವ ರೇವಣ್ಣ ಕುಟುಂಬದ ಅವನತಿಯಾಗಬೇಕು. ಪಾಳೆಗಾರಿಕೆಯನ್ನು ಕೊನೆಗಾಣಿಸಲು ವ್ಯವಸ್ಥಿತ ಹೋರಾಟ ನಡೆಬೇಕು. ಬಳ್ಳಾರಿಯ ಪಾಳೆಗಾರಿಕೆಯನ್ನು ಮುರಿದಂತೆ, ಹಾಸನದಲ್ಲಿರುವ ಪಾಳೆಗಾರಿಕೆಯನ್ನು ಮುಗಿಸಬೇಕು” ಎಂದರು.

“ಅತ್ಯಾಚಾರ, ಅನ್ಯಾಯ ಮಾಡಿದವರ ವಿರುದ್ಧ ಸಂತ್ರಸ್ತ ಮಹಿಳೆಯರು ಮುಂದೆ ಬಂದು ಹೋರಾಟ ನಡೆಸಬೇಕು. ತಮ್ಮ ಮೇಲಾದ ದೌರ್ಜನ್ಯಗಳ ವಿರುದ್ಧ ಗಟ್ಟಿಯಾಗಿ ಮಾತನಾಡಬೇಕು. ಸರ್ಕಾರ ನಡೆಸುತ್ತಿರುವವರು ಹಾಸನಕ್ಕೆ ಬರಬೇಕು. ಸಂತ್ರಸ್ತೆಯರಿಗೆ ಧೈರ್ಯ ತುಂಬಬೇಕು. ನ್ಯಾಯ ಕೊಡಿಸುವ ಭರವಸೆ ನೀಡಬೇಕು. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಪ್ರಜ್ವಲ್ ವಿರುದ್ಧ 400 ಎಫ್ಐಆರ್‌ ದಾಖಲಿಸಬೇಕು: 

ಪ್ರಜ್ವಲ್ ರೇವಣ್ಣ ಅವರನ್ನು ಭಯೋತ್ಪಾದಕನಾಗಿ ಹೆಸರಿಸಬೇಕು. 400 ಮಂದಿ ಸಂತ್ರಸ್ತೆಯರಿದ್ದಾರೆ ಎಂದು ಹೇಳಲಾಗಿದೆ. ಪ್ರಜ್ವಲ್ ವಿರುದ್ಧ 400 ಎಫ್ಐಆರ್‌ಗಳನ್ನು ದಾಖಲಿಸಬೇಕು. ಕಾನೂನು ಕ್ರಮ ಕೈಗೊಳ್ಳಬೇಕು. ಸಪ್ರತಿ ಸಂತ್ರಸ್ತೆಯರಿಗೆ ₹1 ಕೋಟಿ ಪರಿಹಾರ ನೀಡಬೇಕು. ರೇವಣ್ಣನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಆದರೆ, ರಾಜ್ಯ ಸರ್ಕಾರ ಹೈಕೋರ್ಟಿನಲ್ಲಿ ಜಾಮೀನನ್ನು ಪ್ರಶ್ನಿಸಿಲ್ಲ. ಪ್ರಜ್ವಲ್‌ನನ್ನೂ ಇದೇ ರೀತಿ ಜಾಮೀನಿನ ಮೇಲೆ ಬಿಟ್ಟುಬಿಡುವ ಸಾಧ್ಯತೆ ಇದೆ. ಹೀಗಾಗಿ, ನಾವು ಬೃಹತ್ ಹೋರಾಟ ನಡೆಸಬೇಕು ಎಂದು ಹಿರಿಯ ವಕೀಲ ಎಸ್ ಬಾಲನ್ ಹೇಳಿದ್ದಾರೆ.

ಸರ್ಕಾರಗಳು ರೇವಣ್ಣ ಮತ್ತು ಆತನ ಪುತ್ರ ಪ್ರಜ್ವಲ್ ರೇವಣ್ಣನನ್ನು ರಕ್ಷಿಸುತ್ತಿರುವ ಸಾಧ್ಯತೆಗಳಿವೆ. ಪ್ರಜ್ವಲ್ ಸೈಕೋ ಪಾತ್ ಇದ್ದಂತಿದ್ದಾನೆ. ಆತನನ್ನು ಬಂಧಿಸಿ, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ; ‘ಹೋರಾಟದ ನಡಿಗೆ, ಹಾಸನದ ಕಡೆಗೆ..’; ಪ್ರಜ್ವಲ್ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...