HomeಮುಖಪುಟWFI ಆಡಳಿತ ಮಂಡಳಿ ಅಮಾನತುಗೊಂಡಿಲ್ಲ, ಗೊಂದಲ ಸೃಷ್ಟಿಸಲು ಚಟುವಟಿಕೆ ಸ್ಥಗಿತ: ಪ್ರಿಯಾಂಕಾ ಗಾಂಧಿ

WFI ಆಡಳಿತ ಮಂಡಳಿ ಅಮಾನತುಗೊಂಡಿಲ್ಲ, ಗೊಂದಲ ಸೃಷ್ಟಿಸಲು ಚಟುವಟಿಕೆ ಸ್ಥಗಿತ: ಪ್ರಿಯಾಂಕಾ ಗಾಂಧಿ

- Advertisement -
- Advertisement -

ಭಾರತೀಯ ಕುಸ್ತಿ ಫೇಡೆರೇಶನ್‌ (ಡಬ್ಲ್ಯುಎಫ್‌ಐ)ಯ ನೂತನ ಆಡಳಿತ ಮಂಡಳಿಯನ್ನು ಕೇಂದ್ರ ಸರ್ಕಾರ ಅಮಾನತು ಮಾಡಿಲ್ಲ, ಬದಲಿಗೆ ಗೊಂದಲ ಸೃಷ್ಟಿಸುವ ಸಲುವಾಗಿ ಅದರ ಚಟುವಟಿಕೆಯನ್ನು ಸ್ಥಗಿತಗೊಳಿಸಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

ಆಕ್ರೋಶಗೊಂಡ ಮಹಿಳಾ ಕುಸ್ತಿಪಟುಗಳ ಧ್ವನಿ ಅಡಗಿಸುವ ಸಲುವಾಗಿ ಡಬ್ಲ್ಯುಎಫ್‌ಐನ ನೂತನ ಆಡಳಿತ ಮಂಡಳಿಯನ್ನು ಅಮಾನತು ಮಾಡಿರುವುದಾಗಿ ಕೇಂದ್ರ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ಎಕ್ಸ್‌ನಲ್ಲಿ ಪ್ರಿಯಾಂಕಾ ಗಾಂಧಿ ಪೋಸ್ಟ್ ಮಾಡಿದ್ದಾರೆ.

ಲೈಂಗಿಕ ಕಿರುಕುಳದ ಆರೋಪಿ, ಡಬ್ಲ್ಯುಎಫ್‌ಐನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರನ್ನು ರಕ್ಷಿಸುವ ಸಲುವಾಗಿ ಕೇಂದ್ರ ಸರ್ಕಾರ ಸುಳ್ಳು ಹೇಳ್ತಿದೆ. ಬ್ರಿಜ್ ಭೂಷಣ್ ವಿರುದ್ದ ಆರೋಪ ಕೇಳಿ ಬಂದಾಗಿನಿಂದ ಅವರನ್ನು ಸರ್ಕಾರ ಅವರ ಪರ ನಿಂತಿದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ದೇಶದ ಖ್ಯಾತ ಮಹಿಳಾ ಕುಸ್ತಿಪಟುಗಳು ಕಿರುಕುಳದ ಆರೋಪ ಮಾಡಿದಾಗ ಕೇಂದ್ರ ಸರ್ಕಾರ ಅವರ ಪರ ನಿಲ್ಲಬೇಕಿತ್ತು. ಆದರೆ, ಸರ್ಕಾರ ಆರೋಪ ಮಾಡಿದವರಿಗೆ ಕಿರುಕುಳ ಕೊಟ್ಟು ಆರೋಪಿತನಿಗೆ ಉನ್ನತ ಸ್ಥಾನ ನೀಡ್ತಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ಈ ವಿಷಯದ ಬಗ್ಗೆ ತಲೇನೆ ಕೆಡಿಸಿಕೊಂಡಿಲ್ಲ ಎಂದು ಕಿಡಿಕಾರಿದ್ದಾರೆ.

ಆರೋಪಿ ಬಿಜೆಪಿ ಬ್ರಿಜ್ ಭೂಷಣ್ ಸಿಂಗ್ ಅವರು, ಮುಂದಿನ ರಾಷ್ಟ್ರೀಯ ಮಟ್ಟದ ಸ್ಪರ್ಧೆಗಳನ್ನು ಅವರ ಸ್ವಂತ ಜಿಲ್ಲೆಯಲ್ಲಿ, ಅವರ ಸ್ವಂತ ಕಾಲೇಜು ಮೈದಾನದಲ್ಲಿ ನಡೆಸಲು ಮುಂದಾಗಿರುವುದು ‘ಅಹಂಕಾರದ ಪರಮಾವಧಿ’ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಅನ್ಯಾಯ ಸಹಿಸಲಾಗದೆ ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್ ಕುಸ್ತಿಯನ್ನೇ ತೊರೆದಿದ್ದಾರೆ. ಇತರ ಕ್ರೀಡಾಪಟುಗಳು ತಮ್ಮ ಪ್ರಶಸ್ತಿಗಳನ್ನು ಹಿಂದಿರುಗಿಸಲು ಪ್ರಾರಂಭಿಸಿದ್ದಾರೆ. ಹಾಗಾಗಿ ಸರ್ಕಾರ ವದಂತಿಗಳನ್ನು ಹರಡುತ್ತಿದೆ. ಮಹಿಳೆಯರ ಮೇಲೆ ಎಲ್ಲೇ ದೌರ್ಜನ್ಯ ನಡೆದರೂ, ಸರ್ಕಾರ ತನ್ನ ಶಕ್ತಿಯಿಂದ ಆರೋಪಿಗಳನ್ನು ರಕ್ಷಿಸುತ್ತಿದೆ, ಸಂತ್ರಸ್ತರನ್ನು ಹಿಂಸಿಸುತ್ತಿದೆ. ನಾವು ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳಾ ನಾಯಕತ್ವದ ಬಗ್ಗೆ ಮಾತನಾಡುತ್ತೇವೆ. ಆದರೆ, ಅಧಿಕಾರದಲ್ಲಿರುವವರು ಮಹಿಳೆಯರಿಗೆ ಕಿರುಕುಳ ಕೊಟ್ಟು ಅವರನ್ನು ದಮನ ಮಾಡುವುದರಲ್ಲಿ ನಿರತರಾಗಿದ್ದಾರೆ ಎಂದು ಪ್ರಿಯಾಂಕಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತೀಯ ಕುಸ್ತಿ ಫೇಡೆರೇಶನ್‌(ಡಬ್ಲ್ಯುಎಫ್‌ಐ)ಗೆ ಡಿಸೆಂಬರ್ 21ರಂದು ಚುನಾವಣೆ ನಡೆದಿದ್ದು, ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಡಬ್ಲ್ಯುಎಫ್‌ಐ ಆಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಆದರೆ, ನೂತನ ಸಮಿತಿಯನ್ನು ಕೇಂದ್ರ ಕ್ರೀಡಾ ಇಲಾಖೆ ಅಮಾನತು ಮಾಡಿದೆ ಎಂದು ಹೇಳಲಾಗ್ತಿದೆ.

ಇದನ್ನೂ ಓದಿ : ಕ್ರಿಮಿನಲ್ ಕಾನೂನುಗಳನ್ನು ಬದಲಿಸುವ 3 ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...