Homeಮುಖಪುಟಮಗುವಿನ ಜನನ ನೋಂದಣಿ ವೇಳೆ ಪೋಷಕರ ಧರ್ಮ ದಾಖಲಿಸಲಿದೆ ಸರ್ಕಾರ: ಎನ್‌ಆರ್‌ಸಿ ಹುನ್ನಾರ ಎಂದ ಟಿಎಂಸಿ...

ಮಗುವಿನ ಜನನ ನೋಂದಣಿ ವೇಳೆ ಪೋಷಕರ ಧರ್ಮ ದಾಖಲಿಸಲಿದೆ ಸರ್ಕಾರ: ಎನ್‌ಆರ್‌ಸಿ ಹುನ್ನಾರ ಎಂದ ಟಿಎಂಸಿ ಸಂಸದ

ಎನ್‌ಪಿಆರ್‌ ಬಳಿಕ ಜನನ ನೋಂದಣಿ ಕುರಿತು ಆತಂಕ ವ್ಯಕ್ತಪಡಿಸಿದ ಸಾಕೇತ್ ಗೋಖಲೆ

- Advertisement -
- Advertisement -

ಜನನ ಮತ್ತು ಮರಣ ನೋಂದಣಿ (ತಿದ್ದುಪಡಿ) ಕಾಯ್ದೆ 2023ರ ಪ್ರಕಾರ, ಮಕ್ಕಳ ಜನನ ನೋಂದಣಿ ಮಾಡುವಾಗ ಪೋಷಕರ ಧರ್ಮವನ್ನು ಪ್ರತ್ಯೇಖವಾಗಿ ದಾಖಲಿಸಬೇಕಿದೆ. ಇದು ಹೊಸ ಆತಂಕಕ್ಕೆ ಕಾರಣವಾಗಿದೆ.

ಇದುವರೆಗೆ ಜನನ ನೋಂದಣಿ ಮಾಡುವಾಗ ಮಗುವಿನ ಕುಟುಂಬದ ಧರ್ಮ ಮಾತ್ರ ಉಲ್ಲೇಖಿಸಲಾಗುತ್ತಿತ್ತು. ಆದರೆ, ಕಳೆದ ವರ್ಷ ಆಗಸ್ಟ್‌ 11ರಂದು ಸಂಸತ್‌ನಲ್ಲಿ ಅನುಮೋದನೆಗೊಂಡಿರುವ ತಿದ್ದುಪಡಿ ಕಾಯ್ದೆಯ ಪ್ರಕಾರ, ಮಗುವಿನ ಜನನ ನೋಂದಣಿ ಮಾಡುವಾಗ ತಂದೆ ಮತ್ತು ತಾಯಿಯ ಧರ್ಮಗಳನ್ನು ಸರ್ಕಾರ ಪ್ರತ್ಯೇಖವಾಗಿ ದಾಖಲಿಸಿಕೊಳ್ಳಲಿದೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.

ಈ ವರದಿಯನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ತೃಣಮೂಲ ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸಂಸದ ಸಾಕೇತ್ ಗೋಖಲೆ, “ಇದು ಎನ್‌ಆರ್‌ಸಿ ಜಾರಿಗೊಳಿಸುವ ಹುನ್ನಾರವೇ?” ಎಂಬ ಅನುಮಾನ ಮತ್ತು ಆತಂಕ ವ್ಯಕ್ತಪಡಿಸಿದ್ದಾರೆ.

“ಮೋದಿ ಸರ್ಕಾರವು ಭಾರತೀಯ ಪೌರತ್ವವನ್ನು ಧರ್ಮದೊಂದಿಗೆ ಜೋಡಿಸುತ್ತಿದೆ. ಇದು ಅತ್ಯಂತ ಅಪಾಯಕಾರಿ ಬೆಳವಣಿಗೆ. ಸಿಎಎ ಜಾರಿಗೊಳಿಸುವಾಗ, ಅದು ಯಾವುದೇ ಭಾರತೀಯರ ಪೌರತ್ವ ಕಿತ್ತುಕೊಳ್ಳುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದರು. ಈಗಲೂ ಹೇಳುತ್ತಿದ್ದಾರೆ. ಆದರೆ, ಗೃಹ ಸಚಿವ ಅಮಿತ್ ಶಾ ಅವರು, ಸಿಎಎ ಬಳಿಕ ಎನ್‌ಆರ್‌ಸಿ ಜಾರಿಗೊಳಿಸುವುದಾಗಿ ಈ ಹಿಂದೆಯೇ ಹೇಳಿದ್ದಾರೆ” ಎಂದು ಸಾಕೇತ್ ಗೋಖಲೆ ನೆನಪಿಸಿದ್ದಾರೆ.

“ಇನ್ನು ಮುಂದೆ ಮೋದಿ ಸರ್ಕಾರ ಮಗುವಿನ ಜನನ ನೋಂದಣಿ ವೇಳೆ ಪೋಷಕರ ಧರ್ಮಗಳನ್ನು ಪ್ರತ್ಯೇಖವಾಗಿ ದಾಖಲಿಸಿದೆ ಎನ್ನಲಾಗ್ತಿದೆ. ಇದು ಧರ್ಮಾಧಾರಿತವಾಗಿ ಭಾರತೀಯರ ಪೌರತ್ವ ನಿರ್ಧರಿಸುವ ಎನ್‌ಆರ್‌ಸಿ ಜಾರಿಗೊಳಿಸುವ ಹುನ್ನಾರವಷ್ಟೆ. ಯಾಕೆಂದರೆ…

ಜುಲೈ 1987 ರ ಮೊದಲು ಜನಿಸಿದ ಪೋಷಕರು ತಾವು ಭಾರತೀಯ ನಾಗರಿಕರು ಎಂದು ಸಾಬೀತುಪಡಿಸಲು ಭಾರತದಲ್ಲಿ ಜನಿಸಿದ ಜನನ ಪ್ರಮಾಣಪತ್ರವನ್ನು ನೀಡಬೇಕು.

ಜುಲೈ 1987 ರ ನಂತರ ಜನಿಸಿದ ಪೋಷಕರು ತಮ್ಮ ಪೋಷಕರು ಭಾರತದಲ್ಲಿ ಜನಿಸಿದವರು ಮತ್ತು ಭಾರತೀಯ ಪ್ರಜೆಗಳು ಎಂದು ತೋರಿಸಲು ತಮ್ಮ ಪೋಷಕರ ಜನ್ಮ ಪ್ರಮಾಣಪತ್ರವನ್ನು ನೀಡಬೇಕು.

ಮೇಲಿನ ಮಾನದಂಡಗಳನ್ನು ಬಳಸಿಕೊಂಡು ತಮ್ಮ ಪೌರತ್ವವನ್ನು ಸಾಬೀತುಪಡಿಸಲು ಸಾಧ್ಯವಾಗದವರನ್ನು ಬಂಧನ ಕೇಂದ್ರಗಳಿಗೆ ಕಳುಹಿಸುವ ಸಾಧ್ಯತೆ ಇದೆ. ಒಂದು ವೇಳೆ ಈ ಜನರು ಮುಸ್ಲಿಮರು ಅಲ್ಲ ಎಂದಾದರೆ ನಾನು ಸಿಎಎ ಧನ್ಯವಾದ ಹೇಳುತ್ತೇನೆ ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ. (ಇದರರ್ಥ ಬಲಿಪಶುಗಳು ಖಂಡಿತವಾಗಿ ಮುಸ್ಲಿಮರು ಎಂದಾಗಿದೆ.)

“ಸಿಎಎ ಕುರಿತು ಗುಪ್ತಚರ ಇಲಾಖೆ ಜಂಟಿ ಸಂಸದೀಯ ಸಮಿತಿಗೆ ಹೇಳಿರುವ ಪ್ರಕಾರ, ಅದು ಕೇವಲ 31,313 ಜನರಿಗೆ ಮಾತ್ರ ಪ್ರಯೋಜನವಾಗಲಿದೆ. ಹಾಗಾಗಿ, ಕೇವಲ 31,313 ಜನರಿಗೆ ಉಪಯೋಗವಾಗಲೆಂದು ಸಿಎಎ ಜಾರಿಗೊಳಿಸಿಲ್ಲ. ಸಿಎಎ ಹಿಂದಿನ ಅಜೆಂಡಾ ಎನ್‌ಆರ್‌ಸಿ ಜಾರಿಗೊಳಿಸಿ ಭಾರತೀಯ ಪೌರತ್ವವನ್ನು ಧರ್ಮ ಆಧಾರಿತವಾಗಿಸುವುದಾಗಿದೆ. ಸಿಎಎ ಹಿಂದಿನ ಮೋದಿ ಸರ್ಕಾರ ಕೆಟ್ಟ ಮತ್ತು ದುಷ್ಟ ಅಜೆಂಡಾ ಸ್ಪಷ್ಟವಾಗಿದೆ” ಎಂದು ಸಾಕೇತ್ ಗೋಖಲೆ ತಿಳಿಸಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ರಾಷ್ಟ್ರೀಯ ಜನ ಸಂಖ್ಯಾ ನೋಂದಣಿ (ಎನ್‌ಪಿಆರ್) ಬಗ್ಗೆಯೂ ಕಳವಳ ವ್ಯಕ್ತಪಡಿಸಿದ್ದ ಸಾಕೇತ್ ಗೋಖಲೆ, ಇದು ಗುಪ್ತವಾಗಿ ಎನ್‌ಆರ್‌ಸಿ ಜಾರಿಗೊಳಿಸುವ ಹುನ್ನಾರ ಎಂದಿದ್ದರು.

ಈ ಕುರಿತು ನಾನುಗೌರಿ ಪ್ರಕಟಿಸಿದ್ದ ವರದಿ ಇಲ್ಲಿದೆ

ಒಟ್ಟಾರೆಯಾಗಿ ಹೇಳುವುದಾದರೆ, ಸಿಎಎ ಜಾರಿಗೊಳಿಸಿರುವುದರ ಮೂಲ ಉದ್ದೇಶ ಎನ್‌ಆರ್‌ಸಿ ಜಾರಿಗೊಳಿಸುವುದಾಗಿದೆ ಎಂಬುವುದು ಸಾಕೇತ್ ಗೋಖಲೆ ಅವರ ವಾದ. ಸಿಎಎ ಭಾರತೀಯರ ಪೌರತ್ವ ಕಿತ್ತುಕೊಳ್ಳುವುದಿಲ್ಲ ಎಂದಿರುವ ಸರ್ಕಾರ, ಸಿಎಎ ಬೆನ್ನಲ್ಲೇ ಅದಕ್ಕೆ ಸಂಬಂಧಿಸಿದ ಎನ್‌ಪಿಆರ್ ಮೂಲಕ ಜನಗಣತಿ, ಮಗುವಿನ ಪೋಷಕರ ಧರ್ಮ ನೋಂದಣಿ ಇತ್ಯಾದಿ ಕಾನೂನುಗಳನ್ನು ಗೌಪ್ಯವಾಗಿ ಜಾರಿಗೊಳಿಸುತ್ತಿದೆ. ಈ ಬಗ್ಗೆ ಸಾಮಾನ್ಯ ಜನರಿಗೆ ಬಿಡಿ, ದೇಶದ ಉನ್ನತ ಮಟ್ಟದ ನಾಯಕರಿಗೂ ಮಾಹಿತಿಯಿಲ್ಲ ಎಂಬುದಾಗಿ ಕಳವಳದ ಸಂಗತಿ.

ಇದನ್ನೂ ಓದಿ : ‘ಶೀಘ್ರದಲ್ಲೇ ಹೊರಗೆ ಭೇಟಿಯಾಗುತ್ತೇನೆ..’; ತಿಹಾರ್ ಜೈಲಿನಿಂದ ಪತ್ರ ಬರೆದ ಮನೀಶ್ ಸಿಸೋಡಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...