Homeಮುಖಪುಟಮಗುವಿನ ಜನನ ನೋಂದಣಿ ವೇಳೆ ಪೋಷಕರ ಧರ್ಮ ದಾಖಲಿಸಲಿದೆ ಸರ್ಕಾರ: ಎನ್‌ಆರ್‌ಸಿ ಹುನ್ನಾರ ಎಂದ ಟಿಎಂಸಿ...

ಮಗುವಿನ ಜನನ ನೋಂದಣಿ ವೇಳೆ ಪೋಷಕರ ಧರ್ಮ ದಾಖಲಿಸಲಿದೆ ಸರ್ಕಾರ: ಎನ್‌ಆರ್‌ಸಿ ಹುನ್ನಾರ ಎಂದ ಟಿಎಂಸಿ ಸಂಸದ

ಎನ್‌ಪಿಆರ್‌ ಬಳಿಕ ಜನನ ನೋಂದಣಿ ಕುರಿತು ಆತಂಕ ವ್ಯಕ್ತಪಡಿಸಿದ ಸಾಕೇತ್ ಗೋಖಲೆ

- Advertisement -
- Advertisement -

ಜನನ ಮತ್ತು ಮರಣ ನೋಂದಣಿ (ತಿದ್ದುಪಡಿ) ಕಾಯ್ದೆ 2023ರ ಪ್ರಕಾರ, ಮಕ್ಕಳ ಜನನ ನೋಂದಣಿ ಮಾಡುವಾಗ ಪೋಷಕರ ಧರ್ಮವನ್ನು ಪ್ರತ್ಯೇಖವಾಗಿ ದಾಖಲಿಸಬೇಕಿದೆ. ಇದು ಹೊಸ ಆತಂಕಕ್ಕೆ ಕಾರಣವಾಗಿದೆ.

ಇದುವರೆಗೆ ಜನನ ನೋಂದಣಿ ಮಾಡುವಾಗ ಮಗುವಿನ ಕುಟುಂಬದ ಧರ್ಮ ಮಾತ್ರ ಉಲ್ಲೇಖಿಸಲಾಗುತ್ತಿತ್ತು. ಆದರೆ, ಕಳೆದ ವರ್ಷ ಆಗಸ್ಟ್‌ 11ರಂದು ಸಂಸತ್‌ನಲ್ಲಿ ಅನುಮೋದನೆಗೊಂಡಿರುವ ತಿದ್ದುಪಡಿ ಕಾಯ್ದೆಯ ಪ್ರಕಾರ, ಮಗುವಿನ ಜನನ ನೋಂದಣಿ ಮಾಡುವಾಗ ತಂದೆ ಮತ್ತು ತಾಯಿಯ ಧರ್ಮಗಳನ್ನು ಸರ್ಕಾರ ಪ್ರತ್ಯೇಖವಾಗಿ ದಾಖಲಿಸಿಕೊಳ್ಳಲಿದೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.

ಈ ವರದಿಯನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ತೃಣಮೂಲ ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸಂಸದ ಸಾಕೇತ್ ಗೋಖಲೆ, “ಇದು ಎನ್‌ಆರ್‌ಸಿ ಜಾರಿಗೊಳಿಸುವ ಹುನ್ನಾರವೇ?” ಎಂಬ ಅನುಮಾನ ಮತ್ತು ಆತಂಕ ವ್ಯಕ್ತಪಡಿಸಿದ್ದಾರೆ.

“ಮೋದಿ ಸರ್ಕಾರವು ಭಾರತೀಯ ಪೌರತ್ವವನ್ನು ಧರ್ಮದೊಂದಿಗೆ ಜೋಡಿಸುತ್ತಿದೆ. ಇದು ಅತ್ಯಂತ ಅಪಾಯಕಾರಿ ಬೆಳವಣಿಗೆ. ಸಿಎಎ ಜಾರಿಗೊಳಿಸುವಾಗ, ಅದು ಯಾವುದೇ ಭಾರತೀಯರ ಪೌರತ್ವ ಕಿತ್ತುಕೊಳ್ಳುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದರು. ಈಗಲೂ ಹೇಳುತ್ತಿದ್ದಾರೆ. ಆದರೆ, ಗೃಹ ಸಚಿವ ಅಮಿತ್ ಶಾ ಅವರು, ಸಿಎಎ ಬಳಿಕ ಎನ್‌ಆರ್‌ಸಿ ಜಾರಿಗೊಳಿಸುವುದಾಗಿ ಈ ಹಿಂದೆಯೇ ಹೇಳಿದ್ದಾರೆ” ಎಂದು ಸಾಕೇತ್ ಗೋಖಲೆ ನೆನಪಿಸಿದ್ದಾರೆ.

“ಇನ್ನು ಮುಂದೆ ಮೋದಿ ಸರ್ಕಾರ ಮಗುವಿನ ಜನನ ನೋಂದಣಿ ವೇಳೆ ಪೋಷಕರ ಧರ್ಮಗಳನ್ನು ಪ್ರತ್ಯೇಖವಾಗಿ ದಾಖಲಿಸಿದೆ ಎನ್ನಲಾಗ್ತಿದೆ. ಇದು ಧರ್ಮಾಧಾರಿತವಾಗಿ ಭಾರತೀಯರ ಪೌರತ್ವ ನಿರ್ಧರಿಸುವ ಎನ್‌ಆರ್‌ಸಿ ಜಾರಿಗೊಳಿಸುವ ಹುನ್ನಾರವಷ್ಟೆ. ಯಾಕೆಂದರೆ…

ಜುಲೈ 1987 ರ ಮೊದಲು ಜನಿಸಿದ ಪೋಷಕರು ತಾವು ಭಾರತೀಯ ನಾಗರಿಕರು ಎಂದು ಸಾಬೀತುಪಡಿಸಲು ಭಾರತದಲ್ಲಿ ಜನಿಸಿದ ಜನನ ಪ್ರಮಾಣಪತ್ರವನ್ನು ನೀಡಬೇಕು.

ಜುಲೈ 1987 ರ ನಂತರ ಜನಿಸಿದ ಪೋಷಕರು ತಮ್ಮ ಪೋಷಕರು ಭಾರತದಲ್ಲಿ ಜನಿಸಿದವರು ಮತ್ತು ಭಾರತೀಯ ಪ್ರಜೆಗಳು ಎಂದು ತೋರಿಸಲು ತಮ್ಮ ಪೋಷಕರ ಜನ್ಮ ಪ್ರಮಾಣಪತ್ರವನ್ನು ನೀಡಬೇಕು.

ಮೇಲಿನ ಮಾನದಂಡಗಳನ್ನು ಬಳಸಿಕೊಂಡು ತಮ್ಮ ಪೌರತ್ವವನ್ನು ಸಾಬೀತುಪಡಿಸಲು ಸಾಧ್ಯವಾಗದವರನ್ನು ಬಂಧನ ಕೇಂದ್ರಗಳಿಗೆ ಕಳುಹಿಸುವ ಸಾಧ್ಯತೆ ಇದೆ. ಒಂದು ವೇಳೆ ಈ ಜನರು ಮುಸ್ಲಿಮರು ಅಲ್ಲ ಎಂದಾದರೆ ನಾನು ಸಿಎಎ ಧನ್ಯವಾದ ಹೇಳುತ್ತೇನೆ ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ. (ಇದರರ್ಥ ಬಲಿಪಶುಗಳು ಖಂಡಿತವಾಗಿ ಮುಸ್ಲಿಮರು ಎಂದಾಗಿದೆ.)

“ಸಿಎಎ ಕುರಿತು ಗುಪ್ತಚರ ಇಲಾಖೆ ಜಂಟಿ ಸಂಸದೀಯ ಸಮಿತಿಗೆ ಹೇಳಿರುವ ಪ್ರಕಾರ, ಅದು ಕೇವಲ 31,313 ಜನರಿಗೆ ಮಾತ್ರ ಪ್ರಯೋಜನವಾಗಲಿದೆ. ಹಾಗಾಗಿ, ಕೇವಲ 31,313 ಜನರಿಗೆ ಉಪಯೋಗವಾಗಲೆಂದು ಸಿಎಎ ಜಾರಿಗೊಳಿಸಿಲ್ಲ. ಸಿಎಎ ಹಿಂದಿನ ಅಜೆಂಡಾ ಎನ್‌ಆರ್‌ಸಿ ಜಾರಿಗೊಳಿಸಿ ಭಾರತೀಯ ಪೌರತ್ವವನ್ನು ಧರ್ಮ ಆಧಾರಿತವಾಗಿಸುವುದಾಗಿದೆ. ಸಿಎಎ ಹಿಂದಿನ ಮೋದಿ ಸರ್ಕಾರ ಕೆಟ್ಟ ಮತ್ತು ದುಷ್ಟ ಅಜೆಂಡಾ ಸ್ಪಷ್ಟವಾಗಿದೆ” ಎಂದು ಸಾಕೇತ್ ಗೋಖಲೆ ತಿಳಿಸಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ರಾಷ್ಟ್ರೀಯ ಜನ ಸಂಖ್ಯಾ ನೋಂದಣಿ (ಎನ್‌ಪಿಆರ್) ಬಗ್ಗೆಯೂ ಕಳವಳ ವ್ಯಕ್ತಪಡಿಸಿದ್ದ ಸಾಕೇತ್ ಗೋಖಲೆ, ಇದು ಗುಪ್ತವಾಗಿ ಎನ್‌ಆರ್‌ಸಿ ಜಾರಿಗೊಳಿಸುವ ಹುನ್ನಾರ ಎಂದಿದ್ದರು.

ಈ ಕುರಿತು ನಾನುಗೌರಿ ಪ್ರಕಟಿಸಿದ್ದ ವರದಿ ಇಲ್ಲಿದೆ

ಒಟ್ಟಾರೆಯಾಗಿ ಹೇಳುವುದಾದರೆ, ಸಿಎಎ ಜಾರಿಗೊಳಿಸಿರುವುದರ ಮೂಲ ಉದ್ದೇಶ ಎನ್‌ಆರ್‌ಸಿ ಜಾರಿಗೊಳಿಸುವುದಾಗಿದೆ ಎಂಬುವುದು ಸಾಕೇತ್ ಗೋಖಲೆ ಅವರ ವಾದ. ಸಿಎಎ ಭಾರತೀಯರ ಪೌರತ್ವ ಕಿತ್ತುಕೊಳ್ಳುವುದಿಲ್ಲ ಎಂದಿರುವ ಸರ್ಕಾರ, ಸಿಎಎ ಬೆನ್ನಲ್ಲೇ ಅದಕ್ಕೆ ಸಂಬಂಧಿಸಿದ ಎನ್‌ಪಿಆರ್ ಮೂಲಕ ಜನಗಣತಿ, ಮಗುವಿನ ಪೋಷಕರ ಧರ್ಮ ನೋಂದಣಿ ಇತ್ಯಾದಿ ಕಾನೂನುಗಳನ್ನು ಗೌಪ್ಯವಾಗಿ ಜಾರಿಗೊಳಿಸುತ್ತಿದೆ. ಈ ಬಗ್ಗೆ ಸಾಮಾನ್ಯ ಜನರಿಗೆ ಬಿಡಿ, ದೇಶದ ಉನ್ನತ ಮಟ್ಟದ ನಾಯಕರಿಗೂ ಮಾಹಿತಿಯಿಲ್ಲ ಎಂಬುದಾಗಿ ಕಳವಳದ ಸಂಗತಿ.

ಇದನ್ನೂ ಓದಿ : ‘ಶೀಘ್ರದಲ್ಲೇ ಹೊರಗೆ ಭೇಟಿಯಾಗುತ್ತೇನೆ..’; ತಿಹಾರ್ ಜೈಲಿನಿಂದ ಪತ್ರ ಬರೆದ ಮನೀಶ್ ಸಿಸೋಡಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...