Homeಮುಖಪುಟಮಗುವಿನ ಜನನ ನೋಂದಣಿ ವೇಳೆ ಪೋಷಕರ ಧರ್ಮ ದಾಖಲಿಸಲಿದೆ ಸರ್ಕಾರ: ಎನ್‌ಆರ್‌ಸಿ ಹುನ್ನಾರ ಎಂದ ಟಿಎಂಸಿ...

ಮಗುವಿನ ಜನನ ನೋಂದಣಿ ವೇಳೆ ಪೋಷಕರ ಧರ್ಮ ದಾಖಲಿಸಲಿದೆ ಸರ್ಕಾರ: ಎನ್‌ಆರ್‌ಸಿ ಹುನ್ನಾರ ಎಂದ ಟಿಎಂಸಿ ಸಂಸದ

ಎನ್‌ಪಿಆರ್‌ ಬಳಿಕ ಜನನ ನೋಂದಣಿ ಕುರಿತು ಆತಂಕ ವ್ಯಕ್ತಪಡಿಸಿದ ಸಾಕೇತ್ ಗೋಖಲೆ

- Advertisement -
- Advertisement -

ಜನನ ಮತ್ತು ಮರಣ ನೋಂದಣಿ (ತಿದ್ದುಪಡಿ) ಕಾಯ್ದೆ 2023ರ ಪ್ರಕಾರ, ಮಕ್ಕಳ ಜನನ ನೋಂದಣಿ ಮಾಡುವಾಗ ಪೋಷಕರ ಧರ್ಮವನ್ನು ಪ್ರತ್ಯೇಖವಾಗಿ ದಾಖಲಿಸಬೇಕಿದೆ. ಇದು ಹೊಸ ಆತಂಕಕ್ಕೆ ಕಾರಣವಾಗಿದೆ.

ಇದುವರೆಗೆ ಜನನ ನೋಂದಣಿ ಮಾಡುವಾಗ ಮಗುವಿನ ಕುಟುಂಬದ ಧರ್ಮ ಮಾತ್ರ ಉಲ್ಲೇಖಿಸಲಾಗುತ್ತಿತ್ತು. ಆದರೆ, ಕಳೆದ ವರ್ಷ ಆಗಸ್ಟ್‌ 11ರಂದು ಸಂಸತ್‌ನಲ್ಲಿ ಅನುಮೋದನೆಗೊಂಡಿರುವ ತಿದ್ದುಪಡಿ ಕಾಯ್ದೆಯ ಪ್ರಕಾರ, ಮಗುವಿನ ಜನನ ನೋಂದಣಿ ಮಾಡುವಾಗ ತಂದೆ ಮತ್ತು ತಾಯಿಯ ಧರ್ಮಗಳನ್ನು ಸರ್ಕಾರ ಪ್ರತ್ಯೇಖವಾಗಿ ದಾಖಲಿಸಿಕೊಳ್ಳಲಿದೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.

ಈ ವರದಿಯನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ತೃಣಮೂಲ ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸಂಸದ ಸಾಕೇತ್ ಗೋಖಲೆ, “ಇದು ಎನ್‌ಆರ್‌ಸಿ ಜಾರಿಗೊಳಿಸುವ ಹುನ್ನಾರವೇ?” ಎಂಬ ಅನುಮಾನ ಮತ್ತು ಆತಂಕ ವ್ಯಕ್ತಪಡಿಸಿದ್ದಾರೆ.

“ಮೋದಿ ಸರ್ಕಾರವು ಭಾರತೀಯ ಪೌರತ್ವವನ್ನು ಧರ್ಮದೊಂದಿಗೆ ಜೋಡಿಸುತ್ತಿದೆ. ಇದು ಅತ್ಯಂತ ಅಪಾಯಕಾರಿ ಬೆಳವಣಿಗೆ. ಸಿಎಎ ಜಾರಿಗೊಳಿಸುವಾಗ, ಅದು ಯಾವುದೇ ಭಾರತೀಯರ ಪೌರತ್ವ ಕಿತ್ತುಕೊಳ್ಳುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದರು. ಈಗಲೂ ಹೇಳುತ್ತಿದ್ದಾರೆ. ಆದರೆ, ಗೃಹ ಸಚಿವ ಅಮಿತ್ ಶಾ ಅವರು, ಸಿಎಎ ಬಳಿಕ ಎನ್‌ಆರ್‌ಸಿ ಜಾರಿಗೊಳಿಸುವುದಾಗಿ ಈ ಹಿಂದೆಯೇ ಹೇಳಿದ್ದಾರೆ” ಎಂದು ಸಾಕೇತ್ ಗೋಖಲೆ ನೆನಪಿಸಿದ್ದಾರೆ.

“ಇನ್ನು ಮುಂದೆ ಮೋದಿ ಸರ್ಕಾರ ಮಗುವಿನ ಜನನ ನೋಂದಣಿ ವೇಳೆ ಪೋಷಕರ ಧರ್ಮಗಳನ್ನು ಪ್ರತ್ಯೇಖವಾಗಿ ದಾಖಲಿಸಿದೆ ಎನ್ನಲಾಗ್ತಿದೆ. ಇದು ಧರ್ಮಾಧಾರಿತವಾಗಿ ಭಾರತೀಯರ ಪೌರತ್ವ ನಿರ್ಧರಿಸುವ ಎನ್‌ಆರ್‌ಸಿ ಜಾರಿಗೊಳಿಸುವ ಹುನ್ನಾರವಷ್ಟೆ. ಯಾಕೆಂದರೆ…

ಜುಲೈ 1987 ರ ಮೊದಲು ಜನಿಸಿದ ಪೋಷಕರು ತಾವು ಭಾರತೀಯ ನಾಗರಿಕರು ಎಂದು ಸಾಬೀತುಪಡಿಸಲು ಭಾರತದಲ್ಲಿ ಜನಿಸಿದ ಜನನ ಪ್ರಮಾಣಪತ್ರವನ್ನು ನೀಡಬೇಕು.

ಜುಲೈ 1987 ರ ನಂತರ ಜನಿಸಿದ ಪೋಷಕರು ತಮ್ಮ ಪೋಷಕರು ಭಾರತದಲ್ಲಿ ಜನಿಸಿದವರು ಮತ್ತು ಭಾರತೀಯ ಪ್ರಜೆಗಳು ಎಂದು ತೋರಿಸಲು ತಮ್ಮ ಪೋಷಕರ ಜನ್ಮ ಪ್ರಮಾಣಪತ್ರವನ್ನು ನೀಡಬೇಕು.

ಮೇಲಿನ ಮಾನದಂಡಗಳನ್ನು ಬಳಸಿಕೊಂಡು ತಮ್ಮ ಪೌರತ್ವವನ್ನು ಸಾಬೀತುಪಡಿಸಲು ಸಾಧ್ಯವಾಗದವರನ್ನು ಬಂಧನ ಕೇಂದ್ರಗಳಿಗೆ ಕಳುಹಿಸುವ ಸಾಧ್ಯತೆ ಇದೆ. ಒಂದು ವೇಳೆ ಈ ಜನರು ಮುಸ್ಲಿಮರು ಅಲ್ಲ ಎಂದಾದರೆ ನಾನು ಸಿಎಎ ಧನ್ಯವಾದ ಹೇಳುತ್ತೇನೆ ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ. (ಇದರರ್ಥ ಬಲಿಪಶುಗಳು ಖಂಡಿತವಾಗಿ ಮುಸ್ಲಿಮರು ಎಂದಾಗಿದೆ.)

“ಸಿಎಎ ಕುರಿತು ಗುಪ್ತಚರ ಇಲಾಖೆ ಜಂಟಿ ಸಂಸದೀಯ ಸಮಿತಿಗೆ ಹೇಳಿರುವ ಪ್ರಕಾರ, ಅದು ಕೇವಲ 31,313 ಜನರಿಗೆ ಮಾತ್ರ ಪ್ರಯೋಜನವಾಗಲಿದೆ. ಹಾಗಾಗಿ, ಕೇವಲ 31,313 ಜನರಿಗೆ ಉಪಯೋಗವಾಗಲೆಂದು ಸಿಎಎ ಜಾರಿಗೊಳಿಸಿಲ್ಲ. ಸಿಎಎ ಹಿಂದಿನ ಅಜೆಂಡಾ ಎನ್‌ಆರ್‌ಸಿ ಜಾರಿಗೊಳಿಸಿ ಭಾರತೀಯ ಪೌರತ್ವವನ್ನು ಧರ್ಮ ಆಧಾರಿತವಾಗಿಸುವುದಾಗಿದೆ. ಸಿಎಎ ಹಿಂದಿನ ಮೋದಿ ಸರ್ಕಾರ ಕೆಟ್ಟ ಮತ್ತು ದುಷ್ಟ ಅಜೆಂಡಾ ಸ್ಪಷ್ಟವಾಗಿದೆ” ಎಂದು ಸಾಕೇತ್ ಗೋಖಲೆ ತಿಳಿಸಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ರಾಷ್ಟ್ರೀಯ ಜನ ಸಂಖ್ಯಾ ನೋಂದಣಿ (ಎನ್‌ಪಿಆರ್) ಬಗ್ಗೆಯೂ ಕಳವಳ ವ್ಯಕ್ತಪಡಿಸಿದ್ದ ಸಾಕೇತ್ ಗೋಖಲೆ, ಇದು ಗುಪ್ತವಾಗಿ ಎನ್‌ಆರ್‌ಸಿ ಜಾರಿಗೊಳಿಸುವ ಹುನ್ನಾರ ಎಂದಿದ್ದರು.

ಈ ಕುರಿತು ನಾನುಗೌರಿ ಪ್ರಕಟಿಸಿದ್ದ ವರದಿ ಇಲ್ಲಿದೆ

ಒಟ್ಟಾರೆಯಾಗಿ ಹೇಳುವುದಾದರೆ, ಸಿಎಎ ಜಾರಿಗೊಳಿಸಿರುವುದರ ಮೂಲ ಉದ್ದೇಶ ಎನ್‌ಆರ್‌ಸಿ ಜಾರಿಗೊಳಿಸುವುದಾಗಿದೆ ಎಂಬುವುದು ಸಾಕೇತ್ ಗೋಖಲೆ ಅವರ ವಾದ. ಸಿಎಎ ಭಾರತೀಯರ ಪೌರತ್ವ ಕಿತ್ತುಕೊಳ್ಳುವುದಿಲ್ಲ ಎಂದಿರುವ ಸರ್ಕಾರ, ಸಿಎಎ ಬೆನ್ನಲ್ಲೇ ಅದಕ್ಕೆ ಸಂಬಂಧಿಸಿದ ಎನ್‌ಪಿಆರ್ ಮೂಲಕ ಜನಗಣತಿ, ಮಗುವಿನ ಪೋಷಕರ ಧರ್ಮ ನೋಂದಣಿ ಇತ್ಯಾದಿ ಕಾನೂನುಗಳನ್ನು ಗೌಪ್ಯವಾಗಿ ಜಾರಿಗೊಳಿಸುತ್ತಿದೆ. ಈ ಬಗ್ಗೆ ಸಾಮಾನ್ಯ ಜನರಿಗೆ ಬಿಡಿ, ದೇಶದ ಉನ್ನತ ಮಟ್ಟದ ನಾಯಕರಿಗೂ ಮಾಹಿತಿಯಿಲ್ಲ ಎಂಬುದಾಗಿ ಕಳವಳದ ಸಂಗತಿ.

ಇದನ್ನೂ ಓದಿ : ‘ಶೀಘ್ರದಲ್ಲೇ ಹೊರಗೆ ಭೇಟಿಯಾಗುತ್ತೇನೆ..’; ತಿಹಾರ್ ಜೈಲಿನಿಂದ ಪತ್ರ ಬರೆದ ಮನೀಶ್ ಸಿಸೋಡಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...