Homeಮುಖಪುಟಮಗುವಿನ ಜನನ ನೋಂದಣಿ ವೇಳೆ ಪೋಷಕರ ಧರ್ಮ ದಾಖಲಿಸಲಿದೆ ಸರ್ಕಾರ: ಎನ್‌ಆರ್‌ಸಿ ಹುನ್ನಾರ ಎಂದ ಟಿಎಂಸಿ...

ಮಗುವಿನ ಜನನ ನೋಂದಣಿ ವೇಳೆ ಪೋಷಕರ ಧರ್ಮ ದಾಖಲಿಸಲಿದೆ ಸರ್ಕಾರ: ಎನ್‌ಆರ್‌ಸಿ ಹುನ್ನಾರ ಎಂದ ಟಿಎಂಸಿ ಸಂಸದ

ಎನ್‌ಪಿಆರ್‌ ಬಳಿಕ ಜನನ ನೋಂದಣಿ ಕುರಿತು ಆತಂಕ ವ್ಯಕ್ತಪಡಿಸಿದ ಸಾಕೇತ್ ಗೋಖಲೆ

- Advertisement -
- Advertisement -

ಜನನ ಮತ್ತು ಮರಣ ನೋಂದಣಿ (ತಿದ್ದುಪಡಿ) ಕಾಯ್ದೆ 2023ರ ಪ್ರಕಾರ, ಮಕ್ಕಳ ಜನನ ನೋಂದಣಿ ಮಾಡುವಾಗ ಪೋಷಕರ ಧರ್ಮವನ್ನು ಪ್ರತ್ಯೇಖವಾಗಿ ದಾಖಲಿಸಬೇಕಿದೆ. ಇದು ಹೊಸ ಆತಂಕಕ್ಕೆ ಕಾರಣವಾಗಿದೆ.

ಇದುವರೆಗೆ ಜನನ ನೋಂದಣಿ ಮಾಡುವಾಗ ಮಗುವಿನ ಕುಟುಂಬದ ಧರ್ಮ ಮಾತ್ರ ಉಲ್ಲೇಖಿಸಲಾಗುತ್ತಿತ್ತು. ಆದರೆ, ಕಳೆದ ವರ್ಷ ಆಗಸ್ಟ್‌ 11ರಂದು ಸಂಸತ್‌ನಲ್ಲಿ ಅನುಮೋದನೆಗೊಂಡಿರುವ ತಿದ್ದುಪಡಿ ಕಾಯ್ದೆಯ ಪ್ರಕಾರ, ಮಗುವಿನ ಜನನ ನೋಂದಣಿ ಮಾಡುವಾಗ ತಂದೆ ಮತ್ತು ತಾಯಿಯ ಧರ್ಮಗಳನ್ನು ಸರ್ಕಾರ ಪ್ರತ್ಯೇಖವಾಗಿ ದಾಖಲಿಸಿಕೊಳ್ಳಲಿದೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.

ಈ ವರದಿಯನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ತೃಣಮೂಲ ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸಂಸದ ಸಾಕೇತ್ ಗೋಖಲೆ, “ಇದು ಎನ್‌ಆರ್‌ಸಿ ಜಾರಿಗೊಳಿಸುವ ಹುನ್ನಾರವೇ?” ಎಂಬ ಅನುಮಾನ ಮತ್ತು ಆತಂಕ ವ್ಯಕ್ತಪಡಿಸಿದ್ದಾರೆ.

“ಮೋದಿ ಸರ್ಕಾರವು ಭಾರತೀಯ ಪೌರತ್ವವನ್ನು ಧರ್ಮದೊಂದಿಗೆ ಜೋಡಿಸುತ್ತಿದೆ. ಇದು ಅತ್ಯಂತ ಅಪಾಯಕಾರಿ ಬೆಳವಣಿಗೆ. ಸಿಎಎ ಜಾರಿಗೊಳಿಸುವಾಗ, ಅದು ಯಾವುದೇ ಭಾರತೀಯರ ಪೌರತ್ವ ಕಿತ್ತುಕೊಳ್ಳುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದರು. ಈಗಲೂ ಹೇಳುತ್ತಿದ್ದಾರೆ. ಆದರೆ, ಗೃಹ ಸಚಿವ ಅಮಿತ್ ಶಾ ಅವರು, ಸಿಎಎ ಬಳಿಕ ಎನ್‌ಆರ್‌ಸಿ ಜಾರಿಗೊಳಿಸುವುದಾಗಿ ಈ ಹಿಂದೆಯೇ ಹೇಳಿದ್ದಾರೆ” ಎಂದು ಸಾಕೇತ್ ಗೋಖಲೆ ನೆನಪಿಸಿದ್ದಾರೆ.

“ಇನ್ನು ಮುಂದೆ ಮೋದಿ ಸರ್ಕಾರ ಮಗುವಿನ ಜನನ ನೋಂದಣಿ ವೇಳೆ ಪೋಷಕರ ಧರ್ಮಗಳನ್ನು ಪ್ರತ್ಯೇಖವಾಗಿ ದಾಖಲಿಸಿದೆ ಎನ್ನಲಾಗ್ತಿದೆ. ಇದು ಧರ್ಮಾಧಾರಿತವಾಗಿ ಭಾರತೀಯರ ಪೌರತ್ವ ನಿರ್ಧರಿಸುವ ಎನ್‌ಆರ್‌ಸಿ ಜಾರಿಗೊಳಿಸುವ ಹುನ್ನಾರವಷ್ಟೆ. ಯಾಕೆಂದರೆ…

ಜುಲೈ 1987 ರ ಮೊದಲು ಜನಿಸಿದ ಪೋಷಕರು ತಾವು ಭಾರತೀಯ ನಾಗರಿಕರು ಎಂದು ಸಾಬೀತುಪಡಿಸಲು ಭಾರತದಲ್ಲಿ ಜನಿಸಿದ ಜನನ ಪ್ರಮಾಣಪತ್ರವನ್ನು ನೀಡಬೇಕು.

ಜುಲೈ 1987 ರ ನಂತರ ಜನಿಸಿದ ಪೋಷಕರು ತಮ್ಮ ಪೋಷಕರು ಭಾರತದಲ್ಲಿ ಜನಿಸಿದವರು ಮತ್ತು ಭಾರತೀಯ ಪ್ರಜೆಗಳು ಎಂದು ತೋರಿಸಲು ತಮ್ಮ ಪೋಷಕರ ಜನ್ಮ ಪ್ರಮಾಣಪತ್ರವನ್ನು ನೀಡಬೇಕು.

ಮೇಲಿನ ಮಾನದಂಡಗಳನ್ನು ಬಳಸಿಕೊಂಡು ತಮ್ಮ ಪೌರತ್ವವನ್ನು ಸಾಬೀತುಪಡಿಸಲು ಸಾಧ್ಯವಾಗದವರನ್ನು ಬಂಧನ ಕೇಂದ್ರಗಳಿಗೆ ಕಳುಹಿಸುವ ಸಾಧ್ಯತೆ ಇದೆ. ಒಂದು ವೇಳೆ ಈ ಜನರು ಮುಸ್ಲಿಮರು ಅಲ್ಲ ಎಂದಾದರೆ ನಾನು ಸಿಎಎ ಧನ್ಯವಾದ ಹೇಳುತ್ತೇನೆ ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ. (ಇದರರ್ಥ ಬಲಿಪಶುಗಳು ಖಂಡಿತವಾಗಿ ಮುಸ್ಲಿಮರು ಎಂದಾಗಿದೆ.)

“ಸಿಎಎ ಕುರಿತು ಗುಪ್ತಚರ ಇಲಾಖೆ ಜಂಟಿ ಸಂಸದೀಯ ಸಮಿತಿಗೆ ಹೇಳಿರುವ ಪ್ರಕಾರ, ಅದು ಕೇವಲ 31,313 ಜನರಿಗೆ ಮಾತ್ರ ಪ್ರಯೋಜನವಾಗಲಿದೆ. ಹಾಗಾಗಿ, ಕೇವಲ 31,313 ಜನರಿಗೆ ಉಪಯೋಗವಾಗಲೆಂದು ಸಿಎಎ ಜಾರಿಗೊಳಿಸಿಲ್ಲ. ಸಿಎಎ ಹಿಂದಿನ ಅಜೆಂಡಾ ಎನ್‌ಆರ್‌ಸಿ ಜಾರಿಗೊಳಿಸಿ ಭಾರತೀಯ ಪೌರತ್ವವನ್ನು ಧರ್ಮ ಆಧಾರಿತವಾಗಿಸುವುದಾಗಿದೆ. ಸಿಎಎ ಹಿಂದಿನ ಮೋದಿ ಸರ್ಕಾರ ಕೆಟ್ಟ ಮತ್ತು ದುಷ್ಟ ಅಜೆಂಡಾ ಸ್ಪಷ್ಟವಾಗಿದೆ” ಎಂದು ಸಾಕೇತ್ ಗೋಖಲೆ ತಿಳಿಸಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ರಾಷ್ಟ್ರೀಯ ಜನ ಸಂಖ್ಯಾ ನೋಂದಣಿ (ಎನ್‌ಪಿಆರ್) ಬಗ್ಗೆಯೂ ಕಳವಳ ವ್ಯಕ್ತಪಡಿಸಿದ್ದ ಸಾಕೇತ್ ಗೋಖಲೆ, ಇದು ಗುಪ್ತವಾಗಿ ಎನ್‌ಆರ್‌ಸಿ ಜಾರಿಗೊಳಿಸುವ ಹುನ್ನಾರ ಎಂದಿದ್ದರು.

ಈ ಕುರಿತು ನಾನುಗೌರಿ ಪ್ರಕಟಿಸಿದ್ದ ವರದಿ ಇಲ್ಲಿದೆ

ಒಟ್ಟಾರೆಯಾಗಿ ಹೇಳುವುದಾದರೆ, ಸಿಎಎ ಜಾರಿಗೊಳಿಸಿರುವುದರ ಮೂಲ ಉದ್ದೇಶ ಎನ್‌ಆರ್‌ಸಿ ಜಾರಿಗೊಳಿಸುವುದಾಗಿದೆ ಎಂಬುವುದು ಸಾಕೇತ್ ಗೋಖಲೆ ಅವರ ವಾದ. ಸಿಎಎ ಭಾರತೀಯರ ಪೌರತ್ವ ಕಿತ್ತುಕೊಳ್ಳುವುದಿಲ್ಲ ಎಂದಿರುವ ಸರ್ಕಾರ, ಸಿಎಎ ಬೆನ್ನಲ್ಲೇ ಅದಕ್ಕೆ ಸಂಬಂಧಿಸಿದ ಎನ್‌ಪಿಆರ್ ಮೂಲಕ ಜನಗಣತಿ, ಮಗುವಿನ ಪೋಷಕರ ಧರ್ಮ ನೋಂದಣಿ ಇತ್ಯಾದಿ ಕಾನೂನುಗಳನ್ನು ಗೌಪ್ಯವಾಗಿ ಜಾರಿಗೊಳಿಸುತ್ತಿದೆ. ಈ ಬಗ್ಗೆ ಸಾಮಾನ್ಯ ಜನರಿಗೆ ಬಿಡಿ, ದೇಶದ ಉನ್ನತ ಮಟ್ಟದ ನಾಯಕರಿಗೂ ಮಾಹಿತಿಯಿಲ್ಲ ಎಂಬುದಾಗಿ ಕಳವಳದ ಸಂಗತಿ.

ಇದನ್ನೂ ಓದಿ : ‘ಶೀಘ್ರದಲ್ಲೇ ಹೊರಗೆ ಭೇಟಿಯಾಗುತ್ತೇನೆ..’; ತಿಹಾರ್ ಜೈಲಿನಿಂದ ಪತ್ರ ಬರೆದ ಮನೀಶ್ ಸಿಸೋಡಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...