Homeಮುಖಪುಟಮಗುವಿನ ಜನನ ನೋಂದಣಿ ವೇಳೆ ಪೋಷಕರ ಧರ್ಮ ದಾಖಲಿಸಲಿದೆ ಸರ್ಕಾರ: ಎನ್‌ಆರ್‌ಸಿ ಹುನ್ನಾರ ಎಂದ ಟಿಎಂಸಿ...

ಮಗುವಿನ ಜನನ ನೋಂದಣಿ ವೇಳೆ ಪೋಷಕರ ಧರ್ಮ ದಾಖಲಿಸಲಿದೆ ಸರ್ಕಾರ: ಎನ್‌ಆರ್‌ಸಿ ಹುನ್ನಾರ ಎಂದ ಟಿಎಂಸಿ ಸಂಸದ

ಎನ್‌ಪಿಆರ್‌ ಬಳಿಕ ಜನನ ನೋಂದಣಿ ಕುರಿತು ಆತಂಕ ವ್ಯಕ್ತಪಡಿಸಿದ ಸಾಕೇತ್ ಗೋಖಲೆ

- Advertisement -
- Advertisement -

ಜನನ ಮತ್ತು ಮರಣ ನೋಂದಣಿ (ತಿದ್ದುಪಡಿ) ಕಾಯ್ದೆ 2023ರ ಪ್ರಕಾರ, ಮಕ್ಕಳ ಜನನ ನೋಂದಣಿ ಮಾಡುವಾಗ ಪೋಷಕರ ಧರ್ಮವನ್ನು ಪ್ರತ್ಯೇಖವಾಗಿ ದಾಖಲಿಸಬೇಕಿದೆ. ಇದು ಹೊಸ ಆತಂಕಕ್ಕೆ ಕಾರಣವಾಗಿದೆ.

ಇದುವರೆಗೆ ಜನನ ನೋಂದಣಿ ಮಾಡುವಾಗ ಮಗುವಿನ ಕುಟುಂಬದ ಧರ್ಮ ಮಾತ್ರ ಉಲ್ಲೇಖಿಸಲಾಗುತ್ತಿತ್ತು. ಆದರೆ, ಕಳೆದ ವರ್ಷ ಆಗಸ್ಟ್‌ 11ರಂದು ಸಂಸತ್‌ನಲ್ಲಿ ಅನುಮೋದನೆಗೊಂಡಿರುವ ತಿದ್ದುಪಡಿ ಕಾಯ್ದೆಯ ಪ್ರಕಾರ, ಮಗುವಿನ ಜನನ ನೋಂದಣಿ ಮಾಡುವಾಗ ತಂದೆ ಮತ್ತು ತಾಯಿಯ ಧರ್ಮಗಳನ್ನು ಸರ್ಕಾರ ಪ್ರತ್ಯೇಖವಾಗಿ ದಾಖಲಿಸಿಕೊಳ್ಳಲಿದೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.

ಈ ವರದಿಯನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ತೃಣಮೂಲ ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸಂಸದ ಸಾಕೇತ್ ಗೋಖಲೆ, “ಇದು ಎನ್‌ಆರ್‌ಸಿ ಜಾರಿಗೊಳಿಸುವ ಹುನ್ನಾರವೇ?” ಎಂಬ ಅನುಮಾನ ಮತ್ತು ಆತಂಕ ವ್ಯಕ್ತಪಡಿಸಿದ್ದಾರೆ.

“ಮೋದಿ ಸರ್ಕಾರವು ಭಾರತೀಯ ಪೌರತ್ವವನ್ನು ಧರ್ಮದೊಂದಿಗೆ ಜೋಡಿಸುತ್ತಿದೆ. ಇದು ಅತ್ಯಂತ ಅಪಾಯಕಾರಿ ಬೆಳವಣಿಗೆ. ಸಿಎಎ ಜಾರಿಗೊಳಿಸುವಾಗ, ಅದು ಯಾವುದೇ ಭಾರತೀಯರ ಪೌರತ್ವ ಕಿತ್ತುಕೊಳ್ಳುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದರು. ಈಗಲೂ ಹೇಳುತ್ತಿದ್ದಾರೆ. ಆದರೆ, ಗೃಹ ಸಚಿವ ಅಮಿತ್ ಶಾ ಅವರು, ಸಿಎಎ ಬಳಿಕ ಎನ್‌ಆರ್‌ಸಿ ಜಾರಿಗೊಳಿಸುವುದಾಗಿ ಈ ಹಿಂದೆಯೇ ಹೇಳಿದ್ದಾರೆ” ಎಂದು ಸಾಕೇತ್ ಗೋಖಲೆ ನೆನಪಿಸಿದ್ದಾರೆ.

“ಇನ್ನು ಮುಂದೆ ಮೋದಿ ಸರ್ಕಾರ ಮಗುವಿನ ಜನನ ನೋಂದಣಿ ವೇಳೆ ಪೋಷಕರ ಧರ್ಮಗಳನ್ನು ಪ್ರತ್ಯೇಖವಾಗಿ ದಾಖಲಿಸಿದೆ ಎನ್ನಲಾಗ್ತಿದೆ. ಇದು ಧರ್ಮಾಧಾರಿತವಾಗಿ ಭಾರತೀಯರ ಪೌರತ್ವ ನಿರ್ಧರಿಸುವ ಎನ್‌ಆರ್‌ಸಿ ಜಾರಿಗೊಳಿಸುವ ಹುನ್ನಾರವಷ್ಟೆ. ಯಾಕೆಂದರೆ…

ಜುಲೈ 1987 ರ ಮೊದಲು ಜನಿಸಿದ ಪೋಷಕರು ತಾವು ಭಾರತೀಯ ನಾಗರಿಕರು ಎಂದು ಸಾಬೀತುಪಡಿಸಲು ಭಾರತದಲ್ಲಿ ಜನಿಸಿದ ಜನನ ಪ್ರಮಾಣಪತ್ರವನ್ನು ನೀಡಬೇಕು.

ಜುಲೈ 1987 ರ ನಂತರ ಜನಿಸಿದ ಪೋಷಕರು ತಮ್ಮ ಪೋಷಕರು ಭಾರತದಲ್ಲಿ ಜನಿಸಿದವರು ಮತ್ತು ಭಾರತೀಯ ಪ್ರಜೆಗಳು ಎಂದು ತೋರಿಸಲು ತಮ್ಮ ಪೋಷಕರ ಜನ್ಮ ಪ್ರಮಾಣಪತ್ರವನ್ನು ನೀಡಬೇಕು.

ಮೇಲಿನ ಮಾನದಂಡಗಳನ್ನು ಬಳಸಿಕೊಂಡು ತಮ್ಮ ಪೌರತ್ವವನ್ನು ಸಾಬೀತುಪಡಿಸಲು ಸಾಧ್ಯವಾಗದವರನ್ನು ಬಂಧನ ಕೇಂದ್ರಗಳಿಗೆ ಕಳುಹಿಸುವ ಸಾಧ್ಯತೆ ಇದೆ. ಒಂದು ವೇಳೆ ಈ ಜನರು ಮುಸ್ಲಿಮರು ಅಲ್ಲ ಎಂದಾದರೆ ನಾನು ಸಿಎಎ ಧನ್ಯವಾದ ಹೇಳುತ್ತೇನೆ ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ. (ಇದರರ್ಥ ಬಲಿಪಶುಗಳು ಖಂಡಿತವಾಗಿ ಮುಸ್ಲಿಮರು ಎಂದಾಗಿದೆ.)

“ಸಿಎಎ ಕುರಿತು ಗುಪ್ತಚರ ಇಲಾಖೆ ಜಂಟಿ ಸಂಸದೀಯ ಸಮಿತಿಗೆ ಹೇಳಿರುವ ಪ್ರಕಾರ, ಅದು ಕೇವಲ 31,313 ಜನರಿಗೆ ಮಾತ್ರ ಪ್ರಯೋಜನವಾಗಲಿದೆ. ಹಾಗಾಗಿ, ಕೇವಲ 31,313 ಜನರಿಗೆ ಉಪಯೋಗವಾಗಲೆಂದು ಸಿಎಎ ಜಾರಿಗೊಳಿಸಿಲ್ಲ. ಸಿಎಎ ಹಿಂದಿನ ಅಜೆಂಡಾ ಎನ್‌ಆರ್‌ಸಿ ಜಾರಿಗೊಳಿಸಿ ಭಾರತೀಯ ಪೌರತ್ವವನ್ನು ಧರ್ಮ ಆಧಾರಿತವಾಗಿಸುವುದಾಗಿದೆ. ಸಿಎಎ ಹಿಂದಿನ ಮೋದಿ ಸರ್ಕಾರ ಕೆಟ್ಟ ಮತ್ತು ದುಷ್ಟ ಅಜೆಂಡಾ ಸ್ಪಷ್ಟವಾಗಿದೆ” ಎಂದು ಸಾಕೇತ್ ಗೋಖಲೆ ತಿಳಿಸಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ರಾಷ್ಟ್ರೀಯ ಜನ ಸಂಖ್ಯಾ ನೋಂದಣಿ (ಎನ್‌ಪಿಆರ್) ಬಗ್ಗೆಯೂ ಕಳವಳ ವ್ಯಕ್ತಪಡಿಸಿದ್ದ ಸಾಕೇತ್ ಗೋಖಲೆ, ಇದು ಗುಪ್ತವಾಗಿ ಎನ್‌ಆರ್‌ಸಿ ಜಾರಿಗೊಳಿಸುವ ಹುನ್ನಾರ ಎಂದಿದ್ದರು.

ಈ ಕುರಿತು ನಾನುಗೌರಿ ಪ್ರಕಟಿಸಿದ್ದ ವರದಿ ಇಲ್ಲಿದೆ

ಒಟ್ಟಾರೆಯಾಗಿ ಹೇಳುವುದಾದರೆ, ಸಿಎಎ ಜಾರಿಗೊಳಿಸಿರುವುದರ ಮೂಲ ಉದ್ದೇಶ ಎನ್‌ಆರ್‌ಸಿ ಜಾರಿಗೊಳಿಸುವುದಾಗಿದೆ ಎಂಬುವುದು ಸಾಕೇತ್ ಗೋಖಲೆ ಅವರ ವಾದ. ಸಿಎಎ ಭಾರತೀಯರ ಪೌರತ್ವ ಕಿತ್ತುಕೊಳ್ಳುವುದಿಲ್ಲ ಎಂದಿರುವ ಸರ್ಕಾರ, ಸಿಎಎ ಬೆನ್ನಲ್ಲೇ ಅದಕ್ಕೆ ಸಂಬಂಧಿಸಿದ ಎನ್‌ಪಿಆರ್ ಮೂಲಕ ಜನಗಣತಿ, ಮಗುವಿನ ಪೋಷಕರ ಧರ್ಮ ನೋಂದಣಿ ಇತ್ಯಾದಿ ಕಾನೂನುಗಳನ್ನು ಗೌಪ್ಯವಾಗಿ ಜಾರಿಗೊಳಿಸುತ್ತಿದೆ. ಈ ಬಗ್ಗೆ ಸಾಮಾನ್ಯ ಜನರಿಗೆ ಬಿಡಿ, ದೇಶದ ಉನ್ನತ ಮಟ್ಟದ ನಾಯಕರಿಗೂ ಮಾಹಿತಿಯಿಲ್ಲ ಎಂಬುದಾಗಿ ಕಳವಳದ ಸಂಗತಿ.

ಇದನ್ನೂ ಓದಿ : ‘ಶೀಘ್ರದಲ್ಲೇ ಹೊರಗೆ ಭೇಟಿಯಾಗುತ್ತೇನೆ..’; ತಿಹಾರ್ ಜೈಲಿನಿಂದ ಪತ್ರ ಬರೆದ ಮನೀಶ್ ಸಿಸೋಡಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...