Homeಮುಖಪುಟಮಗುವಿನ ಜನನ ನೋಂದಣಿ ವೇಳೆ ಪೋಷಕರ ಧರ್ಮ ದಾಖಲಿಸಲಿದೆ ಸರ್ಕಾರ: ಎನ್‌ಆರ್‌ಸಿ ಹುನ್ನಾರ ಎಂದ ಟಿಎಂಸಿ...

ಮಗುವಿನ ಜನನ ನೋಂದಣಿ ವೇಳೆ ಪೋಷಕರ ಧರ್ಮ ದಾಖಲಿಸಲಿದೆ ಸರ್ಕಾರ: ಎನ್‌ಆರ್‌ಸಿ ಹುನ್ನಾರ ಎಂದ ಟಿಎಂಸಿ ಸಂಸದ

ಎನ್‌ಪಿಆರ್‌ ಬಳಿಕ ಜನನ ನೋಂದಣಿ ಕುರಿತು ಆತಂಕ ವ್ಯಕ್ತಪಡಿಸಿದ ಸಾಕೇತ್ ಗೋಖಲೆ

- Advertisement -
- Advertisement -

ಜನನ ಮತ್ತು ಮರಣ ನೋಂದಣಿ (ತಿದ್ದುಪಡಿ) ಕಾಯ್ದೆ 2023ರ ಪ್ರಕಾರ, ಮಕ್ಕಳ ಜನನ ನೋಂದಣಿ ಮಾಡುವಾಗ ಪೋಷಕರ ಧರ್ಮವನ್ನು ಪ್ರತ್ಯೇಖವಾಗಿ ದಾಖಲಿಸಬೇಕಿದೆ. ಇದು ಹೊಸ ಆತಂಕಕ್ಕೆ ಕಾರಣವಾಗಿದೆ.

ಇದುವರೆಗೆ ಜನನ ನೋಂದಣಿ ಮಾಡುವಾಗ ಮಗುವಿನ ಕುಟುಂಬದ ಧರ್ಮ ಮಾತ್ರ ಉಲ್ಲೇಖಿಸಲಾಗುತ್ತಿತ್ತು. ಆದರೆ, ಕಳೆದ ವರ್ಷ ಆಗಸ್ಟ್‌ 11ರಂದು ಸಂಸತ್‌ನಲ್ಲಿ ಅನುಮೋದನೆಗೊಂಡಿರುವ ತಿದ್ದುಪಡಿ ಕಾಯ್ದೆಯ ಪ್ರಕಾರ, ಮಗುವಿನ ಜನನ ನೋಂದಣಿ ಮಾಡುವಾಗ ತಂದೆ ಮತ್ತು ತಾಯಿಯ ಧರ್ಮಗಳನ್ನು ಸರ್ಕಾರ ಪ್ರತ್ಯೇಖವಾಗಿ ದಾಖಲಿಸಿಕೊಳ್ಳಲಿದೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.

ಈ ವರದಿಯನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ತೃಣಮೂಲ ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸಂಸದ ಸಾಕೇತ್ ಗೋಖಲೆ, “ಇದು ಎನ್‌ಆರ್‌ಸಿ ಜಾರಿಗೊಳಿಸುವ ಹುನ್ನಾರವೇ?” ಎಂಬ ಅನುಮಾನ ಮತ್ತು ಆತಂಕ ವ್ಯಕ್ತಪಡಿಸಿದ್ದಾರೆ.

“ಮೋದಿ ಸರ್ಕಾರವು ಭಾರತೀಯ ಪೌರತ್ವವನ್ನು ಧರ್ಮದೊಂದಿಗೆ ಜೋಡಿಸುತ್ತಿದೆ. ಇದು ಅತ್ಯಂತ ಅಪಾಯಕಾರಿ ಬೆಳವಣಿಗೆ. ಸಿಎಎ ಜಾರಿಗೊಳಿಸುವಾಗ, ಅದು ಯಾವುದೇ ಭಾರತೀಯರ ಪೌರತ್ವ ಕಿತ್ತುಕೊಳ್ಳುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದರು. ಈಗಲೂ ಹೇಳುತ್ತಿದ್ದಾರೆ. ಆದರೆ, ಗೃಹ ಸಚಿವ ಅಮಿತ್ ಶಾ ಅವರು, ಸಿಎಎ ಬಳಿಕ ಎನ್‌ಆರ್‌ಸಿ ಜಾರಿಗೊಳಿಸುವುದಾಗಿ ಈ ಹಿಂದೆಯೇ ಹೇಳಿದ್ದಾರೆ” ಎಂದು ಸಾಕೇತ್ ಗೋಖಲೆ ನೆನಪಿಸಿದ್ದಾರೆ.

“ಇನ್ನು ಮುಂದೆ ಮೋದಿ ಸರ್ಕಾರ ಮಗುವಿನ ಜನನ ನೋಂದಣಿ ವೇಳೆ ಪೋಷಕರ ಧರ್ಮಗಳನ್ನು ಪ್ರತ್ಯೇಖವಾಗಿ ದಾಖಲಿಸಿದೆ ಎನ್ನಲಾಗ್ತಿದೆ. ಇದು ಧರ್ಮಾಧಾರಿತವಾಗಿ ಭಾರತೀಯರ ಪೌರತ್ವ ನಿರ್ಧರಿಸುವ ಎನ್‌ಆರ್‌ಸಿ ಜಾರಿಗೊಳಿಸುವ ಹುನ್ನಾರವಷ್ಟೆ. ಯಾಕೆಂದರೆ…

ಜುಲೈ 1987 ರ ಮೊದಲು ಜನಿಸಿದ ಪೋಷಕರು ತಾವು ಭಾರತೀಯ ನಾಗರಿಕರು ಎಂದು ಸಾಬೀತುಪಡಿಸಲು ಭಾರತದಲ್ಲಿ ಜನಿಸಿದ ಜನನ ಪ್ರಮಾಣಪತ್ರವನ್ನು ನೀಡಬೇಕು.

ಜುಲೈ 1987 ರ ನಂತರ ಜನಿಸಿದ ಪೋಷಕರು ತಮ್ಮ ಪೋಷಕರು ಭಾರತದಲ್ಲಿ ಜನಿಸಿದವರು ಮತ್ತು ಭಾರತೀಯ ಪ್ರಜೆಗಳು ಎಂದು ತೋರಿಸಲು ತಮ್ಮ ಪೋಷಕರ ಜನ್ಮ ಪ್ರಮಾಣಪತ್ರವನ್ನು ನೀಡಬೇಕು.

ಮೇಲಿನ ಮಾನದಂಡಗಳನ್ನು ಬಳಸಿಕೊಂಡು ತಮ್ಮ ಪೌರತ್ವವನ್ನು ಸಾಬೀತುಪಡಿಸಲು ಸಾಧ್ಯವಾಗದವರನ್ನು ಬಂಧನ ಕೇಂದ್ರಗಳಿಗೆ ಕಳುಹಿಸುವ ಸಾಧ್ಯತೆ ಇದೆ. ಒಂದು ವೇಳೆ ಈ ಜನರು ಮುಸ್ಲಿಮರು ಅಲ್ಲ ಎಂದಾದರೆ ನಾನು ಸಿಎಎ ಧನ್ಯವಾದ ಹೇಳುತ್ತೇನೆ ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ. (ಇದರರ್ಥ ಬಲಿಪಶುಗಳು ಖಂಡಿತವಾಗಿ ಮುಸ್ಲಿಮರು ಎಂದಾಗಿದೆ.)

“ಸಿಎಎ ಕುರಿತು ಗುಪ್ತಚರ ಇಲಾಖೆ ಜಂಟಿ ಸಂಸದೀಯ ಸಮಿತಿಗೆ ಹೇಳಿರುವ ಪ್ರಕಾರ, ಅದು ಕೇವಲ 31,313 ಜನರಿಗೆ ಮಾತ್ರ ಪ್ರಯೋಜನವಾಗಲಿದೆ. ಹಾಗಾಗಿ, ಕೇವಲ 31,313 ಜನರಿಗೆ ಉಪಯೋಗವಾಗಲೆಂದು ಸಿಎಎ ಜಾರಿಗೊಳಿಸಿಲ್ಲ. ಸಿಎಎ ಹಿಂದಿನ ಅಜೆಂಡಾ ಎನ್‌ಆರ್‌ಸಿ ಜಾರಿಗೊಳಿಸಿ ಭಾರತೀಯ ಪೌರತ್ವವನ್ನು ಧರ್ಮ ಆಧಾರಿತವಾಗಿಸುವುದಾಗಿದೆ. ಸಿಎಎ ಹಿಂದಿನ ಮೋದಿ ಸರ್ಕಾರ ಕೆಟ್ಟ ಮತ್ತು ದುಷ್ಟ ಅಜೆಂಡಾ ಸ್ಪಷ್ಟವಾಗಿದೆ” ಎಂದು ಸಾಕೇತ್ ಗೋಖಲೆ ತಿಳಿಸಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ರಾಷ್ಟ್ರೀಯ ಜನ ಸಂಖ್ಯಾ ನೋಂದಣಿ (ಎನ್‌ಪಿಆರ್) ಬಗ್ಗೆಯೂ ಕಳವಳ ವ್ಯಕ್ತಪಡಿಸಿದ್ದ ಸಾಕೇತ್ ಗೋಖಲೆ, ಇದು ಗುಪ್ತವಾಗಿ ಎನ್‌ಆರ್‌ಸಿ ಜಾರಿಗೊಳಿಸುವ ಹುನ್ನಾರ ಎಂದಿದ್ದರು.

ಈ ಕುರಿತು ನಾನುಗೌರಿ ಪ್ರಕಟಿಸಿದ್ದ ವರದಿ ಇಲ್ಲಿದೆ

ಒಟ್ಟಾರೆಯಾಗಿ ಹೇಳುವುದಾದರೆ, ಸಿಎಎ ಜಾರಿಗೊಳಿಸಿರುವುದರ ಮೂಲ ಉದ್ದೇಶ ಎನ್‌ಆರ್‌ಸಿ ಜಾರಿಗೊಳಿಸುವುದಾಗಿದೆ ಎಂಬುವುದು ಸಾಕೇತ್ ಗೋಖಲೆ ಅವರ ವಾದ. ಸಿಎಎ ಭಾರತೀಯರ ಪೌರತ್ವ ಕಿತ್ತುಕೊಳ್ಳುವುದಿಲ್ಲ ಎಂದಿರುವ ಸರ್ಕಾರ, ಸಿಎಎ ಬೆನ್ನಲ್ಲೇ ಅದಕ್ಕೆ ಸಂಬಂಧಿಸಿದ ಎನ್‌ಪಿಆರ್ ಮೂಲಕ ಜನಗಣತಿ, ಮಗುವಿನ ಪೋಷಕರ ಧರ್ಮ ನೋಂದಣಿ ಇತ್ಯಾದಿ ಕಾನೂನುಗಳನ್ನು ಗೌಪ್ಯವಾಗಿ ಜಾರಿಗೊಳಿಸುತ್ತಿದೆ. ಈ ಬಗ್ಗೆ ಸಾಮಾನ್ಯ ಜನರಿಗೆ ಬಿಡಿ, ದೇಶದ ಉನ್ನತ ಮಟ್ಟದ ನಾಯಕರಿಗೂ ಮಾಹಿತಿಯಿಲ್ಲ ಎಂಬುದಾಗಿ ಕಳವಳದ ಸಂಗತಿ.

ಇದನ್ನೂ ಓದಿ : ‘ಶೀಘ್ರದಲ್ಲೇ ಹೊರಗೆ ಭೇಟಿಯಾಗುತ್ತೇನೆ..’; ತಿಹಾರ್ ಜೈಲಿನಿಂದ ಪತ್ರ ಬರೆದ ಮನೀಶ್ ಸಿಸೋಡಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...