Homeರಾಷ್ಟ್ರೀಯಸರ್ಕಾರ v/s ರಾಜ್ಯಪಾಲ: ರಾಜ್ಯ ವಿಶ್ವವಿದ್ಯಾಲಯದ ಉಪಕುಲಪತಿ ನೇಮಕ ರದ್ದುಗೊಳಿಸಿದ ಕೇರಳ ಹೈಕೋರ್ಟ್

ಸರ್ಕಾರ v/s ರಾಜ್ಯಪಾಲ: ರಾಜ್ಯ ವಿಶ್ವವಿದ್ಯಾಲಯದ ಉಪಕುಲಪತಿ ನೇಮಕ ರದ್ದುಗೊಳಿಸಿದ ಕೇರಳ ಹೈಕೋರ್ಟ್

- Advertisement -
- Advertisement -

ವಿಶ್ವವಿದ್ಯಾನಿಲಯಗಳ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರೊಂದಿಗೆ ಕೇರಳ ಸರ್ಕಾರ ನಿರಂತರ ಸಂಘರ್ಷದಲ್ಲಿದೆ. ಈ ಮಧ್ಯೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಸರ್ಕಾರಕ್ಕೆ ಹಿನ್ನಡೆಯಾಗಿದ್ದು, ರಾಜ್ಯ ವಿಶ್ವವಿದ್ಯಾಲಯದ ಉಪಕುಲಪತಿ ನೇಮಕವನ್ನು ಕೇರಳ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ.

ಕೇರಳದ ಮೀನುಗಾರಿಕೆ ಮತ್ತು ಸಾಗರ ಅಧ್ಯಯನ ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ಡಾ.ರಿಜಿ ಜಾನ್ ನೇಮಕವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಪ್ರಕ್ರಿಯೆಯಲ್ಲಿ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ನಿಗದಿಪಡಿಸಿದ ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗಿದೆ ಎಂದು ನ್ಯಾಯಾಲಯವು ನೇಮಕಾತಿಯನ್ನು ಕಾನೂನುಬಾಹಿರ ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಯುಜಿಸಿ’ ಎಂಬುವುದು ಶಿಕ್ಷಣ ಸಚಿವಾಲಯದ ಅಡಿಯಲ್ಲಿ ಇರುವ ಶಾಸನಬದ್ಧ ಸಂಸ್ಥೆಯಾಗಿದ್ದು, ಅದು ದೇಶಾದ್ಯಂತ ಉನ್ನತ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣೆಯ ಮೇಲ್ವಿಚಾರಣೆ ಮಾಡುತ್ತದೆ.

ಇದನ್ನೂ ಓದಿ: ಸರ್ಕಾರ v/s ರಾಜ್ಯಪಾಲ: ವಿವಿ ಕುಲಪತಿ ಹುದ್ದೆಯಿಂದ ರಾಜ್ಯಪಾಲರನ್ನು ತೆಗೆದ ಕೇರಳ ಸರ್ಕಾರ

ಯುಜಿಸಿ ಮಾರ್ಗಸೂಚಿಗಳಿಗೆ ಅನುಗುಣವಾಗಿ ಹೊಸ ಉಪಕುಲಪತಿಯನ್ನು ನೇಮಕ ಮಾಡುವಂತೆ ಪ್ರಸ್ತುತ ರಾಜ್ಯಪಾಲರಾಗಿರುವ, ವಿಶ್ವವಿದ್ಯಾಲಯಗಳ ಕುಲಪತಿಯೂ ಅಗಿರುವ ಆರಿಫ್‌ ಖಾನ್ ಅವರಿಗೆ ನ್ಯಾಯಾಲಯ ಸೂಚಿಸಿದೆ.

ಕಳೆದ ತಿಂಗಳು ರಾಜ್ಯಪಾಲರು ಡಾ. ಜಾನ್ ಸೇರಿದಂತೆ ಒಂಬತ್ತು ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಸೂಚಿಸಿದ್ದರು. ಅವರ ನೇಮಕಾತಿಗಳಲ್ಲಿ ಯುಜಿಸಿಯ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿದ್ದರು.

ಕೇರಳದ ಎಪಿಜೆ ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾನಿಲಯದ ಉಪಕುಲಪತಿ ನೇಮಕವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದ ನಂತರ ರಾಜ್ಯಪಾಲರ ಈ ಕ್ರಮ ಕೈಗೊಂಡಿದ್ದರು.

ಇದನ್ನೂ ಓದಿ: ಪಿಎಫ್‌ಐ ಹಿಂಸಾತ್ಮಕ ಹರತಾಳ | ರಾಜ್ಯಕ್ಕೆ 86 ಲಕ್ಷ ರೂ. ನಷ್ಟ: ಹೈಕೋರ್ಟ್‌‌ನಲ್ಲಿ ಕೇರಳ ಸರ್ಕಾರ

ಯುಜಿಸಿ ನಿಯಮಗಳ ಪ್ರಕಾರ, ರಾಜ್ಯ ಸರ್ಕಾರವು ರಚಿಸಿರುವ ಶೋಧನಾ ಸಮಿತಿಯು ವಿಶ್ವವಿದ್ಯಾಲಯದ ಉನ್ನತ ಹುದ್ದೆಗೆ ರಾಜ್ಯಪಾಲರಿಗೆ ಮೂವರ ಹೆಸರನ್ನು ಶಿಫಾರಸು ಮಾಡಬೇಕು ಎಂದು ನ್ಯಾಯಾಲಯ ಹೇಳಿದೆ. ಆದರೆ ಎಪಿಜೆ ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾನಿಲಯದ ಪ್ರಕರಣದಲ್ಲಿ, ರಾಜ್ಯ ಸರ್ಕಾರದ ಶೋಧನಾ ಸಮಿತಿ ಕೇವಲ ಒಂದು ಹೆಸರನ್ನು ಮಾತ್ರ ಶಿಫಾರಸು ಮಾಡಿತ್ತು.

ಇದಾದ ಕೆಲವೇ ದಿನಗಳಲ್ಲಿ ಒಂಬತ್ತು ರಾಜ್ಯ ವಿಶ್ವವಿದ್ಯಾಲಯಗಳ ಉಪಕುಲಪತಿಗಳಿಗೆ ರಾಜೀನಾಮೆ ನೀಡುವಂತೆ ರಾಜ್ಯಪಾಲ ಆರೀಫ್‌ ಖಾನ್ ಸೂಚಿಸಿದ್ದರು. ಇದು ಕೇರಳದ ವಿಶ್ವವಿದ್ಯಾನಿಲಯಗಳ ಕಾರ್ಯನಿರ್ವಹಣೆಯ ಬಗ್ಗೆ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಸಂಘರ್ಷ ಉಂಟುಮಾಡಿತು.

ಈ ತಿಂಗಳ ಆರಂಭದಲ್ಲಿ, ರಾಜ್ಯ ಸಚಿವ ಸಂಪುಟವು ರಾಜ್ಯಪಾಲರನ್ನು ವಿಶ್ವವಿದ್ಯಾಲಯಗಳ ಕುಲಪತಿಯಾಗಿ ತೆಗೆದುಹಾಕಲು ಸುಗ್ರೀವಾಜ್ಞೆ ಅಥವಾ ವಿಶೇಷ ಆದೇಶವನ್ನು ತರಲು ಮತ ಹಾಕಿತ್ತು.

ಇದನ್ನೂ ಓದಿ: ‘ಗೆಟೌಟ್‌‌’: ಪತ್ರಿಕಾಗೋಷ್ಠಿಯಿಂದ ಕೈರಲಿ, ಮೀಡಿಯಾ ಒನ್‌ ಪತ್ರಕರ್ತರನ್ನು ಹೊರಹಾಕಿದ ಕೇರಳ ರಾಜ್ಯಪಾಲ

ಈ ವೇಳೆ ಮಾತನಾಡಿದ್ದ ಕೇರಳದ ಕಾನೂನು ಸಚಿವ ರಾಜೀವ್, ರಾಜ್ಯಪಾಲರ ಅಧಿಕಾರವನ್ನು ಮೊಟಕುಗೊಳಿಸಲು ಸರ್ಕಾರ ಪ್ರಯತ್ನಿಸುತ್ತಿಲ್ಲ ಎಂದು ಹೇಳಿದ್ದರು. “ರಾಜ್ಯಪಾಲರ ಅಧಿಕಾರವನ್ನು ಮೊಟಕುಗೊಳಿಸಲು ನಮಗೆ ಯಾವುದೇ ಅಧಿಕಾರವಿಲ್ಲ. ಇದು ಸಾಂವಿಧಾನಿಕ ಅಧಿಕಾರವಾಗಿದೆ, ಅದರ ಕಾರ್ಯಗಳನ್ನು ಸಂವಿಧಾನದಲ್ಲಿ ಚೆನ್ನಾಗಿ ವಿವರಿಸಲಾಗಿದೆ. ನಾವು ಕುಲಪತಿ ನೇಮಕದ ಬಗ್ಗೆ ಸುಗ್ರೀವಾಜ್ಞೆಯನ್ನು ಮಾತ್ರ ಅಂಗೀಕರಿಸಿದ್ದೇವೆ. ಅದು ರಾಜ್ಯದ ವಿಶೇಷ ಶಾಸಕಾಂಗ ಸಾಮರ್ಥ್ಯವಾಗಿದೆ. ಕುಲಪತಿಗಳು ಶಿಕ್ಷಣ ಕ್ಷೇತ್ರದ ಗಣ್ಯ ವ್ಯಕ್ತಿಯಾಗಬೇಕು ಎಂದು ನಾವು ಭಾವಿಸುತ್ತೇವೆ” ಎಂದು ಸಚಿವರು ಹೇಳಿದ್ದರು.

ಕೇರಳ ಸಚಿವ ಸಂಪುಟದ ಕ್ರಮಕ್ಕೆ ಪ್ರತಿಕ್ರಿಯಿಸಿದ್ದ ರಾಜ್ಯಪಾಲ ಆರಿಫ್‌ ಖಾನ್, ಸುಗ್ರೀವಾಜ್ಞೆಯನ್ನು ರಾಜಭವನಕ್ಕೆ ಕಳುಹಿಸಿದರೆ, ಅದನ್ನು ರಾಷ್ಟ್ರಪತಿಗಳಿಗೆ ಉಲ್ಲೇಖಿಸುವುದಾಗಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...