Homeರಾಜಕೀಯಸರ್ಕಾರ v/s ರಾಜ್ಯಪಾಲ | ಚೆನ್ನೈ ಗಣರಾಜ್ಯೋತ್ಸವ ಪರೇಡ್‌ ಮುಂಚೂಣಿಯಲ್ಲಿ ‘ತಮಿಳುನಾಡು ಚಿರಾಯುವಾಗಲಿ’ ಟ್ಯಾಬ್ಲೋ!

ಸರ್ಕಾರ v/s ರಾಜ್ಯಪಾಲ | ಚೆನ್ನೈ ಗಣರಾಜ್ಯೋತ್ಸವ ಪರೇಡ್‌ ಮುಂಚೂಣಿಯಲ್ಲಿ ‘ತಮಿಳುನಾಡು ಚಿರಾಯುವಾಗಲಿ’ ಟ್ಯಾಬ್ಲೋ!

- Advertisement -
- Advertisement -

ತಮಿಳುನಾಡಿನ ಚೆನ್ನೈನಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ‘ತಮಿಳುನಾಡು ವಾಲ್‌ಗ’ (ತಮಿಳುನಾಡು ಚಿರಾಯುವಾಗಲಿ) ಎಂದು ಬರೆದಿರುವ ಬೃಹತ್ ಬ್ಯಾನರ್‌‌ನ ಟ್ಯಾಬ್ಲೋ ಮುಂಚೂಣಿಯಲ್ಲಿ ಕಾಣಿಸಿಕೊಂಡಿದೆ. ತಮಿಳುನಾಡನ್ನು ‘ತಮಿಳಗಂ’ ಎಂದು ಕರೆಯಬೇಕು ಎಂದು ಆಗ್ರಹಿಸಿ ರಾಜ್ಯಪಾಲ ಆರ್‌.ಎನ್‌. ರವಿ ಸೃಷ್ಟಿಸಿದ್ದ ವಿವಾದದ ನಡುವೆ ಟ್ಯಾಬ್ಲೋ ಭಾರಿ ರಾಜಕೀಯ ಮಹತ್ವ ಪಡೆದುಕೊಂಡಿದೆ.

ಜನವರಿ ಮೊದಲ ವಾರದಲ್ಲಿ, ರಾಜ್ಯಪಾಲ ರವಿ ಅವರು ತಮಿಳುಬನಾಡು ರಾಜಭವನದಲ್ಲಿ ಮಾಡಿದ ಭಾಷಣದಲ್ಲಿ ರಾಜ್ಯಕ್ಕೆ ‘ತಮಿಳಗಂ’ ಎಂಬ ಹಸರು ಹೆಚ್ಚು ಸೂಕ್ತವಾಗಿದೆ ಎಂದು ಸೂಚಿಸುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದರು. ಇಷ್ಟೆ ಅಲ್ಲದೆ ರಾಜಭವನದ ‘ಪೊಂಗಲ್’ ಆಚರಣೆಯ ಆಹ್ವಾನ ಪತ್ರದಲ್ಲಿ ಕೂಡಾ ರಾಜ್ಯವನ್ನು ‘ತಮಿಳಗಂ’ ಎಂದು ಉಲ್ಲೇಖಿಸಲಾಗಿತ್ತು. ಈ ಘಟನೆಯು ತಮಿಳುನಾಡಿನಲ್ಲಿ ಭಾರಿ ಪ್ರತಿಭಟನೆ ಹುಟ್ಟು ಹಾಕಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗಣರಾಜ್ಯೋತ್ಸವದ ಹಿಂದಿನ ದಿನವಾದ ಬುಧವಾರ ಚೆನ್ನೈನಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ರಾಜ್ಯಪಾಲ ರವಿ ಅವರು, ತಮ್ಮ ಭಾಷಣದ ಕೊನೆಯಲ್ಲಿ ‘ವಾಲ್‌ಗ ತಮಿಳುನಾಡು’ (ತಮಿಳುನಾಡುಗೆ ಚಿರಾಯುವಾಗಲಿ) ಮತ್ತು ‘ವಾಲ್‌ಗ ಭಾರತಂ’ (ಭಾರತ ಚಿರಾಯುವಾಗಲಿ) ಎಂಬ ಘೋಷಣೆಗಳೊಂದಿಗೆ ತಮ್ಮ ಭಾಷಣವನ್ನು ಕೊನೆಗೊಳಿಸಿದ್ದರು.

ಜನವರಿ 18ರಂದು ಮಾತನಾಡಿದ್ದ ಅವರು, “ತಮಿಳುನಾಡಿನ ಹೆಸರನ್ನು ಬದಲಾಯಿಸಬೇಕು ಎಂದು ನನ್ನ ಸಲಹೆಯನ್ನು ತಪ್ಪಾಗಿ ವ್ಯಾಖ್ಯಾನಿಸಲಾಗಿದೆ. ನನ್ನ ಭಾಷಣದ ಹಿನ್ನೆಲೆಯನ್ನು ಅರ್ಥಮಾಡಿಕೊಳ್ಳದೆ, ರಾಜ್ಯಪಾಲರು ತಮಿಳುನಾಡು ಪದಕ್ಕೆ ವಿರುದ್ಧವಾಗಿದ್ದಾರೆ ಎಂಬ ವಾದಗಳು ಚರ್ಚೆಯ ವಿಷಯವಾಗಿದೆ. ಹಾಗಾಗಿ ಇದಕ್ಕೆ ಅಂತ್ಯ ಹಾಡಲು ಈ ಸ್ಪಷ್ಟನೆ ನೀಡುತ್ತಿದ್ದೇನೆ” ಎಂದು  ಹೇಳಿದ್ದರು.

ಆದಾಗ್ಯೂ, ಎರಡು ಎಡ ಪಕ್ಷಗಳು ಸೇರಿದಂತೆ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನ ನಾಲ್ಕು ಮಿತ್ರಪಕ್ಷಗಳು ಬುಧವಾರ ರಾಜ್ಯಪಾಲ ರವಿ ಆಯೋಜಿಸಿದ್ದ ಗಣರಾಜ್ಯೋತ್ಸವದ ಸಭೆಯನ್ನು ಬಹಿಷ್ಕರಿಸುವುದಾಗಿ ಘೋಷಿಸಿದ್ದವು. ಈ ಹಿಂದೆ ಕೂಡಾ ಆಡಳಿತರೂಢ ಮಿತ್ರಪಕ್ಷಗಳು ಪೊಂಗಲ್‌ ಆಚರಣೆಯ ಸಭೆಯನ್ನು ಬಹಿಷ್ಕರಿಸಿದ್ದರು.

ಆಡಳಿತರೂಢ ಮಿತ್ರಪಕ್ಷಗಳಾದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ -ಮಾರ್ಕ್ಸ್‌ವಾದಿ (ಸಿಪಿಐ-ಎಂ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ), ತೋಲ್ ತಿರುಮವಳವನ್ ನೇತೃತ್ವದ ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಮತ್ತು ತಮಿಳಗ ವಾಳ್ವುರಿಮೈ ಕಚ್ಚಿ (ಟಿವಿಕೆ) ಗುರುವಾರ ನಡೆಯಲಿರುವ ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ಘೋಷಿಸಿವೆ.

ಸಿಪಿಐ ರಾಜ್ಯ ಕಾರ್ಯದರ್ಶಿ ಆರ್. ಮುತರಸನ್ ನೀಡಿರುವ ಹೇಳಿಕೆಯಲ್ಲಿ, “ಕಾರ್ಯಕ್ರಮದ ಆಹ್ವಾನ ಪತ್ರದಲ್ಲಿ ರವಿಯನ್ನು ‘ತಮಿಳುನಾಡು ರಾಜ್ಯಪಾಲ’ ಎಂದು ಉಲ್ಲೇಖಿಸಿದ್ದರೂ, ಅವರು ತಮ್ಮ ಸಾಂವಿಧಾನಿಕ ಕರ್ತವ್ಯಗಳನ್ನು ಮಾಡಿಲ್ಲ. ತಮಿಳುನಾಡು ವಿಧಾನಸಭೆಯಿಂದ 20 ಕ್ಕೂ ಹೆಚ್ಚು ಮಸೂದೆಗಳನ್ನು ಅಂಗೀಕರಿಸಲಾಗಿದ್ದು, ಆದರೆ ರಾಜ್ಯಪಾಲರು ಅವುಗಳನ್ನು ಹಾಗೆ ಇಟ್ಟಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇದಷ್ಟೆ ಅಲ್ಲದೆ, ಅವರು ಆರ್‌ಎಸ್‌ಎಸ್‌ ಪರ ಹೇಳಿಕೆಗಳನ್ನು ನೀಡುವುದನ್ನು ಮುಂದುವರೆಸಿದ್ದಾರೆ. ಆದ್ದರಿಂದ, ಗುರುವಾರ ರಾಜಭವನದಲ್ಲಿ ಆಯೋಜಿಸಲಾದ ‘ಅಟ್ ಹೋಮ್’ ಕಾರ್ಯಕ್ರಮವನ್ನು ಬಹಿಷ್ಕರಿಸಲು ಪಕ್ಷ ನಿರ್ಧರಿಸಿದೆ” ಎಂದು ಎಂದು ಮುತರಸನ್ ಹೇಳಿದ್ದಾರೆ.

ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಕೆ. ಬಾಲಕೃಷ್ಣನ್ ಅವರ ಹೇಳಿಕೆಯಲ್ಲಿ, ರಾಜ್ಯಪಾಲರು ಬಾಕಿ ಉಳಿಸಿರುವ ಮಸೂದೆಗಳು ಸೇರಿದಂತೆ ಸದನದಿಂದ ಹೊರನಡೆದ ಬಗ್ಗೆ ರಾಜ್ಯದ ಜನರಲ್ಲಿ ಕ್ಷಮೆಯಾಚಿಸಿಲ್ಲ ಜೊತೆಗೆ ಅದರ ಬಗ್ಗೆ ವಿಷಾದ ಕೂಡಾ ವ್ಯಕ್ತಪಡಿಸಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಸಿಪಿಐ(ಎಂ) ರಾಜಭವನದ ಕಾರ್ಯಕ್ರಮಕ್ಕೆ ಹಾಜರಾಗುವುದಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಲೋಕಸಭಾ ಸದಸ್ಯರಾದ ವಿಸಿಕೆ ಸಂಸ್ಥಾಪಕ ತಿರುಮಾವಲವನ್ ಅವರು ಕೂಡಾ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ರಾಜಭವನದ ಕಾರ್ಯಕ್ರಮವನ್ನು ಬಹಿಷ್ಕರಿಸುವ ತಮ್ಮ ಪಕ್ಷದ ನಿರ್ಧರಿಸಿದೆ ಎಂದು ಹೇಳಿದ್ದಾರೆ. ಟಿವಿಕೆ ಕೂಡ ‘ಅಟ್ ಹೋಮ್’ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಅದರ ಸಂಸ್ಥಾಪಕ ಮತ್ತು ಪಂರುತಿ ಶಾಸಕ ಟಿ ವೇಲು ಮುರುಗನ್‌ ಘೋಷಿಸಿದ್ದಾರೆ.

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ವಿಚಾರಕ್ಕೆ ಜಾಮಿಯಾ ವಿವಿಯಲ್ಲಿ ಗಲಾಟೆ; 12ಕ್ಕೂ ಹೆಚ್ಚು ವಿದ್ಯಾರ್ಥಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...