Homeಕರ್ನಾಟಕರಾಜ್ಯ ಬಜೆಟ್: ಸುಳ್ಳು ಸುದ್ದಿ ತಡೆಗೆ ಸತ್ಯ ಶೋಧನಾ ತಂಡ ರಚನೆ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯ ಬಜೆಟ್: ಸುಳ್ಳು ಸುದ್ದಿ ತಡೆಗೆ ಸತ್ಯ ಶೋಧನಾ ತಂಡ ರಚನೆ: ಸಿಎಂ ಸಿದ್ದರಾಮಯ್ಯ ಘೋಷಣೆ

- Advertisement -
- Advertisement -

ಸುಳ್ಳು ಸುದ್ದಿ ತಡೆಗಟ್ಟಲು ಐಟಿಬಿಟಿ ಇಲಾಖೆಯ ಸಹಯೋಗದಲ್ಲಿ ಸತ್ಯ ಶೋಧನಾ ತಂಡ ಹಾಗೂ ವಿಶೇಷ ಕೋಶ ರಚನೆ ಮಾಡಲಾಗುವುದು. ಡೀಫ್​ ಫೇಕ್​​ ಹಾಗೂ ಸೈಬರ್ ಕ್ರೈಂ ತಡೆಗೆ 43 ಹೊಸ ಪೊಲೀಸ್​ ಸಿಇಎನ್​ ಠಾಣೆ ಆರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ರಾಜ್ಯದ ಅಸ್ಮಿತೆ ಮತ್ತು ಸಂಸ್ಕೃತಿಗೆ ಅನುಗುಣವಾಗಿ, ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡನ್ನು ಸಿದ್ಧಪಡಿಸಲು ರಾಜ್ಯ ಶಿಕ್ಷಣ ನೀತಿ ಆಯೋಗವನ್ನು ರಚಿಸಲಾಗಿದೆ. ಆಯೋಗವು ಶೀಘ್ರದಲ್ಲಿಯೇ ವರದಿಯನ್ನು ಸಲ್ಲಿಸಲಿದ್ದು, ಅದರಂತೆ ಪರಿಶೀಲಿಸಿ ರಾಜ್ಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರು ವಲಸೆ ಹೋದ ಸಂದರ್ಭದಲ್ಲಿ ಅವರಿಗೆ ತಾತ್ಕಾಲಿಕ ವಸತಿ ಸೌಲಭ್ಯ ಒದಗಿಸಲು ಆಯ್ದ 10 ಜಿಲ್ಲೆಗಳಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ತಾತ್ಕಾಲಿಕ ವಸತಿ ಸಮುಚ್ಚಯಗಳನ್ನು ನಿರ್ಮಿಸಲಾಗುವುದು. ಗಿಗ್ ಕಾರ್ಮಿಕರ ಬದುಕಿನ ಭದ್ರತೆಗಾಗಿ Platform-Based Gig Workers Fund and Welfare Fee Bill ಎಂಬ ಹೊಸ ವಿಧೇಯಕವನ್ನು ಜಾರಿಗೆ ತರಲಾಗುವುದು. ಈ ಮೂಲಕ ಅರ್ಹ ಆನ್-ಲೈನ್ ವಹಿವಾಟುಗಳ ಮೇಲೆ ಸೆಸ್ ವಿಧಿಸಿ ಗಿಗ್ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.

‘ಅನ್ನ ಸುವಿಧಾ’ ಯೋಜನೆಯಡಿ ಹೋಮ್​ ಡೆಲಿವರಿ ಆ್ಯಪ್​ ​ ಮೂಲಕ 80 ವರ್ಷ ದಾಟಿದ ಹಿರಿಯ ನಾಗರಿಕರ ಮನೆ ಬಾಗಿಲಿಗೆ ಆಹಾರ ತಲುಪಿಸುವ ಯೋಜನೆ ಜಾರಿಗೊಳಿಸಲಾಗುವುದು. ಸರ್ಕಾರದಿಂದ 50 ಕೆಫೆ ಹೋಟೆಲ್ ಸ್ಥಾಪಿಸಲಾಗುವುದು. ಇದಕ್ಕಾಗಿ, 7.5 ಕೋಟಿ ರೂ. ಮೀಸಲಿಡಲಾಗಿದೆ. ಕೈಗೆಟುಕುವ ದರದಲ್ಲಿ ಸಂಸ್ಕರಿಸಿದ ಸಿರಿಧಾನ್ಯಗಳು ಹಾಗೂ ಮೌಲ್ಯವರ್ಧಿತ ಸಿರಿಧಾನ್ಯ ಉತ್ಪನ್ನಗಳನ್ನು ಒದಗಿಸಲು ‘ನಮ್ಮ ಮಿಲ್ಲೆಟ್’ ಎಂಬ ಹೊಸ ಕಾರ್ಯಕ್ರಮ ಪ್ರಾರಂಭಿಸಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

ಇದನ್ನೂ ಓದಿ : ಬಜೆಟ್ ಮಂಡನೆ ವೇಳೆ ಕೇಂದ್ರದ ಆರ್ಥಿಕ ತಾರತಮ್ಯ ಪ್ರಸ್ತಾಪಿಸಿದ ಸಿಎಂ: ಸದನದಿಂದ ಹೊರ ನಡೆದ ಬಿಜೆಪಿ ಶಾಸಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...