Homeಕರ್ನಾಟಕಹಿಂದೂ ಸಂಘಟನೆಗಳ ವಿರೋಧ: ಮಸೀದಿ, ಮದರಸಾಗಳಿಗೆ ಬಿಡುಗಡೆ ಮಾಡಿದ್ದ ಗೌರವಧನ ಹಿಂಪಡೆದ ಸರ್ಕಾರ

ಹಿಂದೂ ಸಂಘಟನೆಗಳ ವಿರೋಧ: ಮಸೀದಿ, ಮದರಸಾಗಳಿಗೆ ಬಿಡುಗಡೆ ಮಾಡಿದ್ದ ಗೌರವಧನ ಹಿಂಪಡೆದ ಸರ್ಕಾರ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ 41 ಮಸೀದಿಗಳು ಮತ್ತು ಮದರಸಾಗಳ ಮೌಲ್ವಿಗಳಿಗೆ ‘ತಸ್ತೀಕ್’ (ಗೌರವ) ಭತ್ಯೆ ಬಿಡುಗಡೆ ಮಾಡುವುದರ ವಿರುದ್ಧ ಹಿಂದೂ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, 764 ಹಿಂದೂಯೇತರ ದೇವಾಲಯಗಳಿಗೆ ಬಿಡುಗಡೆ ಮಾಡಿದ ಗೌರವ ಧನವನ್ನು ಹಿಂಪಡೆಯಲು ಧಾರ್ಮಿಕ ದತ್ತಿ ಇಲಾಖೆ ನಿರ್ಧರಿಸಿದೆ.

“ರಾಜ್ಯದಾದ್ಯಂತ 27,000 ಹಿಂದೂ ದೇವಾಲಯಗಳಲ್ಲಿ ತಸ್ತೀಕ್ ಮೊತ್ತವನ್ನು ಪಾವತಿಸಲಾಗುತ್ತಿದೆ. ಸರ್ಕಾರವು ಈ ಉದ್ದೇಶಕ್ಕಾಗಿ ಪ್ರತಿವರ್ಷ 133 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಇತರ ಧರ್ಮಗಳ ಸುಮಾರು 764 ದೇಗುಲಗಳು ಸಹ ತಸ್ತೀಕ್ ಭತ್ಯೆ ಸ್ವೀಕರಿಸುತ್ತಿದ್ದವು. ಸಚಿವರ ನಿರ್ದೇಶನದ ಮೇರೆಗೆ ಇತರ ಧರ್ಮಗಳ 764 ದೇಗುಲಗಳಿಗೆ ಬಿಡುಗಡೆಯಾಗುತ್ತಿರುವ ಮೊತ್ತವನ್ನು ಹಿಂಪಡೆಯಲು ಕ್ರಮ ಕೈಗೊಳ್ಳಲಾಗುವುದು “ಎಂದು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಸೀದಿಗಳ ಮೌಲ್ವಿಗಳಿಗೆ ಆರ್ಥಿಕ ನೆರವು ಅಥವಾ ತಸ್ತಿಕ್ ನೀಡುವ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ನಿರ್ಧಾರವನ್ನು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ತೀವ್ರವಾಗಿ ವಿರೋಧಿಸಿತು.

ಇದನ್ನೂ ಓದಿ: 10 ರಲ್ಲಿ8 ಭಾರತೀಯ ಅಮೆರಿಕನ್ನರು ಮೇಲ್ಜಾತಿ ಅಥವಾ ಸಾಮಾನ್ಯ ಜಾತಿಯೊಂದಿಗೆ ಗುರುತಿಸಿಕೊಳ್ಳಲು ಬಯಸುತ್ತಾರೆ – ಸಮೀಕ್ಷೆ

“ಸರ್ಕಾರ ಈ ನಿರ್ಧಾರವನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕು” ಎಂದು ವಿಎಚ್‌ಪಿ ವಿಭಾಗೀಯ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಮಂಗಳೂರಿನಲ್ಲಿ ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಸಲ್ಲಿಸಿದ ಜ್ಞಾಪಕ ಪತ್ರದಲ್ಲಿ ಆಗ್ರಹಿಸಿದ್ದರು.

ಕೊರೊನಾ ಲಾಕ್‌ಡೌನ್ ಕಾರಣ ದೇವಾಲಯದ ಅರ್ಚಕರಿಗೆ ತಸ್ತೀಕ್ ಭತ್ಯೆ ನೀಡುವ ಸರ್ಕಾರದ ನಿರ್ಧಾರವನ್ನು ವಿಶ್ವ ಹಿಂದೂ ಪರಿಷತ್ ಸ್ವಾಗತಿಸಿತ್ತು. ಆದರೆ, ದಕ್ಷಿಣ ಕನ್ನಡದ 41 ಮಸೀದಿಗಳು ಮತ್ತು ಮದರಸಾಗಳ ಮಾಲ್ವಿಗಳಿಗೆ ವಾರ್ಷಿಕ 48,000 ರೂ.ಗಳ ಗೌರವ ಭತ್ಯೆಯನ್ನು ಇಲಾಖೆಯ ಮೂಲಕ ಬಿಡುಗಡೆ ಮಾಡುವ ನಿರ್ಧಾರ ಸರಿಯಲ್ಲ. ದೇವಾಲಯಗಳಲ್ಲಿ ಸಂಗ್ರಹಿಸಿದ ಹಣವನ್ನು ದೇವಾಲಯಗಳ ಕಲ್ಯಾಣಕ್ಕೆ ಮತ್ತು ಹಿಂದೂಗಳಿಗಾಗಿ ಬಳಸಿಕೊಳ್ಳಬೇಕು” ಎಂದು ಶರಣ್ ಪಂಪ್‌ವೆಲ್ ಆಗ್ರಹಿಸಿದ್ದಾರೆ.

ಹಿಂದೂ ಧಾರ್ಮಿಕ ಮುಖಂಡರು ಮತ್ತು ಇತರ ಸಂಘಟನೆಗಳ ಆಕ್ರೋಶದ ಹಿನ್ನೆಲೆಯಲ್ಲಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯಿಂದ ವಿವಿಧ ಧರ್ಮಗಳ ದೇಗುಲಗಳಿಗೆ ಹಣವನ್ನು ಬಿಡುಗಡೆ ಮಾಡುವುದನ್ನು ಸ್ಥಗಿತಗೊಳಿಸಲು ಆದೇಶಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

’ತಸ್ತೀಕ್ ಭತ್ಯೆಯನ್ನು ಇತರ ಧರ್ಮಗಳ ಪೂಜಾ ಸ್ಥಳಗಳಿಗೆ ಬಳಸಲಾಗುತ್ತಿದೆ ಎಂದು ನನಗೆ ಮಾಹಿತಿ ನೀಡಲಾಗಿದೆ. ಇತರ ಧರ್ಮಗಳ ದೇವಾಲಯಗಳು ಸಂಬಂಧಪಟ್ಟ ಇಲಾಖೆಗಳ ಸಹಾಯವನ್ನು ಪಡೆಯಬೇಕು” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಪ್ರಧಾನಿ ಮೋದಿಗೆ 100 ರೂ. ಕಳಿಸಿ ಗಡ್ಡ ಬೋಳಿಸಿಕೊಳ್ಳಿ ಎಂದ ಚಹಾ ಮಾರಾಟಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹಣವನ್ನು ತೆಗೆದು ಯಡಿಯೂರಪ್ಪ ಮತ್ತು ಹಿಂದುತ್ವದ ನಾಯಿಗಳ ಎದೆಗೆ ಹಾಕಿ ಅಲ್ಪಸಂಖ್ಯಾತರಿಗೆ ನಿಮ್ಮ ಬೇವರ್ಸಿಗಳ ಹಣ ಬೇಡ ನಿಮ್ಮ ಸರ್ಕಾರದ ಪ್ಯಾಕೆಜ್ ಗಳಲ್ಲಿ ಅಲ್ಲ ಜನ ಸಾಮಾನ್ಯರ ಜೀವನ ಉದ್ದರ ಆಗಿರೋದು

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...