Homeಕರ್ನಾಟಕಹಿಂದೂ ಸಂಘಟನೆಗಳ ವಿರೋಧ: ಮಸೀದಿ, ಮದರಸಾಗಳಿಗೆ ಬಿಡುಗಡೆ ಮಾಡಿದ್ದ ಗೌರವಧನ ಹಿಂಪಡೆದ ಸರ್ಕಾರ

ಹಿಂದೂ ಸಂಘಟನೆಗಳ ವಿರೋಧ: ಮಸೀದಿ, ಮದರಸಾಗಳಿಗೆ ಬಿಡುಗಡೆ ಮಾಡಿದ್ದ ಗೌರವಧನ ಹಿಂಪಡೆದ ಸರ್ಕಾರ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ 41 ಮಸೀದಿಗಳು ಮತ್ತು ಮದರಸಾಗಳ ಮೌಲ್ವಿಗಳಿಗೆ ‘ತಸ್ತೀಕ್’ (ಗೌರವ) ಭತ್ಯೆ ಬಿಡುಗಡೆ ಮಾಡುವುದರ ವಿರುದ್ಧ ಹಿಂದೂ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, 764 ಹಿಂದೂಯೇತರ ದೇವಾಲಯಗಳಿಗೆ ಬಿಡುಗಡೆ ಮಾಡಿದ ಗೌರವ ಧನವನ್ನು ಹಿಂಪಡೆಯಲು ಧಾರ್ಮಿಕ ದತ್ತಿ ಇಲಾಖೆ ನಿರ್ಧರಿಸಿದೆ.

“ರಾಜ್ಯದಾದ್ಯಂತ 27,000 ಹಿಂದೂ ದೇವಾಲಯಗಳಲ್ಲಿ ತಸ್ತೀಕ್ ಮೊತ್ತವನ್ನು ಪಾವತಿಸಲಾಗುತ್ತಿದೆ. ಸರ್ಕಾರವು ಈ ಉದ್ದೇಶಕ್ಕಾಗಿ ಪ್ರತಿವರ್ಷ 133 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಇತರ ಧರ್ಮಗಳ ಸುಮಾರು 764 ದೇಗುಲಗಳು ಸಹ ತಸ್ತೀಕ್ ಭತ್ಯೆ ಸ್ವೀಕರಿಸುತ್ತಿದ್ದವು. ಸಚಿವರ ನಿರ್ದೇಶನದ ಮೇರೆಗೆ ಇತರ ಧರ್ಮಗಳ 764 ದೇಗುಲಗಳಿಗೆ ಬಿಡುಗಡೆಯಾಗುತ್ತಿರುವ ಮೊತ್ತವನ್ನು ಹಿಂಪಡೆಯಲು ಕ್ರಮ ಕೈಗೊಳ್ಳಲಾಗುವುದು “ಎಂದು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಸೀದಿಗಳ ಮೌಲ್ವಿಗಳಿಗೆ ಆರ್ಥಿಕ ನೆರವು ಅಥವಾ ತಸ್ತಿಕ್ ನೀಡುವ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ನಿರ್ಧಾರವನ್ನು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ತೀವ್ರವಾಗಿ ವಿರೋಧಿಸಿತು.

ಇದನ್ನೂ ಓದಿ: 10 ರಲ್ಲಿ8 ಭಾರತೀಯ ಅಮೆರಿಕನ್ನರು ಮೇಲ್ಜಾತಿ ಅಥವಾ ಸಾಮಾನ್ಯ ಜಾತಿಯೊಂದಿಗೆ ಗುರುತಿಸಿಕೊಳ್ಳಲು ಬಯಸುತ್ತಾರೆ – ಸಮೀಕ್ಷೆ

“ಸರ್ಕಾರ ಈ ನಿರ್ಧಾರವನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕು” ಎಂದು ವಿಎಚ್‌ಪಿ ವಿಭಾಗೀಯ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಮಂಗಳೂರಿನಲ್ಲಿ ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಸಲ್ಲಿಸಿದ ಜ್ಞಾಪಕ ಪತ್ರದಲ್ಲಿ ಆಗ್ರಹಿಸಿದ್ದರು.

ಕೊರೊನಾ ಲಾಕ್‌ಡೌನ್ ಕಾರಣ ದೇವಾಲಯದ ಅರ್ಚಕರಿಗೆ ತಸ್ತೀಕ್ ಭತ್ಯೆ ನೀಡುವ ಸರ್ಕಾರದ ನಿರ್ಧಾರವನ್ನು ವಿಶ್ವ ಹಿಂದೂ ಪರಿಷತ್ ಸ್ವಾಗತಿಸಿತ್ತು. ಆದರೆ, ದಕ್ಷಿಣ ಕನ್ನಡದ 41 ಮಸೀದಿಗಳು ಮತ್ತು ಮದರಸಾಗಳ ಮಾಲ್ವಿಗಳಿಗೆ ವಾರ್ಷಿಕ 48,000 ರೂ.ಗಳ ಗೌರವ ಭತ್ಯೆಯನ್ನು ಇಲಾಖೆಯ ಮೂಲಕ ಬಿಡುಗಡೆ ಮಾಡುವ ನಿರ್ಧಾರ ಸರಿಯಲ್ಲ. ದೇವಾಲಯಗಳಲ್ಲಿ ಸಂಗ್ರಹಿಸಿದ ಹಣವನ್ನು ದೇವಾಲಯಗಳ ಕಲ್ಯಾಣಕ್ಕೆ ಮತ್ತು ಹಿಂದೂಗಳಿಗಾಗಿ ಬಳಸಿಕೊಳ್ಳಬೇಕು” ಎಂದು ಶರಣ್ ಪಂಪ್‌ವೆಲ್ ಆಗ್ರಹಿಸಿದ್ದಾರೆ.

ಹಿಂದೂ ಧಾರ್ಮಿಕ ಮುಖಂಡರು ಮತ್ತು ಇತರ ಸಂಘಟನೆಗಳ ಆಕ್ರೋಶದ ಹಿನ್ನೆಲೆಯಲ್ಲಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯಿಂದ ವಿವಿಧ ಧರ್ಮಗಳ ದೇಗುಲಗಳಿಗೆ ಹಣವನ್ನು ಬಿಡುಗಡೆ ಮಾಡುವುದನ್ನು ಸ್ಥಗಿತಗೊಳಿಸಲು ಆದೇಶಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

’ತಸ್ತೀಕ್ ಭತ್ಯೆಯನ್ನು ಇತರ ಧರ್ಮಗಳ ಪೂಜಾ ಸ್ಥಳಗಳಿಗೆ ಬಳಸಲಾಗುತ್ತಿದೆ ಎಂದು ನನಗೆ ಮಾಹಿತಿ ನೀಡಲಾಗಿದೆ. ಇತರ ಧರ್ಮಗಳ ದೇವಾಲಯಗಳು ಸಂಬಂಧಪಟ್ಟ ಇಲಾಖೆಗಳ ಸಹಾಯವನ್ನು ಪಡೆಯಬೇಕು” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಪ್ರಧಾನಿ ಮೋದಿಗೆ 100 ರೂ. ಕಳಿಸಿ ಗಡ್ಡ ಬೋಳಿಸಿಕೊಳ್ಳಿ ಎಂದ ಚಹಾ ಮಾರಾಟಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹಣವನ್ನು ತೆಗೆದು ಯಡಿಯೂರಪ್ಪ ಮತ್ತು ಹಿಂದುತ್ವದ ನಾಯಿಗಳ ಎದೆಗೆ ಹಾಕಿ ಅಲ್ಪಸಂಖ್ಯಾತರಿಗೆ ನಿಮ್ಮ ಬೇವರ್ಸಿಗಳ ಹಣ ಬೇಡ ನಿಮ್ಮ ಸರ್ಕಾರದ ಪ್ಯಾಕೆಜ್ ಗಳಲ್ಲಿ ಅಲ್ಲ ಜನ ಸಾಮಾನ್ಯರ ಜೀವನ ಉದ್ದರ ಆಗಿರೋದು

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...