HomeUncategorizedಬಿಜೆಪಿ ನಾಯಕರ ವಿರುದ್ಧದ ಗಂಭೀರ ಪ್ರಕರಣಗಳನ್ನು ಹಿಂಪಡೆದ ಸರ್ಕಾರ: ಹಲವರಿಂದ ಖಂಡನೆ

ಬಿಜೆಪಿ ನಾಯಕರ ವಿರುದ್ಧದ ಗಂಭೀರ ಪ್ರಕರಣಗಳನ್ನು ಹಿಂಪಡೆದ ಸರ್ಕಾರ: ಹಲವರಿಂದ ಖಂಡನೆ

ಇನ್ನೂ ಇತ್ಯರ್ಥವಾಗದೇ ಉಳಿದಿರುವ ರೈತರ, ಕನ್ನಡಪರ ಹೊರಾಟಗಾರರ ಪ್ರಕರಣಗಳನ್ನು ಹಿಂಪಡೆಯಲು ಉಪಯೋಗಿಸದೇ ಇಂತಹ ನೀಚ ಕೆಲಸಕ್ಕೆ ಮುಂದಾಗಿರುವ ಈ ಲಜ್ಜೆಗೇಡಿತನದ ಸರ್ಕಾರ ಈಗ ಗಂಭಿರ ಸ್ವರೂಪದ ಪ್ರಕರಣಗಳನ್ನು ಕೈಬಿಡುವುದರ ಮೂಲಕ ಜನರ ಮುಂದೆ ಬೆತ್ತಲಾಗಿದೆ ಎಂದು ನಟರಾಜ್ ಗೌಡ ಹೇಳಿದ್ದಾರೆ.

- Advertisement -
- Advertisement -

ಬಿಜೆಪಿ ನಾಯಕರ ಮತ್ತು ಅವರ ಬೆಂಬಲಿಗರ ಮೇಲೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಗಂಭಿರ ಸ್ವರೂಪದ ಹಲವು ಪ್ರಕರಣಗಳನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.

ಕಾನೂನು ಇಲಾಖೆ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಸರಕಾರಿ ವ್ಯಾಜ್ಯಗಲ ಇಲಾಖೆಯ ಅಭಿಪ್ರಾಯವನ್ನು ಕಡೆಗಣಿಸಿ ಅರಣ್ಯ ಸಚಿವ ಆನಂದ್ ಸಿಂಗ್, ಸಂಸದ ಪ್ರತಾಪ್ ಸಿಂಹ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಬಿಜೆಪಿ ಶಾಸಕ ನೆಹರು ಓಲೆಕಾರ್ ಸೇರಿದಂತೆ ಇತರ ಬಿಜೆಪಿ ನಾಯಕರು ಮತ್ತು ಬೆಂಬಲಿಗರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲಾಗಿದೆ.

ಇತ್ತೀಚೆಗೆ ನಡೆದ ಸಚಿವ ಸಂಪುಟದಲ್ಲಿ ಈ ಸಂಬಂಧ ತೀರ್ಮಾನ ಕೈಗೊಳ್ಳಲಾಗಿತ್ತು. “ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಮಾತ್ರ ವಾಪಸ್ ಪಡೆಯಲಾಗುತ್ತಿದೆ. ಆದರೆ, ಯಾವುದೇ ವೈಯಕ್ತಿಕ ಪ್ರಕರಣಗಳನ್ನು ಹಿಂಪಡೆಯಲಾಗುವುದಿಲ್ಲ ಎಂದು ಸ್ವತಃ ಕಾನೂನು ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಸ್ಪಷ್ಟನೆ ನೀಡಿದ್ದರು.

ಇದನ್ನೂ ಓದಿ: ವಿವಾದಾತ್ಮಕ ವಿಡಿಯೋ: ಗಲಭೆಗಳಲ್ಲಿ ಭಾಗಿಯಾದ ಆರೋಪಿಗೆ ʼಎಲ್ಲಾ ಕೇಸು ತೆಗೆದು ಹಾಕುತ್ತೇವೆʼ ಎಂದ ಗೃಹ ಸಚಿವರು!

ರಾಜ್ಯ ಬಿಜೆಪಿ ಕಾರ್ಯದರ್ಶಿಯಾದ ರವಿಕುಮಾರ್ ನಾನುಗೌರಿ.ಕಾಂನೊಂದಿಗೆ ಮಾತನಾಡಿ, “ಸರ್ಕಾರದ ಈ ನಿರ್ಧಾರವನ್ನು ಸ್ವಾಗತಿಸುತ್ತೇನೆ. ವಿವಿಧ ಸಂದರ್ಭಗಳಲ್ಲಿ, ರೈತರ ಪರ, ಸಾರ್ವಜನಿಕರ ಪರ ಹೋರಾಟ ಮಾಡಿರುವ ನಾಯಕರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಕೈಬಿಡುವ ಅಧಿಕಾರ ಸರ್ಕಾರಕ್ಕಿದೆ. ಹಾಗಾಗಿ ಇಂತಹ ಕೆಲವು ಹೋರಾಟಗಳಲ್ಲಿ ಭಾಗಿಯಾಗಿರುವವರ ಪ್ರಕರಣಗಳನ್ನು ಹಿಂಪಡೆಯಲಾಗಿದೆ. ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದಾಗ ಎಸ್ ಡಿ ಪಿ ಐ ಅಂತಹ ಸಂಘಟನೆಯ ವಿರುದ್ಧದ ಸುಮಾರು 175 ಪ್ರಕರಣಗಳನ್ನು ಹಿಂಪಡೆದಿತ್ತು. ನಾವು ಅಂತಹ ಪ್ರಕರಣಗಳನ್ನು ಹಿಂಪಡೆದಿಲ್ಲವಲ್ಲ” ಎಂದು ಆರೋಪಿಸಿದರು.

ಈ ಕುರಿತು ಪ್ರತಿಕ್ರಿಯಿಸಿದ ಎಸ್ ಡಿ ಪಿ ಐ ಮುಖಂಡರಾದ ಇಲ್ಯಾಸ್ ತುಂಬೆ ಮಾತನಾಡಿ, “ವಿ ಹೆಚ್ ಪಿಯ ಶರಣ್ ಪಂಪ್ ವೆಲ್ ಗೆ ‘ನಿಮ್ಮ ಮೇಲಿನ ಎಲ್ಲಾ ಪ್ರಕರಣಗಳನ್ನು ಹಿಂಪಡೆಯುತ್ತೇವೆ’ ಎಂದು ಭರವಸೆ ನೀಡಿದ್ದಾಗಲೇ ಇದರ ಬಗ್ಗೆ ಗೃಹಸಚಿವರು ಮುನ್ಸೂಚನೆಯನ್ನು ನೀಡಿದ್ದರು. ರಾಜ್ಯ ಸರ್ಕಾರದ ಈ ಅನೀತಿಯನ್ನ ಪ್ರಶ್ನಿಸಿ ನಾವು ನಿನ್ನೆಯೇ ಪತ್ರಿಕಾ ಸುದ್ಧಿಗೋಷ್ಟಿಯೊಂದನ್ನು ಏರ್ಪಡಿಸಿದ್ದೆವು. ಜನಪರ ಹೋರಾಟಗಾರರ ಪ್ರಕರಣಗಳನ್ನು ಅದರ ಸದುದ್ದೇಶದ ಆಧಾರದ ಮೇಲೆ ಹಿಂಪಡೆಯುವ ಅಧಿಕಾರ ರಾಜ್ಯ ಸರ್ಕಾರಕ್ಕಿದೆ. ಆದರೆ ಈ ನೆಪದಲ್ಲಿ ಗಂಭೀರ ಸ್ವರೂಪದ ಕ್ರಿಮಿನಲ್ ಪ್ರಕರಣಗಳನ್ನು ಕೈಬಿಡುತ್ತಿರುವುದು ನಿಜಕ್ಕೂ ಖಂಡನೀಯ” ಎಂದು ಹೇಳಿದರು.

“ಬಿಜೆಪಿ ನಾಯಕರ ಮತ್ತು ಶಾಸಕರ ಗುರುತರವಾದ ಕ್ರಿಮಿನಲ್ ಕೃತ್ಯಗಳನ್ನು ಒಳಗೊಂಡಂತೆ 62 ಕೇಸುಗಳನ್ನು ರದ್ದುಗೊಳಿಸಲು ತನ್ನ ಸಂಪುಟ ಸಭೆಯಲ್ಲಿ ನಿರ್ಧರಿಸುವ ಮೂಲಕ ಕ್ರಿಮಿನಲ್ ಹಾಗೂ ಕೋಮುಗಲಭೆಯ ಕಿಡಿಗೇಡಿಗಳನ್ನು ರಕ್ಷಿಸುತ್ತಿದೆ. ಇಂತಹ ಸರಕಾರದಿಂದ ರಾಜ್ಯದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ನೆಲೆಸಲು ಹೇಗೆ ಸಾಧ್ಯ? ಕುರಿಗಳ ವೇಷದಲ್ಲಿ ತೋಳಗಳು ರಾಜ್ಯವನ್ನು ಆಳಿದಂತಾಗಿದೆ” ಎಂದು ಎಸ್.ಡಿ.ಪಿ.ಐ ರಾಜ್ಯಧ್ಯಕ್ಷ ಇಲ್ಯಾಸ್ ಮಹಮ್ಮದ್ ತುಂಬೆ ಹೇಳಿದರು.

ಕಾಂಗ್ರೆಸ್ ಆಡಳಿತದಲ್ಲಿದ್ದಾಗ ಎಸ್ ಡಿ ಪಿ ಐ ವಿರುದ್ಧದ 175 ಪ್ರಕರಣಗಳನ್ನು ಹಿಂಪಡೆದಿತ್ತು ಎಂದು ಬಿಜೆಪಿಯ ರಾಜ್ಯ ಕಾರ್ಯದರ್ಶಿಯವರ ಆರೋಪಕ್ಕೆ ಪ್ರತಿಕ್ರಿಯಿಸಿ, “ತಮ್ಮ ಲೋಪವನ್ನು ಮುಚ್ಚಿಕೊಳ್ಳಲು ಇಂತಹ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ನಮ್ಮ ಸಂಘಟನೆಯ ಕೇವಲ 3 ಪ್ರಕರಣಗಳನ್ನು ಮಾತ್ರ ಹಿಂಪಡೆಯಲಾಗಿತ್ತು. ಅದೂ ಈ ಪ್ರಕರಣಗಳಲ್ಲಿ ನಮ್ಮ ಸಂಘಟನೆಯ ಕೇವಲ 4-5 ಜನ ಕಾರ್ಯಕರ್ತರು ಭಾಗಿಯಾಗಿದ್ದರು. ಅದಾಗ್ಯೂ ಶ್ರೀರಾಮಸೇನೆಯ 10 ಪ್ರಕರಣಗಳನ್ನೂ ಕಾಂಗ್ರೆಸ್ ಸರ್ಕಾರವೇ ಹಿಂಪಡೆಯಲಾಗಿತ್ತು” ಎಂದು ಹೇಳಿದರು.

“ಪರೇಶ್ ಮೇಸ್ತಾ ಕೊಲೆ ಪ್ರಕರಣದ ಗಲಭೆಯಲ್ಲಿ ಕಾರವಾರದಲ್ಲಿ ಐಜಿಪಿ ಅವರ ಕಾರಿಗೆ ಬೆಂಕಿ ಹಚ್ಚಿದ ಘಟನೆ ಹಾಗೂ ಐಜಿಪಿ ಕಾರ್ ಚಾಲಕನಿಗೆ ಅವರ ಎದುರಲ್ಲೇ ಥಳಿಸಿದ ಘಟನೆಯ ಸಂಘಪರಿವಾರದ ಆರೋಪಿಗಳ ಕೇಸುಗಳನ್ನು ಬಿಜೆಪಿ ಸರಕಾರ ವಾಪಸ್ ಪಡೆದುಕೊಂಡಿತ್ತು. ದ್ವೇಷ ರಾಜಕಾರಣ, ಕೋಮು ವಿಭಜನೆಯ ಮೂಲಕವೇ ಅಧಿಕಾರಕ್ಕೇರಿದ ಬಿಜೆಪಿ ಅಧಿಕಾರವನ್ನು ಉಳಿಸಲು ಎಂತಹ ನಿಕೃಷ್ಟತೆಗೂ ತಲುಪಲು ಹೇಸದು ಎಂದು ಇದರಿಂದ ಸಾಬೀತಾಗುತ್ತಿದೆ. ಇಂತಹ ಸರಕಾರದ ವಿರುದ್ಧ ರಾಜ್ಯದ ಜನತೆ ಎಚ್ಚೆತ್ತು ಕೊಳ್ಳಬೇಕು. ಇದರ ವಿರುದ್ಧ ನಾವು ಪ್ರತಿಭಟನಾತ್ಮಕ ಹೋರಾಟ ಮತ್ತು ಕಾನೂನಾತ್ಮಕ ಹೋರಾಟಗಳನ್ನೂ ಮಾಡುತ್ತೇವೆ. ಇದನ್ನು ಕೋರ್ಟಿನಲ್ಲಿ ಪ್ರಶ್ನಿಸುತ್ತೇವೆ” ಎಂದು ಇಲ್ಯಾಸ್ ತುಂಬೆ ಹೇಳಿದ್ದಾರೆ.

ಸರ್ಕಾರದ ಈ ನಿರ್ಣಯಕ್ಕೆ ಪ್ರತಿಕ್ರಿಯಿಸಿದ ಕೆಪಿಸಿಸಿ ವಕ್ತಾರ ನಟರಾಜ್ ಗೌಡ, “ಸಾಮಾನ್ಯವಾಗಿ ಜನಪರ, ರೈತರ ಹಕ್ಕುಗಳಿಗಾಗಿ, ಕನ್ನಡಪರ, ಪರಿಸರ, ನೆಲ-ಜಲ-ಭಾಷೆಗಾಗಿ ಹೋರಾಟಗಳನ್ನು ಮಾಡಿದವರ ವಿರುದ್ಧ ಕೆಲವು ಪ್ರಕರಣಗಳನ್ನು ಕೈಬಿಡುವುದು ಸರ್ಕಾರದ ಅಧಿಕಾರದಲ್ಲಿರುತ್ತದೆ. ಈ ಅಧಿಕಾರವನ್ನು, ಇನ್ನೂ ಇತ್ಯರ್ಥವಾಗದೇ ಉಳಿದಿರುವ ರೈತರ, ಕನ್ನಡಪರ ಹೊರಾಟಗಾರರ ಪ್ರಕರಣಗಳನ್ನು ಹಿಂಪಡೆಯಲು ಉಪಯೋಗಿಸದೇ ಇಂತಹ ನೀಚ ಕೆಲಸಕ್ಕೆ ಮುಂದಾಗಿರುವ ಈ ಲಜ್ಜೆಗೇಡಿತನದ ಸರ್ಕಾರ ಈಗ ಗಂಭಿರ ಸ್ವರೂಪದ ಪ್ರಕರಣಗಳನ್ನು ಕೈಬಿಡುವುದರ ಮೂಲಕ ಜನರ ಮುಂದೆ ಬೆತ್ತಲಾಗಿದೆ. ಸರ್ಕಾರದ ಈ ನಿರ್ಧಾರ ಈಗ ಜನತಾ ನ್ಯಾಯಾಲಯದಲ್ಲಿದೆ. ಜನರೇ ಇವರಿಗೆ ಸರಿಯಾದ ತೀರ್ಪನ್ನು ನೀಡುತ್ತಾರೆ” ಎಂದು ಹೇಳಿದರು.

ಕಾಂಗ್ರೆಸ್ ಆಡಳಿತದಲ್ಲಿದ್ದಾಗ ಎಸ್ ಡಿ ಪಿ ಐ ವಿರುದ್ಧದ 175 ಪ್ರಕರಣಗಳನ್ನು ಹಿಂಪಡೆದಿತ್ತು ಎಂದು ಬಿಜೆಪಿಯ ರಾಜ್ಯ ಕಾರ್ಯದರ್ಶಿಯವರ ಆರೋಪಕ್ಕೆ ಪ್ರತಿಕ್ರಿಯಿಸಿ, “ರವಿಕುಮಾರ್ ಒಬ್ಬ ಅಲ್ಪಮತಿ. ನಮ್ಮ ಸರ್ಕಾರ ಏನು ಮಾಡಿದೆಯೋ ಅದು ದಾಖಲೆಗಳಲ್ಲಿದೆ. ಯಾರು ಬೇಕಾದರೂ ಪರಿಶೀಲಿಸಬಹುದು. ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಬಿಜೆಪಿ ಇಂತಹ ಸುಳ್ಳುಗಳನ್ನು ಹೇಳುತ್ತಲೇ ಇದೆ. ಇದು ಹೊಸದೇನಲ್ಲ. ಇವರು ಇಂತಹ ಗಂಭೀರ ಪ್ರಕರಣಗಳನ್ನು ಕೈಬಿಟ್ಟಿರುವುದು ಮೊದಲನೆಯ ತಪ್ಪು. ಎರಡನೆಯದಾಗಿ, ಅದನ್ನು ಮುಚ್ಚಿಹಾಕಲು ಸುಳ್ಳು ಹೇಳುತ್ತಿರುವುದು ಇನ್ನೊಂದು ತಪ್ಪು” ಎಂದು ಹೇಳಿದರು.


ಇದನ್ನೂ ಓದಿ: #ResignBSBommai; ರಾಜ್ಯ ಗೃಹಸಚಿವ ರಾಜಿನಾಮೆ ನೀಡುವಂತೆ ಟ್ವಿಟ್ಟರ್‌ ಟ್ರೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...