HomeUncategorizedಬಿಜೆಪಿ ನಾಯಕರ ವಿರುದ್ಧದ ಗಂಭೀರ ಪ್ರಕರಣಗಳನ್ನು ಹಿಂಪಡೆದ ಸರ್ಕಾರ: ಹಲವರಿಂದ ಖಂಡನೆ

ಬಿಜೆಪಿ ನಾಯಕರ ವಿರುದ್ಧದ ಗಂಭೀರ ಪ್ರಕರಣಗಳನ್ನು ಹಿಂಪಡೆದ ಸರ್ಕಾರ: ಹಲವರಿಂದ ಖಂಡನೆ

ಇನ್ನೂ ಇತ್ಯರ್ಥವಾಗದೇ ಉಳಿದಿರುವ ರೈತರ, ಕನ್ನಡಪರ ಹೊರಾಟಗಾರರ ಪ್ರಕರಣಗಳನ್ನು ಹಿಂಪಡೆಯಲು ಉಪಯೋಗಿಸದೇ ಇಂತಹ ನೀಚ ಕೆಲಸಕ್ಕೆ ಮುಂದಾಗಿರುವ ಈ ಲಜ್ಜೆಗೇಡಿತನದ ಸರ್ಕಾರ ಈಗ ಗಂಭಿರ ಸ್ವರೂಪದ ಪ್ರಕರಣಗಳನ್ನು ಕೈಬಿಡುವುದರ ಮೂಲಕ ಜನರ ಮುಂದೆ ಬೆತ್ತಲಾಗಿದೆ ಎಂದು ನಟರಾಜ್ ಗೌಡ ಹೇಳಿದ್ದಾರೆ.

- Advertisement -
- Advertisement -

ಬಿಜೆಪಿ ನಾಯಕರ ಮತ್ತು ಅವರ ಬೆಂಬಲಿಗರ ಮೇಲೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಗಂಭಿರ ಸ್ವರೂಪದ ಹಲವು ಪ್ರಕರಣಗಳನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.

ಕಾನೂನು ಇಲಾಖೆ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಸರಕಾರಿ ವ್ಯಾಜ್ಯಗಲ ಇಲಾಖೆಯ ಅಭಿಪ್ರಾಯವನ್ನು ಕಡೆಗಣಿಸಿ ಅರಣ್ಯ ಸಚಿವ ಆನಂದ್ ಸಿಂಗ್, ಸಂಸದ ಪ್ರತಾಪ್ ಸಿಂಹ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಬಿಜೆಪಿ ಶಾಸಕ ನೆಹರು ಓಲೆಕಾರ್ ಸೇರಿದಂತೆ ಇತರ ಬಿಜೆಪಿ ನಾಯಕರು ಮತ್ತು ಬೆಂಬಲಿಗರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲಾಗಿದೆ.

ಇತ್ತೀಚೆಗೆ ನಡೆದ ಸಚಿವ ಸಂಪುಟದಲ್ಲಿ ಈ ಸಂಬಂಧ ತೀರ್ಮಾನ ಕೈಗೊಳ್ಳಲಾಗಿತ್ತು. “ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಮಾತ್ರ ವಾಪಸ್ ಪಡೆಯಲಾಗುತ್ತಿದೆ. ಆದರೆ, ಯಾವುದೇ ವೈಯಕ್ತಿಕ ಪ್ರಕರಣಗಳನ್ನು ಹಿಂಪಡೆಯಲಾಗುವುದಿಲ್ಲ ಎಂದು ಸ್ವತಃ ಕಾನೂನು ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಸ್ಪಷ್ಟನೆ ನೀಡಿದ್ದರು.

ಇದನ್ನೂ ಓದಿ: ವಿವಾದಾತ್ಮಕ ವಿಡಿಯೋ: ಗಲಭೆಗಳಲ್ಲಿ ಭಾಗಿಯಾದ ಆರೋಪಿಗೆ ʼಎಲ್ಲಾ ಕೇಸು ತೆಗೆದು ಹಾಕುತ್ತೇವೆʼ ಎಂದ ಗೃಹ ಸಚಿವರು!

ರಾಜ್ಯ ಬಿಜೆಪಿ ಕಾರ್ಯದರ್ಶಿಯಾದ ರವಿಕುಮಾರ್ ನಾನುಗೌರಿ.ಕಾಂನೊಂದಿಗೆ ಮಾತನಾಡಿ, “ಸರ್ಕಾರದ ಈ ನಿರ್ಧಾರವನ್ನು ಸ್ವಾಗತಿಸುತ್ತೇನೆ. ವಿವಿಧ ಸಂದರ್ಭಗಳಲ್ಲಿ, ರೈತರ ಪರ, ಸಾರ್ವಜನಿಕರ ಪರ ಹೋರಾಟ ಮಾಡಿರುವ ನಾಯಕರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಕೈಬಿಡುವ ಅಧಿಕಾರ ಸರ್ಕಾರಕ್ಕಿದೆ. ಹಾಗಾಗಿ ಇಂತಹ ಕೆಲವು ಹೋರಾಟಗಳಲ್ಲಿ ಭಾಗಿಯಾಗಿರುವವರ ಪ್ರಕರಣಗಳನ್ನು ಹಿಂಪಡೆಯಲಾಗಿದೆ. ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದಾಗ ಎಸ್ ಡಿ ಪಿ ಐ ಅಂತಹ ಸಂಘಟನೆಯ ವಿರುದ್ಧದ ಸುಮಾರು 175 ಪ್ರಕರಣಗಳನ್ನು ಹಿಂಪಡೆದಿತ್ತು. ನಾವು ಅಂತಹ ಪ್ರಕರಣಗಳನ್ನು ಹಿಂಪಡೆದಿಲ್ಲವಲ್ಲ” ಎಂದು ಆರೋಪಿಸಿದರು.

ಈ ಕುರಿತು ಪ್ರತಿಕ್ರಿಯಿಸಿದ ಎಸ್ ಡಿ ಪಿ ಐ ಮುಖಂಡರಾದ ಇಲ್ಯಾಸ್ ತುಂಬೆ ಮಾತನಾಡಿ, “ವಿ ಹೆಚ್ ಪಿಯ ಶರಣ್ ಪಂಪ್ ವೆಲ್ ಗೆ ‘ನಿಮ್ಮ ಮೇಲಿನ ಎಲ್ಲಾ ಪ್ರಕರಣಗಳನ್ನು ಹಿಂಪಡೆಯುತ್ತೇವೆ’ ಎಂದು ಭರವಸೆ ನೀಡಿದ್ದಾಗಲೇ ಇದರ ಬಗ್ಗೆ ಗೃಹಸಚಿವರು ಮುನ್ಸೂಚನೆಯನ್ನು ನೀಡಿದ್ದರು. ರಾಜ್ಯ ಸರ್ಕಾರದ ಈ ಅನೀತಿಯನ್ನ ಪ್ರಶ್ನಿಸಿ ನಾವು ನಿನ್ನೆಯೇ ಪತ್ರಿಕಾ ಸುದ್ಧಿಗೋಷ್ಟಿಯೊಂದನ್ನು ಏರ್ಪಡಿಸಿದ್ದೆವು. ಜನಪರ ಹೋರಾಟಗಾರರ ಪ್ರಕರಣಗಳನ್ನು ಅದರ ಸದುದ್ದೇಶದ ಆಧಾರದ ಮೇಲೆ ಹಿಂಪಡೆಯುವ ಅಧಿಕಾರ ರಾಜ್ಯ ಸರ್ಕಾರಕ್ಕಿದೆ. ಆದರೆ ಈ ನೆಪದಲ್ಲಿ ಗಂಭೀರ ಸ್ವರೂಪದ ಕ್ರಿಮಿನಲ್ ಪ್ರಕರಣಗಳನ್ನು ಕೈಬಿಡುತ್ತಿರುವುದು ನಿಜಕ್ಕೂ ಖಂಡನೀಯ” ಎಂದು ಹೇಳಿದರು.

“ಬಿಜೆಪಿ ನಾಯಕರ ಮತ್ತು ಶಾಸಕರ ಗುರುತರವಾದ ಕ್ರಿಮಿನಲ್ ಕೃತ್ಯಗಳನ್ನು ಒಳಗೊಂಡಂತೆ 62 ಕೇಸುಗಳನ್ನು ರದ್ದುಗೊಳಿಸಲು ತನ್ನ ಸಂಪುಟ ಸಭೆಯಲ್ಲಿ ನಿರ್ಧರಿಸುವ ಮೂಲಕ ಕ್ರಿಮಿನಲ್ ಹಾಗೂ ಕೋಮುಗಲಭೆಯ ಕಿಡಿಗೇಡಿಗಳನ್ನು ರಕ್ಷಿಸುತ್ತಿದೆ. ಇಂತಹ ಸರಕಾರದಿಂದ ರಾಜ್ಯದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ನೆಲೆಸಲು ಹೇಗೆ ಸಾಧ್ಯ? ಕುರಿಗಳ ವೇಷದಲ್ಲಿ ತೋಳಗಳು ರಾಜ್ಯವನ್ನು ಆಳಿದಂತಾಗಿದೆ” ಎಂದು ಎಸ್.ಡಿ.ಪಿ.ಐ ರಾಜ್ಯಧ್ಯಕ್ಷ ಇಲ್ಯಾಸ್ ಮಹಮ್ಮದ್ ತುಂಬೆ ಹೇಳಿದರು.

ಕಾಂಗ್ರೆಸ್ ಆಡಳಿತದಲ್ಲಿದ್ದಾಗ ಎಸ್ ಡಿ ಪಿ ಐ ವಿರುದ್ಧದ 175 ಪ್ರಕರಣಗಳನ್ನು ಹಿಂಪಡೆದಿತ್ತು ಎಂದು ಬಿಜೆಪಿಯ ರಾಜ್ಯ ಕಾರ್ಯದರ್ಶಿಯವರ ಆರೋಪಕ್ಕೆ ಪ್ರತಿಕ್ರಿಯಿಸಿ, “ತಮ್ಮ ಲೋಪವನ್ನು ಮುಚ್ಚಿಕೊಳ್ಳಲು ಇಂತಹ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ನಮ್ಮ ಸಂಘಟನೆಯ ಕೇವಲ 3 ಪ್ರಕರಣಗಳನ್ನು ಮಾತ್ರ ಹಿಂಪಡೆಯಲಾಗಿತ್ತು. ಅದೂ ಈ ಪ್ರಕರಣಗಳಲ್ಲಿ ನಮ್ಮ ಸಂಘಟನೆಯ ಕೇವಲ 4-5 ಜನ ಕಾರ್ಯಕರ್ತರು ಭಾಗಿಯಾಗಿದ್ದರು. ಅದಾಗ್ಯೂ ಶ್ರೀರಾಮಸೇನೆಯ 10 ಪ್ರಕರಣಗಳನ್ನೂ ಕಾಂಗ್ರೆಸ್ ಸರ್ಕಾರವೇ ಹಿಂಪಡೆಯಲಾಗಿತ್ತು” ಎಂದು ಹೇಳಿದರು.

“ಪರೇಶ್ ಮೇಸ್ತಾ ಕೊಲೆ ಪ್ರಕರಣದ ಗಲಭೆಯಲ್ಲಿ ಕಾರವಾರದಲ್ಲಿ ಐಜಿಪಿ ಅವರ ಕಾರಿಗೆ ಬೆಂಕಿ ಹಚ್ಚಿದ ಘಟನೆ ಹಾಗೂ ಐಜಿಪಿ ಕಾರ್ ಚಾಲಕನಿಗೆ ಅವರ ಎದುರಲ್ಲೇ ಥಳಿಸಿದ ಘಟನೆಯ ಸಂಘಪರಿವಾರದ ಆರೋಪಿಗಳ ಕೇಸುಗಳನ್ನು ಬಿಜೆಪಿ ಸರಕಾರ ವಾಪಸ್ ಪಡೆದುಕೊಂಡಿತ್ತು. ದ್ವೇಷ ರಾಜಕಾರಣ, ಕೋಮು ವಿಭಜನೆಯ ಮೂಲಕವೇ ಅಧಿಕಾರಕ್ಕೇರಿದ ಬಿಜೆಪಿ ಅಧಿಕಾರವನ್ನು ಉಳಿಸಲು ಎಂತಹ ನಿಕೃಷ್ಟತೆಗೂ ತಲುಪಲು ಹೇಸದು ಎಂದು ಇದರಿಂದ ಸಾಬೀತಾಗುತ್ತಿದೆ. ಇಂತಹ ಸರಕಾರದ ವಿರುದ್ಧ ರಾಜ್ಯದ ಜನತೆ ಎಚ್ಚೆತ್ತು ಕೊಳ್ಳಬೇಕು. ಇದರ ವಿರುದ್ಧ ನಾವು ಪ್ರತಿಭಟನಾತ್ಮಕ ಹೋರಾಟ ಮತ್ತು ಕಾನೂನಾತ್ಮಕ ಹೋರಾಟಗಳನ್ನೂ ಮಾಡುತ್ತೇವೆ. ಇದನ್ನು ಕೋರ್ಟಿನಲ್ಲಿ ಪ್ರಶ್ನಿಸುತ್ತೇವೆ” ಎಂದು ಇಲ್ಯಾಸ್ ತುಂಬೆ ಹೇಳಿದ್ದಾರೆ.

ಸರ್ಕಾರದ ಈ ನಿರ್ಣಯಕ್ಕೆ ಪ್ರತಿಕ್ರಿಯಿಸಿದ ಕೆಪಿಸಿಸಿ ವಕ್ತಾರ ನಟರಾಜ್ ಗೌಡ, “ಸಾಮಾನ್ಯವಾಗಿ ಜನಪರ, ರೈತರ ಹಕ್ಕುಗಳಿಗಾಗಿ, ಕನ್ನಡಪರ, ಪರಿಸರ, ನೆಲ-ಜಲ-ಭಾಷೆಗಾಗಿ ಹೋರಾಟಗಳನ್ನು ಮಾಡಿದವರ ವಿರುದ್ಧ ಕೆಲವು ಪ್ರಕರಣಗಳನ್ನು ಕೈಬಿಡುವುದು ಸರ್ಕಾರದ ಅಧಿಕಾರದಲ್ಲಿರುತ್ತದೆ. ಈ ಅಧಿಕಾರವನ್ನು, ಇನ್ನೂ ಇತ್ಯರ್ಥವಾಗದೇ ಉಳಿದಿರುವ ರೈತರ, ಕನ್ನಡಪರ ಹೊರಾಟಗಾರರ ಪ್ರಕರಣಗಳನ್ನು ಹಿಂಪಡೆಯಲು ಉಪಯೋಗಿಸದೇ ಇಂತಹ ನೀಚ ಕೆಲಸಕ್ಕೆ ಮುಂದಾಗಿರುವ ಈ ಲಜ್ಜೆಗೇಡಿತನದ ಸರ್ಕಾರ ಈಗ ಗಂಭಿರ ಸ್ವರೂಪದ ಪ್ರಕರಣಗಳನ್ನು ಕೈಬಿಡುವುದರ ಮೂಲಕ ಜನರ ಮುಂದೆ ಬೆತ್ತಲಾಗಿದೆ. ಸರ್ಕಾರದ ಈ ನಿರ್ಧಾರ ಈಗ ಜನತಾ ನ್ಯಾಯಾಲಯದಲ್ಲಿದೆ. ಜನರೇ ಇವರಿಗೆ ಸರಿಯಾದ ತೀರ್ಪನ್ನು ನೀಡುತ್ತಾರೆ” ಎಂದು ಹೇಳಿದರು.

ಕಾಂಗ್ರೆಸ್ ಆಡಳಿತದಲ್ಲಿದ್ದಾಗ ಎಸ್ ಡಿ ಪಿ ಐ ವಿರುದ್ಧದ 175 ಪ್ರಕರಣಗಳನ್ನು ಹಿಂಪಡೆದಿತ್ತು ಎಂದು ಬಿಜೆಪಿಯ ರಾಜ್ಯ ಕಾರ್ಯದರ್ಶಿಯವರ ಆರೋಪಕ್ಕೆ ಪ್ರತಿಕ್ರಿಯಿಸಿ, “ರವಿಕುಮಾರ್ ಒಬ್ಬ ಅಲ್ಪಮತಿ. ನಮ್ಮ ಸರ್ಕಾರ ಏನು ಮಾಡಿದೆಯೋ ಅದು ದಾಖಲೆಗಳಲ್ಲಿದೆ. ಯಾರು ಬೇಕಾದರೂ ಪರಿಶೀಲಿಸಬಹುದು. ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಬಿಜೆಪಿ ಇಂತಹ ಸುಳ್ಳುಗಳನ್ನು ಹೇಳುತ್ತಲೇ ಇದೆ. ಇದು ಹೊಸದೇನಲ್ಲ. ಇವರು ಇಂತಹ ಗಂಭೀರ ಪ್ರಕರಣಗಳನ್ನು ಕೈಬಿಟ್ಟಿರುವುದು ಮೊದಲನೆಯ ತಪ್ಪು. ಎರಡನೆಯದಾಗಿ, ಅದನ್ನು ಮುಚ್ಚಿಹಾಕಲು ಸುಳ್ಳು ಹೇಳುತ್ತಿರುವುದು ಇನ್ನೊಂದು ತಪ್ಪು” ಎಂದು ಹೇಳಿದರು.


ಇದನ್ನೂ ಓದಿ: #ResignBSBommai; ರಾಜ್ಯ ಗೃಹಸಚಿವ ರಾಜಿನಾಮೆ ನೀಡುವಂತೆ ಟ್ವಿಟ್ಟರ್‌ ಟ್ರೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....