Homeಕರ್ನಾಟಕಸರ್ಕಾರ ಕಾರ್ಪೋರೇಟ್ ಕಂಪನಿ ಪರ ಕೆಲಸ ಮಾಡುತ್ತಿದೆ, ಮಾಧ್ಯಮ ಬೆಂಬಲಿಸುತ್ತಿದೆ: ಸಿಐಟಿಯು ಪ್ರಧಾನ ಕಾರ್ಯದರ್ಶಿ ತಪನ್...

ಸರ್ಕಾರ ಕಾರ್ಪೋರೇಟ್ ಕಂಪನಿ ಪರ ಕೆಲಸ ಮಾಡುತ್ತಿದೆ, ಮಾಧ್ಯಮ ಬೆಂಬಲಿಸುತ್ತಿದೆ: ಸಿಐಟಿಯು ಪ್ರಧಾನ ಕಾರ್ಯದರ್ಶಿ ತಪನ್ ಸೇನ್

- Advertisement -
- Advertisement -

ದೇಶದ ಆಳುವ ಸರಕಾರಗಳು ನವ ಉದಾರವಾದಿ ನೀತಿಗಳ ಏಜೆಂಟರಂತೆ, ಕಾರ್ಪೋರೇಟ್ ಕಂಪನಿಗಳ ಪರವಾಗಿ ಕೆಲಸ ಮಾಡುತ್ತಿರುವುದರಿಂದ ಜನಗಳು ದಿವಾಳಿ ಆಗುತ್ತಿದ್ದು, ದೇಶದ ಮುಖ್ಯ ವಾಹಿನಿ ಮಾಧ್ಯಮಗಳ ದೊಡ್ಡ ವಿಭಾಗವೂ ಇದಕ್ಕೆ ಬೆಂಬಲ ನೀಡುತ್ತಿದೆ ಎಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್’ (ಸಿಐಟಿಯು) ಪ್ರಧಾನ ಕಾರ್ಯದರ್ಶಿ ತಮನ್ ಸೇನ್ ಆಕ್ರೋಶ ವ್ಯಕ್ತಪಡಿಸಿದರು. ಅವರು ಬೆಂಗಳೂರಿನಲ್ಲಿ ನಡೆಯುತ್ತಿರುವ ಸಿಐಟಿಯು 17ನೇ ಅಖಿಲ ಭಾರತ ಸಮ್ಮೇಳನದ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಸಿಐಟಿಯು ಅಖಿಲ ಭಾರತ ಸಮ್ಮೇಳನ ಬೆಂಗಳೂರಿನ ಅರಮನೆ ಮೈದಾನದ, ‘ರಂಜನ ನಿರುಲಾ ಮತ್ತು ರಘುನಾಥ್ ಸಿಂಗ್’ ವೇದಿಕೆಯಲ್ಲಿ ನಡೆಯುತ್ತಿದ್ದು, ಸಮ್ಮೇಳನದ ಮೊದಲ ದಿನದ ಉದ್ಘಾಟನಾ ಕಾರ್ಯಕ್ರಮ ಬುಧವಾರ ನೆರವೇರಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ತಪನ್ ಸೇನ್, “ದೇಶದ ಆಳುವ ಸರಕಾರಗಳು ನವ ಉದಾರವಾದಿ ನೀತಿಗಳ ಏಜೆಂಟರಂತೆ ವರ್ತಿಸುತ್ತಾ, ಕಾರ್ಪೋರೇಟ್ ಕಂಪನಿಗಳ ಪರವಾಗಿ ಕೆಲಸ ಮಾಡುತ್ತಿದೆ. ಇದರಿಂದಾಗಿ ಜನರು ದಿವಾಳಿಯಾಗುತ್ತಿದ್ದಾರೆ. ಸರ್ಕಾರದ ಈ ನಡೆಗೆ ದೇಶದ ಮುಖ್ಯ ವಾಹಿನಿ ಮಾಧ್ಯಮಗಳ ದೊಡ್ಡ ವಿಭಾಗ ಕೂಡಾ ಬೆಂಬಲ ನೀಡುತ್ತಿದೆ” ಎಂದು ಅವರು ಹೇಳಿದರು.

ಸರ್ವಾಧಿಕಾರಿ ರೀತಿಯಲ್ಲಿ ನಡೆದುಕೊಳ್ಳುತ್ತಾ, ಜನರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿರುವ ಸರಕಾರದ ವಿಷಕಾರಿ ನೀತಿಗಳ ಪರಿಣಾಮಗಳ ವಿರುದ್ಧ ಒಗ್ಗಟ್ಟಿನ ಹೋರಾಟ ಅಗತ್ಯ ಎಂದು ಅವರು ಹೇಳಿದರು.

“ಆಳುವ ಸರ್ಕಾರವು ಜನರ ಒಗ್ಗಟ್ಟನ್ನು ಮುರಿಯುವ ವಿಭಜನಕಾರಿ ನೀತಿಗಳನ್ನು ಹೇರುತ್ತಾ ಸಮಾಜದ ಸಾಮಾಜಿಕ ಸಾಮರಸ್ಯವನ್ನು ಹಾಳುಗೆಡಹುತ್ತಿದೆ. ದೇಶದ ಹಿತಾಸಕ್ತಿಗೆ ಮತ್ತು ದುಡಿಯುವ ವರ್ಗದ ಹಿತಗಳಿಗೆ ವಿರುದ್ಧವಾಗಿ ಇಂತಹ ಕ್ರಿಮಿನಲ್ ದಾಳಿಗಳನ್ನು ನಡೆಸುತ್ತಿರುವ ಸರಕಾರವನ್ನು ರೈತ-ಕಾರ್ಮಿಕ ಐಕ್ಯ ಚಳುವಳಿಯ ಮೂಲಕ ಅಧಿಕಾರದಿಂದ ಕಿತ್ತೆಸೆಯಲಾಗುವುದು” ಎಂದು ತಿಳಿಸಿದ ತಪನ್ ಸೇನ್ ಪ್ರತಿಜ್ಞೆ ಮಾಡಿದರು.

ಸರ್ಕಾರ ಕಾರ್ಪೋರೇಟ್ ಕಂಪನಿ ಪರ ಕೆಲಸ ಮಾಡುತ್ತಿದೆ, ಮಾಧ್ಯಮ ಬೆಂಬಲಿಸುತ್ತಿದೆ: ಸಿಐಟಿಯು

“ಈ ನಿಟ್ಟಿನಲ್ಲಿ ಕಾರ್ಮಿಕ ಹೋರಾಟಗಳನ್ನು ಬಲಪಡಿಸುವ ಕುರಿತು ಸಿಐಟಿಯು ಸಂಘಟನೆಯ 17 ನೇ ಅಖಿಲ ಭಾರತ ಸಮ್ಮೇಳನವು ಗಂಭೀರವಾಗಿ ಚರ್ಚಿಸಲಿದೆ. ದೇಶದ ಹತ್ತು ಪ್ರಮುಖ ಕಾರ್ಮಿಕ ಸಂಘಟನೆಗಳ ಒಕ್ಕೂಟವು ಒಂದುಗೂಡಿ ಕಾರ್ಮಿಕರ ಹಕ್ಕುಗಳು, ರೈತರ ಹಕ್ಕುಗಳು ಮಾತ್ರವಲ್ಲ. ದೇಶದ ರಕ್ಷಣೆಗಾಗಿ ದೇಶವಿರೋಧಿ ಕುತಂತ್ರಗಳ ವಿರುದ್ಧ ಹೋರಾಟ ರೂಪಿಸಲಿವೆ” ಎಂದು ಅವರು ಹೇಳಿದರು.

“ಇತ್ತೀಚಿನ ಎರಡು ದಿನಗಳ ದೇಶವ್ಯಾಪಿ ಯಶಸ್ವಿ ಮುಷ್ಕರ ಈ ಹೋರಾಟದ ಭಾಗವಾಗಿದೆ. ನಾಲ್ಕು ವರ್ಷಗಳ ಹೋರಾಟದ ಅನುಭವವು, ವಿದ್ಯುತ್, ಕಲ್ಲಿದ್ದಲು ಸೇರಿದಂತೆ ಹಲವು ಕ್ಷೇತ್ರದಲ್ಲಿ ಸರಕಾರದ ಧೋರಣೆಗಳನ್ನು ಹಿಮ್ಮೆಟ್ಟಿಸಲು ಸಾಧ್ಯ ಎಂದು ತೋರಿಸಿಕೊಟ್ಟಿದೆ. ನವ ಉದಾರೀಕರಣ ನೀತಿಗಳ ಸವಾಲು ಕೇವಲ ಕಾರ್ಮಿಕ ವರ್ಗಕ್ಕೆ ಮಾತ್ರ ಸೀಮಿತವಲ್ಲ. ಇದು ಇಡೀ ಮನುಕುಲದ ಮುಂದಿನ ಸವಾಲಾಗಿದ್ದು, ಪ್ರಜಾಸತ್ತಾತ್ಮಕ ಸಮಾಜಕ್ಕೆ ಮಾರಕ” ಎಂದು ಅವರು ಪ್ರತಿಪಾದಿಸಿದರು.

“ಕೆಲವು ಸ್ವದೇಶಿ ಮತ್ತು ವಿದೇಶಿ ಕಾರ್ಪೋರೇಟ್ ಹಿತರಕ್ಷಣೆಗಾಗಿ, ವಿಶಾಲ ಜನ ಸಮುದಾಯಗಳ ಜನರ ಹಿತ ಬಲಿ ಕೊಡಲಾಗುತ್ತಿದೆ. ದೇಶದ ಕಾರ್ಮಿಕ ಚಳುವಳಿಯ ಸರಕಾರವು ದೇಶವನ್ನು ಮಾರಲು ಅವಕಾಶ ನೀಡಲಾಗದು” ಎಂದು ತಪನ್ ಸೇನ್ ಹೇಳಿದರು.

ಉದ್ಘಾಟನಾ ಸಮಾರಂಭದ ಸಭೆಯಲ್ಲಿ ಮಾತನಾಡಿದ ಸಿಐಟಿಯು ಅಖಿಲ ಭಾರತ ಅಧ್ಯಕ್ಷೆ ಡಾ. ಕೆ. ಹೇಮಲತಾ,“ಭಾರತದಲ್ಲಿ ಹೆಚ್ಚುತ್ತಿರುವ ಅಸಮಾನತೆ, ಸಂಪತ್ತಿನ ಕೇಂದ್ರೀಕರಣ ಹಾಗೂ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಕಾರ್ಮಿಕ ವರ್ಗದ ಐಕ್ಯ ಹೋರಾಟವನ್ನು ಬಲಗೊಳಿಸಲಾಗುವುದು” ಎಂದು ಹೇಳಿದರು.

ಕೇಂದ್ರ ಸರ್ಕಾರ ಅರ್ಥ ವ್ಯವಸ್ಥೆಯನ್ನು ಹಾಳು ಮಾಡುತ್ತಿವೆ: ಐಎನ್‌ಟಿಯುಸಿ

ಐಎನ್‌ಟಿಯುಸಿ ಮುಖಂಡ ಚಂದ್ರಶೇಖರನ್ ಮಾತನಾಡಿ, “ಕೇಂದ್ರ ಸರ್ಕಾರ ದೇಶದ ಅರ್ಥ ವ್ಯವಸ್ಥೆಗೆ ಭಾರಿ ಹಾನಿಯುಂಟು ಮಾಡಿದ್ದು, ಪ್ರತಿಯೊಂದು ಸಮುದಾಯವನ್ನು ವಿಭಜಿಸುತ್ತಿದೆ. ಈ ಹಿಂದಿನ ಸರ್ಕಾರಗಳು ಮಾಡಿದ ಯೋಜನೆಗಳನ್ನು ಸ್ಥಗಿತಗೊಳಿಸಿದೆ” ಎಂದು ಹೇಳಿದರು.

ಜಾಗತೀಕರಣ ಮತ್ತು ಖಾಸಗೀಕರಣ ನೀತಿಗಳಿಂದ ಕಾರ್ಮಿಕ ವರ್ಗ ಇಂದು ಅತ್ಯಂತ ಹೀನಾಯ ಸ್ಥಿತಿಯಲ್ಲಿದೆ. ದೇಶವನ್ನು ಕೋಮುವಾದ ಆವರಿಸಿದೆ. ಕಾರ್ಮಿಕ ಹಕ್ಕುಗಳ ರಕ್ಷಣೆಗಾಗಿ ಇದ್ದ 26 ಕಾನೂನುಗಳನ್ನು ಬದಲಾವಣೆ ಮಾಡಿ ನಾಲ್ಕು ನೀತಿ ಸಂಹಿತೆಗಳನ್ನಾಗಿ ಮಾಡಲಾಗಿದೆ. ಇದರಿಂದ ಕಾರ್ಮಿಕರು ತಮ್ಮ ಹಕ್ಕುಗಳನ್ನು ಕಳೆದುಕೊಂಡಿದ್ದಾರೆ. ದೇಶವಿರೋಧಿ ಕಾರ್ಮಿಕ ವಿರೋಧಿ ಕಾನೂನುಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಎಂದು ಟೀಕಿಸಿದರು.

ನಿರುದ್ಯೋಗದ ಪ್ರಮಾಣ ದಿನೇದಿನೇ ಏರಿಕೆ ಕಂಡಿದೆ: ಎಐಟಿಯುಸಿ 

ಎಐಟಿಯುಸಿಯ ಅಮರ್ಜಿತ್ ಕೌರ್ ಮಾತನಾಡಿ, ದೇಶದಲ್ಲಿ ಇಂದಿನ ಪರಿಸ್ಥಿತಿ ತುಂಬಾ ವಿಷಮವಾಗಿದ್ದು, ಸಾರ್ವಜನಿಕ ವಲಯ ಸಂಸ್ಥೆಗಳನ್ನು ಖಾಸಗೀಕರಣ ಮಾಡಲಾಗುತ್ತಿದೆ. ದಿನಗೂಲಿ ನೌಕರರು ಉದ್ಯೋಗ ಸಿಗದೆ ಆತ್ಮಹತ್ಯೆಯ ಹಾದಿ ಹಿಡಿದಿದ್ದಾರೆ. ನಿರುದ್ಯೋಗದ ಪ್ರಮಾಣ ದಿನೇದಿನೇ ಏರಿಕೆ ಕಂಡಿದೆ. ಹಾಗಿದ್ದರೂ ಕೇಂದ್ರ ಸರ್ಕಾರ ಖಾಸಗೀಕರಣದ ಹಾದಿಯನ್ನು ಕೈಬಿಟ್ಟಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...