Homeಕರ್ನಾಟಕಸರ್ಕಾರ ಕಾರ್ಪೋರೇಟ್ ಕಂಪನಿ ಪರ ಕೆಲಸ ಮಾಡುತ್ತಿದೆ, ಮಾಧ್ಯಮ ಬೆಂಬಲಿಸುತ್ತಿದೆ: ಸಿಐಟಿಯು ಪ್ರಧಾನ ಕಾರ್ಯದರ್ಶಿ ತಪನ್...

ಸರ್ಕಾರ ಕಾರ್ಪೋರೇಟ್ ಕಂಪನಿ ಪರ ಕೆಲಸ ಮಾಡುತ್ತಿದೆ, ಮಾಧ್ಯಮ ಬೆಂಬಲಿಸುತ್ತಿದೆ: ಸಿಐಟಿಯು ಪ್ರಧಾನ ಕಾರ್ಯದರ್ಶಿ ತಪನ್ ಸೇನ್

- Advertisement -
- Advertisement -

ದೇಶದ ಆಳುವ ಸರಕಾರಗಳು ನವ ಉದಾರವಾದಿ ನೀತಿಗಳ ಏಜೆಂಟರಂತೆ, ಕಾರ್ಪೋರೇಟ್ ಕಂಪನಿಗಳ ಪರವಾಗಿ ಕೆಲಸ ಮಾಡುತ್ತಿರುವುದರಿಂದ ಜನಗಳು ದಿವಾಳಿ ಆಗುತ್ತಿದ್ದು, ದೇಶದ ಮುಖ್ಯ ವಾಹಿನಿ ಮಾಧ್ಯಮಗಳ ದೊಡ್ಡ ವಿಭಾಗವೂ ಇದಕ್ಕೆ ಬೆಂಬಲ ನೀಡುತ್ತಿದೆ ಎಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್’ (ಸಿಐಟಿಯು) ಪ್ರಧಾನ ಕಾರ್ಯದರ್ಶಿ ತಮನ್ ಸೇನ್ ಆಕ್ರೋಶ ವ್ಯಕ್ತಪಡಿಸಿದರು. ಅವರು ಬೆಂಗಳೂರಿನಲ್ಲಿ ನಡೆಯುತ್ತಿರುವ ಸಿಐಟಿಯು 17ನೇ ಅಖಿಲ ಭಾರತ ಸಮ್ಮೇಳನದ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಸಿಐಟಿಯು ಅಖಿಲ ಭಾರತ ಸಮ್ಮೇಳನ ಬೆಂಗಳೂರಿನ ಅರಮನೆ ಮೈದಾನದ, ‘ರಂಜನ ನಿರುಲಾ ಮತ್ತು ರಘುನಾಥ್ ಸಿಂಗ್’ ವೇದಿಕೆಯಲ್ಲಿ ನಡೆಯುತ್ತಿದ್ದು, ಸಮ್ಮೇಳನದ ಮೊದಲ ದಿನದ ಉದ್ಘಾಟನಾ ಕಾರ್ಯಕ್ರಮ ಬುಧವಾರ ನೆರವೇರಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ತಪನ್ ಸೇನ್, “ದೇಶದ ಆಳುವ ಸರಕಾರಗಳು ನವ ಉದಾರವಾದಿ ನೀತಿಗಳ ಏಜೆಂಟರಂತೆ ವರ್ತಿಸುತ್ತಾ, ಕಾರ್ಪೋರೇಟ್ ಕಂಪನಿಗಳ ಪರವಾಗಿ ಕೆಲಸ ಮಾಡುತ್ತಿದೆ. ಇದರಿಂದಾಗಿ ಜನರು ದಿವಾಳಿಯಾಗುತ್ತಿದ್ದಾರೆ. ಸರ್ಕಾರದ ಈ ನಡೆಗೆ ದೇಶದ ಮುಖ್ಯ ವಾಹಿನಿ ಮಾಧ್ಯಮಗಳ ದೊಡ್ಡ ವಿಭಾಗ ಕೂಡಾ ಬೆಂಬಲ ನೀಡುತ್ತಿದೆ” ಎಂದು ಅವರು ಹೇಳಿದರು.

ಸರ್ವಾಧಿಕಾರಿ ರೀತಿಯಲ್ಲಿ ನಡೆದುಕೊಳ್ಳುತ್ತಾ, ಜನರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿರುವ ಸರಕಾರದ ವಿಷಕಾರಿ ನೀತಿಗಳ ಪರಿಣಾಮಗಳ ವಿರುದ್ಧ ಒಗ್ಗಟ್ಟಿನ ಹೋರಾಟ ಅಗತ್ಯ ಎಂದು ಅವರು ಹೇಳಿದರು.

“ಆಳುವ ಸರ್ಕಾರವು ಜನರ ಒಗ್ಗಟ್ಟನ್ನು ಮುರಿಯುವ ವಿಭಜನಕಾರಿ ನೀತಿಗಳನ್ನು ಹೇರುತ್ತಾ ಸಮಾಜದ ಸಾಮಾಜಿಕ ಸಾಮರಸ್ಯವನ್ನು ಹಾಳುಗೆಡಹುತ್ತಿದೆ. ದೇಶದ ಹಿತಾಸಕ್ತಿಗೆ ಮತ್ತು ದುಡಿಯುವ ವರ್ಗದ ಹಿತಗಳಿಗೆ ವಿರುದ್ಧವಾಗಿ ಇಂತಹ ಕ್ರಿಮಿನಲ್ ದಾಳಿಗಳನ್ನು ನಡೆಸುತ್ತಿರುವ ಸರಕಾರವನ್ನು ರೈತ-ಕಾರ್ಮಿಕ ಐಕ್ಯ ಚಳುವಳಿಯ ಮೂಲಕ ಅಧಿಕಾರದಿಂದ ಕಿತ್ತೆಸೆಯಲಾಗುವುದು” ಎಂದು ತಿಳಿಸಿದ ತಪನ್ ಸೇನ್ ಪ್ರತಿಜ್ಞೆ ಮಾಡಿದರು.

ಸರ್ಕಾರ ಕಾರ್ಪೋರೇಟ್ ಕಂಪನಿ ಪರ ಕೆಲಸ ಮಾಡುತ್ತಿದೆ, ಮಾಧ್ಯಮ ಬೆಂಬಲಿಸುತ್ತಿದೆ: ಸಿಐಟಿಯು

“ಈ ನಿಟ್ಟಿನಲ್ಲಿ ಕಾರ್ಮಿಕ ಹೋರಾಟಗಳನ್ನು ಬಲಪಡಿಸುವ ಕುರಿತು ಸಿಐಟಿಯು ಸಂಘಟನೆಯ 17 ನೇ ಅಖಿಲ ಭಾರತ ಸಮ್ಮೇಳನವು ಗಂಭೀರವಾಗಿ ಚರ್ಚಿಸಲಿದೆ. ದೇಶದ ಹತ್ತು ಪ್ರಮುಖ ಕಾರ್ಮಿಕ ಸಂಘಟನೆಗಳ ಒಕ್ಕೂಟವು ಒಂದುಗೂಡಿ ಕಾರ್ಮಿಕರ ಹಕ್ಕುಗಳು, ರೈತರ ಹಕ್ಕುಗಳು ಮಾತ್ರವಲ್ಲ. ದೇಶದ ರಕ್ಷಣೆಗಾಗಿ ದೇಶವಿರೋಧಿ ಕುತಂತ್ರಗಳ ವಿರುದ್ಧ ಹೋರಾಟ ರೂಪಿಸಲಿವೆ” ಎಂದು ಅವರು ಹೇಳಿದರು.

“ಇತ್ತೀಚಿನ ಎರಡು ದಿನಗಳ ದೇಶವ್ಯಾಪಿ ಯಶಸ್ವಿ ಮುಷ್ಕರ ಈ ಹೋರಾಟದ ಭಾಗವಾಗಿದೆ. ನಾಲ್ಕು ವರ್ಷಗಳ ಹೋರಾಟದ ಅನುಭವವು, ವಿದ್ಯುತ್, ಕಲ್ಲಿದ್ದಲು ಸೇರಿದಂತೆ ಹಲವು ಕ್ಷೇತ್ರದಲ್ಲಿ ಸರಕಾರದ ಧೋರಣೆಗಳನ್ನು ಹಿಮ್ಮೆಟ್ಟಿಸಲು ಸಾಧ್ಯ ಎಂದು ತೋರಿಸಿಕೊಟ್ಟಿದೆ. ನವ ಉದಾರೀಕರಣ ನೀತಿಗಳ ಸವಾಲು ಕೇವಲ ಕಾರ್ಮಿಕ ವರ್ಗಕ್ಕೆ ಮಾತ್ರ ಸೀಮಿತವಲ್ಲ. ಇದು ಇಡೀ ಮನುಕುಲದ ಮುಂದಿನ ಸವಾಲಾಗಿದ್ದು, ಪ್ರಜಾಸತ್ತಾತ್ಮಕ ಸಮಾಜಕ್ಕೆ ಮಾರಕ” ಎಂದು ಅವರು ಪ್ರತಿಪಾದಿಸಿದರು.

“ಕೆಲವು ಸ್ವದೇಶಿ ಮತ್ತು ವಿದೇಶಿ ಕಾರ್ಪೋರೇಟ್ ಹಿತರಕ್ಷಣೆಗಾಗಿ, ವಿಶಾಲ ಜನ ಸಮುದಾಯಗಳ ಜನರ ಹಿತ ಬಲಿ ಕೊಡಲಾಗುತ್ತಿದೆ. ದೇಶದ ಕಾರ್ಮಿಕ ಚಳುವಳಿಯ ಸರಕಾರವು ದೇಶವನ್ನು ಮಾರಲು ಅವಕಾಶ ನೀಡಲಾಗದು” ಎಂದು ತಪನ್ ಸೇನ್ ಹೇಳಿದರು.

ಉದ್ಘಾಟನಾ ಸಮಾರಂಭದ ಸಭೆಯಲ್ಲಿ ಮಾತನಾಡಿದ ಸಿಐಟಿಯು ಅಖಿಲ ಭಾರತ ಅಧ್ಯಕ್ಷೆ ಡಾ. ಕೆ. ಹೇಮಲತಾ,“ಭಾರತದಲ್ಲಿ ಹೆಚ್ಚುತ್ತಿರುವ ಅಸಮಾನತೆ, ಸಂಪತ್ತಿನ ಕೇಂದ್ರೀಕರಣ ಹಾಗೂ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಕಾರ್ಮಿಕ ವರ್ಗದ ಐಕ್ಯ ಹೋರಾಟವನ್ನು ಬಲಗೊಳಿಸಲಾಗುವುದು” ಎಂದು ಹೇಳಿದರು.

ಕೇಂದ್ರ ಸರ್ಕಾರ ಅರ್ಥ ವ್ಯವಸ್ಥೆಯನ್ನು ಹಾಳು ಮಾಡುತ್ತಿವೆ: ಐಎನ್‌ಟಿಯುಸಿ

ಐಎನ್‌ಟಿಯುಸಿ ಮುಖಂಡ ಚಂದ್ರಶೇಖರನ್ ಮಾತನಾಡಿ, “ಕೇಂದ್ರ ಸರ್ಕಾರ ದೇಶದ ಅರ್ಥ ವ್ಯವಸ್ಥೆಗೆ ಭಾರಿ ಹಾನಿಯುಂಟು ಮಾಡಿದ್ದು, ಪ್ರತಿಯೊಂದು ಸಮುದಾಯವನ್ನು ವಿಭಜಿಸುತ್ತಿದೆ. ಈ ಹಿಂದಿನ ಸರ್ಕಾರಗಳು ಮಾಡಿದ ಯೋಜನೆಗಳನ್ನು ಸ್ಥಗಿತಗೊಳಿಸಿದೆ” ಎಂದು ಹೇಳಿದರು.

ಜಾಗತೀಕರಣ ಮತ್ತು ಖಾಸಗೀಕರಣ ನೀತಿಗಳಿಂದ ಕಾರ್ಮಿಕ ವರ್ಗ ಇಂದು ಅತ್ಯಂತ ಹೀನಾಯ ಸ್ಥಿತಿಯಲ್ಲಿದೆ. ದೇಶವನ್ನು ಕೋಮುವಾದ ಆವರಿಸಿದೆ. ಕಾರ್ಮಿಕ ಹಕ್ಕುಗಳ ರಕ್ಷಣೆಗಾಗಿ ಇದ್ದ 26 ಕಾನೂನುಗಳನ್ನು ಬದಲಾವಣೆ ಮಾಡಿ ನಾಲ್ಕು ನೀತಿ ಸಂಹಿತೆಗಳನ್ನಾಗಿ ಮಾಡಲಾಗಿದೆ. ಇದರಿಂದ ಕಾರ್ಮಿಕರು ತಮ್ಮ ಹಕ್ಕುಗಳನ್ನು ಕಳೆದುಕೊಂಡಿದ್ದಾರೆ. ದೇಶವಿರೋಧಿ ಕಾರ್ಮಿಕ ವಿರೋಧಿ ಕಾನೂನುಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಎಂದು ಟೀಕಿಸಿದರು.

ನಿರುದ್ಯೋಗದ ಪ್ರಮಾಣ ದಿನೇದಿನೇ ಏರಿಕೆ ಕಂಡಿದೆ: ಎಐಟಿಯುಸಿ 

ಎಐಟಿಯುಸಿಯ ಅಮರ್ಜಿತ್ ಕೌರ್ ಮಾತನಾಡಿ, ದೇಶದಲ್ಲಿ ಇಂದಿನ ಪರಿಸ್ಥಿತಿ ತುಂಬಾ ವಿಷಮವಾಗಿದ್ದು, ಸಾರ್ವಜನಿಕ ವಲಯ ಸಂಸ್ಥೆಗಳನ್ನು ಖಾಸಗೀಕರಣ ಮಾಡಲಾಗುತ್ತಿದೆ. ದಿನಗೂಲಿ ನೌಕರರು ಉದ್ಯೋಗ ಸಿಗದೆ ಆತ್ಮಹತ್ಯೆಯ ಹಾದಿ ಹಿಡಿದಿದ್ದಾರೆ. ನಿರುದ್ಯೋಗದ ಪ್ರಮಾಣ ದಿನೇದಿನೇ ಏರಿಕೆ ಕಂಡಿದೆ. ಹಾಗಿದ್ದರೂ ಕೇಂದ್ರ ಸರ್ಕಾರ ಖಾಸಗೀಕರಣದ ಹಾದಿಯನ್ನು ಕೈಬಿಟ್ಟಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...