Homeಕರ್ನಾಟಕಸರ್ಕಾರ ಕಾರ್ಪೋರೇಟ್ ಕಂಪನಿ ಪರ ಕೆಲಸ ಮಾಡುತ್ತಿದೆ, ಮಾಧ್ಯಮ ಬೆಂಬಲಿಸುತ್ತಿದೆ: ಸಿಐಟಿಯು ಪ್ರಧಾನ ಕಾರ್ಯದರ್ಶಿ ತಪನ್...

ಸರ್ಕಾರ ಕಾರ್ಪೋರೇಟ್ ಕಂಪನಿ ಪರ ಕೆಲಸ ಮಾಡುತ್ತಿದೆ, ಮಾಧ್ಯಮ ಬೆಂಬಲಿಸುತ್ತಿದೆ: ಸಿಐಟಿಯು ಪ್ರಧಾನ ಕಾರ್ಯದರ್ಶಿ ತಪನ್ ಸೇನ್

- Advertisement -
- Advertisement -

ದೇಶದ ಆಳುವ ಸರಕಾರಗಳು ನವ ಉದಾರವಾದಿ ನೀತಿಗಳ ಏಜೆಂಟರಂತೆ, ಕಾರ್ಪೋರೇಟ್ ಕಂಪನಿಗಳ ಪರವಾಗಿ ಕೆಲಸ ಮಾಡುತ್ತಿರುವುದರಿಂದ ಜನಗಳು ದಿವಾಳಿ ಆಗುತ್ತಿದ್ದು, ದೇಶದ ಮುಖ್ಯ ವಾಹಿನಿ ಮಾಧ್ಯಮಗಳ ದೊಡ್ಡ ವಿಭಾಗವೂ ಇದಕ್ಕೆ ಬೆಂಬಲ ನೀಡುತ್ತಿದೆ ಎಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್’ (ಸಿಐಟಿಯು) ಪ್ರಧಾನ ಕಾರ್ಯದರ್ಶಿ ತಮನ್ ಸೇನ್ ಆಕ್ರೋಶ ವ್ಯಕ್ತಪಡಿಸಿದರು. ಅವರು ಬೆಂಗಳೂರಿನಲ್ಲಿ ನಡೆಯುತ್ತಿರುವ ಸಿಐಟಿಯು 17ನೇ ಅಖಿಲ ಭಾರತ ಸಮ್ಮೇಳನದ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಸಿಐಟಿಯು ಅಖಿಲ ಭಾರತ ಸಮ್ಮೇಳನ ಬೆಂಗಳೂರಿನ ಅರಮನೆ ಮೈದಾನದ, ‘ರಂಜನ ನಿರುಲಾ ಮತ್ತು ರಘುನಾಥ್ ಸಿಂಗ್’ ವೇದಿಕೆಯಲ್ಲಿ ನಡೆಯುತ್ತಿದ್ದು, ಸಮ್ಮೇಳನದ ಮೊದಲ ದಿನದ ಉದ್ಘಾಟನಾ ಕಾರ್ಯಕ್ರಮ ಬುಧವಾರ ನೆರವೇರಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ತಪನ್ ಸೇನ್, “ದೇಶದ ಆಳುವ ಸರಕಾರಗಳು ನವ ಉದಾರವಾದಿ ನೀತಿಗಳ ಏಜೆಂಟರಂತೆ ವರ್ತಿಸುತ್ತಾ, ಕಾರ್ಪೋರೇಟ್ ಕಂಪನಿಗಳ ಪರವಾಗಿ ಕೆಲಸ ಮಾಡುತ್ತಿದೆ. ಇದರಿಂದಾಗಿ ಜನರು ದಿವಾಳಿಯಾಗುತ್ತಿದ್ದಾರೆ. ಸರ್ಕಾರದ ಈ ನಡೆಗೆ ದೇಶದ ಮುಖ್ಯ ವಾಹಿನಿ ಮಾಧ್ಯಮಗಳ ದೊಡ್ಡ ವಿಭಾಗ ಕೂಡಾ ಬೆಂಬಲ ನೀಡುತ್ತಿದೆ” ಎಂದು ಅವರು ಹೇಳಿದರು.

ಸರ್ವಾಧಿಕಾರಿ ರೀತಿಯಲ್ಲಿ ನಡೆದುಕೊಳ್ಳುತ್ತಾ, ಜನರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿರುವ ಸರಕಾರದ ವಿಷಕಾರಿ ನೀತಿಗಳ ಪರಿಣಾಮಗಳ ವಿರುದ್ಧ ಒಗ್ಗಟ್ಟಿನ ಹೋರಾಟ ಅಗತ್ಯ ಎಂದು ಅವರು ಹೇಳಿದರು.

“ಆಳುವ ಸರ್ಕಾರವು ಜನರ ಒಗ್ಗಟ್ಟನ್ನು ಮುರಿಯುವ ವಿಭಜನಕಾರಿ ನೀತಿಗಳನ್ನು ಹೇರುತ್ತಾ ಸಮಾಜದ ಸಾಮಾಜಿಕ ಸಾಮರಸ್ಯವನ್ನು ಹಾಳುಗೆಡಹುತ್ತಿದೆ. ದೇಶದ ಹಿತಾಸಕ್ತಿಗೆ ಮತ್ತು ದುಡಿಯುವ ವರ್ಗದ ಹಿತಗಳಿಗೆ ವಿರುದ್ಧವಾಗಿ ಇಂತಹ ಕ್ರಿಮಿನಲ್ ದಾಳಿಗಳನ್ನು ನಡೆಸುತ್ತಿರುವ ಸರಕಾರವನ್ನು ರೈತ-ಕಾರ್ಮಿಕ ಐಕ್ಯ ಚಳುವಳಿಯ ಮೂಲಕ ಅಧಿಕಾರದಿಂದ ಕಿತ್ತೆಸೆಯಲಾಗುವುದು” ಎಂದು ತಿಳಿಸಿದ ತಪನ್ ಸೇನ್ ಪ್ರತಿಜ್ಞೆ ಮಾಡಿದರು.

ಸರ್ಕಾರ ಕಾರ್ಪೋರೇಟ್ ಕಂಪನಿ ಪರ ಕೆಲಸ ಮಾಡುತ್ತಿದೆ, ಮಾಧ್ಯಮ ಬೆಂಬಲಿಸುತ್ತಿದೆ: ಸಿಐಟಿಯು

“ಈ ನಿಟ್ಟಿನಲ್ಲಿ ಕಾರ್ಮಿಕ ಹೋರಾಟಗಳನ್ನು ಬಲಪಡಿಸುವ ಕುರಿತು ಸಿಐಟಿಯು ಸಂಘಟನೆಯ 17 ನೇ ಅಖಿಲ ಭಾರತ ಸಮ್ಮೇಳನವು ಗಂಭೀರವಾಗಿ ಚರ್ಚಿಸಲಿದೆ. ದೇಶದ ಹತ್ತು ಪ್ರಮುಖ ಕಾರ್ಮಿಕ ಸಂಘಟನೆಗಳ ಒಕ್ಕೂಟವು ಒಂದುಗೂಡಿ ಕಾರ್ಮಿಕರ ಹಕ್ಕುಗಳು, ರೈತರ ಹಕ್ಕುಗಳು ಮಾತ್ರವಲ್ಲ. ದೇಶದ ರಕ್ಷಣೆಗಾಗಿ ದೇಶವಿರೋಧಿ ಕುತಂತ್ರಗಳ ವಿರುದ್ಧ ಹೋರಾಟ ರೂಪಿಸಲಿವೆ” ಎಂದು ಅವರು ಹೇಳಿದರು.

“ಇತ್ತೀಚಿನ ಎರಡು ದಿನಗಳ ದೇಶವ್ಯಾಪಿ ಯಶಸ್ವಿ ಮುಷ್ಕರ ಈ ಹೋರಾಟದ ಭಾಗವಾಗಿದೆ. ನಾಲ್ಕು ವರ್ಷಗಳ ಹೋರಾಟದ ಅನುಭವವು, ವಿದ್ಯುತ್, ಕಲ್ಲಿದ್ದಲು ಸೇರಿದಂತೆ ಹಲವು ಕ್ಷೇತ್ರದಲ್ಲಿ ಸರಕಾರದ ಧೋರಣೆಗಳನ್ನು ಹಿಮ್ಮೆಟ್ಟಿಸಲು ಸಾಧ್ಯ ಎಂದು ತೋರಿಸಿಕೊಟ್ಟಿದೆ. ನವ ಉದಾರೀಕರಣ ನೀತಿಗಳ ಸವಾಲು ಕೇವಲ ಕಾರ್ಮಿಕ ವರ್ಗಕ್ಕೆ ಮಾತ್ರ ಸೀಮಿತವಲ್ಲ. ಇದು ಇಡೀ ಮನುಕುಲದ ಮುಂದಿನ ಸವಾಲಾಗಿದ್ದು, ಪ್ರಜಾಸತ್ತಾತ್ಮಕ ಸಮಾಜಕ್ಕೆ ಮಾರಕ” ಎಂದು ಅವರು ಪ್ರತಿಪಾದಿಸಿದರು.

“ಕೆಲವು ಸ್ವದೇಶಿ ಮತ್ತು ವಿದೇಶಿ ಕಾರ್ಪೋರೇಟ್ ಹಿತರಕ್ಷಣೆಗಾಗಿ, ವಿಶಾಲ ಜನ ಸಮುದಾಯಗಳ ಜನರ ಹಿತ ಬಲಿ ಕೊಡಲಾಗುತ್ತಿದೆ. ದೇಶದ ಕಾರ್ಮಿಕ ಚಳುವಳಿಯ ಸರಕಾರವು ದೇಶವನ್ನು ಮಾರಲು ಅವಕಾಶ ನೀಡಲಾಗದು” ಎಂದು ತಪನ್ ಸೇನ್ ಹೇಳಿದರು.

ಉದ್ಘಾಟನಾ ಸಮಾರಂಭದ ಸಭೆಯಲ್ಲಿ ಮಾತನಾಡಿದ ಸಿಐಟಿಯು ಅಖಿಲ ಭಾರತ ಅಧ್ಯಕ್ಷೆ ಡಾ. ಕೆ. ಹೇಮಲತಾ,“ಭಾರತದಲ್ಲಿ ಹೆಚ್ಚುತ್ತಿರುವ ಅಸಮಾನತೆ, ಸಂಪತ್ತಿನ ಕೇಂದ್ರೀಕರಣ ಹಾಗೂ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಕಾರ್ಮಿಕ ವರ್ಗದ ಐಕ್ಯ ಹೋರಾಟವನ್ನು ಬಲಗೊಳಿಸಲಾಗುವುದು” ಎಂದು ಹೇಳಿದರು.

ಕೇಂದ್ರ ಸರ್ಕಾರ ಅರ್ಥ ವ್ಯವಸ್ಥೆಯನ್ನು ಹಾಳು ಮಾಡುತ್ತಿವೆ: ಐಎನ್‌ಟಿಯುಸಿ

ಐಎನ್‌ಟಿಯುಸಿ ಮುಖಂಡ ಚಂದ್ರಶೇಖರನ್ ಮಾತನಾಡಿ, “ಕೇಂದ್ರ ಸರ್ಕಾರ ದೇಶದ ಅರ್ಥ ವ್ಯವಸ್ಥೆಗೆ ಭಾರಿ ಹಾನಿಯುಂಟು ಮಾಡಿದ್ದು, ಪ್ರತಿಯೊಂದು ಸಮುದಾಯವನ್ನು ವಿಭಜಿಸುತ್ತಿದೆ. ಈ ಹಿಂದಿನ ಸರ್ಕಾರಗಳು ಮಾಡಿದ ಯೋಜನೆಗಳನ್ನು ಸ್ಥಗಿತಗೊಳಿಸಿದೆ” ಎಂದು ಹೇಳಿದರು.

ಜಾಗತೀಕರಣ ಮತ್ತು ಖಾಸಗೀಕರಣ ನೀತಿಗಳಿಂದ ಕಾರ್ಮಿಕ ವರ್ಗ ಇಂದು ಅತ್ಯಂತ ಹೀನಾಯ ಸ್ಥಿತಿಯಲ್ಲಿದೆ. ದೇಶವನ್ನು ಕೋಮುವಾದ ಆವರಿಸಿದೆ. ಕಾರ್ಮಿಕ ಹಕ್ಕುಗಳ ರಕ್ಷಣೆಗಾಗಿ ಇದ್ದ 26 ಕಾನೂನುಗಳನ್ನು ಬದಲಾವಣೆ ಮಾಡಿ ನಾಲ್ಕು ನೀತಿ ಸಂಹಿತೆಗಳನ್ನಾಗಿ ಮಾಡಲಾಗಿದೆ. ಇದರಿಂದ ಕಾರ್ಮಿಕರು ತಮ್ಮ ಹಕ್ಕುಗಳನ್ನು ಕಳೆದುಕೊಂಡಿದ್ದಾರೆ. ದೇಶವಿರೋಧಿ ಕಾರ್ಮಿಕ ವಿರೋಧಿ ಕಾನೂನುಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಎಂದು ಟೀಕಿಸಿದರು.

ನಿರುದ್ಯೋಗದ ಪ್ರಮಾಣ ದಿನೇದಿನೇ ಏರಿಕೆ ಕಂಡಿದೆ: ಎಐಟಿಯುಸಿ 

ಎಐಟಿಯುಸಿಯ ಅಮರ್ಜಿತ್ ಕೌರ್ ಮಾತನಾಡಿ, ದೇಶದಲ್ಲಿ ಇಂದಿನ ಪರಿಸ್ಥಿತಿ ತುಂಬಾ ವಿಷಮವಾಗಿದ್ದು, ಸಾರ್ವಜನಿಕ ವಲಯ ಸಂಸ್ಥೆಗಳನ್ನು ಖಾಸಗೀಕರಣ ಮಾಡಲಾಗುತ್ತಿದೆ. ದಿನಗೂಲಿ ನೌಕರರು ಉದ್ಯೋಗ ಸಿಗದೆ ಆತ್ಮಹತ್ಯೆಯ ಹಾದಿ ಹಿಡಿದಿದ್ದಾರೆ. ನಿರುದ್ಯೋಗದ ಪ್ರಮಾಣ ದಿನೇದಿನೇ ಏರಿಕೆ ಕಂಡಿದೆ. ಹಾಗಿದ್ದರೂ ಕೇಂದ್ರ ಸರ್ಕಾರ ಖಾಸಗೀಕರಣದ ಹಾದಿಯನ್ನು ಕೈಬಿಟ್ಟಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...