Homeಕರ್ನಾಟಕಜಾತಿ ಗಣತಿ ವರದಿ ಬಿಡುಗಡೆ ಮಾಡುವ ಸರ್ಕಾರದ ಕ್ರಮಕ್ಕೆ ವಿರೋಧವಿದೆ: ಗೃಹ ಸಚಿವ ಪರಮೇಶ್ವರ್

ಜಾತಿ ಗಣತಿ ವರದಿ ಬಿಡುಗಡೆ ಮಾಡುವ ಸರ್ಕಾರದ ಕ್ರಮಕ್ಕೆ ವಿರೋಧವಿದೆ: ಗೃಹ ಸಚಿವ ಪರಮೇಶ್ವರ್

- Advertisement -
- Advertisement -

ಜಾತಿ ಗಣತಿ ವರದಿ ಬಿಡುಗಡೆಗೆ ವ್ಯಕ್ತವಾಗುತ್ತಿರುವ ವಿರೋಧದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಗೃಹ ಸಚಿವ ಜಿ ಪರಮೇಶ್ವರ ಅವರು, “ವಿರೋಧ ಪ್ರತಿಕ್ರಿಯೆಗಳು ಈಗ ನಡೆಯುತ್ತಿರುವ ಚರ್ಚೆಯ ಭಾಗವಾಗಿದೆ” ಎಂದು ಹೇಳಿದ್ದಾರೆ. ಈ ವೇಳೆ ಜಾತಿ ಗಣತಿ ಬಿಡುಗಡೆ ಮಾಡುವುದನ್ನು ಅವರು ಸಮರ್ಥಿಸಿಕೊಂಡರು.

ಈ ಬಗ್ಗೆ ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಜಾತಿ ಗಣತಿಗೆ ಮೊದಲು ಕೂಗು ಎದ್ದಿದ್ದರೂ ಈಗ ಅದನ್ನು ಮುಂದಕ್ಕೆ ತರುವ ಸರ್ಕಾರದ ಕ್ರಮಕ್ಕೆ ವಿರೋಧ ವ್ಯಕ್ತವಾಗಿದೆ” ಎಂಬುದನ್ನು ಅವರು ಮಾಧ್ಯಮಗಳ ಗಮನಕ್ಕೆ ತಂದರು.

“ನಾವು ಜಾತಿ ಗಣತಿ ವಿಷಯವನ್ನು ಸಂಪುಟದ ಚರ್ಚೆಗೆ ತೆಗೆದುಕೊಳ್ಳಲು ನಿರ್ಧರಿಸಿದ್ದೇವೆ. ಜಾರಿಗೆ ವಿಳಂಬವಾಗಿದೆ. ಆದರೆ, ಈಗ ನಾವು ಅದನ್ನು ಪರಿಹರಿಸಲು ಯೋಜಿಸಿದ್ದೇವೆ. ಸಂಪುಟ ಸಭೆಯ ನಂತರ ವಿಧಾನಸಭೆಯಲ್ಲಿ ಮಂಡಿಸಬೇಕೋ ಅಥವಾ ನೇರವಾಗಿ ಬಿಡುಗಡೆ ಮಾಡಬೇಕೋ ಎಂಬ ಬಗ್ಗೆ ತೀರ್ಮಾನಿಸಲಾಗುವುದು” ಎಂದು ಅವರು ಹೇಳಿದರು.

“ಇದೊಂದು ವಿಚಿತ್ರ ಸಂದರ್ಭ, ಜಾತಿ ಜನಗಣತಿ ವರದಿ ಸ್ವೀಕರಿಸಿಲ್ಲವೆಂದರೆ ಮಾಡಿಲ್ಲ ಅಂತಾರೆ. ಮಾಡಿದರೆ ಯಾಕೆ ಈಗ ಮಾಡುತ್ತೀರಿ ಎಂದು ಪ್ರಶ್ನಿಸುತ್ತಾರೆ. ಜನಗಣತಿ ಸ್ವೀಕಾರ ವಿಳಂಬಕ್ಕೂ ಕಾರಣಗಳಿವೆ.‌ ಕ್ಯಾಬಿನೆಟ್​ನಲ್ಲಿ ಚರ್ಚೆ ಮಾಡಿ ಅಸೆಂಬ್ಲಿಗೆ ತರಬೇಕಾ, ಬೇಡವಾ ಎಂದು ತೀರ್ಮಾನಿಸುತ್ತೇವೆ. ಅಸೆಂಬ್ಲಿಗೆ ಬೇಕಾಗಿಲ್ಲ ಎಂದು ಕ್ಯಾಬಿನೆಟ್ ತೀರ್ಮಾನ ಮಾಡಿದರೆ ಮುಗೀತು” ಎಂದರು.

“ಸದ್ಯದಲ್ಲೇ ಕೇಂದ್ರ ಸರ್ಕಾರದಿಂದ ಜನಗಣತಿ ನಡೆಯಲಿದೆ. ಅದು ಓವರ್ ಲ್ಯಾಪ್ ಆದರೆ ಮುಂದೆ ಸರಿಪಡಿಸಿಕೊಳ್ಳಬಹುದು. ಯಾವುದಾದರೂ ಸಮುದಾಯದ ಅಂಕಿ ಸಂಖ್ಯೆ ಹೆಚ್ಚು ಕಮ್ಮಿ ಆಗಿದ್ದರೆ ಆಮೇಲೆ ಸರಿ ಮಾಡಿಕೊಳ್ಳಬಹುದು. ಕೇಂದ್ರ ಸರ್ಕಾರದ ಜನಗಣತಿಯನ್ನೇ ಎಲ್ಲರೂ ಪರಿಗಣಿಸುತ್ತಾರೆ” ಎಂದರು.

“ಮೊದಲು ಕ್ಯಾಬಿನೆಟ್​ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿ, ಆಮೇಲೆ ನೋಡೋಣ. ಜಾತಿಗಣತಿಗೆ ರಾಜ್ಯ ಸರ್ಕಾರ ₹160 ಕೋಟಿ ಖರ್ಚು ಮಾಡಿದೆ. ಅದಕ್ಕೂ ಲೆಕ್ಕ‌ ಕೊಡಬೇಕು. ನಾಳೆ ಸಿಎಜಿ ಕೂಡ ಇದಕ್ಕೆ ಆಕ್ಷೇಪ ಮಾಡಬಹುದು” ಎಂದು ಪರಮೇಶ್ವರ್​ ಹೇಳಿದರು.

ಇದನ್ನೂ ಓದಿ; PoSH ಸಮಿತಿ ರಚನೆ ಬಗ್ಗೆ 15 ದಿನಗಳ ಕಾಲಾವಕಾಶ ಕೋರಿದ ಕರ್ನಾಟಕ ಫಿಲ್ಮ್ ಚೇಂಬರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...