Homeಕರ್ನಾಟಕಜಾತಿ ಗಣತಿ ವರದಿ ಬಿಡುಗಡೆ ಮಾಡುವ ಸರ್ಕಾರದ ಕ್ರಮಕ್ಕೆ ವಿರೋಧವಿದೆ: ಗೃಹ ಸಚಿವ ಪರಮೇಶ್ವರ್

ಜಾತಿ ಗಣತಿ ವರದಿ ಬಿಡುಗಡೆ ಮಾಡುವ ಸರ್ಕಾರದ ಕ್ರಮಕ್ಕೆ ವಿರೋಧವಿದೆ: ಗೃಹ ಸಚಿವ ಪರಮೇಶ್ವರ್

- Advertisement -
- Advertisement -

ಜಾತಿ ಗಣತಿ ವರದಿ ಬಿಡುಗಡೆಗೆ ವ್ಯಕ್ತವಾಗುತ್ತಿರುವ ವಿರೋಧದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಗೃಹ ಸಚಿವ ಜಿ ಪರಮೇಶ್ವರ ಅವರು, “ವಿರೋಧ ಪ್ರತಿಕ್ರಿಯೆಗಳು ಈಗ ನಡೆಯುತ್ತಿರುವ ಚರ್ಚೆಯ ಭಾಗವಾಗಿದೆ” ಎಂದು ಹೇಳಿದ್ದಾರೆ. ಈ ವೇಳೆ ಜಾತಿ ಗಣತಿ ಬಿಡುಗಡೆ ಮಾಡುವುದನ್ನು ಅವರು ಸಮರ್ಥಿಸಿಕೊಂಡರು.

ಈ ಬಗ್ಗೆ ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಜಾತಿ ಗಣತಿಗೆ ಮೊದಲು ಕೂಗು ಎದ್ದಿದ್ದರೂ ಈಗ ಅದನ್ನು ಮುಂದಕ್ಕೆ ತರುವ ಸರ್ಕಾರದ ಕ್ರಮಕ್ಕೆ ವಿರೋಧ ವ್ಯಕ್ತವಾಗಿದೆ” ಎಂಬುದನ್ನು ಅವರು ಮಾಧ್ಯಮಗಳ ಗಮನಕ್ಕೆ ತಂದರು.

“ನಾವು ಜಾತಿ ಗಣತಿ ವಿಷಯವನ್ನು ಸಂಪುಟದ ಚರ್ಚೆಗೆ ತೆಗೆದುಕೊಳ್ಳಲು ನಿರ್ಧರಿಸಿದ್ದೇವೆ. ಜಾರಿಗೆ ವಿಳಂಬವಾಗಿದೆ. ಆದರೆ, ಈಗ ನಾವು ಅದನ್ನು ಪರಿಹರಿಸಲು ಯೋಜಿಸಿದ್ದೇವೆ. ಸಂಪುಟ ಸಭೆಯ ನಂತರ ವಿಧಾನಸಭೆಯಲ್ಲಿ ಮಂಡಿಸಬೇಕೋ ಅಥವಾ ನೇರವಾಗಿ ಬಿಡುಗಡೆ ಮಾಡಬೇಕೋ ಎಂಬ ಬಗ್ಗೆ ತೀರ್ಮಾನಿಸಲಾಗುವುದು” ಎಂದು ಅವರು ಹೇಳಿದರು.

“ಇದೊಂದು ವಿಚಿತ್ರ ಸಂದರ್ಭ, ಜಾತಿ ಜನಗಣತಿ ವರದಿ ಸ್ವೀಕರಿಸಿಲ್ಲವೆಂದರೆ ಮಾಡಿಲ್ಲ ಅಂತಾರೆ. ಮಾಡಿದರೆ ಯಾಕೆ ಈಗ ಮಾಡುತ್ತೀರಿ ಎಂದು ಪ್ರಶ್ನಿಸುತ್ತಾರೆ. ಜನಗಣತಿ ಸ್ವೀಕಾರ ವಿಳಂಬಕ್ಕೂ ಕಾರಣಗಳಿವೆ.‌ ಕ್ಯಾಬಿನೆಟ್​ನಲ್ಲಿ ಚರ್ಚೆ ಮಾಡಿ ಅಸೆಂಬ್ಲಿಗೆ ತರಬೇಕಾ, ಬೇಡವಾ ಎಂದು ತೀರ್ಮಾನಿಸುತ್ತೇವೆ. ಅಸೆಂಬ್ಲಿಗೆ ಬೇಕಾಗಿಲ್ಲ ಎಂದು ಕ್ಯಾಬಿನೆಟ್ ತೀರ್ಮಾನ ಮಾಡಿದರೆ ಮುಗೀತು” ಎಂದರು.

“ಸದ್ಯದಲ್ಲೇ ಕೇಂದ್ರ ಸರ್ಕಾರದಿಂದ ಜನಗಣತಿ ನಡೆಯಲಿದೆ. ಅದು ಓವರ್ ಲ್ಯಾಪ್ ಆದರೆ ಮುಂದೆ ಸರಿಪಡಿಸಿಕೊಳ್ಳಬಹುದು. ಯಾವುದಾದರೂ ಸಮುದಾಯದ ಅಂಕಿ ಸಂಖ್ಯೆ ಹೆಚ್ಚು ಕಮ್ಮಿ ಆಗಿದ್ದರೆ ಆಮೇಲೆ ಸರಿ ಮಾಡಿಕೊಳ್ಳಬಹುದು. ಕೇಂದ್ರ ಸರ್ಕಾರದ ಜನಗಣತಿಯನ್ನೇ ಎಲ್ಲರೂ ಪರಿಗಣಿಸುತ್ತಾರೆ” ಎಂದರು.

“ಮೊದಲು ಕ್ಯಾಬಿನೆಟ್​ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿ, ಆಮೇಲೆ ನೋಡೋಣ. ಜಾತಿಗಣತಿಗೆ ರಾಜ್ಯ ಸರ್ಕಾರ ₹160 ಕೋಟಿ ಖರ್ಚು ಮಾಡಿದೆ. ಅದಕ್ಕೂ ಲೆಕ್ಕ‌ ಕೊಡಬೇಕು. ನಾಳೆ ಸಿಎಜಿ ಕೂಡ ಇದಕ್ಕೆ ಆಕ್ಷೇಪ ಮಾಡಬಹುದು” ಎಂದು ಪರಮೇಶ್ವರ್​ ಹೇಳಿದರು.

ಇದನ್ನೂ ಓದಿ; PoSH ಸಮಿತಿ ರಚನೆ ಬಗ್ಗೆ 15 ದಿನಗಳ ಕಾಲಾವಕಾಶ ಕೋರಿದ ಕರ್ನಾಟಕ ಫಿಲ್ಮ್ ಚೇಂಬರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...