Homeಕರ್ನಾಟಕಜಾತಿ ಗಣತಿ ವರದಿ ಬಿಡುಗಡೆ ಮಾಡುವ ಸರ್ಕಾರದ ಕ್ರಮಕ್ಕೆ ವಿರೋಧವಿದೆ: ಗೃಹ ಸಚಿವ ಪರಮೇಶ್ವರ್

ಜಾತಿ ಗಣತಿ ವರದಿ ಬಿಡುಗಡೆ ಮಾಡುವ ಸರ್ಕಾರದ ಕ್ರಮಕ್ಕೆ ವಿರೋಧವಿದೆ: ಗೃಹ ಸಚಿವ ಪರಮೇಶ್ವರ್

- Advertisement -
- Advertisement -

ಜಾತಿ ಗಣತಿ ವರದಿ ಬಿಡುಗಡೆಗೆ ವ್ಯಕ್ತವಾಗುತ್ತಿರುವ ವಿರೋಧದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಗೃಹ ಸಚಿವ ಜಿ ಪರಮೇಶ್ವರ ಅವರು, “ವಿರೋಧ ಪ್ರತಿಕ್ರಿಯೆಗಳು ಈಗ ನಡೆಯುತ್ತಿರುವ ಚರ್ಚೆಯ ಭಾಗವಾಗಿದೆ” ಎಂದು ಹೇಳಿದ್ದಾರೆ. ಈ ವೇಳೆ ಜಾತಿ ಗಣತಿ ಬಿಡುಗಡೆ ಮಾಡುವುದನ್ನು ಅವರು ಸಮರ್ಥಿಸಿಕೊಂಡರು.

ಈ ಬಗ್ಗೆ ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಜಾತಿ ಗಣತಿಗೆ ಮೊದಲು ಕೂಗು ಎದ್ದಿದ್ದರೂ ಈಗ ಅದನ್ನು ಮುಂದಕ್ಕೆ ತರುವ ಸರ್ಕಾರದ ಕ್ರಮಕ್ಕೆ ವಿರೋಧ ವ್ಯಕ್ತವಾಗಿದೆ” ಎಂಬುದನ್ನು ಅವರು ಮಾಧ್ಯಮಗಳ ಗಮನಕ್ಕೆ ತಂದರು.

“ನಾವು ಜಾತಿ ಗಣತಿ ವಿಷಯವನ್ನು ಸಂಪುಟದ ಚರ್ಚೆಗೆ ತೆಗೆದುಕೊಳ್ಳಲು ನಿರ್ಧರಿಸಿದ್ದೇವೆ. ಜಾರಿಗೆ ವಿಳಂಬವಾಗಿದೆ. ಆದರೆ, ಈಗ ನಾವು ಅದನ್ನು ಪರಿಹರಿಸಲು ಯೋಜಿಸಿದ್ದೇವೆ. ಸಂಪುಟ ಸಭೆಯ ನಂತರ ವಿಧಾನಸಭೆಯಲ್ಲಿ ಮಂಡಿಸಬೇಕೋ ಅಥವಾ ನೇರವಾಗಿ ಬಿಡುಗಡೆ ಮಾಡಬೇಕೋ ಎಂಬ ಬಗ್ಗೆ ತೀರ್ಮಾನಿಸಲಾಗುವುದು” ಎಂದು ಅವರು ಹೇಳಿದರು.

“ಇದೊಂದು ವಿಚಿತ್ರ ಸಂದರ್ಭ, ಜಾತಿ ಜನಗಣತಿ ವರದಿ ಸ್ವೀಕರಿಸಿಲ್ಲವೆಂದರೆ ಮಾಡಿಲ್ಲ ಅಂತಾರೆ. ಮಾಡಿದರೆ ಯಾಕೆ ಈಗ ಮಾಡುತ್ತೀರಿ ಎಂದು ಪ್ರಶ್ನಿಸುತ್ತಾರೆ. ಜನಗಣತಿ ಸ್ವೀಕಾರ ವಿಳಂಬಕ್ಕೂ ಕಾರಣಗಳಿವೆ.‌ ಕ್ಯಾಬಿನೆಟ್​ನಲ್ಲಿ ಚರ್ಚೆ ಮಾಡಿ ಅಸೆಂಬ್ಲಿಗೆ ತರಬೇಕಾ, ಬೇಡವಾ ಎಂದು ತೀರ್ಮಾನಿಸುತ್ತೇವೆ. ಅಸೆಂಬ್ಲಿಗೆ ಬೇಕಾಗಿಲ್ಲ ಎಂದು ಕ್ಯಾಬಿನೆಟ್ ತೀರ್ಮಾನ ಮಾಡಿದರೆ ಮುಗೀತು” ಎಂದರು.

“ಸದ್ಯದಲ್ಲೇ ಕೇಂದ್ರ ಸರ್ಕಾರದಿಂದ ಜನಗಣತಿ ನಡೆಯಲಿದೆ. ಅದು ಓವರ್ ಲ್ಯಾಪ್ ಆದರೆ ಮುಂದೆ ಸರಿಪಡಿಸಿಕೊಳ್ಳಬಹುದು. ಯಾವುದಾದರೂ ಸಮುದಾಯದ ಅಂಕಿ ಸಂಖ್ಯೆ ಹೆಚ್ಚು ಕಮ್ಮಿ ಆಗಿದ್ದರೆ ಆಮೇಲೆ ಸರಿ ಮಾಡಿಕೊಳ್ಳಬಹುದು. ಕೇಂದ್ರ ಸರ್ಕಾರದ ಜನಗಣತಿಯನ್ನೇ ಎಲ್ಲರೂ ಪರಿಗಣಿಸುತ್ತಾರೆ” ಎಂದರು.

“ಮೊದಲು ಕ್ಯಾಬಿನೆಟ್​ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿ, ಆಮೇಲೆ ನೋಡೋಣ. ಜಾತಿಗಣತಿಗೆ ರಾಜ್ಯ ಸರ್ಕಾರ ₹160 ಕೋಟಿ ಖರ್ಚು ಮಾಡಿದೆ. ಅದಕ್ಕೂ ಲೆಕ್ಕ‌ ಕೊಡಬೇಕು. ನಾಳೆ ಸಿಎಜಿ ಕೂಡ ಇದಕ್ಕೆ ಆಕ್ಷೇಪ ಮಾಡಬಹುದು” ಎಂದು ಪರಮೇಶ್ವರ್​ ಹೇಳಿದರು.

ಇದನ್ನೂ ಓದಿ; PoSH ಸಮಿತಿ ರಚನೆ ಬಗ್ಗೆ 15 ದಿನಗಳ ಕಾಲಾವಕಾಶ ಕೋರಿದ ಕರ್ನಾಟಕ ಫಿಲ್ಮ್ ಚೇಂಬರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...