Homeಕರ್ನಾಟಕಸರ್ಕಾರದ ನಡೆಗೆ ಸ್ವಾಗತ, ಆದರೆ ಸಂಪುಟ ನಿರ್ಣಯ ಗೊಂದಲದ ಗೂಡಾಗಿದೆ: ಒಳಮೀಸಲಾತಿ ಹೋರಾಟ ವೇದಿಕೆ

ಸರ್ಕಾರದ ನಡೆಗೆ ಸ್ವಾಗತ, ಆದರೆ ಸಂಪುಟ ನಿರ್ಣಯ ಗೊಂದಲದ ಗೂಡಾಗಿದೆ: ಒಳಮೀಸಲಾತಿ ಹೋರಾಟ ವೇದಿಕೆ

‘ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ’ ವತಿಯಿಂದ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನಡೆಯುತ್ತಿದ್ದ ಹೋರಾಟವನ್ನು ಶನಿವಾರ ಕೈಬಿಡಲಾಯಿತು.

- Advertisement -
- Advertisement -

“ಒಳಮೀಸಲಾತಿ ಜಾರಿಗೊಳಿಸುವ ನಿರ್ಧಾರವನ್ನು ಸ್ವಾಗತಿಸುತ್ತೇವೆ, ಆದರೆ ಸರ್ಕಾರದ ನಿರ್ಣಯ ಗೊಂದಲದ ಗೂಡಾಗಿದೆ” ಎಂದು ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ’ಯ ಪ್ರಧಾನ ಸಂಚಾಲಕ ಎಸ್.ಮಾರಪ್ಪ ಹೇಳಿದರು.

ಜಸ್ಟಿಸ್ ಎ.ಜೆ.ಸದಾಶಿವ ಆಯೋಗದ ವರದಿಯನ್ವಯ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಸಮಿತಿಯು ಕಳೆದ 111 ದಿನಗಳಿಂದ ಬೆಂಗಳೂರಿನ ಫ್ರೀಡಂಪಾರ್ಕ್‌‌ನಲ್ಲಿ ನಡೆಸುತ್ತಿದ್ದ ಹೋರಾಟವನ್ನು ಶನಿವಾರ ತಾತ್ಕಾಲಿಕವಾಗಿ ಕೈಬಿಡಲಾಯಿತು. ಸಮಾರೋಪ ಸಮಾರಂಭದ ವೇಳೆ ಮಾಧ್ಯಮಗಳೊಂದಿಗೆ ಮಾರಪ್ಪನವರು ಮಾತನಾಡಿದರು.

“ಮೀಸಲಾತಿ ವರ್ಗೀಕರಣವನ್ನು ಗೊಂದಲದ ಗೂಡಾಗಿಸಲಾಗಿದೆ. ಮೂಲ ಸಮುದಾಯಗಳನ್ನು ಶೈಕ್ಷಣಿಕ, ಸಾಮಾಜಿಕ ಹಿನ್ನೆಲೆಯಲ್ಲಿ ಗುಂಪುಗಳಾಗಿ ವರ್ಗೀಕರಿಸಬೇಕೇ ಹೊರತು, ತಮಗೆ ಬೇಕಾದಂತೆ ಪಲ್ಲಟ ಮಾಡಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದರು.

“ಸರ್ಕಾರ ಮಾಡಿರುವ ಆದೇಶದಲ್ಲಿ ಆದಿಕರ್ನಾಟಕ (ಎ.ಕೆ.) ಮತ್ತು ಆದಿದ್ರಾವಿಡ (ಎ.ಡಿ.) ವರ್ಗೀಕರಣ ಅವೈಜ್ಞಾನಿಕವಾಗಿದೆ. ನಿರ್ದಿಷ್ಟ ಸಮುದಾಯವೇ ಎ.ಕೆ. ಅಥವಾ ಎ.ಡಿ. ಎಂದು ತಿಳಿಸುವುದಕ್ಕೆ ಇವರೇನು ತಜ್ಞರಾ? ಸರ್ಕಾರ ನೇಮಿಸಿದ ಸಚಿವ ಸಂಪುಟ ಉಪಸಮಿತಿಯಲ್ಲಿ ಯಾರಾದರೂ ತಜ್ಞರು ಇದ್ದರಾ?” ಎಂದು ಪ್ರಶ್ನಿಸಿದರು.

“ಮೈಸೂರು ಭಾಗದಲ್ಲಿ ಹೊಲೆಯ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಎ.ಕೆ.ಯಲ್ಲಿದೆ, ಬೆಂಗಳೂರಿನಿಂದ ಕೊಪ್ಪಳದವರೆಗೂ ಮಾದಿಗರು ಎ.ಕೆ.ಯಲ್ಲಿದ್ದಾರೆ. ಒಂದಿಷ್ಟು ಭಾಗದಲ್ಲಿ ಎ.ಡಿ.ಯಲ್ಲಿ ಹೊಲೆಯರಿದ್ದರೆ, ಮತ್ತೊಂದಿಷ್ಟು ಭಾಗದಲ್ಲಿ ಮಾದಿಗರಿದ್ದಾರೆ. ಆದರೆ ಆದಿಕರ್ನಾಟಕದವರೆಲ್ಲ ಹೊಲೆಯರು, ಆದಿ ದ್ರಾವಿಡರೆಲ್ಲ ಮಾದಿಗರು ಎಂದು ಸರ್ಕಾರ ಅವೈಜ್ಞಾನಿಕವಾಗಿ ನಿಲುವು ತಾಳಿದೆ” ಎಂದು ಟೀಕಿಸಿದರು.

“ಅಭಿವೃದ್ಧಿ ಹೊಂದಿದ ಕೆಲವು ಸಮುದಾಯಗಳನ್ನು ಗ್ರೂಪ್‌ 4ರಲ್ಲಿ ಸೇರಿಸಲಾಗಿದೆ. ಅಲ್ಲಿ ಅತ್ಯಂತ ಹಿಂದುಳಿದ ಅಲೆಮಾರಿ ಸಮುದಾಯಗಳಿವೆ. ಬಲಾಢ್ಯರೊಂದಿಗೆ ಈ ಅಲೆಮಾರಿಗಳು ಸ್ಪರ್ಧೆ ಮಾಡಲು ಸಾಧ್ಯವೇ? ಈ ರೀತಿಯ ತೊಡಕುಗಳಿವೆ. ಇವು ಆಡಳಿತಾತ್ಮಕವಾಗಿ ಸರಿಪಡಿಸುವುದು ಕಷ್ಟವೇನಲ್ಲ” ಎಂದು ಅಭಿಪ್ರಾಯಪಟ್ಟರು.

“ಸಂವಿಧಾನದ ವಿಧಿ 341ಕ್ಕೆ ತಿದ್ದುಪಡಿಯಾಗುವವರೆಗೂ, ಲೋಕಸಭಾ ಚುನಾವಣೆಯವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ. ಈಗ ನಿರಂತರವಾಗಿ ಕರ್ನಾಟಕಕ್ಕೆ ಭೇಟಿ ನೀಡುತ್ತಿರುವ ಕೇಂದ್ರ ಸಚಿವ ಅಮಿತ್ ಷಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರಲ್ಲಿ ನಮ್ಮ ಬೇಡಿಕೆಗಳನ್ನು ಇಡುತ್ತೇವೆ. ಸದ್ಯಕ್ಕೆ ಚುನಾವಣೆಯ ಹಿನ್ನೆಲೆಯಲ್ಲಿ ಹೋರಾಟವನ್ನು ಮೊಟಕುಗೊಳಿಸುತ್ತಿದ್ದೇವೆ, ಆದರೆ ಚುನಾವಣೆ ಮಧ್ಯದಲ್ಲಿ ನಮ್ಮ ಹೋರಾಟ ಆರಂಭಿಸುತ್ತೇವೆ” ಎಂದು ಸ್ಪಷ್ಟಪಡಿಸಿದರು.

“ಜಾರಿಯೇ ಆಗದಿರುವ 17 % ಮೀಸಲಾತಿಯಲ್ಲಿ ಒಳಮೀಸಲಾತಿ ನೀಡಲಾಗಿದೆ, ಮಾದಿಗ ಸಮುದಾಯವನ್ನು ಮತ್ತೆ ದಿಕ್ಕು ತಪ್ಪಿಸಲಾಗಿದೆ” ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಗೊಂದಲ ಆಗಿರುವುದು ನಿಜ. ಆದರೆ ಇದನ್ನು ಸರಿಪಡಿಸಬಹುದು. ಒಳಮೀಸಲಾತಿಯನ್ನು ಒಪ್ಪಿಕೊಂಡಿದ್ದಾರೆ. ಛತ್ತೀಸ್‌ಘಡದಲ್ಲಿ ಶೇ.82ರಷ್ಟು ಮೀಸಲಾತಿ ಇದ್ದರೆ, ಕೆಲವು ರಾಜ್ಯಗಳಲ್ಲಿ ಮೀಸಲಾತಿ ಪ್ರಮಾಣ ಶೇ.60ನ್ನು ಮೀರಿದೆ. ಹೀಗಾಗಿ ಕರ್ನಾಟಕದಲ್ಲಿ ಮೀಸಲಾತಿ ಹೆಚ್ಚಿಸುವುದು ಸಮಸ್ಯೆಯಾಗುವುದಿಲ್ಲ. ಎಸ್‌ಸಿ, ಎಸ್‌ಟಿಗಳೆಲ್ಲರೂ ಮೀಸಲಾತಿ ಹೆಚ್ಚಳಕ್ಕೆ ಒಕ್ಕೊರಲಿನಿಂದ ಆಗ್ರಹಿಸಬೇಕಿದೆ” ಎಂದರು.

“ಸದ್ಯಕ್ಕೆ ಒಂದು ಮಟ್ಟಿಗಿನ ಗೆಲುವು ನಮಗಾಗಿದೆ. ಆದರೆ ಸ್ಪೃಶ್ಯ ಜಾತಿಗಳಿಗೆ ಹೆಚ್ಚಿನ ಮೀಸಲಾತಿ ನೀಡಿರುವುದು ತಪ್ಪು. ಹೊಲೆಯ ಸಹೋದರರಿಗೆ ಇನ್ನರ್ಧ ಪರ್ಸೆಂಟ್ ಹೆಚ್ಚಿನ ಪಾಲು ನೀಡಬಹುದಿತ್ತು, ಮತ್ತೊಂದರ್ಧ ಅಲೆಮಾರಿಗಳಿಗೆ ನೀಡಬಹುದಿತ್ತು. ಹೆಚ್ಚಿಗೆ ನೀಡಿರುವುದಕ್ಕೆ ಯಾವುದೇ ಕಾರಣ ಕಾಣಿಸುತ್ತಿಲ್ಲ” ಎಂದು ತಿಳಿಸಿದರು.

‘ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿದಿರಿ’

“ಒಳಮೀಸಲಾತಿ ಜಾರಿಗೊಳಿಸಿದ ಮೋದಿ ಮತ್ತು ಅಮಿತ್ ಷಾ ಅವರಿಗೆ ಅಭಿನಂದನೆ” ಎಂಬ ರೀತಿ ಜಾಹೀರಾತುಗಳನ್ನು ನೀಡುತ್ತಿರುವ ಸಂಬಂಧ ಪ್ರತಿಕ್ರಿಯಿಸಿರುವ ಎಸ್.ಮಾರಪ್ಪ ಅವರು, “ಈ ನಡೆ ತಪ್ಪು. ವಿಜಯೋತ್ಸವ ಆಚರಿಸಿಕೊಳ್ಳುವುದಕ್ಕೆ ತಕರಾರು ಇಲ್ಲ. ಆದರೆ ಒಳಮೀಸಲಾತಿ ಇನ್ನೂ ಜಾರಿಯಾಗಿಲ್ಲ. ವಿಜಯೋತ್ಸವ ಮಾಡಿಕೊಳ್ಳುವ ಸಮಯ ಇದಲ್ಲ. ನಮ್ಮ ಕೆಲಸ ಇನ್ನೂ ಇದೆ. ಏನೇ ಹೇಳಿದರೂ ಜನಾಂಗಕ್ಕೆ ಸತ್ಯವನ್ನೇ ಹೇಳಬೇಕು. ರಾಜಕೀಯ ಮೈಲೇಜ್‌ಗಾಗಿ ಸುಳ್ಳುಗಳನ್ನು ಹೇಳಬಾರದು. ಈಗ ಆಗಿರುವ ಬೆಳವಣಿಗೆಗಳಲ್ಲಿ ವಿಜಯೋತ್ಸವ ಆಚರಿಸಿಕೊಳ್ಳುವಂತಹದ್ದು ಏನೂ ಇಲ್ಲ” ಎಂದು ಎಚ್ಚರಿಸಿದರು.

ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷರಾದ ಶಿವರಾಯ ಅಕ್ಕರಕಿ ಮಾತನಾಡಿ, “ನಮ್ಮ ವೇದಿಕೆಯ ವತಿಯಿಂದ ಯಾವುದೇ ರಾಜಕೀಯ ನಿಲುವುಗಳನ್ನು ತೆಗೆದುಕೊಂಡಿಲ್ಲ. ತಟಸ್ಥ ನೀತಿ ನಮ್ಮದಾಗಿದೆ. ಸಮುದಾಯದ ಜನತೆ ತಮಗೆ ಇಷ್ಟವಾದವರಿಗೆ ಬೆಂಬಲ ನೀಡಲಿದ್ದಾರೆ” ಎಂದು ಸ್ಪಷ್ಟಪಡಿಸಿದರು.

“ಒಂದು ಕಾಲದಲ್ಲಿ ಮಾದಿಗ ಸಮುದಾಯದ 24 ಶಾಸಕರು ಇದ್ದರು. ಇಂದು ನಮ್ಮ ಸಂಖ್ಯೆ ಕೇವಲ 5ಕ್ಕೆ ಬಂದು ನಿಂತಿದೆ. ರಾಜಕೀಯ ಪ್ರಾತಿನಿಧ್ಯದ ಕೊರತೆ ಆಗಿದೆ. ನಮ್ಮ ಸಮುದಾಯ ಹೆಚ್ಚಿನ ಸಂಖ್ಯೆ ಇರುವಲ್ಲಿ ನಮ್ಮವರನ್ನು ಗೆಲ್ಲಿಸಿಕೊಳ್ಳುವ ಕೆಲಸವನ್ನು ಮಾಡುತ್ತೇವೆ. ಜೊತೆಗೆ ಅಸ್ಪೃಶ್ಯ ಜನಾಂಗದ ಹೊಲೆಯ, ತ್ರಿಮಸ್ಥ ಚರ್ಮಕಾರ, ಮಾದಿಗ ಸಂಬಂಧಿತ ಯಾವುದೇ ಅಭ್ಯರ್ಥಿಯನ್ನು ಗೆಲ್ಲಿಸಲು ತೀರ್ಮಾನ ಮಾಡಿದ್ದೇವೆ” ಎಂದು ವಿವರಿಸಿದರು.

ಮುಖಂಡರಾದ ಕರಿಯಪ್ಪ ಗುಡಿಮನಿ, ನಂದಕುಮಾರ್‌, ಜೆ.ಡಿ.ರಾಜು, ಹನುಮೇಶ್ ಗುಂಡೂರು, ಪ್ರೊ.ಸಿ.ಕೆ.ಮಹೇಶ್‌, ವೆಂಕಟೇಶ್‌ ದೀಪಾಂಜಲಿನಗರ ಮೊದಲಾದವರು ಸಮಾರೋಪ ಸಮಾರಂಭದಲ್ಲಿ ಹಾಜರಿದ್ದರು.

ಸಮಿತಿ ತೆಗೆದುಕೊಂಡ ನಿರ್ಣಯಗಳು 

1. ಗ್ರೂಪ್ ನಂಬರ್ ಒಂದು ಹಾಗೂ ಎರಡಕ್ಕೆ ಸಂಬಂಧಿಸಿದ ಸಮುದಾಯಗಳಾದ ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ ಉಪಜಾತಿ ಪದಗಳನ್ನು ಮತ್ತೆ ಮಾದಿಗ ಮತ್ತು ಹೊಲೆಯ ಸಂಬಂಧಿತ ಜಾತಿಗಳ ಗುಂಪುಗಳಿಗೆ ಯಥಾವತ್ತಾಗಿ ಸೇರಿಸಬೇಕು.

2. ನಾಲ್ಕನೇ ಗುಂಪಿನಲ್ಲಿರುವ ಅಲೆಮಾರಿಗಳು ಮತ್ತು ಅರೆ ಅಲೆಮಾರಿಗಳ ಜೊತೆ ಯಾವುದೇ ಕಾರಣಕ್ಕೂ ಮಾದಿಗ, ಹೊಲೆಯ, ತ್ರಿಮತಸ್ಥ ಚರ್ಮಕಾರರು, ಮೊಗೇರ ಇನ್ನಿತರ ಸಮುದಾಯಗಳನ್ನು ಸೇರಿಸದೆ ಮೇಲೆ ತಿಳಿಸಿದ ಸಮುದಾಯಗಳನ್ನು ಅವರ ಮೂಲ ಸಮುದಾಯಗಳ ಗುಂಪಿಗೆ ಸೇರಿಸಬೇಕು.

3. ಈಗ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ಸಂಬಂಧಿಸಿದಂತೆ ತೆಗೆದುಕೊಂಡ ತೀರ್ಮಾನವನ್ನು ಹಾಗೂ ಅದರ ಶಿಫಾರಸ್ಸನ್ನು ಕೂಡಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ ಸಂವಿಧಾನದ ಅನುಚ್ಛೇಧ 341(3)ಗೆ ತಿದ್ದುಪಡಿ ಮಾಡಬೇಕು.

4. ತ್ರ‍್ರಿಮತಸ್ಥರಿಗೆ, ಚರ್ಮಕಾರರಿಗೆ (ಮೋಚಿ, ಡೋಹರ, ಸಮಗಾರ) ಅಭಿವೃದ್ಧಿ ನಿಗಮ ಸ್ಥಾಪಿಸಬೇಕು.

5. ಎಲ್ಲಾ ರಾಜಕೀಯ ಪಕ್ಷಗಳು ಪರಿಶಿಷ್ಟ ಜಾತಿಗಳಲ್ಲಿ ಬಹುಸಂಖ್ಯಾತರಾಗಿರುವ ಮಾದಿಗ ಮತ್ತು ಛಲವಾದಿ ಸಮುದಾಯಗಳ ಜನಸಂಖ್ಯೆಗೆ ತಕ್ಕಂತೆ ತಲಾ 15 ಶಾಸನಸಭಾ ಪ್ರಾತಿನಿಧ್ಯ ಕಲ್ಪಿಸಬೇಕು.

6. ಕರ್ನಾಟಕ ರಾಜ್ಯದಲ್ಲಿರುವ 43,000 ಪೌರಕಾರ್ಮಿಕ ಹಾಗೂ ವಾಹನ ಚಾಲಕರನ್ನು ಖಾಯಂಗೊಳಿಸಬೇಕು.

7. ರಾಜ್ಯದಲ್ಲಿ ಪಿಟಿಸಿಎಲ್ ಕಾಯ್ದೆಗೆ ಕೂಡಲೇ ತಿದ್ದುಪಡಿ ತಂದು ದಲಿತರಿಗೆ ಭೂ ಹಂಚಿಕೆ ಮಾಡಬೇಕು.

8. ಒಳ ಮೀಸಲಾತಿ ಹೋರಾಟಗಾರರ ಮೇಲೆ ದಾಖಲಿಸಿರುವ ಅಪರಾಧ ಮೊದ್ದಮೆಗಳನ್ನು ಈ ಕೂಡಲೇ ರದ್ದುಪಡಿಸಬೇಕು.

9. ಪರಿಶಿಷ್ಟ ಜಾತಿಗಳ ಉಪ ಹಂಚಿಕೆ (ಎಸ್‌ಸಿಎಸ್‌ಎ) ಅನುದಾನವನ್ನು ಒಳಮೀಸಲಾತಿ ಶೇಕಡ 6+5.5+4.5+1 ಅನುಪಾತದಂತೆ ಹಂಚಿಕೆ ಮಾಡಬೇಕು. ಎಸ್‌ಸಿಎಸ್‌ಎ ಅನುದಾನ ದುರುಪಯೋಗಕ್ಕೆ ಕಾರಣವಾದ 7(ಡಿ) ಯನ್ನು ರದ್ದುಪಡಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...