Homeಅಂಕಣಗಳುಗೌರಿ ಕಾರ್ನರ್: ಸೌಹಾರ್ದ ಗಿರಿಯಲ್ಲಿ ನಿಸರ್ಗದ ’ನೀಲಿಗ್ಯಾನ’

ಗೌರಿ ಕಾರ್ನರ್: ಸೌಹಾರ್ದ ಗಿರಿಯಲ್ಲಿ ನಿಸರ್ಗದ ’ನೀಲಿಗ್ಯಾನ’

ನೀಲಿಗಿರಿ ಬೆಟ್ಟಗಳಿಗೆ ಹೆಸರು ತಂದಿದ್ದು ಅಲ್ಲಿನ ನೀಲಗಿರಿ ಮರಗಳಲ್ಲ, ಬದಲಾಗಿ ತಮಿಳು ಮತ್ತು ಮಲಯಾಳಂನಲ್ಲಿ ’ನೀಲ ಕುರಿಂಜಿ’ ಎಂದೇ ಪ್ರಸಿದ್ಧವಾಗಿರುವ ಈ ಹೂಗಳು! ಹಿಂದೊಮ್ಮೆ ನೀಲಗಿರಿ ಶ್ರೇಣಿಯನ್ನೇ ಈ ಹೂಗಳು ನೀಲಿಮಯವಾಗಿಸುತ್ತಿದ್ದರಿಂದ ಅವುಗಳಿಗೆ ’ನೀಲಿ’ ಪದ ಅಂಟಿಕೊಂಡಿದ್ದು!

- Advertisement -
- Advertisement -

ಒಂದು ನಿಮಿಷ ನಿಮ್ಮ ಕಣ್ಣುಗಳನ್ನು ಮುಚ್ಚಿಕೊಂಡು ನಾನು ವಿವರಿಸಲಿರುವ ದೃಶ್ಯವನ್ನು ಕಲ್ಪಿಸಿಕೊಳ್ಳಿ….

ನೀವು ಒಂದು ಬೆಟ್ಟದ ಮೇಲಿದ್ದೀರಿ. ಅಲ್ಲಿನ ತಂಪು ವಾತಾವರಣ, ಕೈಗಳಿಗೆ ಎಟುಕದೆ ತೇಲಿಹೋಗುತ್ತಿರುವ ಮೋಡಗಳು, ನಿಮ್ಮ ಸುತ್ತ ಕಂಗೊಳಿಸುತ್ತಿರುವ ನೀಲಿ ಹೂಗಳು… ಹೌದು, ನೀವು ಕಣ್ಣು ಹಾಯಿಸಿದಷ್ಟೂ ದೂರ ಹರಡಿರುವ ಲಕ್ಷಾಂತರ ನೀಲಿ ಹೂಗಳು! ಎಲ್ಲಿ ನೋಡಿದರಲ್ಲಿ ಕಂಗೊಳಿಸುತ್ತಿರುವ ನೀಲಿ ಹೂಗಳು! ಹನ್ನೆರಡು ವರ್ಷಕ್ಕೊಮ್ಮೆ ಅರಳಿ ಕಂಗಳಿಗೆ ಆನಂದ ನೀಡುವ ನೀಲಿ ಹೂಗಳು!

ನಾನು ಈ ದೃಶ್ಯವನ್ನು ಕಲ್ಪಿಸಿಕೊಂಡು ಹೇಳುತ್ತಿಲ್ಲ; ಯಾವುದೋ ಪೇಂಟಿಂಗ್ ಅಥವಾ ಯೂರೋಪಿನಲ್ಲಿ ಕಂಡದ್ದನ್ನು ವಿವರಿಸುತ್ತಿಲ್ಲ. ಬದಲಾಗಿ ನಮ್ಮ ಕರ್ನಾಟಕದ ಚಿಕ್ಕಮಗಳೂರಿನಲ್ಲಿ ನೋಡಿದ್ದನ್ನು ನಿಮಗೆ ಹೇಳುತ್ತಿದ್ದೇನೆ….

ಪ್ರತಿ ವರ್ಷ ಚಿಕ್ಕಮಗಳೂರಿನಲ್ಲಿ ಸಂಘ ಪರಿವಾರದವರು ಸೃಷ್ಟಿಸುವ ರಾದ್ಧಾಂತದ ಬಗ್ಗೆ ಅಲ್ಲಿನ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಲು ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ತಂಡದ ಸದಸ್ಯೆಯಾಗಿ ಹೋಗಿದ್ದಾಗ ಅಲ್ಲಿನ ಬಾಬಾಬುಡನ್ ಗಿರಿಯಲ್ಲಿ ಕಂಡ ಅದ್ಭುತ ದೃಶ್ಯದ ಬಗ್ಗೆ ಹೇಳಬೇಕೆನಿಸುತ್ತಿದೆ.

ಸುಮಾರು 1800 ಮೀಟರ್ ಎತ್ತರದಲ್ಲಿರುವ ಬಾಬಾಬುಡನ್ ದರ್ಗಾಗೆ ಹೋಗುತ್ತಿದ್ದಾಗ ನಮ್ಮೊಂದಿಗಿದ್ದ ಕಲ್ಕುಳಿ ವಿಠ್ಠಲ ಹೆಗ್ಡೆಯವರು ದೂರದ ಬೆಟ್ಟವೊಂದರಲ್ಲಿ ಅರಳಿದ್ದ ಈ ನೀಲಿ ಹೂಗಳ ಬಗ್ಗೆ ನಮ್ಮ ಗಮನ ಸೆಳೆದರು.

ಹನ್ನೆರಡು ವರ್ಷಕ್ಕೊಮ್ಮೆ ಅರಳುವ ಈ ನೀಲಿಗಳನ್ನು (ಅವುಗಳನ್ನು ’ಕುರಿಂಜಿ’ ಎಂದು ಕರೆಯುತ್ತಾರೆಂದು ಹೆಗ್ಡೆಯವರು ವಿವರಿಸಿದರು) ಮಾನವನೊಬ್ಬ ತನ್ನ ಜೀವಿತಾವಧಿಯಲ್ಲಿ ಮೂರು ಬಾರಿ ನೋಡಿ ಆನಂದಿಸಬಹುದಷ್ಟೇ. ಈ ’ನೀಲಿ ಕುರಿಂಜಿ’ ಬಗ್ಗೆ ಇಂಟರ್‌ನೆಟ್‌ನಲ್ಲಿ ಪಡೆದ ಮಾಹಿತಿಯನ್ನೂ ನೀಡುತ್ತಿದ್ದೇನೆ. ನಮ್ಮ ನಾಡಿನ ನಿಸರ್ಗದ ಈ ಅದ್ಭುತದ ಬಗ್ಗೆ ಪತ್ರಿಕೆಗಳು ಬರೆಯದೇ ಇರುವುದು (ಪ್ರಜಾವಾಣಿ ಹೊರತಾಗಿ) ಒಂದು ಅಚ್ಚರಿಯೇ ಸರಿ!

ಒಂದು ಅಂದಾಜಿನ ಪ್ರಕಾರ ಹಿಂದೊಮ್ಮೆ ಈ ಕುರಿಂಜಿ ಹೂಗಳು ಇಡೀ ಬಾಬಾಬುಡನ್‌ಗಿರಿಯನ್ನೇ ಹನ್ನೆರಡು ವರ್ಷಕ್ಕೊಮ್ಮೆ ಆವರಿಸುತ್ತಿದ್ದವಂತೆ. ಆದರೆ ಇವತ್ತು ಗಿರಿಯಲ್ಲಿ ಕಾಫಿ ಎಸ್ಟೇಟ್‌ಗಳು ತಲೆ ಎತ್ತಿರುವುದರಿಂದ, ಅಳಿದುಳಿದ ಜಾಗಗಳಲ್ಲಿ ಮಾತ್ರ ಇವತ್ತು ’ಕುರಿಂಜಿ’ ಕಾಣಿಸಿಕೊಂಡಿದೆ.

ಅಂದಹಾಗೆ, ಈ ಕುರಿಂಜಿ ಹೂಗಳು ಪಶ್ಚಿಮಘಟ್ಟದ ಶೋಲಾ ಕಾಡುಗಳಿಗೆ ವಿಶೇಷವಾಗಿರುವುದರಿಂದ ಅವು ಕೇರಳದಿಂದ ಕರ್ನಾಟಕದವರೆಗೂ ಹಬ್ಬಿವೆ. ಆದರೆ ವ್ಯತ್ಯಾಸ ಯಾವುದೆಂದರೆ ಇವುಗಳ ಬಗ್ಗೆ ನಮ್ಮ ಜನರಲ್ಲಿ ಅಜ್ಞಾನ, ಸರ್ಕಾರದ ನಿರ್ಲಕ್ಷ್ಯ ಹೆಚ್ಚಾಗಿದ್ದರೂ, ನೆರೆಯ ಕೇರಳದಲ್ಲಿ ಈ ಕುರಿಂಜಿಗಳು ಅರಳುವ ಪ್ರದೇಶಗಳನ್ನು ಕಾಪಾಡಬೇಕೆಂದು ಕೆಲವು ದಶಕಗಳಿಂದ ಪರಿಸರವಾದಿಗಳು ಹೋರಾಡುತ್ತಿದ್ದಾರೆ.

ಕರ್ನಾಟಕಕ್ಕಿಂತಲೂ ತಮಿಳುನಾಡು ಮತ್ತು ಕೇರಳದಲ್ಲಿ ಟೀ ಮತ್ತು ಏಲಕ್ಕಿ ಎಸ್ಟೇಟ್‌ಗಳು ಹಾಗೂ ವಿದ್ಯುತ್ ಯೋಜನೆಗಳು ಈ ಕುರಿಂಜಿ ಬೆಳೆಯುವ ಪ್ರದೇಶಗಳನ್ನು ನಾಶ ಮಾಡಿವೆ. ಆದರೆ ಜಗತ್ತಿನ ಯಾವುದೇ ಭಾಗದಲ್ಲಿ ಅರಳದ ಈ ಹೂಗಳು ಭಾರತದ ಈ ಪ್ರದೇಶಗಳಲ್ಲಿ ಮಾತ್ರ, ಹೀಗೆ ಒಮ್ಮೆಲೆ ಅರಳುವುದರಿಂದ, ಅದನ್ನು ನೋಡಲೆಂದು ಪ್ರವಾಸಿಗರು ಬರುವುದರಿಂದ ಈಗ ಈ ಎರಡೂ ರಾಜ್ಯಗಳು ಎಚ್ಚೆತ್ತುಕೊಂಡು, ಕುರಿಂಜಿ ಹೂಗಳು ಅರಳುವ ಪ್ರದೇಶಗಳನ್ನು ಸುರಕ್ಷಿತ ತಾಣಗಳೆಂದು ಘೋಷಿಸಲು ಮುಂದಾಗಿವೆ.

ಇಲ್ಲೊಂದು ವಿಸ್ಮಯಕಾರಿ ವಿಷಯವನ್ನು ಹೇಳಲೇಬೇಕು. ನೀಲಿಗಿರಿ ಬೆಟ್ಟಗಳಿಗೆ ಹೆಸರು ತಂದಿದ್ದು ಅಲ್ಲಿನ ನೀಲಗಿರಿ ಮರಗಳಲ್ಲ, ಬದಲಾಗಿ ತಮಿಳು ಮತ್ತು ಮಲಯಾಳಂನಲ್ಲಿ ’ನೀಲ ಕುರಿಂಜಿ’ ಎಂದೇ ಪ್ರಸಿದ್ಧವಾಗಿರುವ ಈ ಹೂಗಳು! ಹಿಂದೊಮ್ಮೆ ನೀಲಗಿರಿ ಶ್ರೇಣಿಯನ್ನೇ ಈ ಹೂಗಳು ನೀಲಿಮಯವಾಗಿಸುತ್ತಿದ್ದರಿಂದ ಅವುಗಳಿಗೆ ’ನೀಲಿ’ ಪದ ಅಂಟಿಕೊಂಡಿದ್ದು! ಇವತ್ತು ಬಾಬಾಬುಡನ್‌ಗಿರಿಯಲ್ಲಿ ಹೇಗೆ ಈ ಕುರಿಂಜಿಗಳು ಅರಳಿದ್ದಾವೋ, ಹಾಗೆಯೇ ತಮಿಳುನಾಡಿನ ಕೊಡೈಕೆನಾಲ್ ಮತ್ತು ಕೇರಳದ ಮುನ್ನಾರ್‌ನಲ್ಲೂ ಕುರಿಂಜಿಗಳು ಅರಳಿ ಅವುಗಳನ್ನು ನೋಡಿ ಆನಂದಿಸಲು ಲಕ್ಷಾಂತರ ಪ್ರವಾಸಿಗಳು ಸೇರುತ್ತಿದ್ದಾರೆ. 1994ರಿಂದ ಈ ಹೂಗಳನ್ನು ನೋಡಲು ಕಾಯುತ್ತಿದ್ದ ಲಕ್ಷಾಂತರ ಜನ ಈಗ ಇವುಗಳನ್ನು ಕಂಡು ಆನಂದಿಸಲು ಬರುತ್ತಿರುವುದರಿಂದ ಅಲ್ಲಿನ ಹೋಟೆಲ್‌ಗಳು ಕಿಕ್ಕಿರಿದಿವೆ. ಅಷ್ಟೇ ಅಲ್ಲ, ಇದೇ ಅಕ್ಟೋಬರ್ ತಿಂಗಳ ಮೊದಲ ವಾರದಲ್ಲಿ ’ಕುರಿಂಜಿ ಹಬ್ಬ’ವನ್ನು ಕೇರಳ ಸರ್ಕಾರ ಆಚರಿಸುತ್ತಿದೆ. ಆ ಎರಡೂ ರಾಜ್ಯಗಳ ಪರಿಸರವಾದಿಗಳ ಹೋರಾಟ ಮತ್ತು ಅಲ್ಲಿನ ಸರ್ಕಾರಗಳ ಒತ್ತಡದಿಂದಾಗಿಯೇ ಇದೇ ಮೇ ತಿಂಗಳಲ್ಲಿ ಕೇಂದ್ರ ಸರ್ಕಾರ ಕುರಿಂಜಿ ಹೂಗಳ ಒಂದು ಅಂಚೆ ಸ್ಟಾಂಪ್‌ಅನ್ನೂ ಬಿಡುಗಡೆಗೊಳಿಸಿತ್ತು.

ತಮಿಳುನಾಡಿನ ಜನರಿಗೂ, ಈ ನೀಲ ಕುರಿಂಜಿ ಹೂಗಳಿಗೂ ಭಾವನಾತ್ಮಕವಾದ ಸಂಬಂಧವಿರುವುದಕ್ಕೆ ಕಾರಣವೂ ಇದೆ. ಪ್ರಾಚೀನ ತಮಿಳು ಸಾಹಿತ್ಯದಲ್ಲಿ ಮುರುಗನ್ ದೇವನು ವಾಲಿ ಎಂಬ ದೇವತೆಯನ್ನು ಮದುವೆ ಆದಾಗ ಅವಳಿಗೆ ಈ ಕುರಿಂಜಿಗಳಿಂದ ಮಾಡಿದ್ದ ಹಾರವನ್ನು ಹಾಕಿದ್ದನಂತೆ. ಈ ಪುರಾಣ ಅಲ್ಲಿನ ಜನರ ಮೇಲೆ ಎಂಥ ಪ್ರಭಾವ ಬೀರಿದೆ ಎಂದರೆ, ಕುರಿಂಜಿ ಹೂಗಳು ಬಾಡಿ, ಅವುಗಳ ಬೀಜ ಎಲ್ಲೆಡೆ ಹರಡುವವರೆಗೂ ಜನ ಅವುಗಳನ್ನು ಮುಟ್ಟುವುದಿಲ್ಲ! ಅಷ್ಟೇ ಅಲ್ಲ, ಆ ಎರಡು ರಾಜ್ಯಗಳ ಹಲವು ಬುಡಕಟ್ಟು ಜನಾಂಗಗಳು ತಮ್ಮ ಜೀವಿತಾವಧಿಯನ್ನು ಲೆಕ್ಕ ಹಾಕುವುದೇ ಈ ಕುರಿಂಜಿಗಳು ಅರಳುವ ವರ್ಷದ ಆಧಾರದ ಮೇಲೆ!

ನಮ್ಮ ಪಶ್ಚಿಮಘಟ್ಟದ ಜೀವ ವೈವಿಧ್ಯತೆಯನ್ನು ಕಾಪಾಡಬೇಕಿದ್ದರೆ, ಆ ವೈವಿಧ್ಯತೆಯ ಅಂಗವಾಗಿರುವ ಕುರಿಂಜಿ ಹೂಗಳು ಹನ್ನೆರಡು ವರ್ಷಗಳ ನಂತರವೂ ಮತ್ತೆ ಕಾಣಿಸಿಕೊಳ್ಳಬೇಕೆಂದಿದ್ದರೆ, ನಮ್ಮ ರಾಜ್ಯದಲ್ಲೂ ಕುರಿಂಜಿ ಅರಳುವ ಪ್ರದೇಶಗಳನ್ನು ರಕ್ಷಿಸಬೇಕಿದೆ.

ಕೊನೆಯದಾಗಿ, ಈ ಹೂಗಳ ಅಂದವನ್ನು ಆನಂದಿಸಲು ಕೊಡೈಕೆನಾಲ್ ಮತ್ತು ಮುನ್ನಾರ್ ಸೂಕ್ತ ಪ್ರದೇಶಗಳು ಎಂಬ ಮಾತಿದೆಯಾದರೂ, ನಮ್ಮದೇ ಬಾಬಾಬುಡನ್ ಗಿರಿಯಲ್ಲಿ ಆನಂದಿಸುವುದು ಒಂದು ವಿಶೇಷ. ಅಂದಹಾಗೆ, ಈ ಹೂಗಳು ಇನ್ನು ಎರಡು ತಿಂಗಳು ಮಾತ್ರ ಇರುತ್ತವೆ. ಹಾಗಾಗಿ, ಗಿರಿಗಳನ್ನೇ ’ನೀಲಿ’ಯಾಗಿಸಿರುವ ಈ ಕುರಿಂಜಿಯ ಅದ್ಭುತ ನೋಡಬೇಕೆಂದಿದ್ದರೆ, ಈಗಲೇ ನೀವೂ ಹೋಗಿ ಬರುತ್ತೀರಾ…

(ಸೆಪ್ಟೆಂಬರ್ 27, 2006ರಂದು ಬರೆದಿದ್ದ ಗೌರಿಯವರ ಕಂಡಹಾಗೆ ಅಂಕಣದ ಆಯ್ದ ಭಾಗ ಇದು)


ಇದನ್ನೂ ಓದಿ: ಗೌರಿ ಕಾರ್ನರ್: ಓರ್ವ ಜನಪರ ನ್ಯಾಯಮೂರ್ತಿಯವರನ್ನು ಕುರಿತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...