Homeಅಂಕಣಗಳುಗೌರಿ ಕಾರ್ನರ್: ಸೌಹಾರ್ದ ಗಿರಿಯಲ್ಲಿ ನಿಸರ್ಗದ ’ನೀಲಿಗ್ಯಾನ’

ಗೌರಿ ಕಾರ್ನರ್: ಸೌಹಾರ್ದ ಗಿರಿಯಲ್ಲಿ ನಿಸರ್ಗದ ’ನೀಲಿಗ್ಯಾನ’

ನೀಲಿಗಿರಿ ಬೆಟ್ಟಗಳಿಗೆ ಹೆಸರು ತಂದಿದ್ದು ಅಲ್ಲಿನ ನೀಲಗಿರಿ ಮರಗಳಲ್ಲ, ಬದಲಾಗಿ ತಮಿಳು ಮತ್ತು ಮಲಯಾಳಂನಲ್ಲಿ ’ನೀಲ ಕುರಿಂಜಿ’ ಎಂದೇ ಪ್ರಸಿದ್ಧವಾಗಿರುವ ಈ ಹೂಗಳು! ಹಿಂದೊಮ್ಮೆ ನೀಲಗಿರಿ ಶ್ರೇಣಿಯನ್ನೇ ಈ ಹೂಗಳು ನೀಲಿಮಯವಾಗಿಸುತ್ತಿದ್ದರಿಂದ ಅವುಗಳಿಗೆ ’ನೀಲಿ’ ಪದ ಅಂಟಿಕೊಂಡಿದ್ದು!

- Advertisement -
- Advertisement -

ಒಂದು ನಿಮಿಷ ನಿಮ್ಮ ಕಣ್ಣುಗಳನ್ನು ಮುಚ್ಚಿಕೊಂಡು ನಾನು ವಿವರಿಸಲಿರುವ ದೃಶ್ಯವನ್ನು ಕಲ್ಪಿಸಿಕೊಳ್ಳಿ….

ನೀವು ಒಂದು ಬೆಟ್ಟದ ಮೇಲಿದ್ದೀರಿ. ಅಲ್ಲಿನ ತಂಪು ವಾತಾವರಣ, ಕೈಗಳಿಗೆ ಎಟುಕದೆ ತೇಲಿಹೋಗುತ್ತಿರುವ ಮೋಡಗಳು, ನಿಮ್ಮ ಸುತ್ತ ಕಂಗೊಳಿಸುತ್ತಿರುವ ನೀಲಿ ಹೂಗಳು… ಹೌದು, ನೀವು ಕಣ್ಣು ಹಾಯಿಸಿದಷ್ಟೂ ದೂರ ಹರಡಿರುವ ಲಕ್ಷಾಂತರ ನೀಲಿ ಹೂಗಳು! ಎಲ್ಲಿ ನೋಡಿದರಲ್ಲಿ ಕಂಗೊಳಿಸುತ್ತಿರುವ ನೀಲಿ ಹೂಗಳು! ಹನ್ನೆರಡು ವರ್ಷಕ್ಕೊಮ್ಮೆ ಅರಳಿ ಕಂಗಳಿಗೆ ಆನಂದ ನೀಡುವ ನೀಲಿ ಹೂಗಳು!

ನಾನು ಈ ದೃಶ್ಯವನ್ನು ಕಲ್ಪಿಸಿಕೊಂಡು ಹೇಳುತ್ತಿಲ್ಲ; ಯಾವುದೋ ಪೇಂಟಿಂಗ್ ಅಥವಾ ಯೂರೋಪಿನಲ್ಲಿ ಕಂಡದ್ದನ್ನು ವಿವರಿಸುತ್ತಿಲ್ಲ. ಬದಲಾಗಿ ನಮ್ಮ ಕರ್ನಾಟಕದ ಚಿಕ್ಕಮಗಳೂರಿನಲ್ಲಿ ನೋಡಿದ್ದನ್ನು ನಿಮಗೆ ಹೇಳುತ್ತಿದ್ದೇನೆ….

ಪ್ರತಿ ವರ್ಷ ಚಿಕ್ಕಮಗಳೂರಿನಲ್ಲಿ ಸಂಘ ಪರಿವಾರದವರು ಸೃಷ್ಟಿಸುವ ರಾದ್ಧಾಂತದ ಬಗ್ಗೆ ಅಲ್ಲಿನ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಲು ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ತಂಡದ ಸದಸ್ಯೆಯಾಗಿ ಹೋಗಿದ್ದಾಗ ಅಲ್ಲಿನ ಬಾಬಾಬುಡನ್ ಗಿರಿಯಲ್ಲಿ ಕಂಡ ಅದ್ಭುತ ದೃಶ್ಯದ ಬಗ್ಗೆ ಹೇಳಬೇಕೆನಿಸುತ್ತಿದೆ.

ಸುಮಾರು 1800 ಮೀಟರ್ ಎತ್ತರದಲ್ಲಿರುವ ಬಾಬಾಬುಡನ್ ದರ್ಗಾಗೆ ಹೋಗುತ್ತಿದ್ದಾಗ ನಮ್ಮೊಂದಿಗಿದ್ದ ಕಲ್ಕುಳಿ ವಿಠ್ಠಲ ಹೆಗ್ಡೆಯವರು ದೂರದ ಬೆಟ್ಟವೊಂದರಲ್ಲಿ ಅರಳಿದ್ದ ಈ ನೀಲಿ ಹೂಗಳ ಬಗ್ಗೆ ನಮ್ಮ ಗಮನ ಸೆಳೆದರು.

ಹನ್ನೆರಡು ವರ್ಷಕ್ಕೊಮ್ಮೆ ಅರಳುವ ಈ ನೀಲಿಗಳನ್ನು (ಅವುಗಳನ್ನು ’ಕುರಿಂಜಿ’ ಎಂದು ಕರೆಯುತ್ತಾರೆಂದು ಹೆಗ್ಡೆಯವರು ವಿವರಿಸಿದರು) ಮಾನವನೊಬ್ಬ ತನ್ನ ಜೀವಿತಾವಧಿಯಲ್ಲಿ ಮೂರು ಬಾರಿ ನೋಡಿ ಆನಂದಿಸಬಹುದಷ್ಟೇ. ಈ ’ನೀಲಿ ಕುರಿಂಜಿ’ ಬಗ್ಗೆ ಇಂಟರ್‌ನೆಟ್‌ನಲ್ಲಿ ಪಡೆದ ಮಾಹಿತಿಯನ್ನೂ ನೀಡುತ್ತಿದ್ದೇನೆ. ನಮ್ಮ ನಾಡಿನ ನಿಸರ್ಗದ ಈ ಅದ್ಭುತದ ಬಗ್ಗೆ ಪತ್ರಿಕೆಗಳು ಬರೆಯದೇ ಇರುವುದು (ಪ್ರಜಾವಾಣಿ ಹೊರತಾಗಿ) ಒಂದು ಅಚ್ಚರಿಯೇ ಸರಿ!

ಒಂದು ಅಂದಾಜಿನ ಪ್ರಕಾರ ಹಿಂದೊಮ್ಮೆ ಈ ಕುರಿಂಜಿ ಹೂಗಳು ಇಡೀ ಬಾಬಾಬುಡನ್‌ಗಿರಿಯನ್ನೇ ಹನ್ನೆರಡು ವರ್ಷಕ್ಕೊಮ್ಮೆ ಆವರಿಸುತ್ತಿದ್ದವಂತೆ. ಆದರೆ ಇವತ್ತು ಗಿರಿಯಲ್ಲಿ ಕಾಫಿ ಎಸ್ಟೇಟ್‌ಗಳು ತಲೆ ಎತ್ತಿರುವುದರಿಂದ, ಅಳಿದುಳಿದ ಜಾಗಗಳಲ್ಲಿ ಮಾತ್ರ ಇವತ್ತು ’ಕುರಿಂಜಿ’ ಕಾಣಿಸಿಕೊಂಡಿದೆ.

ಅಂದಹಾಗೆ, ಈ ಕುರಿಂಜಿ ಹೂಗಳು ಪಶ್ಚಿಮಘಟ್ಟದ ಶೋಲಾ ಕಾಡುಗಳಿಗೆ ವಿಶೇಷವಾಗಿರುವುದರಿಂದ ಅವು ಕೇರಳದಿಂದ ಕರ್ನಾಟಕದವರೆಗೂ ಹಬ್ಬಿವೆ. ಆದರೆ ವ್ಯತ್ಯಾಸ ಯಾವುದೆಂದರೆ ಇವುಗಳ ಬಗ್ಗೆ ನಮ್ಮ ಜನರಲ್ಲಿ ಅಜ್ಞಾನ, ಸರ್ಕಾರದ ನಿರ್ಲಕ್ಷ್ಯ ಹೆಚ್ಚಾಗಿದ್ದರೂ, ನೆರೆಯ ಕೇರಳದಲ್ಲಿ ಈ ಕುರಿಂಜಿಗಳು ಅರಳುವ ಪ್ರದೇಶಗಳನ್ನು ಕಾಪಾಡಬೇಕೆಂದು ಕೆಲವು ದಶಕಗಳಿಂದ ಪರಿಸರವಾದಿಗಳು ಹೋರಾಡುತ್ತಿದ್ದಾರೆ.

ಕರ್ನಾಟಕಕ್ಕಿಂತಲೂ ತಮಿಳುನಾಡು ಮತ್ತು ಕೇರಳದಲ್ಲಿ ಟೀ ಮತ್ತು ಏಲಕ್ಕಿ ಎಸ್ಟೇಟ್‌ಗಳು ಹಾಗೂ ವಿದ್ಯುತ್ ಯೋಜನೆಗಳು ಈ ಕುರಿಂಜಿ ಬೆಳೆಯುವ ಪ್ರದೇಶಗಳನ್ನು ನಾಶ ಮಾಡಿವೆ. ಆದರೆ ಜಗತ್ತಿನ ಯಾವುದೇ ಭಾಗದಲ್ಲಿ ಅರಳದ ಈ ಹೂಗಳು ಭಾರತದ ಈ ಪ್ರದೇಶಗಳಲ್ಲಿ ಮಾತ್ರ, ಹೀಗೆ ಒಮ್ಮೆಲೆ ಅರಳುವುದರಿಂದ, ಅದನ್ನು ನೋಡಲೆಂದು ಪ್ರವಾಸಿಗರು ಬರುವುದರಿಂದ ಈಗ ಈ ಎರಡೂ ರಾಜ್ಯಗಳು ಎಚ್ಚೆತ್ತುಕೊಂಡು, ಕುರಿಂಜಿ ಹೂಗಳು ಅರಳುವ ಪ್ರದೇಶಗಳನ್ನು ಸುರಕ್ಷಿತ ತಾಣಗಳೆಂದು ಘೋಷಿಸಲು ಮುಂದಾಗಿವೆ.

ಇಲ್ಲೊಂದು ವಿಸ್ಮಯಕಾರಿ ವಿಷಯವನ್ನು ಹೇಳಲೇಬೇಕು. ನೀಲಿಗಿರಿ ಬೆಟ್ಟಗಳಿಗೆ ಹೆಸರು ತಂದಿದ್ದು ಅಲ್ಲಿನ ನೀಲಗಿರಿ ಮರಗಳಲ್ಲ, ಬದಲಾಗಿ ತಮಿಳು ಮತ್ತು ಮಲಯಾಳಂನಲ್ಲಿ ’ನೀಲ ಕುರಿಂಜಿ’ ಎಂದೇ ಪ್ರಸಿದ್ಧವಾಗಿರುವ ಈ ಹೂಗಳು! ಹಿಂದೊಮ್ಮೆ ನೀಲಗಿರಿ ಶ್ರೇಣಿಯನ್ನೇ ಈ ಹೂಗಳು ನೀಲಿಮಯವಾಗಿಸುತ್ತಿದ್ದರಿಂದ ಅವುಗಳಿಗೆ ’ನೀಲಿ’ ಪದ ಅಂಟಿಕೊಂಡಿದ್ದು! ಇವತ್ತು ಬಾಬಾಬುಡನ್‌ಗಿರಿಯಲ್ಲಿ ಹೇಗೆ ಈ ಕುರಿಂಜಿಗಳು ಅರಳಿದ್ದಾವೋ, ಹಾಗೆಯೇ ತಮಿಳುನಾಡಿನ ಕೊಡೈಕೆನಾಲ್ ಮತ್ತು ಕೇರಳದ ಮುನ್ನಾರ್‌ನಲ್ಲೂ ಕುರಿಂಜಿಗಳು ಅರಳಿ ಅವುಗಳನ್ನು ನೋಡಿ ಆನಂದಿಸಲು ಲಕ್ಷಾಂತರ ಪ್ರವಾಸಿಗಳು ಸೇರುತ್ತಿದ್ದಾರೆ. 1994ರಿಂದ ಈ ಹೂಗಳನ್ನು ನೋಡಲು ಕಾಯುತ್ತಿದ್ದ ಲಕ್ಷಾಂತರ ಜನ ಈಗ ಇವುಗಳನ್ನು ಕಂಡು ಆನಂದಿಸಲು ಬರುತ್ತಿರುವುದರಿಂದ ಅಲ್ಲಿನ ಹೋಟೆಲ್‌ಗಳು ಕಿಕ್ಕಿರಿದಿವೆ. ಅಷ್ಟೇ ಅಲ್ಲ, ಇದೇ ಅಕ್ಟೋಬರ್ ತಿಂಗಳ ಮೊದಲ ವಾರದಲ್ಲಿ ’ಕುರಿಂಜಿ ಹಬ್ಬ’ವನ್ನು ಕೇರಳ ಸರ್ಕಾರ ಆಚರಿಸುತ್ತಿದೆ. ಆ ಎರಡೂ ರಾಜ್ಯಗಳ ಪರಿಸರವಾದಿಗಳ ಹೋರಾಟ ಮತ್ತು ಅಲ್ಲಿನ ಸರ್ಕಾರಗಳ ಒತ್ತಡದಿಂದಾಗಿಯೇ ಇದೇ ಮೇ ತಿಂಗಳಲ್ಲಿ ಕೇಂದ್ರ ಸರ್ಕಾರ ಕುರಿಂಜಿ ಹೂಗಳ ಒಂದು ಅಂಚೆ ಸ್ಟಾಂಪ್‌ಅನ್ನೂ ಬಿಡುಗಡೆಗೊಳಿಸಿತ್ತು.

ತಮಿಳುನಾಡಿನ ಜನರಿಗೂ, ಈ ನೀಲ ಕುರಿಂಜಿ ಹೂಗಳಿಗೂ ಭಾವನಾತ್ಮಕವಾದ ಸಂಬಂಧವಿರುವುದಕ್ಕೆ ಕಾರಣವೂ ಇದೆ. ಪ್ರಾಚೀನ ತಮಿಳು ಸಾಹಿತ್ಯದಲ್ಲಿ ಮುರುಗನ್ ದೇವನು ವಾಲಿ ಎಂಬ ದೇವತೆಯನ್ನು ಮದುವೆ ಆದಾಗ ಅವಳಿಗೆ ಈ ಕುರಿಂಜಿಗಳಿಂದ ಮಾಡಿದ್ದ ಹಾರವನ್ನು ಹಾಕಿದ್ದನಂತೆ. ಈ ಪುರಾಣ ಅಲ್ಲಿನ ಜನರ ಮೇಲೆ ಎಂಥ ಪ್ರಭಾವ ಬೀರಿದೆ ಎಂದರೆ, ಕುರಿಂಜಿ ಹೂಗಳು ಬಾಡಿ, ಅವುಗಳ ಬೀಜ ಎಲ್ಲೆಡೆ ಹರಡುವವರೆಗೂ ಜನ ಅವುಗಳನ್ನು ಮುಟ್ಟುವುದಿಲ್ಲ! ಅಷ್ಟೇ ಅಲ್ಲ, ಆ ಎರಡು ರಾಜ್ಯಗಳ ಹಲವು ಬುಡಕಟ್ಟು ಜನಾಂಗಗಳು ತಮ್ಮ ಜೀವಿತಾವಧಿಯನ್ನು ಲೆಕ್ಕ ಹಾಕುವುದೇ ಈ ಕುರಿಂಜಿಗಳು ಅರಳುವ ವರ್ಷದ ಆಧಾರದ ಮೇಲೆ!

ನಮ್ಮ ಪಶ್ಚಿಮಘಟ್ಟದ ಜೀವ ವೈವಿಧ್ಯತೆಯನ್ನು ಕಾಪಾಡಬೇಕಿದ್ದರೆ, ಆ ವೈವಿಧ್ಯತೆಯ ಅಂಗವಾಗಿರುವ ಕುರಿಂಜಿ ಹೂಗಳು ಹನ್ನೆರಡು ವರ್ಷಗಳ ನಂತರವೂ ಮತ್ತೆ ಕಾಣಿಸಿಕೊಳ್ಳಬೇಕೆಂದಿದ್ದರೆ, ನಮ್ಮ ರಾಜ್ಯದಲ್ಲೂ ಕುರಿಂಜಿ ಅರಳುವ ಪ್ರದೇಶಗಳನ್ನು ರಕ್ಷಿಸಬೇಕಿದೆ.

ಕೊನೆಯದಾಗಿ, ಈ ಹೂಗಳ ಅಂದವನ್ನು ಆನಂದಿಸಲು ಕೊಡೈಕೆನಾಲ್ ಮತ್ತು ಮುನ್ನಾರ್ ಸೂಕ್ತ ಪ್ರದೇಶಗಳು ಎಂಬ ಮಾತಿದೆಯಾದರೂ, ನಮ್ಮದೇ ಬಾಬಾಬುಡನ್ ಗಿರಿಯಲ್ಲಿ ಆನಂದಿಸುವುದು ಒಂದು ವಿಶೇಷ. ಅಂದಹಾಗೆ, ಈ ಹೂಗಳು ಇನ್ನು ಎರಡು ತಿಂಗಳು ಮಾತ್ರ ಇರುತ್ತವೆ. ಹಾಗಾಗಿ, ಗಿರಿಗಳನ್ನೇ ’ನೀಲಿ’ಯಾಗಿಸಿರುವ ಈ ಕುರಿಂಜಿಯ ಅದ್ಭುತ ನೋಡಬೇಕೆಂದಿದ್ದರೆ, ಈಗಲೇ ನೀವೂ ಹೋಗಿ ಬರುತ್ತೀರಾ…

(ಸೆಪ್ಟೆಂಬರ್ 27, 2006ರಂದು ಬರೆದಿದ್ದ ಗೌರಿಯವರ ಕಂಡಹಾಗೆ ಅಂಕಣದ ಆಯ್ದ ಭಾಗ ಇದು)


ಇದನ್ನೂ ಓದಿ: ಗೌರಿ ಕಾರ್ನರ್: ಓರ್ವ ಜನಪರ ನ್ಯಾಯಮೂರ್ತಿಯವರನ್ನು ಕುರಿತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...