Homeಮುಖಪುಟಸೆಪ್ಟಂಬರ್‌‌ನಲ್ಲಿ ಸ್ನಾತಕೋತ್ತರ ಹಾಗೂ ಪದವಿ ಪರೀಕ್ಷೆಗಳು: ಯುಜಿಸಿ

ಸೆಪ್ಟಂಬರ್‌‌ನಲ್ಲಿ ಸ್ನಾತಕೋತ್ತರ ಹಾಗೂ ಪದವಿ ಪರೀಕ್ಷೆಗಳು: ಯುಜಿಸಿ

ಹೊಸ ಶೈಕ್ಷಣಿಕ ಕ್ಯಾಲೆಂಡರ್ ಬಿಡುಗಡೆ ಮಾಡಿದ ಯುಜಿಸಿ.

- Advertisement -
- Advertisement -

ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಪರೀಕ್ಷೆಗಳು ಮತ್ತು ಶೈಕ್ಷಣಿಕ ಕ್ಯಾಲೆಂಡರ್ ಕುರಿತು ತಜ್ಞರ ಸಮಿತಿಯ ವರದಿಯನ್ನು ಪರಿಗಣಿಸಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳ ಶೈಕ್ಷಣಿಕ ಕ್ಯಾಲೆಂಡರ್‌ನ ಹೊಸ ಮಾರ್ಗಸೂಚಿಗಳನ್ನು ವಿಶ್ವವಿದ್ಯಾಲಯ ಧನಸಹಾಯ ಆಯೋಗ (UGC) ಬಿಡುಗಡೆ ಮಾಡಿದೆ.

ಈ ಹಿಂದೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ ಏಪ್ರಿಲ್ 29 ರಂದು ಪರೀಕ್ಷೆಗಳ ಕುರಿತ ಮಾರ್ಗಸೂಚಿಗಳನ್ನು ಹೊರಡಿಸಿ, ಜುಲೈ 2020 ರಲ್ಲಿ ಪರೀಕ್ಷೆಗಳನ್ನು ನಡೆಸುವಂತೆ ವಿಶ್ವವಿದ್ಯಾನಿಲಯಗಳಿಗೆ ಆದೇಶಿಸಿತ್ತು.

ಆಯೋಗವು ಜುಲೈ 6 ರಂದು ನಡೆಸಿದ ಸಭೆಯಲ್ಲಿ, ಭಾರತದ ಕೊರೊನಾ ಪರಿಸ್ಥಿತಿಯ ದೃಷ್ಟಿಯಿಂದ ಹಲವು ಮಾರ್ಗಸೂಚಿಗಳನ್ನು ಹೊರಡಿಸಿದೆ.

ಮಾರ್ಗಸೂಚಿಗಳು :

ವಿದ್ಯಾರ್ಥಿಗಳ ಆರೋಗ್ಯ, ಸುರಕ್ಷತೆ ಮತ್ತು ನ್ಯಾಯಯುತ ಸಮಾನ ಅವಕಾಶದ ತತ್ವಗಳನ್ನು ರಕ್ಷಿಸಿ. ಅದೇ ಸಮಯದಲ್ಲಿ ಸಮಯ, ಶೈಕ್ಷಣಿಕ ವಿಶ್ವಾಸಾರ್ಹತೆ, ವೃತ್ತಿ ಅವಕಾಶಗಳು ಮತ್ತು ಭವಿಷ್ಯದ ಪ್ರಗತಿಯೂ ಬಹಳ ಮುಖ್ಯ ಎಂದು ಹೇಳಿದೆ.

1. ವಿಶ್ವವಿದ್ಯಾನಿಲಯಗಳು ಟರ್ಮಿನಲ್ ಸೆಮಿಸ್ಟರ್ ಅಥವಾ ಅಂತಿಮ ವರ್ಷದ ಪರೀಕ್ಷೆಗಳನ್ನು (2019-20) ಆಫ್‌ಲೈನ್ (ಪೆನ್ ಮತ್ತು ಪೇಪರ್) ಅಥವಾ ಆನ್‌ಲೈನ್ ಅಥವಾ ಮಿಶ್ರಿತ (ಆನ್‌ಲೈನ್ + ಆಫ್‌ಲೈನ್) ಮೋಡ್‌ನಲ್ಲಿ, ಕೊರೊನಾ ಸಾಂಕ್ರಾಮಿಕಕ್ಕೆ ಸಂಬಂಧಿಸಿದ ನಿಗದಿತ ಪ್ರೋಟೋಕಾಲ್‌ಗಳು ಮತ್ತು ಮಾರ್ಗಸೂಚಿಗಳನ್ನು ಅನುಸರಿಸಿ 2020 ಸೆಪ್ಟೆಂಬರ್ ಅಂತ್ಯದ ವೇಳೆಗೆ ಪೂರ್ಣಗೊಳಿಸಬೇಕಾಗುತ್ತದೆ.

2. ಒಂದು ವೇಳೆ ಟರ್ಮಿನಲ್ ಸೆಮಿಸ್ಟರ್ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗೆ ಯಾವುದೇ ಕಾರಣಕ್ಕೆ ಪರೀಕ್ಷೆಯಲ್ಲಿ ಹಾಜರಾಗಲು ಸಾಧ್ಯವಾಗದಿದ್ದರೆ ವಿಶೇಷ ಅವಕಾಶದ ಮೂಲಕ ಪರೀಕ್ಷೆಯನ್ನು ನೀಡಬಹುದು. ಯಾವುದೇ ಕೋರ್ಸ್ ಗೆ ಸಂಬಂಧಿಸಿದಂತೆ ವಿಶ್ವವಿದ್ಯಾನಿಲಯವು ಕಾರ್ಯಸಾಧ್ಯವಾದಾಗ ಹಾಗೂ ಯಾವಾಗ ಪರೀಕ್ಷೆಗಳನ್ನು ನಡೆಸಲ್ಪಡುತ್ತದೆಯೋ ಆಗ ವಿಶೇಷ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಗೆ ಅವಕಾಶ ಒದಗಿಸುವುದು. ಇದು ಪ್ರಸ್ತುತ ಶೈಕ್ಷಣಿಕ ವರ್ಷ 2019-20ಕ್ಕೆ ಮಾತ್ರ ಅನ್ವಯಿಸುತ್ತದೆ

3. ಟರ್ಮಿನಲ್ ಸೆಮಿಸ್ಟರ್ ಗಳ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಬ್ಯಾಕ್‌ಲಾಗ್ ಪೇಪರ್‌ಗಳ ಟರ್ಮಿನಲ್ ಸೆಮಿಸ್ಟರ್ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳು ಬ್ಯಾಕ್‌ಲಾಗ್ ಹೊಂದಿದ್ದರೆ ಕಡ್ಡಾಯವಾಗಿ ಆಫ್‌ಲೈನ್ (ಪೆನ್ ಮತ್ತು ಪೇಪರ್) ಅಥವಾ ಆನ್‌ಲೈನ್ ನಲ್ಲಿ ಪರೀಕ್ಷೆಗಳನ್ನು ನಡೆಸಿ, ನಂತರ  ಕಾರ್ಯಸಾಧ್ಯತೆ ಮತ್ತು ಸೂಕ್ತತೆಗೆ ಅನುಗುಣವಾಗಿ (ಆನ್‌ಲೈನ್ /ಆಫ್‌ಲೈನ್)  ಮೌಲ್ಯಮಾಪನ ಮಾಡಲಾಗುತ್ತದೆ.

4. ಉಳಿದಂತೆ ಮಧ್ಯಂತರ ಸೆಮಿಸ್ಟರ್ / ವರ್ಷದ ಪರೀಕ್ಷೆಗಳಿಗೆ ಸಂಬಂಧಿಸಿದ ಮಾರ್ಗಸೂಚಿಗಳು ಬದಲಾಗಿಲ್ಲ. 2020 ರ ಏಪ್ರಿಲ್ 29 ರ ಅಧಿಸೂಚನೆಯಂತೆ ಹಾಗೇ ಉಳಿಯುತ್ತವೆ.

5. ಏಪ್ರಿಲ್ 29, 2020 ರಂದು ಹೊರಡಿಸಲಾದ  ಮಾರ್ಗಸೂಚಿಗಳಲ್ಲಿರುವಂತೆ, ಪ್ರವೇಶ ಮತ್ತು ಶೈಕ್ಷಣಿಕ ಕ್ಯಾಲೆಂಡರ್‌ಗೆ ಸಂಬಂಧಿಸಿದ ಸಂಬಂಧಿತ ವಿವರಗಳು ಅಗತ್ಯವಿದ್ದರೆ, ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳಲ್ಲಿ ಉಲ್ಲೇಖಿಸಲಾದ ಸ್ಥಳಗಳಲ್ಲಿ ಪ್ರತ್ಯೇಕವಾಗಿ ನೀಡಲಾಗುತ್ತದೆ.

6.ಕೊರೊನಾ ದೃಷ್ಟಿಯಿಂದ ಪರೀಕ್ಷೆಯ ನಡವಳಿಕೆಗೆ ಸಂಬಂಧಿಸಿದಂತೆ ಮೇಲಿನ ಮಾರ್ಗಸೂಚಿಗಳ ಹೊರತಾಗಿಯೂ ಶೈಕ್ಷಣಿಕ ಚಟುವಟಿಕೆಗಳನ್ನು ಕೈಗೊಳ್ಳಲು ಎಲ್ಲಾ ರೀತಿಯಲ್ಲೂ  ಪ್ರೋಟೋಕಾಲ್ಗಳು / ಮಾರ್ಗಸೂಚಿಗಳು / ನಿರ್ದೇಶನಗಳು / ಕೇಂದ್ರ / ರಾಜ್ಯ ಸರ್ಕಾರಗಳು ನೀಡುವ ಸಲಹೆಗಳನ್ನು ಅನುಸರಿಸಬೇಕು. ಹಾಗೆಯೇ ಮುಂದಿನ ಶೈಕ್ಷಣಿಕ ವರ್ಷ ಪ್ರಾರಂಭ, ಮುಂತಾದ ವಿಷಯಗಳನ್ನು ವಿಶ್ವವಿದ್ಯಾಲಯ ಅಥವಾ ಸಂಸ್ಥೆ ಕಾಲಕಾಲಕ್ಕೆ ಖಚಿತಪಡಿಸಿಕೊಳ್ಳಬೇಕು.


ಇದನ್ನೂ ಓದಿ: ಶೈಕ್ಷಣಿಕ ವರ್ಷಾರಂಭದ ಕುರಿತು ಸಮಿತಿ ವರದಿ ಸಲ್ಲಿಕೆ: ಸೆಪ್ಟಂಬರ್‌‌ನಿಂದ ಆರಂಭ ಸಾಧ್ಯತೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...