Homeಮುಖಪುಟಸೆಪ್ಟಂಬರ್‌‌ನಲ್ಲಿ ಸ್ನಾತಕೋತ್ತರ ಹಾಗೂ ಪದವಿ ಪರೀಕ್ಷೆಗಳು: ಯುಜಿಸಿ

ಸೆಪ್ಟಂಬರ್‌‌ನಲ್ಲಿ ಸ್ನಾತಕೋತ್ತರ ಹಾಗೂ ಪದವಿ ಪರೀಕ್ಷೆಗಳು: ಯುಜಿಸಿ

ಹೊಸ ಶೈಕ್ಷಣಿಕ ಕ್ಯಾಲೆಂಡರ್ ಬಿಡುಗಡೆ ಮಾಡಿದ ಯುಜಿಸಿ.

- Advertisement -
- Advertisement -

ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಪರೀಕ್ಷೆಗಳು ಮತ್ತು ಶೈಕ್ಷಣಿಕ ಕ್ಯಾಲೆಂಡರ್ ಕುರಿತು ತಜ್ಞರ ಸಮಿತಿಯ ವರದಿಯನ್ನು ಪರಿಗಣಿಸಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳ ಶೈಕ್ಷಣಿಕ ಕ್ಯಾಲೆಂಡರ್‌ನ ಹೊಸ ಮಾರ್ಗಸೂಚಿಗಳನ್ನು ವಿಶ್ವವಿದ್ಯಾಲಯ ಧನಸಹಾಯ ಆಯೋಗ (UGC) ಬಿಡುಗಡೆ ಮಾಡಿದೆ.

ಈ ಹಿಂದೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ ಏಪ್ರಿಲ್ 29 ರಂದು ಪರೀಕ್ಷೆಗಳ ಕುರಿತ ಮಾರ್ಗಸೂಚಿಗಳನ್ನು ಹೊರಡಿಸಿ, ಜುಲೈ 2020 ರಲ್ಲಿ ಪರೀಕ್ಷೆಗಳನ್ನು ನಡೆಸುವಂತೆ ವಿಶ್ವವಿದ್ಯಾನಿಲಯಗಳಿಗೆ ಆದೇಶಿಸಿತ್ತು.

ಆಯೋಗವು ಜುಲೈ 6 ರಂದು ನಡೆಸಿದ ಸಭೆಯಲ್ಲಿ, ಭಾರತದ ಕೊರೊನಾ ಪರಿಸ್ಥಿತಿಯ ದೃಷ್ಟಿಯಿಂದ ಹಲವು ಮಾರ್ಗಸೂಚಿಗಳನ್ನು ಹೊರಡಿಸಿದೆ.

ಮಾರ್ಗಸೂಚಿಗಳು :

ವಿದ್ಯಾರ್ಥಿಗಳ ಆರೋಗ್ಯ, ಸುರಕ್ಷತೆ ಮತ್ತು ನ್ಯಾಯಯುತ ಸಮಾನ ಅವಕಾಶದ ತತ್ವಗಳನ್ನು ರಕ್ಷಿಸಿ. ಅದೇ ಸಮಯದಲ್ಲಿ ಸಮಯ, ಶೈಕ್ಷಣಿಕ ವಿಶ್ವಾಸಾರ್ಹತೆ, ವೃತ್ತಿ ಅವಕಾಶಗಳು ಮತ್ತು ಭವಿಷ್ಯದ ಪ್ರಗತಿಯೂ ಬಹಳ ಮುಖ್ಯ ಎಂದು ಹೇಳಿದೆ.

1. ವಿಶ್ವವಿದ್ಯಾನಿಲಯಗಳು ಟರ್ಮಿನಲ್ ಸೆಮಿಸ್ಟರ್ ಅಥವಾ ಅಂತಿಮ ವರ್ಷದ ಪರೀಕ್ಷೆಗಳನ್ನು (2019-20) ಆಫ್‌ಲೈನ್ (ಪೆನ್ ಮತ್ತು ಪೇಪರ್) ಅಥವಾ ಆನ್‌ಲೈನ್ ಅಥವಾ ಮಿಶ್ರಿತ (ಆನ್‌ಲೈನ್ + ಆಫ್‌ಲೈನ್) ಮೋಡ್‌ನಲ್ಲಿ, ಕೊರೊನಾ ಸಾಂಕ್ರಾಮಿಕಕ್ಕೆ ಸಂಬಂಧಿಸಿದ ನಿಗದಿತ ಪ್ರೋಟೋಕಾಲ್‌ಗಳು ಮತ್ತು ಮಾರ್ಗಸೂಚಿಗಳನ್ನು ಅನುಸರಿಸಿ 2020 ಸೆಪ್ಟೆಂಬರ್ ಅಂತ್ಯದ ವೇಳೆಗೆ ಪೂರ್ಣಗೊಳಿಸಬೇಕಾಗುತ್ತದೆ.

2. ಒಂದು ವೇಳೆ ಟರ್ಮಿನಲ್ ಸೆಮಿಸ್ಟರ್ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗೆ ಯಾವುದೇ ಕಾರಣಕ್ಕೆ ಪರೀಕ್ಷೆಯಲ್ಲಿ ಹಾಜರಾಗಲು ಸಾಧ್ಯವಾಗದಿದ್ದರೆ ವಿಶೇಷ ಅವಕಾಶದ ಮೂಲಕ ಪರೀಕ್ಷೆಯನ್ನು ನೀಡಬಹುದು. ಯಾವುದೇ ಕೋರ್ಸ್ ಗೆ ಸಂಬಂಧಿಸಿದಂತೆ ವಿಶ್ವವಿದ್ಯಾನಿಲಯವು ಕಾರ್ಯಸಾಧ್ಯವಾದಾಗ ಹಾಗೂ ಯಾವಾಗ ಪರೀಕ್ಷೆಗಳನ್ನು ನಡೆಸಲ್ಪಡುತ್ತದೆಯೋ ಆಗ ವಿಶೇಷ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಗೆ ಅವಕಾಶ ಒದಗಿಸುವುದು. ಇದು ಪ್ರಸ್ತುತ ಶೈಕ್ಷಣಿಕ ವರ್ಷ 2019-20ಕ್ಕೆ ಮಾತ್ರ ಅನ್ವಯಿಸುತ್ತದೆ

3. ಟರ್ಮಿನಲ್ ಸೆಮಿಸ್ಟರ್ ಗಳ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಬ್ಯಾಕ್‌ಲಾಗ್ ಪೇಪರ್‌ಗಳ ಟರ್ಮಿನಲ್ ಸೆಮಿಸ್ಟರ್ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳು ಬ್ಯಾಕ್‌ಲಾಗ್ ಹೊಂದಿದ್ದರೆ ಕಡ್ಡಾಯವಾಗಿ ಆಫ್‌ಲೈನ್ (ಪೆನ್ ಮತ್ತು ಪೇಪರ್) ಅಥವಾ ಆನ್‌ಲೈನ್ ನಲ್ಲಿ ಪರೀಕ್ಷೆಗಳನ್ನು ನಡೆಸಿ, ನಂತರ  ಕಾರ್ಯಸಾಧ್ಯತೆ ಮತ್ತು ಸೂಕ್ತತೆಗೆ ಅನುಗುಣವಾಗಿ (ಆನ್‌ಲೈನ್ /ಆಫ್‌ಲೈನ್)  ಮೌಲ್ಯಮಾಪನ ಮಾಡಲಾಗುತ್ತದೆ.

4. ಉಳಿದಂತೆ ಮಧ್ಯಂತರ ಸೆಮಿಸ್ಟರ್ / ವರ್ಷದ ಪರೀಕ್ಷೆಗಳಿಗೆ ಸಂಬಂಧಿಸಿದ ಮಾರ್ಗಸೂಚಿಗಳು ಬದಲಾಗಿಲ್ಲ. 2020 ರ ಏಪ್ರಿಲ್ 29 ರ ಅಧಿಸೂಚನೆಯಂತೆ ಹಾಗೇ ಉಳಿಯುತ್ತವೆ.

5. ಏಪ್ರಿಲ್ 29, 2020 ರಂದು ಹೊರಡಿಸಲಾದ  ಮಾರ್ಗಸೂಚಿಗಳಲ್ಲಿರುವಂತೆ, ಪ್ರವೇಶ ಮತ್ತು ಶೈಕ್ಷಣಿಕ ಕ್ಯಾಲೆಂಡರ್‌ಗೆ ಸಂಬಂಧಿಸಿದ ಸಂಬಂಧಿತ ವಿವರಗಳು ಅಗತ್ಯವಿದ್ದರೆ, ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳಲ್ಲಿ ಉಲ್ಲೇಖಿಸಲಾದ ಸ್ಥಳಗಳಲ್ಲಿ ಪ್ರತ್ಯೇಕವಾಗಿ ನೀಡಲಾಗುತ್ತದೆ.

6.ಕೊರೊನಾ ದೃಷ್ಟಿಯಿಂದ ಪರೀಕ್ಷೆಯ ನಡವಳಿಕೆಗೆ ಸಂಬಂಧಿಸಿದಂತೆ ಮೇಲಿನ ಮಾರ್ಗಸೂಚಿಗಳ ಹೊರತಾಗಿಯೂ ಶೈಕ್ಷಣಿಕ ಚಟುವಟಿಕೆಗಳನ್ನು ಕೈಗೊಳ್ಳಲು ಎಲ್ಲಾ ರೀತಿಯಲ್ಲೂ  ಪ್ರೋಟೋಕಾಲ್ಗಳು / ಮಾರ್ಗಸೂಚಿಗಳು / ನಿರ್ದೇಶನಗಳು / ಕೇಂದ್ರ / ರಾಜ್ಯ ಸರ್ಕಾರಗಳು ನೀಡುವ ಸಲಹೆಗಳನ್ನು ಅನುಸರಿಸಬೇಕು. ಹಾಗೆಯೇ ಮುಂದಿನ ಶೈಕ್ಷಣಿಕ ವರ್ಷ ಪ್ರಾರಂಭ, ಮುಂತಾದ ವಿಷಯಗಳನ್ನು ವಿಶ್ವವಿದ್ಯಾಲಯ ಅಥವಾ ಸಂಸ್ಥೆ ಕಾಲಕಾಲಕ್ಕೆ ಖಚಿತಪಡಿಸಿಕೊಳ್ಳಬೇಕು.


ಇದನ್ನೂ ಓದಿ: ಶೈಕ್ಷಣಿಕ ವರ್ಷಾರಂಭದ ಕುರಿತು ಸಮಿತಿ ವರದಿ ಸಲ್ಲಿಕೆ: ಸೆಪ್ಟಂಬರ್‌‌ನಿಂದ ಆರಂಭ ಸಾಧ್ಯತೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...