Homeಕರ್ನಾಟಕಸೆಪ್ಟೆಂಬರ್‌ 1 ರಿಂದ ಹಲವು ಗೊಂದಲಗಳ ನಡುವೆ ನಡೆಯಲಿದೆ ಪದವಿ ಪರೀಕ್ಷೆಗಳು

ಸೆಪ್ಟೆಂಬರ್‌ 1 ರಿಂದ ಹಲವು ಗೊಂದಲಗಳ ನಡುವೆ ನಡೆಯಲಿದೆ ಪದವಿ ಪರೀಕ್ಷೆಗಳು

ಕೊರೊನ ಸೋಂಕು ಹೆಚ್ಚುತ್ತಿರುವ ನಡುವೆಯೇ ರಾಜ್ಯದ ಎಲ್ಲಾ ವಿವಿಗಳು ಬಿಎ, ಬಿಎಸ್‌ಸಿ, ಬಿಕಾಂ, ಬಿಲಿಬ್ ಪದವಿಯ 6 ನೇ ಸೆಮಿಸ್ಟರ್ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದೆ.

- Advertisement -
- Advertisement -

ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ ಅಂತಿಮ ವರ್ಷದ ಪರೀಕ್ಷೆಗಳು ಸೆ.1 ರಿಂದ 24 ರವರೆಗೆ ನಡೆಯಲಿವೆ. ಕೊರೊನ ಸೋಂಕು ಹೆಚ್ಚುತ್ತಿರುವ ನಡುವೆಯೇ ಬಿಎ, ಬಿಎಸ್‌ಸಿ, ಬಿಕಾಂ, ಬಿಲಿಬ್ ಪದವಿಯ 6 ನೇ ಸೆಮಿಸ್ಟರ್ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ.

ಇದೇ ಮೊದಲ ಬಾರಿಗೆ ರಾಜ್ಯದ ಎಲ್ಲಾ ವಿವಿಗಳು ಒಂದೇ ಭಾರಿಗೆ ಪರೀಕ್ಷೆಗಳನ್ನು ನಡೆಸುತ್ತಿದ್ದು ಏಕರೂಪ ಶಿಕ್ಷಣದ ಮೊದಲ ಹಂತ ಇದಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ವಿಭಜಿತ ಬೆಂಗಳೂರು ವಿವಿಯ ನಾಲ್ಕು, ಮೈಸೂರು, ಕುವೆಂಪು, ತುಮಕೂರು, ಬಳ್ಳಾರಿಯ ಕೃಷ್ಣದೇವರಾಯ, ರಾಣಿಚೆನ್ನಮ್ಮ ಹೀಗೆ ಎಲ್ಲಾ ವಿವಿಗಳಲ್ಲೂ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದ್ದು ಪರೀಕ್ಷೆ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಕಳೆದ ವರ್ಷ ನವೆಂಬರ್‌ನಿಂದ ಜನವರಿವರೆಗೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ಈಗ ಐದು ತಿಂಗಳ ದೀರ್ಘಾವಧಿ ಕೊರೊನಾ ರಜೆಯ ಬಳಿಕ ಪರೀಕ್ಷೆಗಳನ್ನು ಎದುರಿಸಬೇಕಾಗಿ ಬಂದಿದೆ.

ಇದನ್ನೂ ಓದಿ: ಪದವಿಪೂರ್ವ ಉಪನ್ಯಾಸಕರ ಹುದ್ದೆಗಳ ಹೆಚ್ಚಳಕ್ಕಾಗಿ ಒತ್ತಾಯ: ಸಿಎಂ, ಶಿಕ್ಷಣ ಸಚಿವರ ಭೇಟಿ.

“ಲಾಕ್‌ಡೌನ್ ಮಾಡುವ ಪೂರ್ವದಲ್ಲಿ ಆಫ್‌ಲೈನ್ ತರಗತಿಗಳು ನಡಿದ್ದವು. ಕೊರೊನಾ ಸೋಂಕು ಹರಡಿದ ಪರಿಣಾಮ ಮೂರು ತಿಂಗಳು ತರಗತಿಗಳು ನಡೆಯಲಿಲ್ಲ. ನಂತರ ವಿವಿಗಳು ಆನ್‌ಲೈನ್ ತರಗತಿ ನಡೆಸಿದವು. ಮೊಬೈಲ್ ಇದ್ದು ಸಿಗ್ನಲ್ ಸಿಕ್ಕವರು ತರಗತಿಯಲ್ಲಿ ಪಾಲ್ಗೊಂಡಿರಬಹುದು ಬಹುದು. ಆದರೆ ಮೊಬೈಲ್ ಇಲ್ಲದೇ ಇರುವವರು ಆನ್‌ಲೈನ್ ತರಗತಿಯಲ್ಲಿ ಪಾಠ ಕೇಳಲು ಸಾಧ್ಯವಾಗಿರಲಿಲ್ಲ. ನೇರ ಅಧ್ಯಾಪಕರನ್ನು ಭೇಟಿ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಲು ಬಸ್ ವ್ಯವಸ್ಥೆ ಇರಲಿಲ್ಲ. ನಗರದ ವಿದ್ಯಾರ್ಥಿಗಳು ಅಧ್ಯಾಪಕರನ್ನು ಭೇಟಿ ಮಾಡಿರಬಹುದು. ಆದರೆ ನಮಗೆ ಅಂತಹ ವ್ಯವಸ್ಥೆ ಇರಲಿಲ್ಲ” ಎಂದು ಗ್ರಾಮೀಣ ವಿದ್ಯಾರ್ಥಿಗಳು ದೂರಿದ್ದಾರೆ.

ತುಮಕೂರು ಮತ್ತು ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬರುವ ವಿವಿಗಳಲ್ಲಿ ಶೇಕಡ 60 ರಷ್ಟು ಸಿಲಬಸ್ ಪೂರ್ಣಗೊಂಡಿಲ್ಲ. ಆದರೂ ಪರೀಕ್ಷೆ ನಡೆಸಲಾಗುತ್ತಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ಆದರೆ ಮಾರ್ಚ್ ವೇಳೆಗೆ ಶೇ. 80 ರಷ್ಟು ಸಿಲಬಸ್ ಪೂರ್ಣಗೊಂಡಿತ್ತು. ಪ್ರಶ್ನೆಪತ್ರಿಕೆಗಳ ರಚನೆಗೆ ಸಿದ್ದತೆ ನಡೆದಿತ್ತು ಎನ್ನುತ್ತವೆ ಅಧ್ಯಾಪಕ ವರ್ಗದ ಮೂಲಗಳು.

ಇದನ್ನೂ ಓದಿ: ಅರುಣ್ ಫೆರೇರ: ನತದೃಷ್ಟರ ಕಾನೂನು ನೆರವಿಗೆ ಸದಾ ಲಭ್ಯವಿದ್ದ ಕಾರ್ಯಕರ್ತ

ಈ ನಡುವೆ ಯುಜಿಸಿ ಕೂಡ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲಾಗುವುದು. ಎರಡು ಮತ್ತು ನಾಲ್ಕನೇ ಸೆಮಿಸ್ಟರ್ ವಿದ್ಯಾರ್ಥಿಗಳು ಪರೀಕ್ಷೆ ಕಟ್ಟುವ ಅಗತ್ಯವಿಲ್ಲ. ಹಿಂದಿನ ಸೆಮಿಸ್ಟರ್‌ನಲ್ಲಿ ಪಡೆದ ಅಂಕಗಳ ಆಧಾರದಲ್ಲಿ ಗ್ರೇಡ್‌ಗಳನ್ನು ನೀಡಲಾಗುವುದು ಎಂದು ಹೇಳಿತು. ಆದರೆ ಈಗ 2 ಮತ್ತು 4ನೇ ಸೆಮಿಸ್ಟರ್‌ಗೂ ಪರೀಕ್ಷೆ ನಡೆಸಲು ಶುಲ್ಕ ಕಟ್ಟಿಸಿಕೊಳ್ಳಲಾಗಿದೆ. ಇದು ವಿದ್ಯಾರ್ಥಿಗಳನ್ನು ಗೊಂದಲಕ್ಕೆ ದೂಡುವಂತೆ ಮಾಡಿದೆ. ಯುಜಿಸಿ ಮತ್ತು ವಿವಿಗಳ ತೀರ್ಮಾನಗಳು ಭಿನ್ನವಾಗಿರುವುದು ಇಂಥ ಗೊಂದಲಕ್ಕೆ ಕಾರಣವಾಗಿದೆ.

ಈ. ಶಿವಣ್ಣ (ಎಸ್‌ಎಫ್‌ಐ ತುಮಕೂರು ಜಿಲ್ಲಾಧ್ಯಕ್ಷ)

ಎಸ್‌ಎಫ್‌ಐ ತುಮಕೂರು ಜಿಲ್ಲಾಧ್ಯಕ್ಷ ಈ. ಶಿವಣ್ಣ ನಾನುಗೌರಿ.ಕಾಂ ಜೊತೆ ಮಾತನಾಡಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ಸಮಸ್ಯೆಗಳನ್ನು ಬಿಡಿಸಿಟ್ಟರು. ಸಿಲಬಸ್ ಪೂರ್ಣಗೊಂಡಿಲ್ಲ, ವಿದ್ಯಾರ್ಥಿಗಳು ದೀರ್ಘಾವಧಿಯಾಗಿ ತರಗತಿಗೆ ಹೋಗಲು ಆಗಿಲ್ಲ. ಆದರೂ ಪರೀಕ್ಷೆಗಳನ್ನು ಅವೈಜ್ಞಾನಿಕವಾಗಿ ನಡೆಸಲಾಗುತ್ತಿದೆ. ಇದರಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ತೀವ್ರ ಸಮಸ್ಯೆ ಎದುರಿಸಬೇಕಾಗುತ್ತದೆ. ಫಲಿತಾಂಶದ ಮೇಲೆ ಅಡ್ಡ ಪರಿಣಾಮ ಬೀರುತ್ತದೆ. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿ 2 ಮತ್ತು 4ನೇ ಸೆಮ್ ವಿದ್ಯಾರ್ಥಿಗಳಿಗೆ ಹಿಂದಿನ ತರಗತಿಯ ಅಂಕಗಳ ಆಧಾರದ ಮೇಲೆ ಗ್ರೇಡ್ ನೀಡಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ: ಬಡಜನರಿಗೆ ವಕೀಲೆಯಾಗಿದ್ದಕ್ಕೆ ಜೈಲಿಗೆ ಹೋದ ಐಐಟಿ ಪದವೀಧರೆ ಸುಧಾ ಭಾರದ್ವಾಜ್!

ಬೆಂಗಳೂರು ವ್ಯಾಪ್ತಿಯ ನಾಲ್ಕು ವಿವಿಗಳು ಮತ್ತು ತುಮಕೂರು ವಿಶ್ವವಿದ್ಯಾಲಯದಲ್ಲಿ ಸಾಕಷ್ಟು ಸಮಸ್ಯೆಗಳು ಇವೆ. ಈ ವಿವಿಗಳನ್ನು ಹೊರತುಪಡಿಸಿ ಬೇರೆ ವಿವಿಗಳಲ್ಲಿ ಆರನೇ ಸೆಮಿಸ್ಟರ್ ವಿದ್ಯಾರ್ಥಿಗಳು ಮೂರು ವರ್ಷದ ಎಲ್ಲಾ ಪರೀಕ್ಷೆಗಳಿಗೆ ಶುಲ್ಕ ಕಟ್ಟಿ ಬರೆಯಲು ಅವಕಾಶವಿದೆ. ಅಂದರೆ 2, 4 ಮತ್ತು 5ನೇ ಸೆಮ್ ಫೇಲ್ ಆಗಿದ್ದರೂ ಅವರು ಎಲ್ಲಾ ಪರೀಕ್ಷೆಗಳಿಗೆ ಏಕಕಾಲಕ್ಕೆ ಶುಲ್ಕ ಕಟ್ಟಬಹುದು.

ಆದರೆ ತುಮಕೂರು ಮತ್ತು ಬೆಂಗಳೂರು ವ್ಯಾಪ್ತಿ ವಿವಿಗಳಲ್ಲಿ 6ನೇ ಸಮಿಸ್ಟರ್ ವಿದ್ಯಾರ್ಥಿಗಳು 2, 3, 4 ಮತ್ತು 5ನೇ ಸೆಮಿಸ್ಟರ್‌ಗಳಲ್ಲಿ ಫೇಲಾಗಿದ್ದರೆ ಆ ಪರೀಕ್ಷೆಗಳಿಗೆ ಶುಲ್ಕ ಕಟ್ಟಲು ಅವಕಾಶವಿಲ್ಲ. ಇದು ವಿದ್ಯಾರ್ಥಿಗಳಿಗೆ ಒಂದು ವರ್ಷ ನಷ್ಟವಾಗುತ್ತದೆ. ಇದು ತಾಂತ್ರಿಕ ಸಮಸ್ಯೆ ಇದನ್ನು ಬಗೆಹರಿಸಬೇಕು ಎಂದು ಅವರು ಒತ್ತಾಯಿಸಿದರು.

‘ವಿಜಯೀಭವ’ ವೆಬ್ ಸೈಟ್‌ಗೆ ಹೋದರೆ ಎಲ್ಲಾ ವಿಷಯಗಳ ಆನ್‌ಲೈನ್ ತರಗತಿಗಳ  ಮಾಹಿತಿ ಸಿಗುತ್ತದೆ. ವಿದ್ಯಾರ್ಥಿಗಳು ಅದರ ಪ್ರಯೋಜ ಪಡೆಯುವ ವ್ಯವಸ್ಥೆ ಆಯಾ ವಿವಿಗಳು ಕಲ್ಪಿಸಿವೆ. ಸಮಸ್ಯೆ ಏನೆಂದರೆ ಆಂಡ್ರಾಯಿಡ್ ಮೊಬೈಲ್, ಇಂಟರ್ ನೆಟ್ ಸೌಲಭ್ಯವಿಲ್ಲದ ವಿದ್ಯಾರ್ಥಿಗಳು ಏನು ಮಾಡಬೇಕು. ಇದಕ್ಕೆ ಪ್ರಾಧ್ಯಾಪಕರು ಮತ್ತು ವಿವಿಗಳ ಬಳಿ ಉತ್ತರವಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.


ಓದಿ: ಭೀಮಾ ಕೋರೆಗಾಂವ್; ಪ್ರಾಧ್ಯಾಪಕರ ಮೇಲಿನ NIA ಕಿರುಕುಳಕ್ಕೆ ವಿದ್ಯಾರ್ಥಿಗಳ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...