Homeಕರ್ನಾಟಕಸೆಪ್ಟೆಂಬರ್‌ 1 ರಿಂದ ಹಲವು ಗೊಂದಲಗಳ ನಡುವೆ ನಡೆಯಲಿದೆ ಪದವಿ ಪರೀಕ್ಷೆಗಳು

ಸೆಪ್ಟೆಂಬರ್‌ 1 ರಿಂದ ಹಲವು ಗೊಂದಲಗಳ ನಡುವೆ ನಡೆಯಲಿದೆ ಪದವಿ ಪರೀಕ್ಷೆಗಳು

ಕೊರೊನ ಸೋಂಕು ಹೆಚ್ಚುತ್ತಿರುವ ನಡುವೆಯೇ ರಾಜ್ಯದ ಎಲ್ಲಾ ವಿವಿಗಳು ಬಿಎ, ಬಿಎಸ್‌ಸಿ, ಬಿಕಾಂ, ಬಿಲಿಬ್ ಪದವಿಯ 6 ನೇ ಸೆಮಿಸ್ಟರ್ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದೆ.

- Advertisement -
- Advertisement -

ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ ಅಂತಿಮ ವರ್ಷದ ಪರೀಕ್ಷೆಗಳು ಸೆ.1 ರಿಂದ 24 ರವರೆಗೆ ನಡೆಯಲಿವೆ. ಕೊರೊನ ಸೋಂಕು ಹೆಚ್ಚುತ್ತಿರುವ ನಡುವೆಯೇ ಬಿಎ, ಬಿಎಸ್‌ಸಿ, ಬಿಕಾಂ, ಬಿಲಿಬ್ ಪದವಿಯ 6 ನೇ ಸೆಮಿಸ್ಟರ್ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ.

ಇದೇ ಮೊದಲ ಬಾರಿಗೆ ರಾಜ್ಯದ ಎಲ್ಲಾ ವಿವಿಗಳು ಒಂದೇ ಭಾರಿಗೆ ಪರೀಕ್ಷೆಗಳನ್ನು ನಡೆಸುತ್ತಿದ್ದು ಏಕರೂಪ ಶಿಕ್ಷಣದ ಮೊದಲ ಹಂತ ಇದಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ವಿಭಜಿತ ಬೆಂಗಳೂರು ವಿವಿಯ ನಾಲ್ಕು, ಮೈಸೂರು, ಕುವೆಂಪು, ತುಮಕೂರು, ಬಳ್ಳಾರಿಯ ಕೃಷ್ಣದೇವರಾಯ, ರಾಣಿಚೆನ್ನಮ್ಮ ಹೀಗೆ ಎಲ್ಲಾ ವಿವಿಗಳಲ್ಲೂ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದ್ದು ಪರೀಕ್ಷೆ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಕಳೆದ ವರ್ಷ ನವೆಂಬರ್‌ನಿಂದ ಜನವರಿವರೆಗೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ಈಗ ಐದು ತಿಂಗಳ ದೀರ್ಘಾವಧಿ ಕೊರೊನಾ ರಜೆಯ ಬಳಿಕ ಪರೀಕ್ಷೆಗಳನ್ನು ಎದುರಿಸಬೇಕಾಗಿ ಬಂದಿದೆ.

ಇದನ್ನೂ ಓದಿ: ಪದವಿಪೂರ್ವ ಉಪನ್ಯಾಸಕರ ಹುದ್ದೆಗಳ ಹೆಚ್ಚಳಕ್ಕಾಗಿ ಒತ್ತಾಯ: ಸಿಎಂ, ಶಿಕ್ಷಣ ಸಚಿವರ ಭೇಟಿ.

“ಲಾಕ್‌ಡೌನ್ ಮಾಡುವ ಪೂರ್ವದಲ್ಲಿ ಆಫ್‌ಲೈನ್ ತರಗತಿಗಳು ನಡಿದ್ದವು. ಕೊರೊನಾ ಸೋಂಕು ಹರಡಿದ ಪರಿಣಾಮ ಮೂರು ತಿಂಗಳು ತರಗತಿಗಳು ನಡೆಯಲಿಲ್ಲ. ನಂತರ ವಿವಿಗಳು ಆನ್‌ಲೈನ್ ತರಗತಿ ನಡೆಸಿದವು. ಮೊಬೈಲ್ ಇದ್ದು ಸಿಗ್ನಲ್ ಸಿಕ್ಕವರು ತರಗತಿಯಲ್ಲಿ ಪಾಲ್ಗೊಂಡಿರಬಹುದು ಬಹುದು. ಆದರೆ ಮೊಬೈಲ್ ಇಲ್ಲದೇ ಇರುವವರು ಆನ್‌ಲೈನ್ ತರಗತಿಯಲ್ಲಿ ಪಾಠ ಕೇಳಲು ಸಾಧ್ಯವಾಗಿರಲಿಲ್ಲ. ನೇರ ಅಧ್ಯಾಪಕರನ್ನು ಭೇಟಿ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಲು ಬಸ್ ವ್ಯವಸ್ಥೆ ಇರಲಿಲ್ಲ. ನಗರದ ವಿದ್ಯಾರ್ಥಿಗಳು ಅಧ್ಯಾಪಕರನ್ನು ಭೇಟಿ ಮಾಡಿರಬಹುದು. ಆದರೆ ನಮಗೆ ಅಂತಹ ವ್ಯವಸ್ಥೆ ಇರಲಿಲ್ಲ” ಎಂದು ಗ್ರಾಮೀಣ ವಿದ್ಯಾರ್ಥಿಗಳು ದೂರಿದ್ದಾರೆ.

ತುಮಕೂರು ಮತ್ತು ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬರುವ ವಿವಿಗಳಲ್ಲಿ ಶೇಕಡ 60 ರಷ್ಟು ಸಿಲಬಸ್ ಪೂರ್ಣಗೊಂಡಿಲ್ಲ. ಆದರೂ ಪರೀಕ್ಷೆ ನಡೆಸಲಾಗುತ್ತಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ಆದರೆ ಮಾರ್ಚ್ ವೇಳೆಗೆ ಶೇ. 80 ರಷ್ಟು ಸಿಲಬಸ್ ಪೂರ್ಣಗೊಂಡಿತ್ತು. ಪ್ರಶ್ನೆಪತ್ರಿಕೆಗಳ ರಚನೆಗೆ ಸಿದ್ದತೆ ನಡೆದಿತ್ತು ಎನ್ನುತ್ತವೆ ಅಧ್ಯಾಪಕ ವರ್ಗದ ಮೂಲಗಳು.

ಇದನ್ನೂ ಓದಿ: ಅರುಣ್ ಫೆರೇರ: ನತದೃಷ್ಟರ ಕಾನೂನು ನೆರವಿಗೆ ಸದಾ ಲಭ್ಯವಿದ್ದ ಕಾರ್ಯಕರ್ತ

ಈ ನಡುವೆ ಯುಜಿಸಿ ಕೂಡ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲಾಗುವುದು. ಎರಡು ಮತ್ತು ನಾಲ್ಕನೇ ಸೆಮಿಸ್ಟರ್ ವಿದ್ಯಾರ್ಥಿಗಳು ಪರೀಕ್ಷೆ ಕಟ್ಟುವ ಅಗತ್ಯವಿಲ್ಲ. ಹಿಂದಿನ ಸೆಮಿಸ್ಟರ್‌ನಲ್ಲಿ ಪಡೆದ ಅಂಕಗಳ ಆಧಾರದಲ್ಲಿ ಗ್ರೇಡ್‌ಗಳನ್ನು ನೀಡಲಾಗುವುದು ಎಂದು ಹೇಳಿತು. ಆದರೆ ಈಗ 2 ಮತ್ತು 4ನೇ ಸೆಮಿಸ್ಟರ್‌ಗೂ ಪರೀಕ್ಷೆ ನಡೆಸಲು ಶುಲ್ಕ ಕಟ್ಟಿಸಿಕೊಳ್ಳಲಾಗಿದೆ. ಇದು ವಿದ್ಯಾರ್ಥಿಗಳನ್ನು ಗೊಂದಲಕ್ಕೆ ದೂಡುವಂತೆ ಮಾಡಿದೆ. ಯುಜಿಸಿ ಮತ್ತು ವಿವಿಗಳ ತೀರ್ಮಾನಗಳು ಭಿನ್ನವಾಗಿರುವುದು ಇಂಥ ಗೊಂದಲಕ್ಕೆ ಕಾರಣವಾಗಿದೆ.

ಈ. ಶಿವಣ್ಣ (ಎಸ್‌ಎಫ್‌ಐ ತುಮಕೂರು ಜಿಲ್ಲಾಧ್ಯಕ್ಷ)

ಎಸ್‌ಎಫ್‌ಐ ತುಮಕೂರು ಜಿಲ್ಲಾಧ್ಯಕ್ಷ ಈ. ಶಿವಣ್ಣ ನಾನುಗೌರಿ.ಕಾಂ ಜೊತೆ ಮಾತನಾಡಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ಸಮಸ್ಯೆಗಳನ್ನು ಬಿಡಿಸಿಟ್ಟರು. ಸಿಲಬಸ್ ಪೂರ್ಣಗೊಂಡಿಲ್ಲ, ವಿದ್ಯಾರ್ಥಿಗಳು ದೀರ್ಘಾವಧಿಯಾಗಿ ತರಗತಿಗೆ ಹೋಗಲು ಆಗಿಲ್ಲ. ಆದರೂ ಪರೀಕ್ಷೆಗಳನ್ನು ಅವೈಜ್ಞಾನಿಕವಾಗಿ ನಡೆಸಲಾಗುತ್ತಿದೆ. ಇದರಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ತೀವ್ರ ಸಮಸ್ಯೆ ಎದುರಿಸಬೇಕಾಗುತ್ತದೆ. ಫಲಿತಾಂಶದ ಮೇಲೆ ಅಡ್ಡ ಪರಿಣಾಮ ಬೀರುತ್ತದೆ. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿ 2 ಮತ್ತು 4ನೇ ಸೆಮ್ ವಿದ್ಯಾರ್ಥಿಗಳಿಗೆ ಹಿಂದಿನ ತರಗತಿಯ ಅಂಕಗಳ ಆಧಾರದ ಮೇಲೆ ಗ್ರೇಡ್ ನೀಡಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ: ಬಡಜನರಿಗೆ ವಕೀಲೆಯಾಗಿದ್ದಕ್ಕೆ ಜೈಲಿಗೆ ಹೋದ ಐಐಟಿ ಪದವೀಧರೆ ಸುಧಾ ಭಾರದ್ವಾಜ್!

ಬೆಂಗಳೂರು ವ್ಯಾಪ್ತಿಯ ನಾಲ್ಕು ವಿವಿಗಳು ಮತ್ತು ತುಮಕೂರು ವಿಶ್ವವಿದ್ಯಾಲಯದಲ್ಲಿ ಸಾಕಷ್ಟು ಸಮಸ್ಯೆಗಳು ಇವೆ. ಈ ವಿವಿಗಳನ್ನು ಹೊರತುಪಡಿಸಿ ಬೇರೆ ವಿವಿಗಳಲ್ಲಿ ಆರನೇ ಸೆಮಿಸ್ಟರ್ ವಿದ್ಯಾರ್ಥಿಗಳು ಮೂರು ವರ್ಷದ ಎಲ್ಲಾ ಪರೀಕ್ಷೆಗಳಿಗೆ ಶುಲ್ಕ ಕಟ್ಟಿ ಬರೆಯಲು ಅವಕಾಶವಿದೆ. ಅಂದರೆ 2, 4 ಮತ್ತು 5ನೇ ಸೆಮ್ ಫೇಲ್ ಆಗಿದ್ದರೂ ಅವರು ಎಲ್ಲಾ ಪರೀಕ್ಷೆಗಳಿಗೆ ಏಕಕಾಲಕ್ಕೆ ಶುಲ್ಕ ಕಟ್ಟಬಹುದು.

ಆದರೆ ತುಮಕೂರು ಮತ್ತು ಬೆಂಗಳೂರು ವ್ಯಾಪ್ತಿ ವಿವಿಗಳಲ್ಲಿ 6ನೇ ಸಮಿಸ್ಟರ್ ವಿದ್ಯಾರ್ಥಿಗಳು 2, 3, 4 ಮತ್ತು 5ನೇ ಸೆಮಿಸ್ಟರ್‌ಗಳಲ್ಲಿ ಫೇಲಾಗಿದ್ದರೆ ಆ ಪರೀಕ್ಷೆಗಳಿಗೆ ಶುಲ್ಕ ಕಟ್ಟಲು ಅವಕಾಶವಿಲ್ಲ. ಇದು ವಿದ್ಯಾರ್ಥಿಗಳಿಗೆ ಒಂದು ವರ್ಷ ನಷ್ಟವಾಗುತ್ತದೆ. ಇದು ತಾಂತ್ರಿಕ ಸಮಸ್ಯೆ ಇದನ್ನು ಬಗೆಹರಿಸಬೇಕು ಎಂದು ಅವರು ಒತ್ತಾಯಿಸಿದರು.

‘ವಿಜಯೀಭವ’ ವೆಬ್ ಸೈಟ್‌ಗೆ ಹೋದರೆ ಎಲ್ಲಾ ವಿಷಯಗಳ ಆನ್‌ಲೈನ್ ತರಗತಿಗಳ  ಮಾಹಿತಿ ಸಿಗುತ್ತದೆ. ವಿದ್ಯಾರ್ಥಿಗಳು ಅದರ ಪ್ರಯೋಜ ಪಡೆಯುವ ವ್ಯವಸ್ಥೆ ಆಯಾ ವಿವಿಗಳು ಕಲ್ಪಿಸಿವೆ. ಸಮಸ್ಯೆ ಏನೆಂದರೆ ಆಂಡ್ರಾಯಿಡ್ ಮೊಬೈಲ್, ಇಂಟರ್ ನೆಟ್ ಸೌಲಭ್ಯವಿಲ್ಲದ ವಿದ್ಯಾರ್ಥಿಗಳು ಏನು ಮಾಡಬೇಕು. ಇದಕ್ಕೆ ಪ್ರಾಧ್ಯಾಪಕರು ಮತ್ತು ವಿವಿಗಳ ಬಳಿ ಉತ್ತರವಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.


ಓದಿ: ಭೀಮಾ ಕೋರೆಗಾಂವ್; ಪ್ರಾಧ್ಯಾಪಕರ ಮೇಲಿನ NIA ಕಿರುಕುಳಕ್ಕೆ ವಿದ್ಯಾರ್ಥಿಗಳ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...