Homeಕರ್ನಾಟಕಸೆಪ್ಟೆಂಬರ್‌ 1 ರಿಂದ ಹಲವು ಗೊಂದಲಗಳ ನಡುವೆ ನಡೆಯಲಿದೆ ಪದವಿ ಪರೀಕ್ಷೆಗಳು

ಸೆಪ್ಟೆಂಬರ್‌ 1 ರಿಂದ ಹಲವು ಗೊಂದಲಗಳ ನಡುವೆ ನಡೆಯಲಿದೆ ಪದವಿ ಪರೀಕ್ಷೆಗಳು

ಕೊರೊನ ಸೋಂಕು ಹೆಚ್ಚುತ್ತಿರುವ ನಡುವೆಯೇ ರಾಜ್ಯದ ಎಲ್ಲಾ ವಿವಿಗಳು ಬಿಎ, ಬಿಎಸ್‌ಸಿ, ಬಿಕಾಂ, ಬಿಲಿಬ್ ಪದವಿಯ 6 ನೇ ಸೆಮಿಸ್ಟರ್ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದೆ.

- Advertisement -
- Advertisement -

ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ ಅಂತಿಮ ವರ್ಷದ ಪರೀಕ್ಷೆಗಳು ಸೆ.1 ರಿಂದ 24 ರವರೆಗೆ ನಡೆಯಲಿವೆ. ಕೊರೊನ ಸೋಂಕು ಹೆಚ್ಚುತ್ತಿರುವ ನಡುವೆಯೇ ಬಿಎ, ಬಿಎಸ್‌ಸಿ, ಬಿಕಾಂ, ಬಿಲಿಬ್ ಪದವಿಯ 6 ನೇ ಸೆಮಿಸ್ಟರ್ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ.

ಇದೇ ಮೊದಲ ಬಾರಿಗೆ ರಾಜ್ಯದ ಎಲ್ಲಾ ವಿವಿಗಳು ಒಂದೇ ಭಾರಿಗೆ ಪರೀಕ್ಷೆಗಳನ್ನು ನಡೆಸುತ್ತಿದ್ದು ಏಕರೂಪ ಶಿಕ್ಷಣದ ಮೊದಲ ಹಂತ ಇದಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ವಿಭಜಿತ ಬೆಂಗಳೂರು ವಿವಿಯ ನಾಲ್ಕು, ಮೈಸೂರು, ಕುವೆಂಪು, ತುಮಕೂರು, ಬಳ್ಳಾರಿಯ ಕೃಷ್ಣದೇವರಾಯ, ರಾಣಿಚೆನ್ನಮ್ಮ ಹೀಗೆ ಎಲ್ಲಾ ವಿವಿಗಳಲ್ಲೂ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದ್ದು ಪರೀಕ್ಷೆ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಕಳೆದ ವರ್ಷ ನವೆಂಬರ್‌ನಿಂದ ಜನವರಿವರೆಗೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ಈಗ ಐದು ತಿಂಗಳ ದೀರ್ಘಾವಧಿ ಕೊರೊನಾ ರಜೆಯ ಬಳಿಕ ಪರೀಕ್ಷೆಗಳನ್ನು ಎದುರಿಸಬೇಕಾಗಿ ಬಂದಿದೆ.

ಇದನ್ನೂ ಓದಿ: ಪದವಿಪೂರ್ವ ಉಪನ್ಯಾಸಕರ ಹುದ್ದೆಗಳ ಹೆಚ್ಚಳಕ್ಕಾಗಿ ಒತ್ತಾಯ: ಸಿಎಂ, ಶಿಕ್ಷಣ ಸಚಿವರ ಭೇಟಿ.

“ಲಾಕ್‌ಡೌನ್ ಮಾಡುವ ಪೂರ್ವದಲ್ಲಿ ಆಫ್‌ಲೈನ್ ತರಗತಿಗಳು ನಡಿದ್ದವು. ಕೊರೊನಾ ಸೋಂಕು ಹರಡಿದ ಪರಿಣಾಮ ಮೂರು ತಿಂಗಳು ತರಗತಿಗಳು ನಡೆಯಲಿಲ್ಲ. ನಂತರ ವಿವಿಗಳು ಆನ್‌ಲೈನ್ ತರಗತಿ ನಡೆಸಿದವು. ಮೊಬೈಲ್ ಇದ್ದು ಸಿಗ್ನಲ್ ಸಿಕ್ಕವರು ತರಗತಿಯಲ್ಲಿ ಪಾಲ್ಗೊಂಡಿರಬಹುದು ಬಹುದು. ಆದರೆ ಮೊಬೈಲ್ ಇಲ್ಲದೇ ಇರುವವರು ಆನ್‌ಲೈನ್ ತರಗತಿಯಲ್ಲಿ ಪಾಠ ಕೇಳಲು ಸಾಧ್ಯವಾಗಿರಲಿಲ್ಲ. ನೇರ ಅಧ್ಯಾಪಕರನ್ನು ಭೇಟಿ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಲು ಬಸ್ ವ್ಯವಸ್ಥೆ ಇರಲಿಲ್ಲ. ನಗರದ ವಿದ್ಯಾರ್ಥಿಗಳು ಅಧ್ಯಾಪಕರನ್ನು ಭೇಟಿ ಮಾಡಿರಬಹುದು. ಆದರೆ ನಮಗೆ ಅಂತಹ ವ್ಯವಸ್ಥೆ ಇರಲಿಲ್ಲ” ಎಂದು ಗ್ರಾಮೀಣ ವಿದ್ಯಾರ್ಥಿಗಳು ದೂರಿದ್ದಾರೆ.

ತುಮಕೂರು ಮತ್ತು ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬರುವ ವಿವಿಗಳಲ್ಲಿ ಶೇಕಡ 60 ರಷ್ಟು ಸಿಲಬಸ್ ಪೂರ್ಣಗೊಂಡಿಲ್ಲ. ಆದರೂ ಪರೀಕ್ಷೆ ನಡೆಸಲಾಗುತ್ತಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ಆದರೆ ಮಾರ್ಚ್ ವೇಳೆಗೆ ಶೇ. 80 ರಷ್ಟು ಸಿಲಬಸ್ ಪೂರ್ಣಗೊಂಡಿತ್ತು. ಪ್ರಶ್ನೆಪತ್ರಿಕೆಗಳ ರಚನೆಗೆ ಸಿದ್ದತೆ ನಡೆದಿತ್ತು ಎನ್ನುತ್ತವೆ ಅಧ್ಯಾಪಕ ವರ್ಗದ ಮೂಲಗಳು.

ಇದನ್ನೂ ಓದಿ: ಅರುಣ್ ಫೆರೇರ: ನತದೃಷ್ಟರ ಕಾನೂನು ನೆರವಿಗೆ ಸದಾ ಲಭ್ಯವಿದ್ದ ಕಾರ್ಯಕರ್ತ

ಈ ನಡುವೆ ಯುಜಿಸಿ ಕೂಡ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲಾಗುವುದು. ಎರಡು ಮತ್ತು ನಾಲ್ಕನೇ ಸೆಮಿಸ್ಟರ್ ವಿದ್ಯಾರ್ಥಿಗಳು ಪರೀಕ್ಷೆ ಕಟ್ಟುವ ಅಗತ್ಯವಿಲ್ಲ. ಹಿಂದಿನ ಸೆಮಿಸ್ಟರ್‌ನಲ್ಲಿ ಪಡೆದ ಅಂಕಗಳ ಆಧಾರದಲ್ಲಿ ಗ್ರೇಡ್‌ಗಳನ್ನು ನೀಡಲಾಗುವುದು ಎಂದು ಹೇಳಿತು. ಆದರೆ ಈಗ 2 ಮತ್ತು 4ನೇ ಸೆಮಿಸ್ಟರ್‌ಗೂ ಪರೀಕ್ಷೆ ನಡೆಸಲು ಶುಲ್ಕ ಕಟ್ಟಿಸಿಕೊಳ್ಳಲಾಗಿದೆ. ಇದು ವಿದ್ಯಾರ್ಥಿಗಳನ್ನು ಗೊಂದಲಕ್ಕೆ ದೂಡುವಂತೆ ಮಾಡಿದೆ. ಯುಜಿಸಿ ಮತ್ತು ವಿವಿಗಳ ತೀರ್ಮಾನಗಳು ಭಿನ್ನವಾಗಿರುವುದು ಇಂಥ ಗೊಂದಲಕ್ಕೆ ಕಾರಣವಾಗಿದೆ.

ಈ. ಶಿವಣ್ಣ (ಎಸ್‌ಎಫ್‌ಐ ತುಮಕೂರು ಜಿಲ್ಲಾಧ್ಯಕ್ಷ)

ಎಸ್‌ಎಫ್‌ಐ ತುಮಕೂರು ಜಿಲ್ಲಾಧ್ಯಕ್ಷ ಈ. ಶಿವಣ್ಣ ನಾನುಗೌರಿ.ಕಾಂ ಜೊತೆ ಮಾತನಾಡಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ಸಮಸ್ಯೆಗಳನ್ನು ಬಿಡಿಸಿಟ್ಟರು. ಸಿಲಬಸ್ ಪೂರ್ಣಗೊಂಡಿಲ್ಲ, ವಿದ್ಯಾರ್ಥಿಗಳು ದೀರ್ಘಾವಧಿಯಾಗಿ ತರಗತಿಗೆ ಹೋಗಲು ಆಗಿಲ್ಲ. ಆದರೂ ಪರೀಕ್ಷೆಗಳನ್ನು ಅವೈಜ್ಞಾನಿಕವಾಗಿ ನಡೆಸಲಾಗುತ್ತಿದೆ. ಇದರಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ತೀವ್ರ ಸಮಸ್ಯೆ ಎದುರಿಸಬೇಕಾಗುತ್ತದೆ. ಫಲಿತಾಂಶದ ಮೇಲೆ ಅಡ್ಡ ಪರಿಣಾಮ ಬೀರುತ್ತದೆ. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿ 2 ಮತ್ತು 4ನೇ ಸೆಮ್ ವಿದ್ಯಾರ್ಥಿಗಳಿಗೆ ಹಿಂದಿನ ತರಗತಿಯ ಅಂಕಗಳ ಆಧಾರದ ಮೇಲೆ ಗ್ರೇಡ್ ನೀಡಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ: ಬಡಜನರಿಗೆ ವಕೀಲೆಯಾಗಿದ್ದಕ್ಕೆ ಜೈಲಿಗೆ ಹೋದ ಐಐಟಿ ಪದವೀಧರೆ ಸುಧಾ ಭಾರದ್ವಾಜ್!

ಬೆಂಗಳೂರು ವ್ಯಾಪ್ತಿಯ ನಾಲ್ಕು ವಿವಿಗಳು ಮತ್ತು ತುಮಕೂರು ವಿಶ್ವವಿದ್ಯಾಲಯದಲ್ಲಿ ಸಾಕಷ್ಟು ಸಮಸ್ಯೆಗಳು ಇವೆ. ಈ ವಿವಿಗಳನ್ನು ಹೊರತುಪಡಿಸಿ ಬೇರೆ ವಿವಿಗಳಲ್ಲಿ ಆರನೇ ಸೆಮಿಸ್ಟರ್ ವಿದ್ಯಾರ್ಥಿಗಳು ಮೂರು ವರ್ಷದ ಎಲ್ಲಾ ಪರೀಕ್ಷೆಗಳಿಗೆ ಶುಲ್ಕ ಕಟ್ಟಿ ಬರೆಯಲು ಅವಕಾಶವಿದೆ. ಅಂದರೆ 2, 4 ಮತ್ತು 5ನೇ ಸೆಮ್ ಫೇಲ್ ಆಗಿದ್ದರೂ ಅವರು ಎಲ್ಲಾ ಪರೀಕ್ಷೆಗಳಿಗೆ ಏಕಕಾಲಕ್ಕೆ ಶುಲ್ಕ ಕಟ್ಟಬಹುದು.

ಆದರೆ ತುಮಕೂರು ಮತ್ತು ಬೆಂಗಳೂರು ವ್ಯಾಪ್ತಿ ವಿವಿಗಳಲ್ಲಿ 6ನೇ ಸಮಿಸ್ಟರ್ ವಿದ್ಯಾರ್ಥಿಗಳು 2, 3, 4 ಮತ್ತು 5ನೇ ಸೆಮಿಸ್ಟರ್‌ಗಳಲ್ಲಿ ಫೇಲಾಗಿದ್ದರೆ ಆ ಪರೀಕ್ಷೆಗಳಿಗೆ ಶುಲ್ಕ ಕಟ್ಟಲು ಅವಕಾಶವಿಲ್ಲ. ಇದು ವಿದ್ಯಾರ್ಥಿಗಳಿಗೆ ಒಂದು ವರ್ಷ ನಷ್ಟವಾಗುತ್ತದೆ. ಇದು ತಾಂತ್ರಿಕ ಸಮಸ್ಯೆ ಇದನ್ನು ಬಗೆಹರಿಸಬೇಕು ಎಂದು ಅವರು ಒತ್ತಾಯಿಸಿದರು.

‘ವಿಜಯೀಭವ’ ವೆಬ್ ಸೈಟ್‌ಗೆ ಹೋದರೆ ಎಲ್ಲಾ ವಿಷಯಗಳ ಆನ್‌ಲೈನ್ ತರಗತಿಗಳ  ಮಾಹಿತಿ ಸಿಗುತ್ತದೆ. ವಿದ್ಯಾರ್ಥಿಗಳು ಅದರ ಪ್ರಯೋಜ ಪಡೆಯುವ ವ್ಯವಸ್ಥೆ ಆಯಾ ವಿವಿಗಳು ಕಲ್ಪಿಸಿವೆ. ಸಮಸ್ಯೆ ಏನೆಂದರೆ ಆಂಡ್ರಾಯಿಡ್ ಮೊಬೈಲ್, ಇಂಟರ್ ನೆಟ್ ಸೌಲಭ್ಯವಿಲ್ಲದ ವಿದ್ಯಾರ್ಥಿಗಳು ಏನು ಮಾಡಬೇಕು. ಇದಕ್ಕೆ ಪ್ರಾಧ್ಯಾಪಕರು ಮತ್ತು ವಿವಿಗಳ ಬಳಿ ಉತ್ತರವಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.


ಓದಿ: ಭೀಮಾ ಕೋರೆಗಾಂವ್; ಪ್ರಾಧ್ಯಾಪಕರ ಮೇಲಿನ NIA ಕಿರುಕುಳಕ್ಕೆ ವಿದ್ಯಾರ್ಥಿಗಳ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...