Homeಕರ್ನಾಟಕಗ್ರಾ.ಪಂ: ಮಹಿಳಾ ಸದಸ್ಯರಿಗೆ ಬೆದರಿಕೆಯೊಡ್ಡಿ ಅಧ್ಯಕ್ಷ ಸ್ಥಾನ ಕಸಿದುಕೊಂಡ ಸದಸ್ಯ?

ಗ್ರಾ.ಪಂ: ಮಹಿಳಾ ಸದಸ್ಯರಿಗೆ ಬೆದರಿಕೆಯೊಡ್ಡಿ ಅಧ್ಯಕ್ಷ ಸ್ಥಾನ ಕಸಿದುಕೊಂಡ ಸದಸ್ಯ?

ಚುನಾವಣಾಧಿಕಾರಿ ಮತ್ತು ಜೆಡಿಎಸ್ ಮುಖಂಡರು ದಬ್ಬಾಳಿಕೆ ಮಾಡಿ ಮಹಿಳಾ ಸದಸ್ಯರಿಗೆ ಬೆದರಿಕೆಯೊಡ್ಡಿ ಅವರು ನಾಮಪತ್ರ ಸಲ್ಲಿಸದಂತೆ ತಡೆಯೊಡ್ಡಿದ್ದಾರೆ- ಸಾಮಾಜಿಕ ಕಾರ್ಯಕರ್ತ ಜಿ.ಕೆ. ನಾಗಣ್ಣ

- Advertisement -
- Advertisement -

ಹಿಂದುಳಿದ ‘ಎ’ ವರ್ಗಕ್ಕೆ ಮೀಸಲಿಡಲಾಗಿದ್ದ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ, ನಿಯಮಗಳನ್ನು ಉಲ್ಲಂಘಿಸಿ ಹಿಂದುಳಿದ ‘ಬ’ ವರ್ಗ ಸದಸ್ಯರೊಬ್ಬರನ್ನು ಆಯ್ಕೆ ಮಾಡಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕು ಕೆ.ಹೊನ್ನಮಾಚನಹಳ್ಳಿಯಲ್ಲಿ ಜರುಗಿದೆ.

ಹಿಂದುಳಿದ ‘ಎ’ ವರ್ಗದಿಂದ ಆಯ್ಕೆಯಾಗಿದ್ದ ಇಬ್ಬರು ಸದಸ್ಯರು ಇದ್ದರೂ ಆ ಸದಸ್ಯರಿಗೆ ಬೆದರಿಕೆ ಹಾಕಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸದಂತೆ ನೋಡಿಕೊಳ್ಳಲಾಗಿದೆ. ಚುನಾವಣೆ ಅಧಿಕಾರಿ ರಾಜಕಾರಣಿಗಳ ಒತ್ತಡಕ್ಕೆ ಮಣಿದು ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು ಆರೋಪಿಸಲಾಗಿದೆ.

ಕುಣಿಗಲ್ ತಾಲೂಕು ಕೊರಟಿ ಗ್ರಾಮ ಪಂಚಾಯ್ತಿಗೆ 12 ಸದಸ್ಯರು ಆಯ್ಕೆಯಾಗಿದ್ದರು. ಕೊರಟಿ ವಾರ್ಡ್ ನಿಂದ ಜಯಮ್ಮ ಮತ್ತು ಹಾಲಿಗೆರೆ ವಾರ್ಡ್ ನಿಂದ ರೇಣುಕಮ್ಮ ಹಿಂದುಳಿದ ‘ಎ’ ವರ್ಗ ಮೀಸಲು ಕ್ಷೇತ್ರದಿಂದ ಗ್ರಾಮ ಪಂಚಾಯ್ತಿ ಸದಸ್ಯರಾಗಿ ಆಯ್ಕೆಯಾಗಿದ್ದರು. ನಂತರ ರಾಜ್ಯ ಸರ್ಕಾರ ಗ್ರಾಮ ಪಂಚಾಯ್ತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಪ್ರಕಟಿಸಿತ್ತು.

ಇದನ್ನೂ ಓದಿ: ಸ್ವಾರ್ಥ, ಹೇಡಿತನದಲ್ಲಿ ಚಿತ್ರನಟರನ್ನು ಮೀರಿಸಿದ ಕ್ರಿಕೆಟಿಗರು: ನಟ ಚೇತನ್ ಆಕ್ರೋಶ

ಈ ಸಂದರ್ಭದಲ್ಲಿ ಕುಣಿಗಲ್ ಕೊರಟಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನ ಹಿಂದುಳಿದ ‘ಎ’ ವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಿಟ್ಟು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಅದರಂತೆ ಫೆಬ್ರವರಿ 6ರಂದು ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವ ವೇಳೆ ಹಿಂದುಳಿದ ‘ಎ’ ವರ್ಗದಿಂದ ಆಯ್ಕೆಯಾದ ಇಬ್ಬರು ಮಹಿಳಾ ಸದಸ್ಯರು ನಾಮಪತ್ರ ಸಲ್ಲಿಸದಂತೆ ಜೆಡಿಎಸ್ ಮುಖಂಡರೇ ಧಮಕಿ ಹಾಕಿದರು ಎಂದು ದೂರಲಾಗಿದೆ.

ನಿಯಮದಂತೆ ಜಯಮ್ಮ ಮತ್ತು ರೇಣುಕಮ್ಮ ಅವರಿಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಅವಕಾಶವಿದ್ದರೂ ಜೆಡಿಎಸ್ ಮುಖಂಡರು ಈ ಇಬ್ಬರು ಮಹಿಳಾ ಸದಸ್ಯರಿಗೆ ಬೆದರಿಕೆ ಹಾಕಿ ನಾಮಪತ್ರ ಸಲ್ಲಿಸದಂತೆ ನೋಡಿಕೊಳ್ಳಲಾಗಿದೆ. ಇದರಿಂದ ಆ ಇಬ್ಬರು ಮಹಿಳಾ ಸದಸ್ಯರು ಏನೂ ಮಾಡಲು ತೋಚದೆ ಅಸಹಾಯಕರಾಗಿ ಕುಳಿತರೆಂದು ಹೇಳಲಾಗಿದೆ.

ಇದನ್ನೂ ಓದಿ: ಫೇಸ್‌ಬುಕ್ ಲೈವ್ ನೋಡಿ: ಪಂಜಾಬ್‌ನಿಂದ ನಾನುಗೌರಿ ತಂಡದ ಮಮತ ಎಂ

ತೆನೆಹೊತ್ತ ಮಹಿಳೆಯ ಗುರುತು ಹೊಂದಿರುವ ಜೆಡಿಎಸ್, ಮಹಿಳಾ ಸದಸ್ಯರು ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸದಂತೆ ಮತ್ತು ಅಧ್ಯಕ್ಷರಾಗಿ ಆಯ್ಕೆಯಾಗದಂತೆ ನೋಡಿಕೊಂಡಿದ್ದಾರೆ. ಕೊರಟಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಬ’ ವರ್ಗದ ಸದಸ್ಯರೊಬ್ಬರು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಚುನಾವಣೆ ಉಸ್ತುವಾರಿ ಹೊತ್ತ ಚುನಾವಣಾಧಿಕಾರಿಯೂ ನಿಯಮಗಳ ಉಲ್ಲಂಘನೆಗೆ ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಸಾಮಾಜಿಕ ಕಾರ್ಯಕರ್ತ ಜಿ.ಕೆ. ನಾಗಣ್ಣ ನಾನುಗೌರಿ.ಕಾಮ್ ಜೊತೆ ಮಾತನಾಡಿ, “ಹಿಂದುಳಿದ ‘ಎ’ ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನವನ್ನು ಚುನಾವಣಾಧಿಕಾರಿ ಮತ್ತು ಜೆಡಿಎಸ್ ಮುಖಂಡರು ದಬ್ಬಾಳಿಕೆ ಮಾಡಿ ಮಹಿಳಾ ಸದಸ್ಯರಿಗೆ ಬೆದರಿಕೆಯೊಡ್ಡಿ ಅವರು ನಾಮಪತ್ರ ಸಲ್ಲಿಸದಂತೆ ತಡೆಯೊಡ್ಡಿರುವುದು ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಚುನಾವಣೆಯ ನಿಯಮಗಳನ್ನು ಉಲ್ಲಂಘಿಸಿದಂತೆ ಆಗಿದೆ. ತೆನೆಹೊತ್ತ ಮಹಿಳೆಯ ಗುರುತು ಹೊಂದಿರುವ ಜೆಡಿಎಸ್ ಮುಖಂಡರು ಮಹಿಳೆಯರ ಬಗ್ಗೆ ಮಾತನಾಡುತ್ತಲೇ ಮಹಿಳೆಯರಿಗೆ ದ್ರೋಹ ಬಗೆಯುತ್ತಿದ್ದಾರೆ. ಮೀಸಲಾತಿ ಪರಿಕಲ್ಪನೆಗೆ ಪೆಟ್ಟುಕೊಟ್ಟಂತೆ ಆಗಿದೆ ಎಂದು ದೂರಿದರು.

ಹಣ ಆಮಿಷ ಮತ್ತು ಗುಲಾಮಗಿರಿಗೆ ಒಳಗಾದ ಮಹಿಳಾ ಸದಸ್ಯರು:

ಆ ಇಬ್ಬರು ಮಹಿಳಾ ಸದಸ್ಯರಿಗೆ ಹಣದ ಆಮಿಷವೊಡ್ಡಿದ್ದಾರೆ. ಜೆಡಿಎಸ್ ಮುಖಂಡರು ನೀಡಿದ ಹಣಕ್ಕೆ ಖರೀದಿಯಾಗಿದ್ದಾರೆ ಎಂಬ ಆರೋಪ ವ್ಯಾಪಕವಾಗಿ ಕೇಳಿಬಂದಿದೆ. “ಹಣ ಕೊಟ್ಟು ಗೆಲ್ಲಿಸಿಕೊಂಡು ಬಂದಿದ್ದೇವೆ. ನೀವು ನ್ಯಾಯಾಲಯಕ್ಕೆ ಹೋದರೆ ಸುಮ್ಮನೆ ಬಿಡುವುದಿಲ್ಲ. ಈಗಲೂ ನೀವು ಹಣ ತೆಗೆದುಕೊಂಡಿದ್ದೀರಿ. ನಾವು ಹೇಳಿದಂತೆ ಕೇಳಬೇಕು ಅಷ್ಟೇ” ಎಂದು ಜೆಡಿಎಸ್ ಮುಖಂಡರು ಆ ಮಹಿಳಾ ಸದಸ್ಯರಿಗೆ ಧಮಕಿ ಹಾಕಿದ್ದಾರೆ ಎಂದು ತಿಳಿದುಬಂದಿದೆ.


ಇದನ್ನೂ ಓದಿ: ನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...