Homeಕರ್ನಾಟಕಗ್ರಾ.ಪಂ: ಮಹಿಳಾ ಸದಸ್ಯರಿಗೆ ಬೆದರಿಕೆಯೊಡ್ಡಿ ಅಧ್ಯಕ್ಷ ಸ್ಥಾನ ಕಸಿದುಕೊಂಡ ಸದಸ್ಯ?

ಗ್ರಾ.ಪಂ: ಮಹಿಳಾ ಸದಸ್ಯರಿಗೆ ಬೆದರಿಕೆಯೊಡ್ಡಿ ಅಧ್ಯಕ್ಷ ಸ್ಥಾನ ಕಸಿದುಕೊಂಡ ಸದಸ್ಯ?

ಚುನಾವಣಾಧಿಕಾರಿ ಮತ್ತು ಜೆಡಿಎಸ್ ಮುಖಂಡರು ದಬ್ಬಾಳಿಕೆ ಮಾಡಿ ಮಹಿಳಾ ಸದಸ್ಯರಿಗೆ ಬೆದರಿಕೆಯೊಡ್ಡಿ ಅವರು ನಾಮಪತ್ರ ಸಲ್ಲಿಸದಂತೆ ತಡೆಯೊಡ್ಡಿದ್ದಾರೆ- ಸಾಮಾಜಿಕ ಕಾರ್ಯಕರ್ತ ಜಿ.ಕೆ. ನಾಗಣ್ಣ

- Advertisement -
- Advertisement -

ಹಿಂದುಳಿದ ‘ಎ’ ವರ್ಗಕ್ಕೆ ಮೀಸಲಿಡಲಾಗಿದ್ದ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ, ನಿಯಮಗಳನ್ನು ಉಲ್ಲಂಘಿಸಿ ಹಿಂದುಳಿದ ‘ಬ’ ವರ್ಗ ಸದಸ್ಯರೊಬ್ಬರನ್ನು ಆಯ್ಕೆ ಮಾಡಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕು ಕೆ.ಹೊನ್ನಮಾಚನಹಳ್ಳಿಯಲ್ಲಿ ಜರುಗಿದೆ.

ಹಿಂದುಳಿದ ‘ಎ’ ವರ್ಗದಿಂದ ಆಯ್ಕೆಯಾಗಿದ್ದ ಇಬ್ಬರು ಸದಸ್ಯರು ಇದ್ದರೂ ಆ ಸದಸ್ಯರಿಗೆ ಬೆದರಿಕೆ ಹಾಕಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸದಂತೆ ನೋಡಿಕೊಳ್ಳಲಾಗಿದೆ. ಚುನಾವಣೆ ಅಧಿಕಾರಿ ರಾಜಕಾರಣಿಗಳ ಒತ್ತಡಕ್ಕೆ ಮಣಿದು ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು ಆರೋಪಿಸಲಾಗಿದೆ.

ಕುಣಿಗಲ್ ತಾಲೂಕು ಕೊರಟಿ ಗ್ರಾಮ ಪಂಚಾಯ್ತಿಗೆ 12 ಸದಸ್ಯರು ಆಯ್ಕೆಯಾಗಿದ್ದರು. ಕೊರಟಿ ವಾರ್ಡ್ ನಿಂದ ಜಯಮ್ಮ ಮತ್ತು ಹಾಲಿಗೆರೆ ವಾರ್ಡ್ ನಿಂದ ರೇಣುಕಮ್ಮ ಹಿಂದುಳಿದ ‘ಎ’ ವರ್ಗ ಮೀಸಲು ಕ್ಷೇತ್ರದಿಂದ ಗ್ರಾಮ ಪಂಚಾಯ್ತಿ ಸದಸ್ಯರಾಗಿ ಆಯ್ಕೆಯಾಗಿದ್ದರು. ನಂತರ ರಾಜ್ಯ ಸರ್ಕಾರ ಗ್ರಾಮ ಪಂಚಾಯ್ತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಪ್ರಕಟಿಸಿತ್ತು.

ಇದನ್ನೂ ಓದಿ: ಸ್ವಾರ್ಥ, ಹೇಡಿತನದಲ್ಲಿ ಚಿತ್ರನಟರನ್ನು ಮೀರಿಸಿದ ಕ್ರಿಕೆಟಿಗರು: ನಟ ಚೇತನ್ ಆಕ್ರೋಶ

ಈ ಸಂದರ್ಭದಲ್ಲಿ ಕುಣಿಗಲ್ ಕೊರಟಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನ ಹಿಂದುಳಿದ ‘ಎ’ ವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಿಟ್ಟು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಅದರಂತೆ ಫೆಬ್ರವರಿ 6ರಂದು ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವ ವೇಳೆ ಹಿಂದುಳಿದ ‘ಎ’ ವರ್ಗದಿಂದ ಆಯ್ಕೆಯಾದ ಇಬ್ಬರು ಮಹಿಳಾ ಸದಸ್ಯರು ನಾಮಪತ್ರ ಸಲ್ಲಿಸದಂತೆ ಜೆಡಿಎಸ್ ಮುಖಂಡರೇ ಧಮಕಿ ಹಾಕಿದರು ಎಂದು ದೂರಲಾಗಿದೆ.

ನಿಯಮದಂತೆ ಜಯಮ್ಮ ಮತ್ತು ರೇಣುಕಮ್ಮ ಅವರಿಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಅವಕಾಶವಿದ್ದರೂ ಜೆಡಿಎಸ್ ಮುಖಂಡರು ಈ ಇಬ್ಬರು ಮಹಿಳಾ ಸದಸ್ಯರಿಗೆ ಬೆದರಿಕೆ ಹಾಕಿ ನಾಮಪತ್ರ ಸಲ್ಲಿಸದಂತೆ ನೋಡಿಕೊಳ್ಳಲಾಗಿದೆ. ಇದರಿಂದ ಆ ಇಬ್ಬರು ಮಹಿಳಾ ಸದಸ್ಯರು ಏನೂ ಮಾಡಲು ತೋಚದೆ ಅಸಹಾಯಕರಾಗಿ ಕುಳಿತರೆಂದು ಹೇಳಲಾಗಿದೆ.

ಇದನ್ನೂ ಓದಿ: ಫೇಸ್‌ಬುಕ್ ಲೈವ್ ನೋಡಿ: ಪಂಜಾಬ್‌ನಿಂದ ನಾನುಗೌರಿ ತಂಡದ ಮಮತ ಎಂ

ತೆನೆಹೊತ್ತ ಮಹಿಳೆಯ ಗುರುತು ಹೊಂದಿರುವ ಜೆಡಿಎಸ್, ಮಹಿಳಾ ಸದಸ್ಯರು ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸದಂತೆ ಮತ್ತು ಅಧ್ಯಕ್ಷರಾಗಿ ಆಯ್ಕೆಯಾಗದಂತೆ ನೋಡಿಕೊಂಡಿದ್ದಾರೆ. ಕೊರಟಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಬ’ ವರ್ಗದ ಸದಸ್ಯರೊಬ್ಬರು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಚುನಾವಣೆ ಉಸ್ತುವಾರಿ ಹೊತ್ತ ಚುನಾವಣಾಧಿಕಾರಿಯೂ ನಿಯಮಗಳ ಉಲ್ಲಂಘನೆಗೆ ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಸಾಮಾಜಿಕ ಕಾರ್ಯಕರ್ತ ಜಿ.ಕೆ. ನಾಗಣ್ಣ ನಾನುಗೌರಿ.ಕಾಮ್ ಜೊತೆ ಮಾತನಾಡಿ, “ಹಿಂದುಳಿದ ‘ಎ’ ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನವನ್ನು ಚುನಾವಣಾಧಿಕಾರಿ ಮತ್ತು ಜೆಡಿಎಸ್ ಮುಖಂಡರು ದಬ್ಬಾಳಿಕೆ ಮಾಡಿ ಮಹಿಳಾ ಸದಸ್ಯರಿಗೆ ಬೆದರಿಕೆಯೊಡ್ಡಿ ಅವರು ನಾಮಪತ್ರ ಸಲ್ಲಿಸದಂತೆ ತಡೆಯೊಡ್ಡಿರುವುದು ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಚುನಾವಣೆಯ ನಿಯಮಗಳನ್ನು ಉಲ್ಲಂಘಿಸಿದಂತೆ ಆಗಿದೆ. ತೆನೆಹೊತ್ತ ಮಹಿಳೆಯ ಗುರುತು ಹೊಂದಿರುವ ಜೆಡಿಎಸ್ ಮುಖಂಡರು ಮಹಿಳೆಯರ ಬಗ್ಗೆ ಮಾತನಾಡುತ್ತಲೇ ಮಹಿಳೆಯರಿಗೆ ದ್ರೋಹ ಬಗೆಯುತ್ತಿದ್ದಾರೆ. ಮೀಸಲಾತಿ ಪರಿಕಲ್ಪನೆಗೆ ಪೆಟ್ಟುಕೊಟ್ಟಂತೆ ಆಗಿದೆ ಎಂದು ದೂರಿದರು.

ಹಣ ಆಮಿಷ ಮತ್ತು ಗುಲಾಮಗಿರಿಗೆ ಒಳಗಾದ ಮಹಿಳಾ ಸದಸ್ಯರು:

ಆ ಇಬ್ಬರು ಮಹಿಳಾ ಸದಸ್ಯರಿಗೆ ಹಣದ ಆಮಿಷವೊಡ್ಡಿದ್ದಾರೆ. ಜೆಡಿಎಸ್ ಮುಖಂಡರು ನೀಡಿದ ಹಣಕ್ಕೆ ಖರೀದಿಯಾಗಿದ್ದಾರೆ ಎಂಬ ಆರೋಪ ವ್ಯಾಪಕವಾಗಿ ಕೇಳಿಬಂದಿದೆ. “ಹಣ ಕೊಟ್ಟು ಗೆಲ್ಲಿಸಿಕೊಂಡು ಬಂದಿದ್ದೇವೆ. ನೀವು ನ್ಯಾಯಾಲಯಕ್ಕೆ ಹೋದರೆ ಸುಮ್ಮನೆ ಬಿಡುವುದಿಲ್ಲ. ಈಗಲೂ ನೀವು ಹಣ ತೆಗೆದುಕೊಂಡಿದ್ದೀರಿ. ನಾವು ಹೇಳಿದಂತೆ ಕೇಳಬೇಕು ಅಷ್ಟೇ” ಎಂದು ಜೆಡಿಎಸ್ ಮುಖಂಡರು ಆ ಮಹಿಳಾ ಸದಸ್ಯರಿಗೆ ಧಮಕಿ ಹಾಕಿದ್ದಾರೆ ಎಂದು ತಿಳಿದುಬಂದಿದೆ.


ಇದನ್ನೂ ಓದಿ: ನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ BJP ಗೆಲುವು SIR ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...